Homeಮುಖಪುಟಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ‘ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ’ ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿತು, ಸಾರಿಗೆ ಮತ್ತು ಬ್ಯಾಂಕಿಂಗ್ ಸೇರಿದಂತೆ ಅಗತ್ಯ ಸೇವೆಗಳಲ್ಲಿ ವ್ಯತ್ಯಯ ಉಂಟಾಯಿತು ಎಂದು ವರದಿಯಾಗಿದೆ.

ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಎಸ್‌ಇಡಬ್ಲ್ಯುಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಸೇರಿದಂತೆ ಹತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿತ್ತು. ದೇಶದಾದ್ಯಂತ ಸುಮಾರು 30 ಕೋಟಿ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ ಎಂದು ವೇದಿಕೆ ಹೇಳಿಕೊಂಡಿದೆ.

ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುವ, ಉದ್ಯೋಗ ಭದ್ರತೆಯನ್ನು ಕಡಿಮೆ ಮಾಡುವ ಮತ್ತು ಉದ್ಯೋಗದಾತರಿಗೆ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಹಾಗೂ ಕೆಲಸದಿಂದ ತೆಗೆದುಹಾಕಲು ಸುಲಭವಾಗಿಸುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಮನರೇಗಾ ಯೋಜನೆಯನ್ನು ಮರುಸ್ಥಾಪಿಸಬೇಕು, ವಿಬಿ-ಜಿ ರಾಮ್‌ಜಿ ಕಾಯ್ದೆ ರದ್ದುಗೊಳಿಸಬೇಕು, ಕರಡು ಬೀಜ ಮಸೂದೆಮತ್ತು ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು, ಪರಮಾಣು ಶಕ್ತಿಯ ಶಾಂತಿ ಕಾಯ್ದೆಯನ್ನೂ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಅಸ್ಸಾಂ, ತಮಿಳುನಾಡು, ಪಾಂಡಿಚೇರಿ, ಕೇರಳ, ಒಡಿಶಾ ಮತ್ತು ಬಿಹಾರ ಸೇರಿದಂತೆ ರಾಜ್ಯಗಳಿಂದ ಪ್ರತಿಭಟನೆಯ ವರದಿಗಳು ಬಂದಿವೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕರ್ನಾಟಕದಲ್ಲಿ ಪ್ರತಿಭಟನೆ

ಕರ್ನಾಟಕದಲ್ಲಿ ಮುಷ್ಕರಕ್ಕೆ ಹೆಚ್ಚಿನ ಬೆಂಬಲ ದೊರೆತಂತೆ ಕಂಡು ಬಂದಿಲ್ಲ. ಬೆಂಗಳೂರಿನ ಟೌನ್‌ ಹಾಲ್ ಬಳಿ ಪ್ರತಿಭಟನೆಗೆ ಮುಂದಾದ ಕಾರ್ಮಿಕ ಸಂಘಟನೆಗಳ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು. ಇನ್ನುಳಿದಂತೆ ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆಗಳು ನಡೆದ ಬಗ್ಗೆ ವರದಿಯಾಗಿದೆ.

ದೆಹಲಿಯ ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಭಟನೆ

ದೆಹಲಿಯ ಕೈಗಾರಿಕಾ ವಲಯಗಳಾದ ಓಖ್ಲಾ ಮತ್ತು ಬವಾನಾಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಹೆಚ್ಚಿನ ಖಾಸಗಿ ವಾಹನಗಳು ರಸ್ತೆಗೆ ಇಳಿಯದ ಕಾರಣ ಸಂಚಾರ ದಟ್ಟಣೆ ಕಡಿಮೆಯಿತ್ತು. ಬ್ಯಾಂಕಿಂಗ್, ವಿಮೆ, ಅಂಚೆ, ಸಾರಿಗೆ, ಆರೋಗ್ಯ, ಕಲ್ಲಿದ್ದಲು ಮತ್ತು ಕಲ್ಲಿದ್ದಲೇತರ ಗಣಿಗಳು, ಗ್ಯಾಸ್ ಪೈಪ್‌ಲೈನ್ ಹಾಗೂ ವಿದ್ಯುತ್ ವಲಯಗಳ ಮೇಲೆ ಇಂದಿನ ಮುಷ್ಕರದ ಪರಿಣಾಮ ಬೀರಿದೆ ಎಂದು ಕೌರ್ ತಿಳಿಸಿದ್ದಾರೆ.

