Homeಅಂತರಾಷ್ಟ್ರೀಯಮೆಕ್ಸಿಕೊದಾದ್ಯಂತ ತೀವ್ರಗೊಂಡ 'ಜೆನ್ ಝೀ' ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

ಮೆಕ್ಸಿಕೊದಾದ್ಯಂತ ತೀವ್ರಗೊಂಡ ‘ಜೆನ್ ಝೀ’ ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

- Advertisement -
- Advertisement -

ಉತ್ತರ ಅಮೆರಿಕದ ಮೆಕ್ಸಿಕೋ ದೇಶದಾದ್ಯಂತ ‘ಜೆನ್‌ ಝೀ’ ಪ್ರತಿಭಟನೆ ತೀವ್ರಗೊಂಡಿದೆ. ಸಾವಿರಾರು ಯುವಜನರು ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಅವರ ಸರ್ಕಾರ ವಿರುದ್ದ ಬೀದಿಗಿಳಿದಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ (ನವೆಂಬರ್ 16) ಯುವಜನರ ಪ್ರತಿಭಟನೆ ವೇಳೆ ಸುಮಾರು 12 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ಪೊಲೀಸ್ ಅಧಿಕಾರಿಗಳು ಎಂದು ವರದಿಗಳು ವಿವರಿಸಿವೆ.

ಮೆಕ್ಸಿಕನ್ ಮೇಯರ್ ಹತ್ಯೆ ಜೆನ್‌ ಝೀ ಆಕ್ರೋಶಕ್ಕೆ ಕಾರಣ

ಮೆಕ್ಸಿಕೋದ ಡ್ರಗ್‌ ಗ್ಯಾಂಗ್‌ಗಳ ಮಿತಿ ಮೀರಿದ ಹಿಂಸಾಚಾರ (Cartel violence), ಭ್ರಷ್ಟಾಚಾರ ಮತ್ತು ಮುಖ್ಯವಾಗಿ ನವೆಂಬರ್ 1ರಂದು ನಡೆದ ಮೈಕೋವಕನ್ ರಾಜ್ಯದ ಉರುಪಾನ್‌ ನಗರದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಮಂಜೊ ರೊಡ್ರಿಗಸ್ ಅವರ ಹತ್ಯೆ ಯುವಜನರ ಆಕ್ರೋಶಕ್ಕೆ ಕಾರಣ ಎಂದು ವರದಿಯಾಗಿದೆ.

ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರು ಅಪರಾಧ ವಿರೋಧಿ ನಿಲುವು ಹೊಂದಿದ್ದರು. ಮಾದಕವಸ್ತುಗಳ ಕಳ್ಳಸಾಗಣೆ ಗ್ಯಾಂಗ್‌ಗಳು ಮತ್ತು ಕಾರ್ಟೆಲ್ ಹಿಂಸಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಕರೆ ನೀಡಿದ್ದರು. ಈ ಬೆನ್ನಲ್ಲೇ ಅವರನ್ನು ಡೇ ಆಫ್ ದಿ ಡೆಡ್ ಉತ್ಸವದಲ್ಲಿ ಹತ್ಯೆ ಮಾಡಲಾಗಿದೆ.

“ಡ್ರಗ್‌ ಗ್ಯಾಂಗ್‌ಗಳ ವಿರುದ್ಧ ಹೋರಾಡಲು ಪರ್ವತ ಪ್ರದೇಶಗಳಿಗೆ ಅಧಿಕಾರಿಗಳನ್ನು ಕಳುಹಿಸುತ್ತಿದ್ದ ವ್ಯಕ್ತಿಯಾಗಿದ್ದರಿಂದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರನ್ನು ಕೊಲ್ಲಲಾಗಿದೆ ಎಂದು 65 ವರ್ಷದ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬರು ಹೇಳಿದ್ದಾಗಿ ಗಾರ್ಡಿಯನ್ ವರದಿ ಮಾಡಿದೆ.

