Homeಕರ್ನಾಟಕರಾಜ್ಯ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ 'ಮಣಿವಣ್ಣನ್. ಪಿ' ವರ್ಗಾವಣೆ

ರಾಜ್ಯ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ‘ಮಣಿವಣ್ಣನ್. ಪಿ’ ವರ್ಗಾವಣೆ

- Advertisement -
- Advertisement -

ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಐಎಎಸ್ ಮಣಿವಣ್ಣನ್. ಪಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದೆ.

ಕರ್ನಾಟಕ ಸರ್ಕಾರ ಘೋಷಿಸಿದ ಹಠಾತ್ ನಿರ್ಧಾರದಲ್ಲಿ ಕರ್ನಾಟಕ ಐಎಎಸ್ ಅಧಿಕಾರಿ ಮಣಿವಣ್ಣನ್ ಪಿ ಅವರನ್ನು ಸೋಮವಾರ ಅನಿರ್ದಿಷ್ಟವಾಗಿ ವರ್ಗಾಯಿಸಲಾಯಿತು. ಕೊರೊನಾ ರೋಗವನ್ನು ನಿಭಾಯಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿರುವ ಮಧ್ಯೆ ಈ ಪ್ರಕಟಣೆ ಬಂದಿದ್ದು, ಭಾರಿ ಕುತೂಕಲ ಕೆರಳಿಸಿವೆ. ರಾಜ್ಯದ ಕಾರ್ಮಿಕರ ವಿಚಾರವನ್ನು ನಿಭಾಯಿಸುವಲ್ಲಿ ಮಣಿವಣ್ಣನ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಅವರು ನಿರ್ವಹಿಸುತ್ತಿದ್ದ ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರ ಎರಡೂ ಹುದ್ದೆಗಳಿಂದ ಕೂಡಾ ವರ್ಗಾಯಿಸಲಾಗಿದೆ. ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗದ (ಗಣಿ ಮತ್ತು ಎಂಎಸ್‌ಎಂಇ) ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್ವರ ರಾವ್ ಅವರನ್ನು ಎರಡೂ ಹುದ್ದೆಗಳಿಗೆ ನೇಮಿಸಿ ತಕ್ಷಣದಿಂದ ಜಾರಿಗೆ ತರಲಾಗಿದೆ.

ಆದರೆ, ಮಣಿವಣ್ಣನ್ ಅವರಿಗೆ ಯಾವುದೆ ಹೊಸ ಹುದ್ದೆಯನ್ನು ನೀಡದೆ ವರ್ಗಾಯಿಸಲಾಗಿದೆ.

ಮಣಿವಣ್ಣನ್ ಪಿ, ಸಾಮಾಜಿಕ ಜಾಲತಾಣಗಳ ಸಕ್ರಿಯ ಬಳಕೆದಾರರಾಗಿದ್ದರು. ಕರೋನ ವೈರಸ್ ನಂತರದ ಲಾಕ್‌ಡೌನ್ ಬಗ್ಗೆ ಪ್ರಶ್ನೆಗಳನ್ನು ಸಂಗ್ರಹಿಸಲು ಸಾರ್ವಜನಿಕರಿಗಾಗಿ ಪ್ರಾರಂಭಿಸಿದ ಟೆಲಿಗ್ರಾಮ್ ಗುಂಪು ಬಹಳ ಜನಪ್ರಿಯವಾಗಿತ್ತು.

ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ, ಏಪ್ರಿಲ್‌ನಲ್ಲಿ ಉದ್ಯೋಗದಾತರು ಪೂರ್ಣ ವೇತನ ಅಥವಾ ಕೂಲಿಯನ್ನು ನೀಡದೇ ಇರುವುದಕ್ಕೆ ಹೊರಡಿಸಿದ್ದ ನೋಟೀಸನ್ನು 24 ಗಂಟೆಯ ಒಳಗಡೆ ವಾಪಾಸು ಪಡೆಯುವಂತೆ ಅವರನ್ನು ಒತ್ತಾಯಿಸಲಾಗಿತ್ತು. ಆ ಸಮಯದಲ್ಲಿ ಇಲಾಖೆಗೆ 700 ಕ್ಕೂ ಹೆಚ್ಚು ದೂರುಗಳು ಬಂದಿದ್ದವು. ಈ ಆದೇಶದ ವಿರುದ್ಧ ಸರ್ಕಾರ ವಿವಿಧ ಕೈಗಾರಿಕೆಗಳಿಂದ ತೀವ್ರ ಒತ್ತಡಕ್ಕೆ ಒಳಗಾಯಿತು. ಪ್ರಸ್ತುತ ವರ್ಗಾವಣೆ ಇದೇ ಕಾರಣಕ್ಕೆ ಆಗಿದೆ ಎಂದು ಅನೇಕ ಮೂಲಗಳು ಸೂಚಿಸಿವೆ.