ಒಡಿಶಾದಲ್ಲಿ ಪ್ರತಿಭಟನಾಕಾರರಿಂದ ರಸ್ತೆ ತಡೆ, ಸಾರಿಗೆ ಸೇವೆಯಲ್ಲಿ ವ್ಯತ್ಯಯ

ದೇಶದಾದ್ಯಂತ ನಡೆದ ಮುಷ್ಕರದಿಂದ ಒಡಿಶಾದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಭುವನೇಶ್ವರ, ಕಟಕ್ ಮತ್ತು ರೂರ್ಕೆಲಾದಂತಹ ಸ್ಥಳಗಳಲ್ಲಿ ಸಾರಿಗೆ ಸೇವೆಗಳು ವ್ಯತ್ಯಯಗೊಂಡವು. ಭುವನೇಶ್ವರದಲ್ಲಿ ಪ್ರತಿಭಟನಾಕಾರರು ಸ್ಟೇಷನ್ ಸ್ಕ್ವೇರ್ ಬಳಿ ರಸ್ತೆ ತಡೆ ನಡೆಸಿದ್ದರಿಂದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತಾಯಿತು. ಮುಷ್ಕರದಿಂದಾಗಿ ‘ಅಮಾ ಬಸ್’ ಮತ್ತು ಆಟೋರಿಕ್ಷಾ ಸೇವೆಗಳು ಸ್ಥಗಿತಗೊಂಡವು. ರಾಜಧಾನಿಯ ಪ್ರಮುಖ ವಾಣಿಜ್ಯ ಸಂಸ್ಥೆಗಳೂ ಕೂಡ ಮುಚ್ಚಲ್ಪಟ್ಟಿತ್ತು ಎಂದು ವರದಿಯಾಗಿದೆ.

ಜಯದೇವ್ ವಿಹಾರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ-16 ರಲ್ಲಿಯೂ ಪ್ರತಿಭಟನೆಗಳು ನಡೆದವು. ಇದರಿಂದಾಗಿ ಸಂಚಾರಕ್ಕೆ ಅಡಚಣೆ ಉಂಟಾಯಿತು ಎಂದು ವರದಿ ತಿಳಿಸಿದೆ.

ಜಾರ್ಖಂಡ್‌ನಲ್ಲಿ ಬ್ಯಾಂಕಿಂಗ್, ವಿಮೆ, ಕಲ್ಲಿದ್ದಲು ವಲಯಗಳಿಗೆ ತಟ್ಟಿದ ಮುಷ್ಕರದ ಬಿಸಿ

ಜಾರ್ಖಂಡ್‌ನ ವಿವಿಧ ಕಾರ್ಮಿಕ ಸಂಘಗಳ ಸದಸ್ಯರು ವಿವಿಧ ಕಲ್ಲಿದ್ದಲು ಕಂಪನಿಗಳು ಮತ್ತು ಪಿಎಸ್‌ಯುಗಳ ದ್ವಾರಗಳ ಮುಂದೆ ಪ್ರತಿಭಟಿಸಿದರು. ಮುಷ್ಕರದಿಂದ ರಾಜ್ಯದ ಬ್ಯಾಂಕಿಂಗ್, ವಿಮೆ ಮತ್ತು ಕಲ್ಲಿದ್ದಲು ವಲಯಗಳ ಮೇಲೂ ಪರಿಣಾಮ ಬೀರಿದೆ. ಎಡಪಕ್ಷಗಳು ಮತ್ತು ಕಾಂಗ್ರೆಸ್ ಮುಷ್ಕರಕ್ಕೆ ಬೆಂಬಲ ನೀಡಿತ್ತು.

ಕೇರಳದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ, ಸಾರಿಗೆ ಸೇವೆಗಳಲ್ಲಿ ವ್ಯತ್ಯಯ

ಕೇರಳದಲ್ಲಿ ಮುಷ್ಕರದಿಂದ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಹೆಚ್ಚು ತೊಂದರೆ ಅನುಭವಿಸಿದರು. ಆಟೋ-ರಿಕ್ಷಾ ಒಕ್ಕೂಟಗಳು ಕೂಡ ಮುಷ್ಕರದ ಸಮಯದಲ್ಲಿ ಕಾರ್ಯನಿರ್ವಹಿಸುವುದಿಲ್ಲ ಎಂದು ಘೋಷಿಸಿದ್ದವು. ಇದರಿಂದ ಪ್ರಯಾಣಿಕರಿಗೆ ತೊಂದರೆ ಆಯಿತು ಎಂದು ವರದಿಯಾಗಿದೆ.

