Homeಕರ್ನಾಟಕರಾಜ್ಯ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ 'ಮಣಿವಣ್ಣನ್. ಪಿ' ವರ್ಗಾವಣೆ

ರಾಜ್ಯ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ‘ಮಣಿವಣ್ಣನ್. ಪಿ’ ವರ್ಗಾವಣೆ

- Advertisement -
- Advertisement -

ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಐಎಎಸ್ ಮಣಿವಣ್ಣನ್. ಪಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದೆ.

ಕರ್ನಾಟಕ ಸರ್ಕಾರ ಘೋಷಿಸಿದ ಹಠಾತ್ ನಿರ್ಧಾರದಲ್ಲಿ ಕರ್ನಾಟಕ ಐಎಎಸ್ ಅಧಿಕಾರಿ ಮಣಿವಣ್ಣನ್ ಪಿ ಅವರನ್ನು ಸೋಮವಾರ ಅನಿರ್ದಿಷ್ಟವಾಗಿ ವರ್ಗಾಯಿಸಲಾಯಿತು. ಕೊರೊನಾ ರೋಗವನ್ನು ನಿಭಾಯಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿರುವ ಮಧ್ಯೆ ಈ ಪ್ರಕಟಣೆ ಬಂದಿದ್ದು, ಭಾರಿ ಕುತೂಕಲ ಕೆರಳಿಸಿವೆ. ರಾಜ್ಯದ ಕಾರ್ಮಿಕರ ವಿಚಾರವನ್ನು ನಿಭಾಯಿಸುವಲ್ಲಿ ಮಣಿವಣ್ಣನ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಅವರು ನಿರ್ವಹಿಸುತ್ತಿದ್ದ ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರ ಎರಡೂ ಹುದ್ದೆಗಳಿಂದ ಕೂಡಾ ವರ್ಗಾಯಿಸಲಾಗಿದೆ. ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗದ (ಗಣಿ ಮತ್ತು ಎಂಎಸ್‌ಎಂಇ) ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್ವರ ರಾವ್ ಅವರನ್ನು ಎರಡೂ ಹುದ್ದೆಗಳಿಗೆ ನೇಮಿಸಿ ತಕ್ಷಣದಿಂದ ಜಾರಿಗೆ ತರಲಾಗಿದೆ.

ಆದರೆ, ಮಣಿವಣ್ಣನ್ ಅವರಿಗೆ ಯಾವುದೆ ಹೊಸ ಹುದ್ದೆಯನ್ನು ನೀಡದೆ ವರ್ಗಾಯಿಸಲಾಗಿದೆ.

ಮಣಿವಣ್ಣನ್ ಪಿ, ಸಾಮಾಜಿಕ ಜಾಲತಾಣಗಳ ಸಕ್ರಿಯ ಬಳಕೆದಾರರಾಗಿದ್ದರು. ಕರೋನ ವೈರಸ್ ನಂತರದ ಲಾಕ್‌ಡೌನ್ ಬಗ್ಗೆ ಪ್ರಶ್ನೆಗಳನ್ನು ಸಂಗ್ರಹಿಸಲು ಸಾರ್ವಜನಿಕರಿಗಾಗಿ ಪ್ರಾರಂಭಿಸಿದ ಟೆಲಿಗ್ರಾಮ್ ಗುಂಪು ಬಹಳ ಜನಪ್ರಿಯವಾಗಿತ್ತು.

ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ, ಏಪ್ರಿಲ್‌ನಲ್ಲಿ ಉದ್ಯೋಗದಾತರು ಪೂರ್ಣ ವೇತನ ಅಥವಾ ಕೂಲಿಯನ್ನು ನೀಡದೇ ಇರುವುದಕ್ಕೆ ಹೊರಡಿಸಿದ್ದ ನೋಟೀಸನ್ನು 24 ಗಂಟೆಯ ಒಳಗಡೆ ವಾಪಾಸು ಪಡೆಯುವಂತೆ ಅವರನ್ನು ಒತ್ತಾಯಿಸಲಾಗಿತ್ತು. ಆ ಸಮಯದಲ್ಲಿ ಇಲಾಖೆಗೆ 700 ಕ್ಕೂ ಹೆಚ್ಚು ದೂರುಗಳು ಬಂದಿದ್ದವು. ಈ ಆದೇಶದ ವಿರುದ್ಧ ಸರ್ಕಾರ ವಿವಿಧ ಕೈಗಾರಿಕೆಗಳಿಂದ ತೀವ್ರ ಒತ್ತಡಕ್ಕೆ ಒಳಗಾಯಿತು. ಪ್ರಸ್ತುತ ವರ್ಗಾವಣೆ ಇದೇ ಕಾರಣಕ್ಕೆ ಆಗಿದೆ ಎಂದು ಅನೇಕ ಮೂಲಗಳು ಸೂಚಿಸಿವೆ.