ದೂರು ನೀಡಲು ಕಾರ್ಮಿಕರನ್ನು ಕೇಳುವ ಮೂಲಕ ಅಧಿಕಾರಿ ಅಶಾಂತಿ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಉದ್ಯೋಗದಾತ ಸಂಘ ಮುಖ್ಯಮಂತ್ರಿಗೆ ಪತ್ರ ಬರೆದಿತ್ತು. ಇವರು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಶಾಸಕರಿಗೆ ಪರಿಹಾರ ಕಿಟ್‌ಗಳನ್ನು ಹಸ್ತಾಂತರಿಸಬೇಕೆಂದು ಬಯಸಿದ್ದರು. ಆದರೆ, ಮಣಿವಣ್ಣನ್ ಈ ವಿಚಾರಕ್ಕೆ ವಿರುದ್ಧವಾಗಿದ್ದು ಇಲಾಖೆ ಕಿಟ್‌ಗಳನ್ನು ವಿತರಿಸಿತು. ಇದರಿಂದಾಗಿ ಕಿಟ್‌ಗಳು ಸರಿಯಾಗಿ ಜನರನ್ನು ತಲುಪುತ್ತಿಲ್ಲ ಎಂದು ಅನೇಕ ಶಾಸಕರು ಆರೋಪಿಸಿದ್ದರು.

ಕನಿಷ್ಟ ವೇತನವನ್ನು ನಿಯಂತ್ರಿಸುವ ಕಾರ್ಮಿಕ ಕಾನೂನುಗಳನ್ನು ಸಡಿಲಿಸುವುದು, ಅಧಿಕಾವಧಿ ಕೆಲಸದ ಸಮಯವನ್ನು ಹೆಚ್ಚಿಸುವುದು ಮತ್ತು ಕೈಗಾರಿಕೆಗಳಿಗೆ ಸಹಾಯ ಮಾಡಲು ಪ್ರಮುಖ ಕಾರ್ಮಿಕ ಶಾಸನಗಳ ಅನುಸರಣೆಯನ್ನು ಸರಾಗಗೊಳಿಸುವ ಬಗ್ಗೆ ಕರ್ನಾಟಕ ಸರ್ಕಾರ ಪರಿಗಣಿಸುತ್ತಿರುವ ಸಮಯದಲ್ಲಿ ಮಣಿವಣ್ಣನ್ ಅವರ ವರ್ಗಾವಣೆಯ ಘೋಷಣೆ ಮಾಡಿದೆ.

1998 ರ ಬ್ಯಾಚ್ ಐಎಎಸ್ ಅಧಿಕಾರಿ, ಮಣಿವಣ್ಣನ್ ಅವರು ಕಳೆದ ವಾರದಲ್ಲಿ ಲಾಕ್ ಡೌನ್ ಅವಧಿಯಲ್ಲಿ ಉದ್ಯೋಗದಾತರು ಕಾರ್ಮಿಕರಿಗೆ ಸಂಬಳ ನೀಡದಿರುವ ಸಮಸ್ಯೆಗಳ ಬಗ್ಗೆ ವ್ಯವಹರಿಸುತ್ತಿದ್ದರು.

2019 ರ ಪ್ರವಾಹದಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಅವರು ಸಕ್ರಿಯವಾಗಿ ಭಾಗಿಯಾಗಿದ್ದರು. ಪ್ರವಾಹದಿಂದ ಹಾನಿಗೊಳಗಾದ ಶಿವಮೊಗ್ಗದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಮಣಿವಣ್ಣನ್ ಅವರನ್ನು ನೇಮಿಸಲಾಗಿತ್ತು.

ಈ ಹಿಂದೆ ಅವರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಬೆಸ್ಕಾಮ್ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್) ಹೀಗೆ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.

ಮಣಿವಣ್ಣನ್ ಪಿ ವರ್ಗಾವಣೆಗೆ ಸಿಪಿಐ(ಎಂ) ಖಂಡನೆ 

ಮಣಿವಣ್ಣನ್ ಅವರ ವರ್ಗಾವಣೆಯನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲಾ ಸಮಿತಿಗಳು ಖಂಡಿಸಿವೆ.