ಸಾರಿಗೆ ಸೇವೆಗಳ ವ್ಯತ್ಯಯವು ಸರ್ಕಾರಿ ಕಚೇರಿಗಳಲ್ಲಿನ ಹಾಜರಾತಿಯ ಮೇಲೂ ಪರಿಣಾಮ ಬೀರಿತ್ತು. ಈ ನಡುವೆ, ಮುಷ್ಕರದ ಕಾರಣದಿಂದ ಕಚೇರಿಗೆ ತೆರಳಲು ಆಗದೆ ಆದ ಗೈರುಹಾಜರಿಯನ್ನು ‘ಡೈಸ್-ನಾನ್’ (ಕೆಲಸವಿಲ್ಲದ ದಿನಕ್ಕೆ ವೇತನವಿಲ್ಲ) ಎಂದು ಪರಿಗಣಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಗೋವಾದಲ್ಲಿ ಮಿಶ್ರ ಪ್ರತಿಕ್ರಿಯೆ

ಗೋವಾದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಮತ್ತು ಅನೇಕ ವಿಮಾ ಕಂಪನಿಗಳ ಕಚೇರಿಗಳು ಮುಚ್ಚಲ್ಪಟ್ಟಿತ್ತು. ರಾಜ್ಯದ ಕೆಲವು ಕೈಗಾರಿಕಾ ಘಟಕಗಳ ಮೇಲೂ ಮುಷ್ಕರ ಪರಿಣಾಮ ಬೀರಿದೆ. ಮುಷ್ಕರದ ಕರೆಗೆ ಬೆಂಬಲ ಸೂಚಿಸಲು ವಿವಿಧ ಕೈಗಾರಿಕಾ ಪ್ರದೇಶಗಳಲ್ಲಿ ಕಾರ್ಮಿಕ ಸಂಘಟನೆಗಳು ಕೆಲಸವನ್ನು ಸ್ಥಗಿತಗೊಳಿಸಿವೆ ಎಂದು ಎಐಟಿಯುಸಿ ಕಾರ್ಯದರ್ಶಿ ಸುಹಾಸ್ ನಾಯಕ್ ತಿಳಿಸಿದ್ದಾರೆ.

ಅಗತ್ಯ ಸೇವೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ನಾಯಕ್ ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕೂಡ ಯಾವುದೇ ಸಮಸ್ಯೆಯಿಲ್ಲದೆ ಕಾರ್ಯನಿರ್ವಹಿಸಿದೆ ಎಂದು ಅವರು ಹೇಳಿದ್ದಾರೆ.

ಕಾರ್ಮಿಕ ಸಂಘಟನೆಗಳ ಸದಸ್ಯರು ರಾಜಧಾನಿ ಪಣಜಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಪಶ್ಚಿಮ ಬಂಗಾಳದಿಂದ ಭಾಗಶಃ ಪ್ರತಿಕ್ರಿಯೆ

ಪಶ್ಚಿಮ ಬಂಗಾಳದಲ್ಲಿ ಮುಷ್ಕರಕ್ಕೆ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ಬ್ಯಾಂಕುಗಳು ಮತ್ತು ಕೈಗಾರಿಕಾ ವಲಯಗಳಲ್ಲಿ ಕೆಲಸದ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.

ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ‘ಬಂಗಾಳವನ್ನು ಉಳಿಸಿ’ ಎಂಬ ಕರೆ ನೀಡಿರುವ ಸಿಐಟಿಯು, ಎಐಟಿಯುಸಿ ಮತ್ತು ಯುಟಿಯುಸಿ ಸೇರಿದಂತೆ ಕಾರ್ಮಿಕ ಸಂಘಟನೆಗಳ ಸದಸ್ಯರು ದುರ್ಗಾಪುರ ಮತ್ತು ಹಲ್ದಿಯಾದ ಕೈಗಾರಿಕಾ ಕೇಂದ್ರಗಳ ಕಾರ್ಖಾನೆಗಳ ಮುಂದೆ ಪ್ರತಿಭಟನೆ ನಡೆಸಿದರು.

ರಾಜ್ಯದ ಹಲವು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳ ಕಾರ್ಯಾಚರಣೆಯ ಮೇಲೆ ಮುಷ್ಕರ ಪರಿಣಾಮ ಬೀರಿದೆ ಎಂದು ಕಾರ್ಮಿಕ ಸಂಘಟನೆಯ ನಾಯಕರು ತಿಳಿಸಿದ್ದಾರೆ. ಆದರೆ, ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಎಂದಿನಂತೆ ಕಾರ್ಯನಿರ್ವಹಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...