Homeಅಂತರಾಷ್ಟ್ರೀಯಮೆಕ್ಸಿಕೊದಾದ್ಯಂತ ತೀವ್ರಗೊಂಡ 'ಜೆನ್ ಝೀ' ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

ಮೆಕ್ಸಿಕೊದಾದ್ಯಂತ ತೀವ್ರಗೊಂಡ ‘ಜೆನ್ ಝೀ’ ಪ್ರತಿಭಟನೆ : ಬೀದಿಗಿಳಿದ ಸಾವಿರಾರು ಯುವಜನತೆ

- Advertisement -
- Advertisement -

ಉತ್ತರ ಅಮೆರಿಕದ ಮೆಕ್ಸಿಕೋ ದೇಶದಾದ್ಯಂತ ‘ಜೆನ್‌ ಝೀ’ ಪ್ರತಿಭಟನೆ ತೀವ್ರಗೊಂಡಿದೆ. ಸಾವಿರಾರು ಯುವಜನರು ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಅವರ ಸರ್ಕಾರ ವಿರುದ್ದ ಬೀದಿಗಿಳಿದಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ (ನವೆಂಬರ್ 16) ಯುವಜನರ ಪ್ರತಿಭಟನೆ ವೇಳೆ ಸುಮಾರು 12 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ಪೊಲೀಸ್ ಅಧಿಕಾರಿಗಳು ಎಂದು ವರದಿಗಳು ವಿವರಿಸಿವೆ.

ಮೆಕ್ಸಿಕನ್ ಮೇಯರ್ ಹತ್ಯೆ ಜೆನ್‌ ಝೀ ಆಕ್ರೋಶಕ್ಕೆ ಕಾರಣ

ಮೆಕ್ಸಿಕೋದ ಡ್ರಗ್‌ ಗ್ಯಾಂಗ್‌ಗಳ ಮಿತಿ ಮೀರಿದ ಹಿಂಸಾಚಾರ (Cartel violence), ಭ್ರಷ್ಟಾಚಾರ ಮತ್ತು ಮುಖ್ಯವಾಗಿ ನವೆಂಬರ್ 1ರಂದು ನಡೆದ ಮೈಕೋವಕನ್ ರಾಜ್ಯದ ಉರುಪಾನ್‌ ನಗರದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಮಂಜೊ ರೊಡ್ರಿಗಸ್ ಅವರ ಹತ್ಯೆ ಯುವಜನರ ಆಕ್ರೋಶಕ್ಕೆ ಕಾರಣ ಎಂದು ವರದಿಯಾಗಿದೆ.

ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರು ಅಪರಾಧ ವಿರೋಧಿ ನಿಲುವು ಹೊಂದಿದ್ದರು. ಮಾದಕವಸ್ತುಗಳ ಕಳ್ಳಸಾಗಣೆ ಗ್ಯಾಂಗ್‌ಗಳು ಮತ್ತು ಕಾರ್ಟೆಲ್ ಹಿಂಸಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಕರೆ ನೀಡಿದ್ದರು. ಈ ಬೆನ್ನಲ್ಲೇ ಅವರನ್ನು ಡೇ ಆಫ್ ದಿ ಡೆಡ್ ಉತ್ಸವದಲ್ಲಿ ಹತ್ಯೆ ಮಾಡಲಾಗಿದೆ.

“ಡ್ರಗ್‌ ಗ್ಯಾಂಗ್‌ಗಳ ವಿರುದ್ಧ ಹೋರಾಡಲು ಪರ್ವತ ಪ್ರದೇಶಗಳಿಗೆ ಅಧಿಕಾರಿಗಳನ್ನು ಕಳುಹಿಸುತ್ತಿದ್ದ ವ್ಯಕ್ತಿಯಾಗಿದ್ದರಿಂದ ಮೇಯರ್ ಕಾರ್ಲೋಸ್ ಆಲ್ಬರ್ಟೊ ಅವರನ್ನು ಕೊಲ್ಲಲಾಗಿದೆ ಎಂದು 65 ವರ್ಷದ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬರು ಹೇಳಿದ್ದಾಗಿ ಗಾರ್ಡಿಯನ್ ವರದಿ ಮಾಡಿದೆ.

