Homeಮುಖಪುಟಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ‘ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ’ ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿತು, ಸಾರಿಗೆ ಮತ್ತು ಬ್ಯಾಂಕಿಂಗ್ ಸೇರಿದಂತೆ ಅಗತ್ಯ ಸೇವೆಗಳಲ್ಲಿ ವ್ಯತ್ಯಯ ಉಂಟಾಯಿತು ಎಂದು ವರದಿಯಾಗಿದೆ.

ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಎಸ್‌ಇಡಬ್ಲ್ಯುಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಸೇರಿದಂತೆ ಹತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿತ್ತು. ದೇಶದಾದ್ಯಂತ ಸುಮಾರು 30 ಕೋಟಿ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ ಎಂದು ವೇದಿಕೆ ಹೇಳಿಕೊಂಡಿದೆ.

ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುವ, ಉದ್ಯೋಗ ಭದ್ರತೆಯನ್ನು ಕಡಿಮೆ ಮಾಡುವ ಮತ್ತು ಉದ್ಯೋಗದಾತರಿಗೆ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಹಾಗೂ ಕೆಲಸದಿಂದ ತೆಗೆದುಹಾಕಲು ಸುಲಭವಾಗಿಸುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಮನರೇಗಾ ಯೋಜನೆಯನ್ನು ಮರುಸ್ಥಾಪಿಸಬೇಕು, ವಿಬಿ-ಜಿ ರಾಮ್‌ಜಿ ಕಾಯ್ದೆ ರದ್ದುಗೊಳಿಸಬೇಕು, ಕರಡು ಬೀಜ ಮಸೂದೆಮತ್ತು ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು, ಪರಮಾಣು ಶಕ್ತಿಯ ಶಾಂತಿ ಕಾಯ್ದೆಯನ್ನೂ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಅಸ್ಸಾಂ, ತಮಿಳುನಾಡು, ಪಾಂಡಿಚೇರಿ, ಕೇರಳ, ಒಡಿಶಾ ಮತ್ತು ಬಿಹಾರ ಸೇರಿದಂತೆ ರಾಜ್ಯಗಳಿಂದ ಪ್ರತಿಭಟನೆಯ ವರದಿಗಳು ಬಂದಿವೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕರ್ನಾಟಕದಲ್ಲಿ ಪ್ರತಿಭಟನೆ

ಕರ್ನಾಟಕದಲ್ಲಿ ಮುಷ್ಕರಕ್ಕೆ ಹೆಚ್ಚಿನ ಬೆಂಬಲ ದೊರೆತಂತೆ ಕಂಡು ಬಂದಿಲ್ಲ. ಬೆಂಗಳೂರಿನ ಟೌನ್‌ ಹಾಲ್ ಬಳಿ ಪ್ರತಿಭಟನೆಗೆ ಮುಂದಾದ ಕಾರ್ಮಿಕ ಸಂಘಟನೆಗಳ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು. ಇನ್ನುಳಿದಂತೆ ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆಗಳು ನಡೆದ ಬಗ್ಗೆ ವರದಿಯಾಗಿದೆ.

ದೆಹಲಿಯ ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಭಟನೆ

ದೆಹಲಿಯ ಕೈಗಾರಿಕಾ ವಲಯಗಳಾದ ಓಖ್ಲಾ ಮತ್ತು ಬವಾನಾಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಹೆಚ್ಚಿನ ಖಾಸಗಿ ವಾಹನಗಳು ರಸ್ತೆಗೆ ಇಳಿಯದ ಕಾರಣ ಸಂಚಾರ ದಟ್ಟಣೆ ಕಡಿಮೆಯಿತ್ತು. ಬ್ಯಾಂಕಿಂಗ್, ವಿಮೆ, ಅಂಚೆ, ಸಾರಿಗೆ, ಆರೋಗ್ಯ, ಕಲ್ಲಿದ್ದಲು ಮತ್ತು ಕಲ್ಲಿದ್ದಲೇತರ ಗಣಿಗಳು, ಗ್ಯಾಸ್ ಪೈಪ್‌ಲೈನ್ ಹಾಗೂ ವಿದ್ಯುತ್ ವಲಯಗಳ ಮೇಲೆ ಇಂದಿನ ಮುಷ್ಕರದ ಪರಿಣಾಮ ಬೀರಿದೆ ಎಂದು ಕೌರ್ ತಿಳಿಸಿದ್ದಾರೆ.

