Homeಮುಖಪುಟಅಂಬಾನಿ ಮನೆ ಹತ್ತಿರ ಇದ್ದ ವಾಹನದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ: ಮಹಾರಾಷ್ಟ್ರ ಗೃಹ ಸಚಿವರು

ಅಂಬಾನಿ ಮನೆ ಹತ್ತಿರ ಇದ್ದ ವಾಹನದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ: ಮಹಾರಾಷ್ಟ್ರ ಗೃಹ ಸಚಿವರು

- Advertisement -
- Advertisement -

ಉದ್ಯಮಿ ಮುಖೇಶ್ ಅಂಬಾನಿ ಅವರ ಮುಂಬೈ ಮನೆಯ ಬಳಿ ಗುರುವಾರ ಸ್ಫೋಟಕ ಸಾಮಗ್ರಿಗಳೊಂದಿಗೆ ನಿಲುಗಡೆ ಮಾಡಿದ್ದ ವಾಹನ ಪತ್ತೆಯಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ.

ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಹೆಚ್ಚಿನ ಭದ್ರತೆಯಲ್ಲಿ ವಾಸಿಸುವ ಸ್ಥಳದಿಂದ ಕೆಲವೇ ಮೀಟರ್ ದೂರದಲ್ಲಿ ಈ ವಾಹನ ನಿಲ್ಲಿಸಲಾಗಿತ್ತು ಎಂದು ಎನ್‌ಡಿಟಿವಿ, ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿವೆ.

“ಮುಂಬೈನ ಮುಖೇಶ್ ಅಂಬಾನಿಯ ಮನೆಯಿಂದ ಸ್ವಲ್ಪ ದೂರದಲ್ಲಿ ಕೆಲವು ಜೆಲಟಿನ್ ಕಡ್ಡಿಗಳಿರುವ ಸ್ಕಾರ್ಪಿಯೋ ವ್ಯಾನ್ ಪತ್ತೆಯಾಗಿದೆ. ಮುಂಬೈ ಅಪರಾಧ ಶಾಖೆ ಇದರ ಬಗ್ಗೆ ತನಿಖೆ ನಡೆಸುತ್ತಿದೆ. ಸತ್ಯ ಹೊರಬರಲಿದೆ” ಎಂದು ದೇಶಮುಖ್ ಹೇಳಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಕಾರ್ಮೈಕಲ್ ರಸ್ತೆಯಲ್ಲಿ ಗುರುವಾರ ಸಂಜೆ ಅನುಮಾನಾಸ್ಪದ ವಾಹನ ವರದಿಯಾಗಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಯಿತು. ನಂತರ ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ ಅಥವಾ ಬಿಡಿಡಿಎಸ್ ತಂಡ ಮತ್ತು ಇತರ ಪೊಲೀಸ್ ತಂಡಗಳು ತಕ್ಷಣ ಸ್ಥಳಕ್ಕೆ ತಲುಪಿದವು.

ಇದನ್ನೂ ಓದಿ: ಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

“ಅವರು ವಾಹನವನ್ನು ಪರಿಶೀಲಿಸಿದಾಗ ಒಳಗೆ 20 ಸ್ಫೋಟಕ ಜೆಲಟಿನ್ ತುಂಡುಗಳು ಕಂಡುಬಂದಿವೆ. ಇದು ಜೋಡಿಸಲಾದ ಸ್ಫೋಟಕ ಸಾಧನವಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ ನಿನ್ನೆ (ಬುಧವಾರ-ಗುರುವಾರ ಮಧ್ಯರಾತ್ರಿ) ರಾತ್ರಿ 1 ಗಂಟೆ ಸುಮಾರಿಗೆ ಕಾರನ್ನು ಈ ಪ್ರದೇಶದಲ್ಲಿ ನಿಲ್ಲಿಸಲಾಗಿದೆ ಎಂದು ಅವರು ಹೇಳಿದರು.

ವಾಹನದೊಳಗೆ ಪತ್ರವೊಂದು ಕಂಡುಬಂದಿದೆ ಆದರೆ ಅದರ ವಿಷಯಗಳನ್ನು ಬಹಿರಂಗಪಡಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕುತೂಹಲಕಾರಿಯೆಂದರೆ, ವಾಹನದ ನೋಂದಣಿ ಸಂಖ್ಯೆ ಅಂಬಾನಿಯ ಭದ್ರತಾ ವ್ಯವಸ್ಥೆಯ ವಾಹನದ ನೋಂದಣಿ ಸಂಖ್ಯೆಗೆ ಹೊಂದಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ಈ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದೆ, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಅಂಬಾನಿ, ದಕ್ಷಿಣ ಮುಂಬೈನ ಐಷಾರಾಮಿ ಕುಂಬಲ್ಲಾ ಹಿಲ್ ಪ್ರದೇಶದಲ್ಲಿ ಆಂಟಿಲಿಯಾ ಎಂಬ ಐಷಾರಾಮಿ, 27 ಅಂತಸ್ತಿನ, 400,000 ಚದರ ಅಡಿ ವಿಶಾಲವಾದ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ. ಅವರ ಕುಟುಂಬವು 2012 ರಲ್ಲಿ ಕಟ್ಟಡಕ್ಕೆ ಸ್ಥಳಾಂತರಗೊಂಡಿತು.

ಚಿಕಾಗೊ ಮೂಲದ ಸಂಸ್ಥೆ ಪರ್ಕಿನ್ಸ್ ಮತ್ತು ವಿಲ್ ವಿನ್ಯಾಸಗೊಳಿಸಿದ ಇದು ಮೂರು ಹೆಲಿಪ್ಯಾಡ್‌ಗಳು, 168 ಕಾರುಗಳ ಗ್ಯಾರೇಜ್, ಬಾಲ್ ರೂಂ, ಒಂಬತ್ತು ಹೈಸ್ಪೀಡ್ ಎಲಿವೇಟರ್‌ಗಳು, 50 ಆಸನಗಳ ಥಿಯೇಟರ್, ಟೆರೇಸ್ ಗಾರ್ಡನ್ಸ್, ಈಜುಕೊಳ, ಸ್ಪಾ, ಹೆಲ್ತ್‌ಸೆಂಟರ್, ದೇವಾಲಯ, ಮತ್ತು ಹಿಮ ಕೋಣೆಯನ್ನು ಹೊಂದಿದೆ.


ಇದನ್ನೂ ಓದಿ: ಗುಜರಾತ್‌ನಲ್ಲಿ 25 ವರ್ಷದಿಂದ ಬಿಜೆಪಿಯೊಂದೇ ಏಕೆ ಆಡಳಿತ ನಡೆಸುತ್ತಿದೆ..?- ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆ

ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಸೇರಿದಂತೆ ಐವರನ್ನು ಖುಲಾಸೆಗೊಳಿಸಿ ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯ ಬುಧವಾರ (ನವೆಂಬರ್ 26) ತೀರ್ಪು ನೀಡಿದೆ ಎಂದು ಬಾರ್ & ಬೆಂಚ್ ವರದಿ...

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

ಬೆಂಗಳೂರು.ನ. 26: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.  ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ "ಸಂವಿಧಾನ ದಿನಾಚರಣೆ -...