Homeಕರ್ನಾಟಕರಾಜ್ಯ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ 'ಮಣಿವಣ್ಣನ್. ಪಿ' ವರ್ಗಾವಣೆ

ರಾಜ್ಯ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ‘ಮಣಿವಣ್ಣನ್. ಪಿ’ ವರ್ಗಾವಣೆ

- Advertisement -
- Advertisement -

ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಐಎಎಸ್ ಮಣಿವಣ್ಣನ್. ಪಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದೆ.

ಕರ್ನಾಟಕ ಸರ್ಕಾರ ಘೋಷಿಸಿದ ಹಠಾತ್ ನಿರ್ಧಾರದಲ್ಲಿ ಕರ್ನಾಟಕ ಐಎಎಸ್ ಅಧಿಕಾರಿ ಮಣಿವಣ್ಣನ್ ಪಿ ಅವರನ್ನು ಸೋಮವಾರ ಅನಿರ್ದಿಷ್ಟವಾಗಿ ವರ್ಗಾಯಿಸಲಾಯಿತು. ಕೊರೊನಾ ರೋಗವನ್ನು ನಿಭಾಯಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿರುವ ಮಧ್ಯೆ ಈ ಪ್ರಕಟಣೆ ಬಂದಿದ್ದು, ಭಾರಿ ಕುತೂಕಲ ಕೆರಳಿಸಿವೆ. ರಾಜ್ಯದ ಕಾರ್ಮಿಕರ ವಿಚಾರವನ್ನು ನಿಭಾಯಿಸುವಲ್ಲಿ ಮಣಿವಣ್ಣನ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಅವರು ನಿರ್ವಹಿಸುತ್ತಿದ್ದ ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರ ಎರಡೂ ಹುದ್ದೆಗಳಿಂದ ಕೂಡಾ ವರ್ಗಾಯಿಸಲಾಗಿದೆ. ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗದ (ಗಣಿ ಮತ್ತು ಎಂಎಸ್‌ಎಂಇ) ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್ವರ ರಾವ್ ಅವರನ್ನು ಎರಡೂ ಹುದ್ದೆಗಳಿಗೆ ನೇಮಿಸಿ ತಕ್ಷಣದಿಂದ ಜಾರಿಗೆ ತರಲಾಗಿದೆ.

ಆದರೆ, ಮಣಿವಣ್ಣನ್ ಅವರಿಗೆ ಯಾವುದೆ ಹೊಸ ಹುದ್ದೆಯನ್ನು ನೀಡದೆ ವರ್ಗಾಯಿಸಲಾಗಿದೆ.

ಮಣಿವಣ್ಣನ್ ಪಿ, ಸಾಮಾಜಿಕ ಜಾಲತಾಣಗಳ ಸಕ್ರಿಯ ಬಳಕೆದಾರರಾಗಿದ್ದರು. ಕರೋನ ವೈರಸ್ ನಂತರದ ಲಾಕ್‌ಡೌನ್ ಬಗ್ಗೆ ಪ್ರಶ್ನೆಗಳನ್ನು ಸಂಗ್ರಹಿಸಲು ಸಾರ್ವಜನಿಕರಿಗಾಗಿ ಪ್ರಾರಂಭಿಸಿದ ಟೆಲಿಗ್ರಾಮ್ ಗುಂಪು ಬಹಳ ಜನಪ್ರಿಯವಾಗಿತ್ತು.

ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ, ಏಪ್ರಿಲ್‌ನಲ್ಲಿ ಉದ್ಯೋಗದಾತರು ಪೂರ್ಣ ವೇತನ ಅಥವಾ ಕೂಲಿಯನ್ನು ನೀಡದೇ ಇರುವುದಕ್ಕೆ ಹೊರಡಿಸಿದ್ದ ನೋಟೀಸನ್ನು 24 ಗಂಟೆಯ ಒಳಗಡೆ ವಾಪಾಸು ಪಡೆಯುವಂತೆ ಅವರನ್ನು ಒತ್ತಾಯಿಸಲಾಗಿತ್ತು. ಆ ಸಮಯದಲ್ಲಿ ಇಲಾಖೆಗೆ 700 ಕ್ಕೂ ಹೆಚ್ಚು ದೂರುಗಳು ಬಂದಿದ್ದವು. ಈ ಆದೇಶದ ವಿರುದ್ಧ ಸರ್ಕಾರ ವಿವಿಧ ಕೈಗಾರಿಕೆಗಳಿಂದ ತೀವ್ರ ಒತ್ತಡಕ್ಕೆ ಒಳಗಾಯಿತು. ಪ್ರಸ್ತುತ ವರ್ಗಾವಣೆ ಇದೇ ಕಾರಣಕ್ಕೆ ಆಗಿದೆ ಎಂದು ಅನೇಕ ಮೂಲಗಳು ಸೂಚಿಸಿವೆ.

