Homeಅಂತರಾಷ್ಟ್ರೀಯಮೆಕ್ಸಿಕೊದಾದ್ಯಂತ ತೀವ್ರಗೊಂಡ 'ಜೆನ್ ಝೀ' ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

ಮೆಕ್ಸಿಕೊದಾದ್ಯಂತ ತೀವ್ರಗೊಂಡ ‘ಜೆನ್ ಝೀ’ ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

- Advertisement -
- Advertisement -

ಉತ್ತರ ಅಮೆರಿಕದ ಮೆಕ್ಸಿಕೋ ದೇಶದಾದ್ಯಂತ ‘ಜೆನ್‌ ಝೀ’ ಪ್ರತಿಭಟನೆ ತೀವ್ರಗೊಂಡಿದೆ. ಸಾವಿರಾರು ಯುವಜನರು ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಅವರ ಸರ್ಕಾರ ವಿರುದ್ದ ಬೀದಿಗಿಳಿದಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ (ನವೆಂಬರ್ 16) ಯುವಜನರ ಪ್ರತಿಭಟನೆ ವೇಳೆ ಸುಮಾರು 12 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ಪೊಲೀಸ್ ಅಧಿಕಾರಿಗಳು ಎಂದು ವರದಿಗಳು ವಿವರಿಸಿವೆ.

ಮೆಕ್ಸಿಕನ್ ಮೇಯರ್ ಹತ್ಯೆ ಜೆನ್‌ ಝೀ ಆಕ್ರೋಶಕ್ಕೆ ಕಾರಣ

ಮೆಕ್ಸಿಕೋದ ಡ್ರಗ್‌ ಗ್ಯಾಂಗ್‌ಗಳ ಮಿತಿ ಮೀರಿದ ಹಿಂಸಾಚಾರ (Cartel violence), ಭ್ರಷ್ಟಾಚಾರ ಮತ್ತು ಮುಖ್ಯವಾಗಿ ನವೆಂಬರ್ 1ರಂದು ನಡೆದ ಮೈಕೋವಕನ್ ರಾಜ್ಯದ ಉರುಪಾನ್‌ ನಗರದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಮಂಜೊ ರೊಡ್ರಿಗಸ್ ಅವರ ಹತ್ಯೆ ಯುವಜನರ ಆಕ್ರೋಶಕ್ಕೆ ಕಾರಣ ಎಂದು ವರದಿಯಾಗಿದೆ.

ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರು ಅಪರಾಧ ವಿರೋಧಿ ನಿಲುವು ಹೊಂದಿದ್ದರು. ಮಾದಕವಸ್ತುಗಳ ಕಳ್ಳಸಾಗಣೆ ಗ್ಯಾಂಗ್‌ಗಳು ಮತ್ತು ಕಾರ್ಟೆಲ್ ಹಿಂಸಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಕರೆ ನೀಡಿದ್ದರು. ಈ ಬೆನ್ನಲ್ಲೇ ಅವರನ್ನು ಡೇ ಆಫ್ ದಿ ಡೆಡ್ ಉತ್ಸವದಲ್ಲಿ ಹತ್ಯೆ ಮಾಡಲಾಗಿದೆ.

“ಡ್ರಗ್‌ ಗ್ಯಾಂಗ್‌ಗಳ ವಿರುದ್ಧ ಹೋರಾಡಲು ಪರ್ವತ ಪ್ರದೇಶಗಳಿಗೆ ಅಧಿಕಾರಿಗಳನ್ನು ಕಳುಹಿಸುತ್ತಿದ್ದ ವ್ಯಕ್ತಿಯಾಗಿದ್ದರಿಂದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರನ್ನು ಕೊಲ್ಲಲಾಗಿದೆ ಎಂದು 65 ವರ್ಷದ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬರು ಹೇಳಿದ್ದಾಗಿ ಗಾರ್ಡಿಯನ್ ವರದಿ ಮಾಡಿದೆ.

