Homeಅಂತರಾಷ್ಟ್ರೀಯಮೆಕ್ಸಿಕೊದಾದ್ಯಂತ ತೀವ್ರಗೊಂಡ 'ಜೆನ್ ಝೀ' ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

ಮೆಕ್ಸಿಕೊದಾದ್ಯಂತ ತೀವ್ರಗೊಂಡ ‘ಜೆನ್ ಝೀ’ ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

- Advertisement -
- Advertisement -

ಉತ್ತರ ಅಮೆರಿಕದ ಮೆಕ್ಸಿಕೋ ದೇಶದಾದ್ಯಂತ ‘ಜೆನ್‌ ಝೀ’ ಪ್ರತಿಭಟನೆ ತೀವ್ರಗೊಂಡಿದೆ. ಸಾವಿರಾರು ಯುವಜನರು ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಅವರ ಸರ್ಕಾರ ವಿರುದ್ದ ಬೀದಿಗಿಳಿದಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ (ನವೆಂಬರ್ 16) ಯುವಜನರ ಪ್ರತಿಭಟನೆ ವೇಳೆ ಸುಮಾರು 12 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ಪೊಲೀಸ್ ಅಧಿಕಾರಿಗಳು ಎಂದು ವರದಿಗಳು ವಿವರಿಸಿವೆ.

ಮೆಕ್ಸಿಕನ್ ಮೇಯರ್ ಹತ್ಯೆ ಜೆನ್‌ ಝೀ ಆಕ್ರೋಶಕ್ಕೆ ಕಾರಣ

ಮೆಕ್ಸಿಕೋದ ಡ್ರಗ್‌ ಗ್ಯಾಂಗ್‌ಗಳ ಮಿತಿ ಮೀರಿದ ಹಿಂಸಾಚಾರ (Cartel violence), ಭ್ರಷ್ಟಾಚಾರ ಮತ್ತು ಮುಖ್ಯವಾಗಿ ನವೆಂಬರ್ 1ರಂದು ನಡೆದ ಮೈಕೋವಕನ್ ರಾಜ್ಯದ ಉರುಪಾನ್‌ ನಗರದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಮಂಜೊ ರೊಡ್ರಿಗಸ್ ಅವರ ಹತ್ಯೆ ಯುವಜನರ ಆಕ್ರೋಶಕ್ಕೆ ಕಾರಣ ಎಂದು ವರದಿಯಾಗಿದೆ.

ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರು ಅಪರಾಧ ವಿರೋಧಿ ನಿಲುವು ಹೊಂದಿದ್ದರು. ಮಾದಕವಸ್ತುಗಳ ಕಳ್ಳಸಾಗಣೆ ಗ್ಯಾಂಗ್‌ಗಳು ಮತ್ತು ಕಾರ್ಟೆಲ್ ಹಿಂಸಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಕರೆ ನೀಡಿದ್ದರು. ಈ ಬೆನ್ನಲ್ಲೇ ಅವರನ್ನು ಡೇ ಆಫ್ ದಿ ಡೆಡ್ ಉತ್ಸವದಲ್ಲಿ ಹತ್ಯೆ ಮಾಡಲಾಗಿದೆ.

“ಡ್ರಗ್‌ ಗ್ಯಾಂಗ್‌ಗಳ ವಿರುದ್ಧ ಹೋರಾಡಲು ಪರ್ವತ ಪ್ರದೇಶಗಳಿಗೆ ಅಧಿಕಾರಿಗಳನ್ನು ಕಳುಹಿಸುತ್ತಿದ್ದ ವ್ಯಕ್ತಿಯಾಗಿದ್ದರಿಂದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರನ್ನು ಕೊಲ್ಲಲಾಗಿದೆ ಎಂದು 65 ವರ್ಷದ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬರು ಹೇಳಿದ್ದಾಗಿ ಗಾರ್ಡಿಯನ್ ವರದಿ ಮಾಡಿದೆ.