ದೂರು ನೀಡಲು ಕಾರ್ಮಿಕರನ್ನು ಕೇಳುವ ಮೂಲಕ ಅಧಿಕಾರಿ ಅಶಾಂತಿ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಉದ್ಯೋಗದಾತ ಸಂಘ ಮುಖ್ಯಮಂತ್ರಿಗೆ ಪತ್ರ ಬರೆದಿತ್ತು. ಇವರು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಶಾಸಕರಿಗೆ ಪರಿಹಾರ ಕಿಟ್‌ಗಳನ್ನು ಹಸ್ತಾಂತರಿಸಬೇಕೆಂದು ಬಯಸಿದ್ದರು. ಆದರೆ, ಮಣಿವಣ್ಣನ್ ಈ ವಿಚಾರಕ್ಕೆ ವಿರುದ್ಧವಾಗಿದ್ದು ಇಲಾಖೆ ಕಿಟ್‌ಗಳನ್ನು ವಿತರಿಸಿತು. ಇದರಿಂದಾಗಿ ಕಿಟ್‌ಗಳು ಸರಿಯಾಗಿ ಜನರನ್ನು ತಲುಪುತ್ತಿಲ್ಲ ಎಂದು ಅನೇಕ ಶಾಸಕರು ಆರೋಪಿಸಿದ್ದರು.

ಕನಿಷ್ಟ ವೇತನವನ್ನು ನಿಯಂತ್ರಿಸುವ ಕಾರ್ಮಿಕ ಕಾನೂನುಗಳನ್ನು ಸಡಿಲಿಸುವುದು, ಅಧಿಕಾವಧಿ ಕೆಲಸದ ಸಮಯವನ್ನು ಹೆಚ್ಚಿಸುವುದು ಮತ್ತು ಕೈಗಾರಿಕೆಗಳಿಗೆ ಸಹಾಯ ಮಾಡಲು ಪ್ರಮುಖ ಕಾರ್ಮಿಕ ಶಾಸನಗಳ ಅನುಸರಣೆಯನ್ನು ಸರಾಗಗೊಳಿಸುವ ಬಗ್ಗೆ ಕರ್ನಾಟಕ ಸರ್ಕಾರ ಪರಿಗಣಿಸುತ್ತಿರುವ ಸಮಯದಲ್ಲಿ ಮಣಿವಣ್ಣನ್ ಅವರ ವರ್ಗಾವಣೆಯ ಘೋಷಣೆ ಮಾಡಿದೆ.

1998 ರ ಬ್ಯಾಚ್ ಐಎಎಸ್ ಅಧಿಕಾರಿ, ಮಣಿವಣ್ಣನ್ ಅವರು ಕಳೆದ ವಾರದಲ್ಲಿ ಲಾಕ್ ಡೌನ್ ಅವಧಿಯಲ್ಲಿ ಉದ್ಯೋಗದಾತರು ಕಾರ್ಮಿಕರಿಗೆ ಸಂಬಳ ನೀಡದಿರುವ ಸಮಸ್ಯೆಗಳ ಬಗ್ಗೆ ವ್ಯವಹರಿಸುತ್ತಿದ್ದರು.

2019 ರ ಪ್ರವಾಹದಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಅವರು ಸಕ್ರಿಯವಾಗಿ ಭಾಗಿಯಾಗಿದ್ದರು. ಪ್ರವಾಹದಿಂದ ಹಾನಿಗೊಳಗಾದ ಶಿವಮೊಗ್ಗದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಮಣಿವಣ್ಣನ್ ಅವರನ್ನು ನೇಮಿಸಲಾಗಿತ್ತು.

ಈ ಹಿಂದೆ ಅವರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಬೆಸ್ಕಾಮ್ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್) ಹೀಗೆ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.

ಮಣಿವಣ್ಣನ್ ಪಿ ವರ್ಗಾವಣೆಗೆ ಸಿಪಿಐ(ಎಂ) ಖಂಡನೆ 

ಮಣಿವಣ್ಣನ್ ಅವರ ವರ್ಗಾವಣೆಯನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲಾ ಸಮಿತಿಗಳು ಖಂಡಿಸಿವೆ.

ಉತ್ತರ ಪ್ರದೇಶ, ಗುಜರಾತ್, ಮಧ್ಯ ಪ್ರದೇಶ ರಾಜ್ಯಗಳಲ್ಲಿ ತಂದಿರುವ ಕಾಮಿ೯ಕ ಕಾನೂನುಗಳಿಂದ ಬಂಡವಾಳಗಾರರಿಗೆ ವಿನಾಯಿತಿ ನೀಡುವ ಕ್ರಮಗಳನ್ನು ಸುಗ್ರೀವಾಜ್ಞೆ ಹೊರಡಿಸುವ ತನ್ನ ಕೈಂಕಯ೯ಕ್ಕೆ ಅನುವುಗೊಳಿಸಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹೇಶ್ವರ ರಾವ್ ಅವರಿಗೆ ಕಾಮಿ೯ಕ ಇಲಾಖೆಯ ಪ್ರಧಾನ ಕಾಯ೯ದಶಿ೯ ಹೊಣೆಯನ್ನು ವಹಿಸಿದೆ ಎಂದು ಸಿಪಿಐ(ಎಂ) ಆರೋಪಿಸಿದೆ.

