Homeಚಳವಳಿಲಿಂಗ ತಾರತಮ್ಯ ಹೋಗಲಾಡಿಸುವ ಕ್ರಮ: ಸರ್‌, ಮೇಡಂ ಸಂಬೋಧನೆ ಬಿಟ್ಟ ಕೇರಳದ ಶಾಲೆ

ಲಿಂಗ ತಾರತಮ್ಯ ಹೋಗಲಾಡಿಸುವ ಕ್ರಮ: ಸರ್‌, ಮೇಡಂ ಸಂಬೋಧನೆ ಬಿಟ್ಟ ಕೇರಳದ ಶಾಲೆ

- Advertisement -
- Advertisement -

ಇತ್ತೀಚೆಗೆ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಏಕರೂಪದ ಸಮವಸ್ತ್ರ ಜಾರಿಗೆ ತಂದು ಲಿಂಗ ಸಮಾನತೆ ಸಾರುವತ್ತ ಹೆಜ್ಜೆಯಿಟ್ಟಿದ್ದ ಕೇರಳದಲ್ಲಿ ಲಿಂಗತ್ವ ತಟಸ್ಥ ನೀತಿ ಅನುಸರಿಸಲು ಮತ್ತೊಂದು ಶಾಲೆ ಮುಂದೆ ಬಂದಿದೆ.

“ನಿಮ್ಮ ಶಿಕ್ಷಕರನ್ನು “ಶಿಕ್ಷಕ” ಎಂದು ಕರೆಯಿರಿ. “ಸರ್” ಅಥವಾ “ಮೇಡಂ” ಎಂದು ಅಲ್ಲ” ಎಂದು ಕೇರಳದ ಪಾಲಕ್ಕಾಡ್ ಜಿಲ್ಲೆಯ ಶಾಲೆಯೊಂದು ತನ್ನ ವಿದ್ಯಾರ್ಥಿಗಳಿಗೆ ಸೂಚಿಸಿದೆ. ಈ ಮೂಲಕ ಲಿಂಗತ್ವ ತಟಸ್ಥ ಧೋರಣೆ ಅನುಸರಿಸಲು ಮುಂದಡಿಯಿಟ್ಟಿದೆ.

ಪಾಲಕ್ಕಾಡ್ ಜಿಲ್ಲೆಯ ಓಲಸ್ಸೆರಿ ಗ್ರಾಮದ ಸರ್ಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು ಶಿಕ್ಷಕರನ್ನು ಉದ್ದೇಶಿಸಿ ಲಿಂಗ ತಟಸ್ಥತೆಯನ್ನು ತರತ್ತಿರುವ ರಾಜ್ಯದ ಮೊದಲ ಶಾಲೆಯಾಗಿದೆ. 300 ವಿದ್ಯಾರ್ಥಿಗಳಿರುವ ಶಾಲೆಯಲ್ಲಿ ಒಂಬತ್ತು ಮಹಿಳಾ ಶಿಕ್ಷಕರು ಮತ್ತು ಎಂಟು ಪುರುಷ ಶಿಕ್ಷಕರಿದ್ದಾರೆ.

ಇದನ್ನೂ ಓದಿ: RSS-BJP ರ್‍ಯಾಲಿ: ಕೇರಳ ಸಿಎಂ ಪಿಣರಾಯಿ ವಿರುದ್ಧ ಕೊಲೆ ಬೆದರಿಕೆ ಘೋಷಣೆ

“ನಮ್ಮ ಸಿಬ್ಬಂದಿಯಲ್ಲಿ ಒಬ್ಬರಾದ ಸಜೀವ್ ಕುಮಾರ್.ವಿ, ಪುರುಷ ಶಿಕ್ಷಕರನ್ನು ಸರ್ ಎಂದು ಸಂಬೋಧಿಸುವ ಅಭ್ಯಾಸವನ್ನು ಬಿಡುವ ಬಗ್ಗೆ ಸಲಹೆ ನೀಡಿದರು. ಇವರು ಪಾಲಕ್ಕಾಡ್ ಮೂಲದ ಸಾಮಾಜಿಕ ಕಾರ್ಯಕರ್ತರಾದ ಬೋಬನ್ ಮಟ್ಟುಮಂತ ಅವರು ಸರ್ಕಾರಿ ಅಧಿಕಾರಿಗಳನ್ನು ‘ಸರ್’ ಎಂದು ಸಂಬೋಧಿಸುವ ಅಭ್ಯಾಸವನ್ನು ತೊಡೆದುಹಾಕಲು ಪ್ರಾರಂಭಿಸಿದ ಅಭಿಯಾನದಿಂದ ಅವರು ಸ್ಫೂರ್ತಿ ಪಡೆದಿದ್ದಾರೆ” ಎಂದು ಶಾಲೆಯ ಮುಖ್ಯೋಪಾಧ್ಯಾಯರಾದ ವೇಣುಗೋಪಾಲನ್ ಹೆಚ್ ಹೇಳಿದ್ದಾರೆ.

ಅಲ್ಲದೆ, ಶಾಲೆಯಿಂದ ಅನತಿ ದೂರದಲ್ಲಿರುವ ಪಂಚಾಯಿತಿಯಲ್ಲಿಯೂ ಇದೇ ರೀತಿಯ ಬದಲಾವಣೆಗಳನ್ನು ತರಲಾಗುತ್ತಿದೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ. ಶಾಲೆಯಿಂದ 14 ಕಿ.ಮೀ ದೂರದಲ್ಲಿರುವ ಮತ್ತೂರು ಪಂಚಾಯತ್‌ನಲ್ಲಿ ಕಳೆದ ವರ್ಷ ಜುಲೈನಲ್ಲಿ “ಸರ್” ಮತ್ತು “ಮೇಡಂ” ಎಂದು ಕರೆಯುವ ಪದ್ಧತಿಯನ್ನು ತೆಗೆದುಹಾಕುವ ನಿರ್ಧಾರವನ್ನು ತೆಗೆದುಕೊಂಡಿದೆ. ಪಂಚಾಯಿತಿ ಸಿಬ್ಬಂದಿಯನ್ನು ಅವರ ಹುದ್ದೆಯ ಹೆಸರಿನಿಂದ ಕರೆಯುವಂತೆ ಮಂಡಳಿ ಸಾರ್ವಜನಿಕರಿಗೆ ಸೂಚಿಸಿದೆ.

‘”ಸರ್’ ಮತ್ತು ‘ಮೇಡಂ’ ಪದಗಳು ಲಿಂಗ ಸಮಾನತೆಗೆ ವಿರುದ್ಧವಾಗಿವೆ. ಶಿಕ್ಷಕರನ್ನು ಅವರ ಹೆಸರಿನಿಂದ ಕರೆಯಬೇಕು, ಅವರ ಲಿಂಗದ ಆಧಾರದಿಂದ ಅಲ್ಲ. ಶಿಕ್ಷಕರನ್ನು ಸಂಬೋಧಿಸುವ ಹೊಸ ವಿಧಾನವು ಲಿಂಗ ನ್ಯಾಯದ ಬಗ್ಗೆ ಅರಿವು ಮೂಡಿಸಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ. ‘ಸರ್’ ಎಂಬ ಸಂಬೋಧನೆ ವಸಾಹತುಶಾಹಿ ಕಾಲದ ಕುರುಹಾಗಿದ್ದು, ಅದನ್ನು ತೊಲಗಿಸಬೇಕು’’ ಎಂದು ಮುಖ್ಯೋಪಾಧ್ಯಯರು ತಿಳಿಸಿದ್ದಾರೆ.


ಇದನ್ನೂ ಓದಿ: ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...