Homeಚಳವಳಿಲಿಂಗ ತಾರತಮ್ಯ ಹೋಗಲಾಡಿಸುವ ಕ್ರಮ: ಸರ್‌, ಮೇಡಂ ಸಂಬೋಧನೆ ಬಿಟ್ಟ ಕೇರಳದ ಶಾಲೆ

ಲಿಂಗ ತಾರತಮ್ಯ ಹೋಗಲಾಡಿಸುವ ಕ್ರಮ: ಸರ್‌, ಮೇಡಂ ಸಂಬೋಧನೆ ಬಿಟ್ಟ ಕೇರಳದ ಶಾಲೆ

- Advertisement -
- Advertisement -

ಇತ್ತೀಚೆಗೆ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಏಕರೂಪದ ಸಮವಸ್ತ್ರ ಜಾರಿಗೆ ತಂದು ಲಿಂಗ ಸಮಾನತೆ ಸಾರುವತ್ತ ಹೆಜ್ಜೆಯಿಟ್ಟಿದ್ದ ಕೇರಳದಲ್ಲಿ ಲಿಂಗತ್ವ ತಟಸ್ಥ ನೀತಿ ಅನುಸರಿಸಲು ಮತ್ತೊಂದು ಶಾಲೆ ಮುಂದೆ ಬಂದಿದೆ.

“ನಿಮ್ಮ ಶಿಕ್ಷಕರನ್ನು “ಶಿಕ್ಷಕ” ಎಂದು ಕರೆಯಿರಿ. “ಸರ್” ಅಥವಾ “ಮೇಡಂ” ಎಂದು ಅಲ್ಲ” ಎಂದು ಕೇರಳದ ಪಾಲಕ್ಕಾಡ್ ಜಿಲ್ಲೆಯ ಶಾಲೆಯೊಂದು ತನ್ನ ವಿದ್ಯಾರ್ಥಿಗಳಿಗೆ ಸೂಚಿಸಿದೆ. ಈ ಮೂಲಕ ಲಿಂಗತ್ವ ತಟಸ್ಥ ಧೋರಣೆ ಅನುಸರಿಸಲು ಮುಂದಡಿಯಿಟ್ಟಿದೆ.

ಪಾಲಕ್ಕಾಡ್ ಜಿಲ್ಲೆಯ ಓಲಸ್ಸೆರಿ ಗ್ರಾಮದ ಸರ್ಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು ಶಿಕ್ಷಕರನ್ನು ಉದ್ದೇಶಿಸಿ ಲಿಂಗ ತಟಸ್ಥತೆಯನ್ನು ತರತ್ತಿರುವ ರಾಜ್ಯದ ಮೊದಲ ಶಾಲೆಯಾಗಿದೆ. 300 ವಿದ್ಯಾರ್ಥಿಗಳಿರುವ ಶಾಲೆಯಲ್ಲಿ ಒಂಬತ್ತು ಮಹಿಳಾ ಶಿಕ್ಷಕರು ಮತ್ತು ಎಂಟು ಪುರುಷ ಶಿಕ್ಷಕರಿದ್ದಾರೆ.

