Homeಚಳವಳಿಲಿಂಗ ತಾರತಮ್ಯ ಹೋಗಲಾಡಿಸುವ ಕ್ರಮ: ಸರ್‌, ಮೇಡಂ ಸಂಬೋಧನೆ ಬಿಟ್ಟ ಕೇರಳದ ಶಾಲೆ

ಲಿಂಗ ತಾರತಮ್ಯ ಹೋಗಲಾಡಿಸುವ ಕ್ರಮ: ಸರ್‌, ಮೇಡಂ ಸಂಬೋಧನೆ ಬಿಟ್ಟ ಕೇರಳದ ಶಾಲೆ

- Advertisement -
- Advertisement -

ಇತ್ತೀಚೆಗೆ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಏಕರೂಪದ ಸಮವಸ್ತ್ರ ಜಾರಿಗೆ ತಂದು ಲಿಂಗ ಸಮಾನತೆ ಸಾರುವತ್ತ ಹೆಜ್ಜೆಯಿಟ್ಟಿದ್ದ ಕೇರಳದಲ್ಲಿ ಲಿಂಗತ್ವ ತಟಸ್ಥ ನೀತಿ ಅನುಸರಿಸಲು ಮತ್ತೊಂದು ಶಾಲೆ ಮುಂದೆ ಬಂದಿದೆ.

“ನಿಮ್ಮ ಶಿಕ್ಷಕರನ್ನು “ಶಿಕ್ಷಕ” ಎಂದು ಕರೆಯಿರಿ. “ಸರ್” ಅಥವಾ “ಮೇಡಂ” ಎಂದು ಅಲ್ಲ” ಎಂದು ಕೇರಳದ ಪಾಲಕ್ಕಾಡ್ ಜಿಲ್ಲೆಯ ಶಾಲೆಯೊಂದು ತನ್ನ ವಿದ್ಯಾರ್ಥಿಗಳಿಗೆ ಸೂಚಿಸಿದೆ. ಈ ಮೂಲಕ ಲಿಂಗತ್ವ ತಟಸ್ಥ ಧೋರಣೆ ಅನುಸರಿಸಲು ಮುಂದಡಿಯಿಟ್ಟಿದೆ.

ಪಾಲಕ್ಕಾಡ್ ಜಿಲ್ಲೆಯ ಓಲಸ್ಸೆರಿ ಗ್ರಾಮದ ಸರ್ಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು ಶಿಕ್ಷಕರನ್ನು ಉದ್ದೇಶಿಸಿ ಲಿಂಗ ತಟಸ್ಥತೆಯನ್ನು ತರತ್ತಿರುವ ರಾಜ್ಯದ ಮೊದಲ ಶಾಲೆಯಾಗಿದೆ. 300 ವಿದ್ಯಾರ್ಥಿಗಳಿರುವ ಶಾಲೆಯಲ್ಲಿ ಒಂಬತ್ತು ಮಹಿಳಾ ಶಿಕ್ಷಕರು ಮತ್ತು ಎಂಟು ಪುರುಷ ಶಿಕ್ಷಕರಿದ್ದಾರೆ.

ಇದನ್ನೂ ಓದಿ: RSS-BJP ರ್‍ಯಾಲಿ: ಕೇರಳ ಸಿಎಂ ಪಿಣರಾಯಿ ವಿರುದ್ಧ ಕೊಲೆ ಬೆದರಿಕೆ ಘೋಷಣೆ

“ನಮ್ಮ ಸಿಬ್ಬಂದಿಯಲ್ಲಿ ಒಬ್ಬರಾದ ಸಜೀವ್ ಕುಮಾರ್.ವಿ, ಪುರುಷ ಶಿಕ್ಷಕರನ್ನು ಸರ್ ಎಂದು ಸಂಬೋಧಿಸುವ ಅಭ್ಯಾಸವನ್ನು ಬಿಡುವ ಬಗ್ಗೆ ಸಲಹೆ ನೀಡಿದರು. ಇವರು ಪಾಲಕ್ಕಾಡ್ ಮೂಲದ ಸಾಮಾಜಿಕ ಕಾರ್ಯಕರ್ತರಾದ ಬೋಬನ್ ಮಟ್ಟುಮಂತ ಅವರು ಸರ್ಕಾರಿ ಅಧಿಕಾರಿಗಳನ್ನು ‘ಸರ್’ ಎಂದು ಸಂಬೋಧಿಸುವ ಅಭ್ಯಾಸವನ್ನು ತೊಡೆದುಹಾಕಲು ಪ್ರಾರಂಭಿಸಿದ ಅಭಿಯಾನದಿಂದ ಅವರು ಸ್ಫೂರ್ತಿ ಪಡೆದಿದ್ದಾರೆ” ಎಂದು ಶಾಲೆಯ ಮುಖ್ಯೋಪಾಧ್ಯಾಯರಾದ ವೇಣುಗೋಪಾಲನ್ ಹೆಚ್ ಹೇಳಿದ್ದಾರೆ.

ಅಲ್ಲದೆ, ಶಾಲೆಯಿಂದ ಅನತಿ ದೂರದಲ್ಲಿರುವ ಪಂಚಾಯಿತಿಯಲ್ಲಿಯೂ ಇದೇ ರೀತಿಯ ಬದಲಾವಣೆಗಳನ್ನು ತರಲಾಗುತ್ತಿದೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ. ಶಾಲೆಯಿಂದ 14 ಕಿ.ಮೀ ದೂರದಲ್ಲಿರುವ ಮತ್ತೂರು ಪಂಚಾಯತ್‌ನಲ್ಲಿ ಕಳೆದ ವರ್ಷ ಜುಲೈನಲ್ಲಿ “ಸರ್” ಮತ್ತು “ಮೇಡಂ” ಎಂದು ಕರೆಯುವ ಪದ್ಧತಿಯನ್ನು ತೆಗೆದುಹಾಕುವ ನಿರ್ಧಾರವನ್ನು ತೆಗೆದುಕೊಂಡಿದೆ. ಪಂಚಾಯಿತಿ ಸಿಬ್ಬಂದಿಯನ್ನು ಅವರ ಹುದ್ದೆಯ ಹೆಸರಿನಿಂದ ಕರೆಯುವಂತೆ ಮಂಡಳಿ ಸಾರ್ವಜನಿಕರಿಗೆ ಸೂಚಿಸಿದೆ.

‘”ಸರ್’ ಮತ್ತು ‘ಮೇಡಂ’ ಪದಗಳು ಲಿಂಗ ಸಮಾನತೆಗೆ ವಿರುದ್ಧವಾಗಿವೆ. ಶಿಕ್ಷಕರನ್ನು ಅವರ ಹೆಸರಿನಿಂದ ಕರೆಯಬೇಕು, ಅವರ ಲಿಂಗದ ಆಧಾರದಿಂದ ಅಲ್ಲ. ಶಿಕ್ಷಕರನ್ನು ಸಂಬೋಧಿಸುವ ಹೊಸ ವಿಧಾನವು ಲಿಂಗ ನ್ಯಾಯದ ಬಗ್ಗೆ ಅರಿವು ಮೂಡಿಸಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ. ‘ಸರ್’ ಎಂಬ ಸಂಬೋಧನೆ ವಸಾಹತುಶಾಹಿ ಕಾಲದ ಕುರುಹಾಗಿದ್ದು, ಅದನ್ನು ತೊಲಗಿಸಬೇಕು’’ ಎಂದು ಮುಖ್ಯೋಪಾಧ್ಯಯರು ತಿಳಿಸಿದ್ದಾರೆ.


ಇದನ್ನೂ ಓದಿ: ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...