ಪ್ರತಿಭಟನಾ ನಿರತ ಯುವಜನರು ಮೃತ ಮೇಯರ್‌ಗೆ ಬೆಂಬಲ ಸೂಚಿಸಿದ್ದಾರೆ. “ನಾವೆಲ್ಲರೂ ಕಾರ್ಲೋಸ್ ಮಂಜೊ” ಎಂಬ ಬ್ಯಾನರ್‌ಗಳನ್ನು ಪ್ರತಿಭಟನೆ ವೇಳೆ ಅವರು ಪ್ರದರ್ಶಿಸಿದ್ದಾರೆ.

“ಜೆನ್‌ ಝೀ ಪ್ರತಿಭಟನೆಗಳು ಶಾಂತಿಯುತವಾಗಿ ಪ್ರಾರಂಭವಾದರೂ, ಮುಸುಕುದಾರಿ ವ್ಯಕ್ತಿಗಳ ಗುಂಪು ಹಿಂಸಾಚಾರ ಪ್ರಾರಂಭಿಸಿತು. ಪ್ರತಿಭಟನೆ ವೇಳೆ ದರೋಡೆಯಿಂದ ಹಿಡಿದು ಹಲ್ಲೆಯವರೆಗಿನ ಅಪರಾಧಗಳಿಗೆ ಈಗಾಗಲೇ 20 ಜನರನ್ನು ಬಂಧಿಸಲಾಗಿದೆ” ಎಂದು ಮೆಕ್ಸಿಕೋ ನಗರದ ಭದ್ರತಾ ಮುಖ್ಯಸ್ಥ ಪ್ಯಾಬ್ಲೊ ವಾಜ್ಕ್ವೆಜ್ ತಿಳಿಸಿದ್ದಾರೆ.

ರಾಯಿಟರ್ಸ್ ವರದಿಯ ಪ್ರಕಾರ, ಪ್ರತಿಭಟನಾ ನಿರತರು ಅಧ್ಯಕ್ಷೆ ಶೀನ್‌ಬಾಮ್ ವಾಸಿಸುವ ನ್ಯಾಷನಲ್ ಪ್ಯಾಲೆಸ್‌ ಸುತ್ತಲಿನ ಲೋಹದ ಬೇಲಿಗಳನ್ನು ಕಿತ್ತುಹಾಕುವ ಮೂಲಕ ಹಿಂಸಾತ್ಮ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅವರನ್ನು ತಡೆಯಲು ಪೊಲೀಸರು ಅಶ್ರುವಾಯಿ ಸಿಡಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ನಡೆದಿದೆ. ಹಲವರು ಗಾಯಗೊಂಡಿದ್ದಾರೆ.

ಅಧ್ಯಕ್ಷೆಯ ಅರಮನೆ ಸುತ್ತ ಭದ್ರತಾ ಪಡೆಗಳು ಭದ್ರ ಕೋಟೆಯನ್ನು ನಿರ್ಮಿಸಿ ರಕ್ಷಣೆ ಒದಗಿಸಿವೆ. ಇದರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, “ನೀವು ಮೇಯರ್ ಕಾರ್ಲೋಸ್ ಅವರಿಗೂ ಇದೇ ರೀತಿಯ ಭದ್ರತೆ ಒದಗಿಸಬೇಕಿತ್ತು” ಎಂದು ಹೇಳಿದ್ದಾರೆ ಎಂದು ವರದಿಗಳು ವಿವರಿಸಿವೆ.

ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಏನು ಹೇಳುತ್ತಿದ್ದಾರೆ?

ನಮ್ಮ ಸರ್ಕಾರದ ವಿರೋಧಿ ಬಲಪಂಥೀಯ ಗುಂಪಿನ ರಾಜಕಾರಣಿಗಳು ಬೀದಿಗಳಲ್ಲಿ ಗಲಭೆ ಎಬ್ಬಿಸಿದ್ದಾರೆ. ಜೆನ್‌ ಝೀ ಗುಂಪುಗಳು ಆಯೋಜಿಸಿರುವ ಪ್ರತಿಭಟನೆಗಳಿಗೆ ಅವರು ಹಣಕಾಸು ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

‘ನಮ್ಮ ಭೂಮಿ ಮಾರಾಟಕ್ಕಿಲ್ಲ’ : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...