ಇದನ್ನೂ ಓದಿ: RSS-BJP ರ್‍ಯಾಲಿ: ಕೇರಳ ಸಿಎಂ ಪಿಣರಾಯಿ ವಿರುದ್ಧ ಕೊಲೆ ಬೆದರಿಕೆ ಘೋಷಣೆ

“ನಮ್ಮ ಸಿಬ್ಬಂದಿಯಲ್ಲಿ ಒಬ್ಬರಾದ ಸಜೀವ್ ಕುಮಾರ್.ವಿ, ಪುರುಷ ಶಿಕ್ಷಕರನ್ನು ಸರ್ ಎಂದು ಸಂಬೋಧಿಸುವ ಅಭ್ಯಾಸವನ್ನು ಬಿಡುವ ಬಗ್ಗೆ ಸಲಹೆ ನೀಡಿದರು. ಇವರು ಪಾಲಕ್ಕಾಡ್ ಮೂಲದ ಸಾಮಾಜಿಕ ಕಾರ್ಯಕರ್ತರಾದ ಬೋಬನ್ ಮಟ್ಟುಮಂತ ಅವರು ಸರ್ಕಾರಿ ಅಧಿಕಾರಿಗಳನ್ನು ‘ಸರ್’ ಎಂದು ಸಂಬೋಧಿಸುವ ಅಭ್ಯಾಸವನ್ನು ತೊಡೆದುಹಾಕಲು ಪ್ರಾರಂಭಿಸಿದ ಅಭಿಯಾನದಿಂದ ಅವರು ಸ್ಫೂರ್ತಿ ಪಡೆದಿದ್ದಾರೆ” ಎಂದು ಶಾಲೆಯ ಮುಖ್ಯೋಪಾಧ್ಯಾಯರಾದ ವೇಣುಗೋಪಾಲನ್ ಹೆಚ್ ಹೇಳಿದ್ದಾರೆ.

ಅಲ್ಲದೆ, ಶಾಲೆಯಿಂದ ಅನತಿ ದೂರದಲ್ಲಿರುವ ಪಂಚಾಯಿತಿಯಲ್ಲಿಯೂ ಇದೇ ರೀತಿಯ ಬದಲಾವಣೆಗಳನ್ನು ತರಲಾಗುತ್ತಿದೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ. ಶಾಲೆಯಿಂದ 14 ಕಿ.ಮೀ ದೂರದಲ್ಲಿರುವ ಮತ್ತೂರು ಪಂಚಾಯತ್‌ನಲ್ಲಿ ಕಳೆದ ವರ್ಷ ಜುಲೈನಲ್ಲಿ “ಸರ್” ಮತ್ತು “ಮೇಡಂ” ಎಂದು ಕರೆಯುವ ಪದ್ಧತಿಯನ್ನು ತೆಗೆದುಹಾಕುವ ನಿರ್ಧಾರವನ್ನು ತೆಗೆದುಕೊಂಡಿದೆ. ಪಂಚಾಯಿತಿ ಸಿಬ್ಬಂದಿಯನ್ನು ಅವರ ಹುದ್ದೆಯ ಹೆಸರಿನಿಂದ ಕರೆಯುವಂತೆ ಮಂಡಳಿ ಸಾರ್ವಜನಿಕರಿಗೆ ಸೂಚಿಸಿದೆ.

‘”ಸರ್’ ಮತ್ತು ‘ಮೇಡಂ’ ಪದಗಳು ಲಿಂಗ ಸಮಾನತೆಗೆ ವಿರುದ್ಧವಾಗಿವೆ. ಶಿಕ್ಷಕರನ್ನು ಅವರ ಹೆಸರಿನಿಂದ ಕರೆಯಬೇಕು, ಅವರ ಲಿಂಗದ ಆಧಾರದಿಂದ ಅಲ್ಲ. ಶಿಕ್ಷಕರನ್ನು ಸಂಬೋಧಿಸುವ ಹೊಸ ವಿಧಾನವು ಲಿಂಗ ನ್ಯಾಯದ ಬಗ್ಗೆ ಅರಿವು ಮೂಡಿಸಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ. ‘ಸರ್’ ಎಂಬ ಸಂಬೋಧನೆ ವಸಾಹತುಶಾಹಿ ಕಾಲದ ಕುರುಹಾಗಿದ್ದು, ಅದನ್ನು ತೊಲಗಿಸಬೇಕು’’ ಎಂದು ಮುಖ್ಯೋಪಾಧ್ಯಯರು ತಿಳಿಸಿದ್ದಾರೆ.


ಇದನ್ನೂ ಓದಿ: ಆರೋಗ್ಯ ಸೂಚ್ಯಂಕದಲ್ಲಿ ಕೇರಳ ಅತ್ಯುತ್ತಮ ರಾಜ್ಯ, ಉತ್ತರ ಪ್ರದೇಶಕ್ಕೆ ಕಡೆಯ ಸ್ಥಾನ: ನೀತಿ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...