Homeಅಂತರಾಷ್ಟ್ರೀಯಮೆಕ್ಸಿಕೊದಾದ್ಯಂತ ತೀವ್ರಗೊಂಡ 'ಜೆನ್ ಝೀ' ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

ಮೆಕ್ಸಿಕೊದಾದ್ಯಂತ ತೀವ್ರಗೊಂಡ ‘ಜೆನ್ ಝೀ’ ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

- Advertisement -
- Advertisement -

ಉತ್ತರ ಅಮೆರಿಕದ ಮೆಕ್ಸಿಕೋ ದೇಶದಾದ್ಯಂತ ‘ಜೆನ್‌ ಝೀ’ ಪ್ರತಿಭಟನೆ ತೀವ್ರಗೊಂಡಿದೆ. ಸಾವಿರಾರು ಯುವಜನರು ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಅವರ ಸರ್ಕಾರ ವಿರುದ್ದ ಬೀದಿಗಿಳಿದಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ (ನವೆಂಬರ್ 16) ಯುವಜನರ ಪ್ರತಿಭಟನೆ ವೇಳೆ ಸುಮಾರು 12 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ಪೊಲೀಸ್ ಅಧಿಕಾರಿಗಳು ಎಂದು ವರದಿಗಳು ವಿವರಿಸಿವೆ.

ಮೆಕ್ಸಿಕನ್ ಮೇಯರ್ ಹತ್ಯೆ ಜೆನ್‌ ಝೀ ಆಕ್ರೋಶಕ್ಕೆ ಕಾರಣ

ಮೆಕ್ಸಿಕೋದ ಡ್ರಗ್‌ ಗ್ಯಾಂಗ್‌ಗಳ ಮಿತಿ ಮೀರಿದ ಹಿಂಸಾಚಾರ (Cartel violence), ಭ್ರಷ್ಟಾಚಾರ ಮತ್ತು ಮುಖ್ಯವಾಗಿ ನವೆಂಬರ್ 1ರಂದು ನಡೆದ ಮೈಕೋವಕನ್ ರಾಜ್ಯದ ಉರುಪಾನ್‌ ನಗರದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಮಂಜೊ ರೊಡ್ರಿಗಸ್ ಅವರ ಹತ್ಯೆ ಯುವಜನರ ಆಕ್ರೋಶಕ್ಕೆ ಕಾರಣ ಎಂದು ವರದಿಯಾಗಿದೆ.

ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರು ಅಪರಾಧ ವಿರೋಧಿ ನಿಲುವು ಹೊಂದಿದ್ದರು. ಮಾದಕವಸ್ತುಗಳ ಕಳ್ಳಸಾಗಣೆ ಗ್ಯಾಂಗ್‌ಗಳು ಮತ್ತು ಕಾರ್ಟೆಲ್ ಹಿಂಸಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಕರೆ ನೀಡಿದ್ದರು. ಈ ಬೆನ್ನಲ್ಲೇ ಅವರನ್ನು ಡೇ ಆಫ್ ದಿ ಡೆಡ್ ಉತ್ಸವದಲ್ಲಿ ಹತ್ಯೆ ಮಾಡಲಾಗಿದೆ.

“ಡ್ರಗ್‌ ಗ್ಯಾಂಗ್‌ಗಳ ವಿರುದ್ಧ ಹೋರಾಡಲು ಪರ್ವತ ಪ್ರದೇಶಗಳಿಗೆ ಅಧಿಕಾರಿಗಳನ್ನು ಕಳುಹಿಸುತ್ತಿದ್ದ ವ್ಯಕ್ತಿಯಾಗಿದ್ದರಿಂದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರನ್ನು ಕೊಲ್ಲಲಾಗಿದೆ ಎಂದು 65 ವರ್ಷದ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬರು ಹೇಳಿದ್ದಾಗಿ ಗಾರ್ಡಿಯನ್ ವರದಿ ಮಾಡಿದೆ.