ಪ್ರತಿಭಟನಾ ನಿರತ ಯುವಜನರು ಮೃತ ಮೇಯರ್‌ಗೆ ಬೆಂಬಲ ಸೂಚಿಸಿದ್ದಾರೆ. “ನಾವೆಲ್ಲರೂ ಕಾರ್ಲೋಸ್ ಮಂಜೊ” ಎಂಬ ಬ್ಯಾನರ್‌ಗಳನ್ನು ಪ್ರತಿಭಟನೆ ವೇಳೆ ಅವರು ಪ್ರದರ್ಶಿಸಿದ್ದಾರೆ.

“ಜೆನ್‌ ಝೀ ಪ್ರತಿಭಟನೆಗಳು ಶಾಂತಿಯುತವಾಗಿ ಪ್ರಾರಂಭವಾದರೂ, ಮುಸುಕುದಾರಿ ವ್ಯಕ್ತಿಗಳ ಗುಂಪು ಹಿಂಸಾಚಾರ ಪ್ರಾರಂಭಿಸಿತು. ಪ್ರತಿಭಟನೆ ವೇಳೆ ದರೋಡೆಯಿಂದ ಹಿಡಿದು ಹಲ್ಲೆಯವರೆಗಿನ ಅಪರಾಧಗಳಿಗೆ ಈಗಾಗಲೇ 20 ಜನರನ್ನು ಬಂಧಿಸಲಾಗಿದೆ” ಎಂದು ಮೆಕ್ಸಿಕೋ ನಗರದ ಭದ್ರತಾ ಮುಖ್ಯಸ್ಥ ಪ್ಯಾಬ್ಲೊ ವಾಜ್ಕ್ವೆಜ್ ತಿಳಿಸಿದ್ದಾರೆ.

ರಾಯಿಟರ್ಸ್ ವರದಿಯ ಪ್ರಕಾರ, ಪ್ರತಿಭಟನಾ ನಿರತರು ಅಧ್ಯಕ್ಷೆ ಶೀನ್‌ಬಾಮ್ ವಾಸಿಸುವ ನ್ಯಾಷನಲ್ ಪ್ಯಾಲೆಸ್‌ ಸುತ್ತಲಿನ ಲೋಹದ ಬೇಲಿಗಳನ್ನು ಕಿತ್ತುಹಾಕುವ ಮೂಲಕ ಹಿಂಸಾತ್ಮ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅವರನ್ನು ತಡೆಯಲು ಪೊಲೀಸರು ಅಶ್ರುವಾಯಿ ಸಿಡಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ನಡೆದಿದೆ. ಹಲವರು ಗಾಯಗೊಂಡಿದ್ದಾರೆ.

ಅಧ್ಯಕ್ಷೆಯ ಅರಮನೆ ಸುತ್ತ ಭದ್ರತಾ ಪಡೆಗಳು ಭದ್ರ ಕೋಟೆಯನ್ನು ನಿರ್ಮಿಸಿ ರಕ್ಷಣೆ ಒದಗಿಸಿವೆ. ಇದರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, “ನೀವು ಮೇಯರ್ ಕಾರ್ಲೋಸ್ ಅವರಿಗೂ ಇದೇ ರೀತಿಯ ಭದ್ರತೆ ಒದಗಿಸಬೇಕಿತ್ತು” ಎಂದು ಹೇಳಿದ್ದಾರೆ ಎಂದು ವರದಿಗಳು ವಿವರಿಸಿವೆ.

ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಏನು ಹೇಳುತ್ತಿದ್ದಾರೆ?

ನಮ್ಮ ಸರ್ಕಾರದ ವಿರೋಧಿ ಬಲಪಂಥೀಯ ಗುಂಪಿನ ರಾಜಕಾರಣಿಗಳು ಬೀದಿಗಳಲ್ಲಿ ಗಲಭೆ ಎಬ್ಬಿಸಿದ್ದಾರೆ. ಜೆನ್‌ ಝೀ ಗುಂಪುಗಳು ಆಯೋಜಿಸಿರುವ ಪ್ರತಿಭಟನೆಗಳಿಗೆ ಅವರು ಹಣಕಾಸು ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

‘ನಮ್ಮ ಭೂಮಿ ಮಾರಾಟಕ್ಕಿಲ್ಲ’ : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...