ಪ್ರತಿಭಟನಾ ನಿರತ ಯುವಜನರು ಮೃತ ಮೇಯರ್‌ಗೆ ಬೆಂಬಲ ಸೂಚಿಸಿದ್ದಾರೆ. “ನಾವೆಲ್ಲರೂ ಕಾರ್ಲೋಸ್ ಮಂಜೊ” ಎಂಬ ಬ್ಯಾನರ್‌ಗಳನ್ನು ಪ್ರತಿಭಟನೆ ವೇಳೆ ಅವರು ಪ್ರದರ್ಶಿಸಿದ್ದಾರೆ.

“ಜೆನ್‌ ಝೀ ಪ್ರತಿಭಟನೆಗಳು ಶಾಂತಿಯುತವಾಗಿ ಪ್ರಾರಂಭವಾದರೂ, ಮುಸುಕುದಾರಿ ವ್ಯಕ್ತಿಗಳ ಗುಂಪು ಹಿಂಸಾಚಾರ ಪ್ರಾರಂಭಿಸಿತು. ಪ್ರತಿಭಟನೆ ವೇಳೆ ದರೋಡೆಯಿಂದ ಹಿಡಿದು ಹಲ್ಲೆಯವರೆಗಿನ ಅಪರಾಧಗಳಿಗೆ ಈಗಾಗಲೇ 20 ಜನರನ್ನು ಬಂಧಿಸಲಾಗಿದೆ” ಎಂದು ಮೆಕ್ಸಿಕೋ ನಗರದ ಭದ್ರತಾ ಮುಖ್ಯಸ್ಥ ಪ್ಯಾಬ್ಲೊ ವಾಜ್ಕ್ವೆಜ್ ತಿಳಿಸಿದ್ದಾರೆ.

ರಾಯಿಟರ್ಸ್ ವರದಿಯ ಪ್ರಕಾರ, ಪ್ರತಿಭಟನಾ ನಿರತರು ಅಧ್ಯಕ್ಷೆ ಶೀನ್‌ಬಾಮ್ ವಾಸಿಸುವ ನ್ಯಾಷನಲ್ ಪ್ಯಾಲೆಸ್‌ ಸುತ್ತಲಿನ ಲೋಹದ ಬೇಲಿಗಳನ್ನು ಕಿತ್ತುಹಾಕುವ ಮೂಲಕ ಹಿಂಸಾತ್ಮ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅವರನ್ನು ತಡೆಯಲು ಪೊಲೀಸರು ಅಶ್ರುವಾಯಿ ಸಿಡಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ನಡೆದಿದೆ. ಹಲವರು ಗಾಯಗೊಂಡಿದ್ದಾರೆ.

ಅಧ್ಯಕ್ಷೆಯ ಅರಮನೆ ಸುತ್ತ ಭದ್ರತಾ ಪಡೆಗಳು ಭದ್ರ ಕೋಟೆಯನ್ನು ನಿರ್ಮಿಸಿ ರಕ್ಷಣೆ ಒದಗಿಸಿವೆ. ಇದರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, “ನೀವು ಮೇಯರ್ ಕಾರ್ಲೋಸ್ ಅವರಿಗೂ ಇದೇ ರೀತಿಯ ಭದ್ರತೆ ಒದಗಿಸಬೇಕಿತ್ತು” ಎಂದು ಹೇಳಿದ್ದಾರೆ ಎಂದು ವರದಿಗಳು ವಿವರಿಸಿವೆ.

ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಏನು ಹೇಳುತ್ತಿದ್ದಾರೆ?

ನಮ್ಮ ಸರ್ಕಾರದ ವಿರೋಧಿ ಬಲಪಂಥೀಯ ಗುಂಪಿನ ರಾಜಕಾರಣಿಗಳು ಬೀದಿಗಳಲ್ಲಿ ಗಲಭೆ ಎಬ್ಬಿಸಿದ್ದಾರೆ. ಜೆನ್‌ ಝೀ ಗುಂಪುಗಳು ಆಯೋಜಿಸಿರುವ ಪ್ರತಿಭಟನೆಗಳಿಗೆ ಅವರು ಹಣಕಾಸು ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

‘ನಮ್ಮ ಭೂಮಿ ಮಾರಾಟಕ್ಕಿಲ್ಲ’ : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...