ದೂರು ನೀಡಲು ಕಾರ್ಮಿಕರನ್ನು ಕೇಳುವ ಮೂಲಕ ಅಧಿಕಾರಿ ಅಶಾಂತಿ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಉದ್ಯೋಗದಾತ ಸಂಘ ಮುಖ್ಯಮಂತ್ರಿಗೆ ಪತ್ರ ಬರೆದಿತ್ತು. ಇವರು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಶಾಸಕರಿಗೆ ಪರಿಹಾರ ಕಿಟ್‌ಗಳನ್ನು ಹಸ್ತಾಂತರಿಸಬೇಕೆಂದು ಬಯಸಿದ್ದರು. ಆದರೆ, ಮಣಿವಣ್ಣನ್ ಈ ವಿಚಾರಕ್ಕೆ ವಿರುದ್ಧವಾಗಿದ್ದು ಇಲಾಖೆ ಕಿಟ್‌ಗಳನ್ನು ವಿತರಿಸಿತು. ಇದರಿಂದಾಗಿ ಕಿಟ್‌ಗಳು ಸರಿಯಾಗಿ ಜನರನ್ನು ತಲುಪುತ್ತಿಲ್ಲ ಎಂದು ಅನೇಕ ಶಾಸಕರು ಆರೋಪಿಸಿದ್ದರು.

ಕನಿಷ್ಟ ವೇತನವನ್ನು ನಿಯಂತ್ರಿಸುವ ಕಾರ್ಮಿಕ ಕಾನೂನುಗಳನ್ನು ಸಡಿಲಿಸುವುದು, ಅಧಿಕಾವಧಿ ಕೆಲಸದ ಸಮಯವನ್ನು ಹೆಚ್ಚಿಸುವುದು ಮತ್ತು ಕೈಗಾರಿಕೆಗಳಿಗೆ ಸಹಾಯ ಮಾಡಲು ಪ್ರಮುಖ ಕಾರ್ಮಿಕ ಶಾಸನಗಳ ಅನುಸರಣೆಯನ್ನು ಸರಾಗಗೊಳಿಸುವ ಬಗ್ಗೆ ಕರ್ನಾಟಕ ಸರ್ಕಾರ ಪರಿಗಣಿಸುತ್ತಿರುವ ಸಮಯದಲ್ಲಿ ಮಣಿವಣ್ಣನ್ ಅವರ ವರ್ಗಾವಣೆಯ ಘೋಷಣೆ ಮಾಡಿದೆ.

1998 ರ ಬ್ಯಾಚ್ ಐಎಎಸ್ ಅಧಿಕಾರಿ, ಮಣಿವಣ್ಣನ್ ಅವರು ಕಳೆದ ವಾರದಲ್ಲಿ ಲಾಕ್ ಡೌನ್ ಅವಧಿಯಲ್ಲಿ ಉದ್ಯೋಗದಾತರು ಕಾರ್ಮಿಕರಿಗೆ ಸಂಬಳ ನೀಡದಿರುವ ಸಮಸ್ಯೆಗಳ ಬಗ್ಗೆ ವ್ಯವಹರಿಸುತ್ತಿದ್ದರು.

2019 ರ ಪ್ರವಾಹದಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಅವರು ಸಕ್ರಿಯವಾಗಿ ಭಾಗಿಯಾಗಿದ್ದರು. ಪ್ರವಾಹದಿಂದ ಹಾನಿಗೊಳಗಾದ ಶಿವಮೊಗ್ಗದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಮಣಿವಣ್ಣನ್ ಅವರನ್ನು ನೇಮಿಸಲಾಗಿತ್ತು.

ಈ ಹಿಂದೆ ಅವರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಬೆಸ್ಕಾಮ್ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್) ಹೀಗೆ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.

ಮಣಿವಣ್ಣನ್ ಪಿ ವರ್ಗಾವಣೆಗೆ ಸಿಪಿಐ(ಎಂ) ಖಂಡನೆ 

ಮಣಿವಣ್ಣನ್ ಅವರ ವರ್ಗಾವಣೆಯನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲಾ ಸಮಿತಿಗಳು ಖಂಡಿಸಿವೆ.