ಒಡಿಶಾದಲ್ಲಿ ಪ್ರತಿಭಟನಾಕಾರರಿಂದ ರಸ್ತೆ ತಡೆ, ಸಾರಿಗೆ ಸೇವೆಯಲ್ಲಿ ವ್ಯತ್ಯಯ

ದೇಶದಾದ್ಯಂತ ನಡೆದ ಮುಷ್ಕರದಿಂದ ಒಡಿಶಾದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಭುವನೇಶ್ವರ, ಕಟಕ್ ಮತ್ತು ರೂರ್ಕೆಲಾದಂತಹ ಸ್ಥಳಗಳಲ್ಲಿ ಸಾರಿಗೆ ಸೇವೆಗಳು ವ್ಯತ್ಯಯಗೊಂಡವು. ಭುವನೇಶ್ವರದಲ್ಲಿ ಪ್ರತಿಭಟನಾಕಾರರು ಸ್ಟೇಷನ್ ಸ್ಕ್ವೇರ್ ಬಳಿ ರಸ್ತೆ ತಡೆ ನಡೆಸಿದ್ದರಿಂದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತಾಯಿತು. ಮುಷ್ಕರದಿಂದಾಗಿ ‘ಅಮಾ ಬಸ್’ ಮತ್ತು ಆಟೋರಿಕ್ಷಾ ಸೇವೆಗಳು ಸ್ಥಗಿತಗೊಂಡವು. ರಾಜಧಾನಿಯ ಪ್ರಮುಖ ವಾಣಿಜ್ಯ ಸಂಸ್ಥೆಗಳೂ ಕೂಡ ಮುಚ್ಚಲ್ಪಟ್ಟಿತ್ತು ಎಂದು ವರದಿಯಾಗಿದೆ.

ಜಯದೇವ್ ವಿಹಾರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ-16 ರಲ್ಲಿಯೂ ಪ್ರತಿಭಟನೆಗಳು ನಡೆದವು. ಇದರಿಂದಾಗಿ ಸಂಚಾರಕ್ಕೆ ಅಡಚಣೆ ಉಂಟಾಯಿತು ಎಂದು ವರದಿ ತಿಳಿಸಿದೆ.

ಜಾರ್ಖಂಡ್‌ನಲ್ಲಿ ಬ್ಯಾಂಕಿಂಗ್, ವಿಮೆ, ಕಲ್ಲಿದ್ದಲು ವಲಯಗಳಿಗೆ ತಟ್ಟಿದ ಮುಷ್ಕರದ ಬಿಸಿ

ಜಾರ್ಖಂಡ್‌ನ ವಿವಿಧ ಕಾರ್ಮಿಕ ಸಂಘಗಳ ಸದಸ್ಯರು ವಿವಿಧ ಕಲ್ಲಿದ್ದಲು ಕಂಪನಿಗಳು ಮತ್ತು ಪಿಎಸ್‌ಯುಗಳ ದ್ವಾರಗಳ ಮುಂದೆ ಪ್ರತಿಭಟಿಸಿದರು. ಮುಷ್ಕರದಿಂದ ರಾಜ್ಯದ ಬ್ಯಾಂಕಿಂಗ್, ವಿಮೆ ಮತ್ತು ಕಲ್ಲಿದ್ದಲು ವಲಯಗಳ ಮೇಲೂ ಪರಿಣಾಮ ಬೀರಿದೆ. ಎಡಪಕ್ಷಗಳು ಮತ್ತು ಕಾಂಗ್ರೆಸ್ ಮುಷ್ಕರಕ್ಕೆ ಬೆಂಬಲ ನೀಡಿತ್ತು.

ಕೇರಳದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ, ಸಾರಿಗೆ ಸೇವೆಗಳಲ್ಲಿ ವ್ಯತ್ಯಯ

ಕೇರಳದಲ್ಲಿ ಮುಷ್ಕರದಿಂದ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಹೆಚ್ಚು ತೊಂದರೆ ಅನುಭವಿಸಿದರು. ಆಟೋ-ರಿಕ್ಷಾ ಒಕ್ಕೂಟಗಳು ಕೂಡ ಮುಷ್ಕರದ ಸಮಯದಲ್ಲಿ ಕಾರ್ಯನಿರ್ವಹಿಸುವುದಿಲ್ಲ ಎಂದು ಘೋಷಿಸಿದ್ದವು. ಇದರಿಂದ ಪ್ರಯಾಣಿಕರಿಗೆ ತೊಂದರೆ ಆಯಿತು ಎಂದು ವರದಿಯಾಗಿದೆ.