ಪ್ರತಿಭಟನಾ ನಿರತ ಯುವಜನರು ಮೃತ ಮೇಯರ್‌ಗೆ ಬೆಂಬಲ ಸೂಚಿಸಿದ್ದಾರೆ. “ನಾವೆಲ್ಲರೂ ಕಾರ್ಲೋಸ್ ಮಂಜೊ” ಎಂಬ ಬ್ಯಾನರ್‌ಗಳನ್ನು ಪ್ರತಿಭಟನೆ ವೇಳೆ ಅವರು ಪ್ರದರ್ಶಿಸಿದ್ದಾರೆ.

“ಜೆನ್‌ ಝೀ ಪ್ರತಿಭಟನೆಗಳು ಶಾಂತಿಯುತವಾಗಿ ಪ್ರಾರಂಭವಾದರೂ, ಮುಸುಕುದಾರಿ ವ್ಯಕ್ತಿಗಳ ಗುಂಪು ಹಿಂಸಾಚಾರ ಪ್ರಾರಂಭಿಸಿತು. ಪ್ರತಿಭಟನೆ ವೇಳೆ ದರೋಡೆಯಿಂದ ಹಿಡಿದು ಹಲ್ಲೆಯವರೆಗಿನ ಅಪರಾಧಗಳಿಗೆ ಈಗಾಗಲೇ 20 ಜನರನ್ನು ಬಂಧಿಸಲಾಗಿದೆ” ಎಂದು ಮೆಕ್ಸಿಕೋ ನಗರದ ಭದ್ರತಾ ಮುಖ್ಯಸ್ಥ ಪ್ಯಾಬ್ಲೊ ವಾಜ್ಕ್ವೆಜ್ ತಿಳಿಸಿದ್ದಾರೆ.

ರಾಯಿಟರ್ಸ್ ವರದಿಯ ಪ್ರಕಾರ, ಪ್ರತಿಭಟನಾ ನಿರತರು ಅಧ್ಯಕ್ಷೆ ಶೀನ್‌ಬಾಮ್ ವಾಸಿಸುವ ನ್ಯಾಷನಲ್ ಪ್ಯಾಲೆಸ್‌ ಸುತ್ತಲಿನ ಲೋಹದ ಬೇಲಿಗಳನ್ನು ಕಿತ್ತುಹಾಕುವ ಮೂಲಕ ಹಿಂಸಾತ್ಮ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅವರನ್ನು ತಡೆಯಲು ಪೊಲೀಸರು ಅಶ್ರುವಾಯಿ ಸಿಡಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ನಡೆದಿದೆ. ಹಲವರು ಗಾಯಗೊಂಡಿದ್ದಾರೆ.

ಅಧ್ಯಕ್ಷೆಯ ಅರಮನೆ ಸುತ್ತ ಭದ್ರತಾ ಪಡೆಗಳು ಭದ್ರ ಕೋಟೆಯನ್ನು ನಿರ್ಮಿಸಿ ರಕ್ಷಣೆ ಒದಗಿಸಿವೆ. ಇದರ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, “ನೀವು ಮೇಯರ್ ಕಾರ್ಲೋಸ್ ಅವರಿಗೂ ಇದೇ ರೀತಿಯ ಭದ್ರತೆ ಒದಗಿಸಬೇಕಿತ್ತು” ಎಂದು ಹೇಳಿದ್ದಾರೆ ಎಂದು ವರದಿಗಳು ವಿವರಿಸಿವೆ.

ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಏನು ಹೇಳುತ್ತಿದ್ದಾರೆ?

ನಮ್ಮ ಸರ್ಕಾರದ ವಿರೋಧಿ ಬಲಪಂಥೀಯ ಗುಂಪಿನ ರಾಜಕಾರಣಿಗಳು ಬೀದಿಗಳಲ್ಲಿ ಗಲಭೆ ಎಬ್ಬಿಸಿದ್ದಾರೆ. ಜೆನ್‌ ಝೀ ಗುಂಪುಗಳು ಆಯೋಜಿಸಿರುವ ಪ್ರತಿಭಟನೆಗಳಿಗೆ ಅವರು ಹಣಕಾಸು ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

‘ನಮ್ಮ ಭೂಮಿ ಮಾರಾಟಕ್ಕಿಲ್ಲ’ : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...