ಉತ್ತರ ಪ್ರದೇಶ, ಗುಜರಾತ್, ಮಧ್ಯ ಪ್ರದೇಶ ರಾಜ್ಯಗಳಲ್ಲಿ ತಂದಿರುವ ಕಾಮಿ೯ಕ ಕಾನೂನುಗಳಿಂದ ಬಂಡವಾಳಗಾರರಿಗೆ ವಿನಾಯಿತಿ ನೀಡುವ ಕ್ರಮಗಳನ್ನು ಸುಗ್ರೀವಾಜ್ಞೆ ಹೊರಡಿಸುವ ತನ್ನ ಕೈಂಕಯ೯ಕ್ಕೆ ಅನುವುಗೊಳಿಸಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹೇಶ್ವರ ರಾವ್ ಅವರಿಗೆ ಕಾಮಿ೯ಕ ಇಲಾಖೆಯ ಪ್ರಧಾನ ಕಾಯ೯ದಶಿ೯ ಹೊಣೆಯನ್ನು ವಹಿಸಿದೆ ಎಂದು ಸಿಪಿಐ(ಎಂ) ಆರೋಪಿಸಿದೆ.

ರಾಜ್ಯದ ಕಾಮಿ೯ಕರ ಹಿತಕ್ಕಿಂತ ಕಾಪೋ೯ರೇಟ್ ಬಂಡವಾಳದ ಹಿತವೇ ರಾಜ್ಯ ಸಕಾ೯ರಕ್ಕೆ ಮುಖ್ಯ ವಾಗಿದೆ ಎಂಬುದನ್ನು ಬಿಜೆಪಿ ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ. ಏನಾದರು ಮಾಡಿ ಕಾಮಿ೯ಕ ಕಾನೂನುಗಳಿಂದ ಬಂಡವಾಳಗಾರರಿಗೆ ವಿನಾಯಿತಿ ನೀಡಲು ಕೋವಿಡ್ ಪರಿಹಾರವನ್ನು ಸಹಾ ಬಲಿಕೊಡಲು ರಾಜ್ಯ ಸಕಾ೯ರ ಹಿಂಜರಿಯದು ಎಂಬುದನ್ನು ಇದು ತೋರುತ್ತದೆ.

ತನ್ನ ಬಂಡವಾಳಗಾರರ ಪರ ನೀಲುಮೆಯ ಸಾಧನೆಗಾಗಿ ಒಬ್ಬ ದಕ್ಷ ಮತ್ತು ಕೋವಿಡ್ ಪರಿಹಾರ ಕಾಯ೯ವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಲ್ಲಿ ಯಶಸ್ಸು ಕಾಣುತ್ತಿದ್ದ ಅಧಿಕಾರಿಯನ್ನು ಸಹ ಬಿಜೆಪಿ ಸರಕಾರ ಸಹಿಸದು ಎಂದು ಸಿಪಿಐ(ಎಂ) ಹೇಳಿದೆ.

ರಾಜ್ಯ ಬಿಜೆಪಿ ಸಕಾ೯ರದ ಇಂತಹ ಕ್ರಮಗಳೆ ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಜನತೆಗೆ ಪರಿಹಾರವನ್ನು ಸಮ೯ಪಕವಾಗಿ ಸಮಥ೯ವಾಗಿ ನಿವ೯ಹಿಸುವಲ್ಲಿ ವಿಫಲವಾಗುತ್ತಿದೆ. ರಾಜ್ಯ ಸಕಾ೯ರದಲ್ಲಿನ ದ್ವಿಅಧಿಕಾರ ಕೇಂದ್ರಗಳು ಹಾಗು ಸೂಪರ್ ಸಿಎಂ ಸಂತೋಷ್ ಕಪಿಮುಷ್ಟಿಯಲ್ಲಿ ರಾಜ್ಯ ಸಕಾ೯ರವು ಸಿಲುಕಿರುವ ಪರಿಣಾಮ ಇಂತಹ ದೂರದೃಷ್ಟಿ ಹೀನ ಆಡಳಿತಾತ್ಮಕ ಕ್ರಮಗಳನ್ನು ರಾಜ್ಯದ ಜನತೆ ಕಾಣುವಂತಾಗಿದೆ ಎಂದು ಸಿಪಿಐ(ಎಂ) ಹೇಳಿದೆ.

ಕೋವಿಡ್ ಲಾಕ್ಡೌನ್ ಸಂತ್ರಸ್ತರಿಗೆ ಪರಿಹಾರವನ್ನು ಪರಿಣಾಮಕಾರಿಯಾಗಿ ಮುಂದುವರಿಸಲು ಮಣಿವಣ್ಣನ್ ವಗಾ೯ವಣೆಯನ್ನು ಕೂಡಲೆ ರದ್ದುಪಡಿಸಿ ಕಾಮಿ೯ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನೇ ಮುಂದುವರಿಸ ಬೇಕೆಂದು ಸಿಪಿಐ(ಎಂ) ರಾಜ್ಯ ಸಕಾ೯ರವನ್ನು ಒತ್ತಾಯಿಸಿದೆ.


ಇದನ್ನೂ ಓದಿ: 900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ಅಘಾತಕಾರಿ ಘಟನೆ


ವಿಡಿಯೊ ನೋಡಿ: ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...