Homeಅಂತರಾಷ್ಟ್ರೀಯಮೆಕ್ಸಿಕೊದಾದ್ಯಂತ ತೀವ್ರಗೊಂಡ 'ಜೆನ್ ಝೀ' ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

ಮೆಕ್ಸಿಕೊದಾದ್ಯಂತ ತೀವ್ರಗೊಂಡ ‘ಜೆನ್ ಝೀ’ ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

- Advertisement -
- Advertisement -

ಉತ್ತರ ಅಮೆರಿಕದ ಮೆಕ್ಸಿಕೋ ದೇಶದಾದ್ಯಂತ ‘ಜೆನ್‌ ಝೀ’ ಪ್ರತಿಭಟನೆ ತೀವ್ರಗೊಂಡಿದೆ. ಸಾವಿರಾರು ಯುವಜನರು ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಅವರ ಸರ್ಕಾರ ವಿರುದ್ದ ಬೀದಿಗಿಳಿದಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ (ನವೆಂಬರ್ 16) ಯುವಜನರ ಪ್ರತಿಭಟನೆ ವೇಳೆ ಸುಮಾರು 12 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ಪೊಲೀಸ್ ಅಧಿಕಾರಿಗಳು ಎಂದು ವರದಿಗಳು ವಿವರಿಸಿವೆ.

ಮೆಕ್ಸಿಕನ್ ಮೇಯರ್ ಹತ್ಯೆ ಜೆನ್‌ ಝೀ ಆಕ್ರೋಶಕ್ಕೆ ಕಾರಣ

ಮೆಕ್ಸಿಕೋದ ಡ್ರಗ್‌ ಗ್ಯಾಂಗ್‌ಗಳ ಮಿತಿ ಮೀರಿದ ಹಿಂಸಾಚಾರ (Cartel violence), ಭ್ರಷ್ಟಾಚಾರ ಮತ್ತು ಮುಖ್ಯವಾಗಿ ನವೆಂಬರ್ 1ರಂದು ನಡೆದ ಮೈಕೋವಕನ್ ರಾಜ್ಯದ ಉರುಪಾನ್‌ ನಗರದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಮಂಜೊ ರೊಡ್ರಿಗಸ್ ಅವರ ಹತ್ಯೆ ಯುವಜನರ ಆಕ್ರೋಶಕ್ಕೆ ಕಾರಣ ಎಂದು ವರದಿಯಾಗಿದೆ.

ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರು ಅಪರಾಧ ವಿರೋಧಿ ನಿಲುವು ಹೊಂದಿದ್ದರು. ಮಾದಕವಸ್ತುಗಳ ಕಳ್ಳಸಾಗಣೆ ಗ್ಯಾಂಗ್‌ಗಳು ಮತ್ತು ಕಾರ್ಟೆಲ್ ಹಿಂಸಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಕರೆ ನೀಡಿದ್ದರು. ಈ ಬೆನ್ನಲ್ಲೇ ಅವರನ್ನು ಡೇ ಆಫ್ ದಿ ಡೆಡ್ ಉತ್ಸವದಲ್ಲಿ ಹತ್ಯೆ ಮಾಡಲಾಗಿದೆ.

“ಡ್ರಗ್‌ ಗ್ಯಾಂಗ್‌ಗಳ ವಿರುದ್ಧ ಹೋರಾಡಲು ಪರ್ವತ ಪ್ರದೇಶಗಳಿಗೆ ಅಧಿಕಾರಿಗಳನ್ನು ಕಳುಹಿಸುತ್ತಿದ್ದ ವ್ಯಕ್ತಿಯಾಗಿದ್ದರಿಂದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರನ್ನು ಕೊಲ್ಲಲಾಗಿದೆ ಎಂದು 65 ವರ್ಷದ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬರು ಹೇಳಿದ್ದಾಗಿ ಗಾರ್ಡಿಯನ್ ವರದಿ ಮಾಡಿದೆ.