ಉತ್ತರ ಪ್ರದೇಶ, ಗುಜರಾತ್, ಮಧ್ಯ ಪ್ರದೇಶ ರಾಜ್ಯಗಳಲ್ಲಿ ತಂದಿರುವ ಕಾಮಿ೯ಕ ಕಾನೂನುಗಳಿಂದ ಬಂಡವಾಳಗಾರರಿಗೆ ವಿನಾಯಿತಿ ನೀಡುವ ಕ್ರಮಗಳನ್ನು ಸುಗ್ರೀವಾಜ್ಞೆ ಹೊರಡಿಸುವ ತನ್ನ ಕೈಂಕಯ೯ಕ್ಕೆ ಅನುವುಗೊಳಿಸಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹೇಶ್ವರ ರಾವ್ ಅವರಿಗೆ ಕಾಮಿ೯ಕ ಇಲಾಖೆಯ ಪ್ರಧಾನ ಕಾಯ೯ದಶಿ೯ ಹೊಣೆಯನ್ನು ವಹಿಸಿದೆ ಎಂದು ಸಿಪಿಐ(ಎಂ) ಆರೋಪಿಸಿದೆ.

ರಾಜ್ಯದ ಕಾಮಿ೯ಕರ ಹಿತಕ್ಕಿಂತ ಕಾಪೋ೯ರೇಟ್ ಬಂಡವಾಳದ ಹಿತವೇ ರಾಜ್ಯ ಸಕಾ೯ರಕ್ಕೆ ಮುಖ್ಯ ವಾಗಿದೆ ಎಂಬುದನ್ನು ಬಿಜೆಪಿ ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ. ಏನಾದರು ಮಾಡಿ ಕಾಮಿ೯ಕ ಕಾನೂನುಗಳಿಂದ ಬಂಡವಾಳಗಾರರಿಗೆ ವಿನಾಯಿತಿ ನೀಡಲು ಕೋವಿಡ್ ಪರಿಹಾರವನ್ನು ಸಹಾ ಬಲಿಕೊಡಲು ರಾಜ್ಯ ಸಕಾ೯ರ ಹಿಂಜರಿಯದು ಎಂಬುದನ್ನು ಇದು ತೋರುತ್ತದೆ.

ತನ್ನ ಬಂಡವಾಳಗಾರರ ಪರ ನೀಲುಮೆಯ ಸಾಧನೆಗಾಗಿ ಒಬ್ಬ ದಕ್ಷ ಮತ್ತು ಕೋವಿಡ್ ಪರಿಹಾರ ಕಾಯ೯ವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಲ್ಲಿ ಯಶಸ್ಸು ಕಾಣುತ್ತಿದ್ದ ಅಧಿಕಾರಿಯನ್ನು ಸಹ ಬಿಜೆಪಿ ಸರಕಾರ ಸಹಿಸದು ಎಂದು ಸಿಪಿಐ(ಎಂ) ಹೇಳಿದೆ.

ರಾಜ್ಯ ಬಿಜೆಪಿ ಸಕಾ೯ರದ ಇಂತಹ ಕ್ರಮಗಳೆ ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಜನತೆಗೆ ಪರಿಹಾರವನ್ನು ಸಮ೯ಪಕವಾಗಿ ಸಮಥ೯ವಾಗಿ ನಿವ೯ಹಿಸುವಲ್ಲಿ ವಿಫಲವಾಗುತ್ತಿದೆ. ರಾಜ್ಯ ಸಕಾ೯ರದಲ್ಲಿನ ದ್ವಿಅಧಿಕಾರ ಕೇಂದ್ರಗಳು ಹಾಗು ಸೂಪರ್ ಸಿಎಂ ಸಂತೋಷ್ ಕಪಿಮುಷ್ಟಿಯಲ್ಲಿ ರಾಜ್ಯ ಸಕಾ೯ರವು ಸಿಲುಕಿರುವ ಪರಿಣಾಮ ಇಂತಹ ದೂರದೃಷ್ಟಿ ಹೀನ ಆಡಳಿತಾತ್ಮಕ ಕ್ರಮಗಳನ್ನು ರಾಜ್ಯದ ಜನತೆ ಕಾಣುವಂತಾಗಿದೆ ಎಂದು ಸಿಪಿಐ(ಎಂ) ಹೇಳಿದೆ.

ಕೋವಿಡ್ ಲಾಕ್ಡೌನ್ ಸಂತ್ರಸ್ತರಿಗೆ ಪರಿಹಾರವನ್ನು ಪರಿಣಾಮಕಾರಿಯಾಗಿ ಮುಂದುವರಿಸಲು ಮಣಿವಣ್ಣನ್ ವಗಾ೯ವಣೆಯನ್ನು ಕೂಡಲೆ ರದ್ದುಪಡಿಸಿ ಕಾಮಿ೯ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನೇ ಮುಂದುವರಿಸ ಬೇಕೆಂದು ಸಿಪಿಐ(ಎಂ) ರಾಜ್ಯ ಸಕಾ೯ರವನ್ನು ಒತ್ತಾಯಿಸಿದೆ.


ಇದನ್ನೂ ಓದಿ: 900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ಅಘಾತಕಾರಿ ಘಟನೆ


ವಿಡಿಯೊ ನೋಡಿ: ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...