ಸಾರಿಗೆ ಸೇವೆಗಳ ವ್ಯತ್ಯಯವು ಸರ್ಕಾರಿ ಕಚೇರಿಗಳಲ್ಲಿನ ಹಾಜರಾತಿಯ ಮೇಲೂ ಪರಿಣಾಮ ಬೀರಿತ್ತು. ಈ ನಡುವೆ, ಮುಷ್ಕರದ ಕಾರಣದಿಂದ ಕಚೇರಿಗೆ ತೆರಳಲು ಆಗದೆ ಆದ ಗೈರುಹಾಜರಿಯನ್ನು ‘ಡೈಸ್-ನಾನ್’ (ಕೆಲಸವಿಲ್ಲದ ದಿನಕ್ಕೆ ವೇತನವಿಲ್ಲ) ಎಂದು ಪರಿಗಣಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಗೋವಾದಲ್ಲಿ ಮಿಶ್ರ ಪ್ರತಿಕ್ರಿಯೆ

ಗೋವಾದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಮತ್ತು ಅನೇಕ ವಿಮಾ ಕಂಪನಿಗಳ ಕಚೇರಿಗಳು ಮುಚ್ಚಲ್ಪಟ್ಟಿತ್ತು. ರಾಜ್ಯದ ಕೆಲವು ಕೈಗಾರಿಕಾ ಘಟಕಗಳ ಮೇಲೂ ಮುಷ್ಕರ ಪರಿಣಾಮ ಬೀರಿದೆ. ಮುಷ್ಕರದ ಕರೆಗೆ ಬೆಂಬಲ ಸೂಚಿಸಲು ವಿವಿಧ ಕೈಗಾರಿಕಾ ಪ್ರದೇಶಗಳಲ್ಲಿ ಕಾರ್ಮಿಕ ಸಂಘಟನೆಗಳು ಕೆಲಸವನ್ನು ಸ್ಥಗಿತಗೊಳಿಸಿವೆ ಎಂದು ಎಐಟಿಯುಸಿ ಕಾರ್ಯದರ್ಶಿ ಸುಹಾಸ್ ನಾಯಕ್ ತಿಳಿಸಿದ್ದಾರೆ.

ಅಗತ್ಯ ಸೇವೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ನಾಯಕ್ ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕೂಡ ಯಾವುದೇ ಸಮಸ್ಯೆಯಿಲ್ಲದೆ ಕಾರ್ಯನಿರ್ವಹಿಸಿದೆ ಎಂದು ಅವರು ಹೇಳಿದ್ದಾರೆ.

ಕಾರ್ಮಿಕ ಸಂಘಟನೆಗಳ ಸದಸ್ಯರು ರಾಜಧಾನಿ ಪಣಜಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಪಶ್ಚಿಮ ಬಂಗಾಳದಿಂದ ಭಾಗಶಃ ಪ್ರತಿಕ್ರಿಯೆ

ಪಶ್ಚಿಮ ಬಂಗಾಳದಲ್ಲಿ ಮುಷ್ಕರಕ್ಕೆ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ಬ್ಯಾಂಕುಗಳು ಮತ್ತು ಕೈಗಾರಿಕಾ ವಲಯಗಳಲ್ಲಿ ಕೆಲಸದ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.

ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ‘ಬಂಗಾಳವನ್ನು ಉಳಿಸಿ’ ಎಂಬ ಕರೆ ನೀಡಿರುವ ಸಿಐಟಿಯು, ಎಐಟಿಯುಸಿ ಮತ್ತು ಯುಟಿಯುಸಿ ಸೇರಿದಂತೆ ಕಾರ್ಮಿಕ ಸಂಘಟನೆಗಳ ಸದಸ್ಯರು ದುರ್ಗಾಪುರ ಮತ್ತು ಹಲ್ದಿಯಾದ ಕೈಗಾರಿಕಾ ಕೇಂದ್ರಗಳ ಕಾರ್ಖಾನೆಗಳ ಮುಂದೆ ಪ್ರತಿಭಟನೆ ನಡೆಸಿದರು.

ರಾಜ್ಯದ ಹಲವು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳ ಕಾರ್ಯಾಚರಣೆಯ ಮೇಲೆ ಮುಷ್ಕರ ಪರಿಣಾಮ ಬೀರಿದೆ ಎಂದು ಕಾರ್ಮಿಕ ಸಂಘಟನೆಯ ನಾಯಕರು ತಿಳಿಸಿದ್ದಾರೆ. ಆದರೆ, ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಎಂದಿನಂತೆ ಕಾರ್ಯನಿರ್ವಹಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...