ರಾಜ್ಯದ ಕಾಮಿ೯ಕರ ಹಿತಕ್ಕಿಂತ ಕಾಪೋ೯ರೇಟ್ ಬಂಡವಾಳದ ಹಿತವೇ ರಾಜ್ಯ ಸಕಾ೯ರಕ್ಕೆ ಮುಖ್ಯ ವಾಗಿದೆ ಎಂಬುದನ್ನು ಬಿಜೆಪಿ ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ. ಏನಾದರು ಮಾಡಿ ಕಾಮಿ೯ಕ ಕಾನೂನುಗಳಿಂದ ಬಂಡವಾಳಗಾರರಿಗೆ ವಿನಾಯಿತಿ ನೀಡಲು ಕೋವಿಡ್ ಪರಿಹಾರವನ್ನು ಸಹಾ ಬಲಿಕೊಡಲು ರಾಜ್ಯ ಸಕಾ೯ರ ಹಿಂಜರಿಯದು ಎಂಬುದನ್ನು ಇದು ತೋರುತ್ತದೆ.

ತನ್ನ ಬಂಡವಾಳಗಾರರ ಪರ ನೀಲುಮೆಯ ಸಾಧನೆಗಾಗಿ ಒಬ್ಬ ದಕ್ಷ ಮತ್ತು ಕೋವಿಡ್ ಪರಿಹಾರ ಕಾಯ೯ವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಲ್ಲಿ ಯಶಸ್ಸು ಕಾಣುತ್ತಿದ್ದ ಅಧಿಕಾರಿಯನ್ನು ಸಹ ಬಿಜೆಪಿ ಸರಕಾರ ಸಹಿಸದು ಎಂದು ಸಿಪಿಐ(ಎಂ) ಹೇಳಿದೆ.

ರಾಜ್ಯ ಬಿಜೆಪಿ ಸಕಾ೯ರದ ಇಂತಹ ಕ್ರಮಗಳೆ ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಜನತೆಗೆ ಪರಿಹಾರವನ್ನು ಸಮ೯ಪಕವಾಗಿ ಸಮಥ೯ವಾಗಿ ನಿವ೯ಹಿಸುವಲ್ಲಿ ವಿಫಲವಾಗುತ್ತಿದೆ. ರಾಜ್ಯ ಸಕಾ೯ರದಲ್ಲಿನ ದ್ವಿಅಧಿಕಾರ ಕೇಂದ್ರಗಳು ಹಾಗು ಸೂಪರ್ ಸಿಎಂ ಸಂತೋಷ್ ಕಪಿಮುಷ್ಟಿಯಲ್ಲಿ ರಾಜ್ಯ ಸಕಾ೯ರವು ಸಿಲುಕಿರುವ ಪರಿಣಾಮ ಇಂತಹ ದೂರದೃಷ್ಟಿ ಹೀನ ಆಡಳಿತಾತ್ಮಕ ಕ್ರಮಗಳನ್ನು ರಾಜ್ಯದ ಜನತೆ ಕಾಣುವಂತಾಗಿದೆ ಎಂದು ಸಿಪಿಐ(ಎಂ) ಹೇಳಿದೆ.

ಕೋವಿಡ್ ಲಾಕ್ಡೌನ್ ಸಂತ್ರಸ್ತರಿಗೆ ಪರಿಹಾರವನ್ನು ಪರಿಣಾಮಕಾರಿಯಾಗಿ ಮುಂದುವರಿಸಲು ಮಣಿವಣ್ಣನ್ ವಗಾ೯ವಣೆಯನ್ನು ಕೂಡಲೆ ರದ್ದುಪಡಿಸಿ ಕಾಮಿ೯ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನೇ ಮುಂದುವರಿಸ ಬೇಕೆಂದು ಸಿಪಿಐ(ಎಂ) ರಾಜ್ಯ ಸಕಾ೯ರವನ್ನು ಒತ್ತಾಯಿಸಿದೆ.


ಇದನ್ನೂ ಓದಿ: 900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ಅಘಾತಕಾರಿ ಘಟನೆ


ವಿಡಿಯೊ ನೋಡಿ: ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...

ಇಂಧನ ಬಿಕ್ಕಟ್ಟು: ‘ಭಾರತದಲ್ಲಿ ಲಾಕ್‌ಡೌನ್ ಇಲ್ಲ’: ‘ಅಂತಹ ಯಾವುದೇ ಪ್ರಸ್ತಾಪ ಪರಿಗಣನೆಯಲ್ಲಿಲ್ಲ’; ಹರ್ದೀಪ್ ಪುರಿ ಸ್ಪಷ್ಟನೆ

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾದ ಎಲ್‌ಪಿಜಿ ಬಿಕ್ಕಟ್ಟಿನ ಮಧ್ಯೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಭಾರತದಲ್ಲಿ ಲಾಕ್‌ಡೌನ್ ವದಂತಿಗಳು "ಸುಳ್ಳು" ಎಂದು ಹೇಳಿದ್ದಾರೆ. ಇಂಧನ ಬಿಕ್ಕಟ್ಟಿನ ಕಳವಳಗಳನ್ನು ತಿಳಿಸುತ್ತಾ...