ಪ್ರತಿಭಟನಾ ನಿರತ ಯುವಜನರು ಮೃತ ಮೇಯರ್‌ಗೆ ಬೆಂಬಲ ಸೂಚಿಸಿದ್ದಾರೆ. “ನಾವೆಲ್ಲರೂ ಕಾರ್ಲೋಸ್ ಮಂಜೊ” ಎಂಬ ಬ್ಯಾನರ್‌ಗಳನ್ನು ಪ್ರತಿಭಟನೆ ವೇಳೆ ಅವರು ಪ್ರದರ್ಶಿಸಿದ್ದಾರೆ.

“ಜೆನ್‌ ಝೀ ಪ್ರತಿಭಟನೆಗಳು ಶಾಂತಿಯುತವಾಗಿ ಪ್ರಾರಂಭವಾದರೂ, ಮುಸುಕುದಾರಿ ವ್ಯಕ್ತಿಗಳ ಗುಂಪು ಹಿಂಸಾಚಾರ ಪ್ರಾರಂಭಿಸಿತು. ಪ್ರತಿಭಟನೆ ವೇಳೆ ದರೋಡೆಯಿಂದ ಹಿಡಿದು ಹಲ್ಲೆಯವರೆಗಿನ ಅಪರಾಧಗಳಿಗೆ ಈಗಾಗಲೇ 20 ಜನರನ್ನು ಬಂಧಿಸಲಾಗಿದೆ” ಎಂದು ಮೆಕ್ಸಿಕೋ ನಗರದ ಭದ್ರತಾ ಮುಖ್ಯಸ್ಥ ಪ್ಯಾಬ್ಲೊ ವಾಜ್ಕ್ವೆಜ್ ತಿಳಿಸಿದ್ದಾರೆ.

ರಾಯಿಟರ್ಸ್ ವರದಿಯ ಪ್ರಕಾರ, ಪ್ರತಿಭಟನಾ ನಿರತರು ಅಧ್ಯಕ್ಷೆ ಶೀನ್‌ಬಾಮ್ ವಾಸಿಸುವ ನ್ಯಾಷನಲ್ ಪ್ಯಾಲೆಸ್‌ ಸುತ್ತಲಿನ ಲೋಹದ ಬೇಲಿಗಳನ್ನು ಕಿತ್ತುಹಾಕುವ ಮೂಲಕ ಹಿಂಸಾತ್ಮ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅವರನ್ನು ತಡೆಯಲು ಪೊಲೀಸರು ಅಶ್ರುವಾಯಿ ಸಿಡಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ನಡೆದಿದೆ. ಹಲವರು ಗಾಯಗೊಂಡಿದ್ದಾರೆ.

ಅಧ್ಯಕ್ಷೆಯ ಅರಮನೆ ಸುತ್ತ ಭದ್ರತಾ ಪಡೆಗಳು ಭದ್ರ ಕೋಟೆಯನ್ನು ನಿರ್ಮಿಸಿ ರಕ್ಷಣೆ ಒದಗಿಸಿವೆ. ಇದರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, “ನೀವು ಮೇಯರ್ ಕಾರ್ಲೋಸ್ ಅವರಿಗೂ ಇದೇ ರೀತಿಯ ಭದ್ರತೆ ಒದಗಿಸಬೇಕಿತ್ತು” ಎಂದು ಹೇಳಿದ್ದಾರೆ ಎಂದು ವರದಿಗಳು ವಿವರಿಸಿವೆ.

ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಏನು ಹೇಳುತ್ತಿದ್ದಾರೆ?

ನಮ್ಮ ಸರ್ಕಾರದ ವಿರೋಧಿ ಬಲಪಂಥೀಯ ಗುಂಪಿನ ರಾಜಕಾರಣಿಗಳು ಬೀದಿಗಳಲ್ಲಿ ಗಲಭೆ ಎಬ್ಬಿಸಿದ್ದಾರೆ. ಜೆನ್‌ ಝೀ ಗುಂಪುಗಳು ಆಯೋಜಿಸಿರುವ ಪ್ರತಿಭಟನೆಗಳಿಗೆ ಅವರು ಹಣಕಾಸು ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

‘ನಮ್ಮ ಭೂಮಿ ಮಾರಾಟಕ್ಕಿಲ್ಲ’ : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...