ಪ್ರತಿಭಟನಾ ನಿರತ ಯುವಜನರು ಮೃತ ಮೇಯರ್‌ಗೆ ಬೆಂಬಲ ಸೂಚಿಸಿದ್ದಾರೆ. “ನಾವೆಲ್ಲರೂ ಕಾರ್ಲೋಸ್ ಮಂಜೊ” ಎಂಬ ಬ್ಯಾನರ್‌ಗಳನ್ನು ಪ್ರತಿಭಟನೆ ವೇಳೆ ಅವರು ಪ್ರದರ್ಶಿಸಿದ್ದಾರೆ.

“ಜೆನ್‌ ಝೀ ಪ್ರತಿಭಟನೆಗಳು ಶಾಂತಿಯುತವಾಗಿ ಪ್ರಾರಂಭವಾದರೂ, ಮುಸುಕುದಾರಿ ವ್ಯಕ್ತಿಗಳ ಗುಂಪು ಹಿಂಸಾಚಾರ ಪ್ರಾರಂಭಿಸಿತು. ಪ್ರತಿಭಟನೆ ವೇಳೆ ದರೋಡೆಯಿಂದ ಹಿಡಿದು ಹಲ್ಲೆಯವರೆಗಿನ ಅಪರಾಧಗಳಿಗೆ ಈಗಾಗಲೇ 20 ಜನರನ್ನು ಬಂಧಿಸಲಾಗಿದೆ” ಎಂದು ಮೆಕ್ಸಿಕೋ ನಗರದ ಭದ್ರತಾ ಮುಖ್ಯಸ್ಥ ಪ್ಯಾಬ್ಲೊ ವಾಜ್ಕ್ವೆಜ್ ತಿಳಿಸಿದ್ದಾರೆ.

ರಾಯಿಟರ್ಸ್ ವರದಿಯ ಪ್ರಕಾರ, ಪ್ರತಿಭಟನಾ ನಿರತರು ಅಧ್ಯಕ್ಷೆ ಶೀನ್‌ಬಾಮ್ ವಾಸಿಸುವ ನ್ಯಾಷನಲ್ ಪ್ಯಾಲೆಸ್‌ ಸುತ್ತಲಿನ ಲೋಹದ ಬೇಲಿಗಳನ್ನು ಕಿತ್ತುಹಾಕುವ ಮೂಲಕ ಹಿಂಸಾತ್ಮ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅವರನ್ನು ತಡೆಯಲು ಪೊಲೀಸರು ಅಶ್ರುವಾಯಿ ಸಿಡಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ನಡೆದಿದೆ. ಹಲವರು ಗಾಯಗೊಂಡಿದ್ದಾರೆ.

ಅಧ್ಯಕ್ಷೆಯ ಅರಮನೆ ಸುತ್ತ ಭದ್ರತಾ ಪಡೆಗಳು ಭದ್ರ ಕೋಟೆಯನ್ನು ನಿರ್ಮಿಸಿ ರಕ್ಷಣೆ ಒದಗಿಸಿವೆ. ಇದರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, “ನೀವು ಮೇಯರ್ ಕಾರ್ಲೋಸ್ ಅವರಿಗೂ ಇದೇ ರೀತಿಯ ಭದ್ರತೆ ಒದಗಿಸಬೇಕಿತ್ತು” ಎಂದು ಹೇಳಿದ್ದಾರೆ ಎಂದು ವರದಿಗಳು ವಿವರಿಸಿವೆ.

ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಏನು ಹೇಳುತ್ತಿದ್ದಾರೆ?

ನಮ್ಮ ಸರ್ಕಾರದ ವಿರೋಧಿ ಬಲಪಂಥೀಯ ಗುಂಪಿನ ರಾಜಕಾರಣಿಗಳು ಬೀದಿಗಳಲ್ಲಿ ಗಲಭೆ ಎಬ್ಬಿಸಿದ್ದಾರೆ. ಜೆನ್‌ ಝೀ ಗುಂಪುಗಳು ಆಯೋಜಿಸಿರುವ ಪ್ರತಿಭಟನೆಗಳಿಗೆ ಅವರು ಹಣಕಾಸು ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

‘ನಮ್ಮ ಭೂಮಿ ಮಾರಾಟಕ್ಕಿಲ್ಲ’ : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...