Homeಮುಖಪುಟಲಾಕ್‌ಡೌನ್‌ನಿಂದ ಮುಚ್ಚಿದ ಜನರಿಕ್‌ ಮಳಿಗೆಗಳು : ಬಡವರ ಕೈಗೆಟುಕದ ಜನೌಷಧಿ

ಲಾಕ್‌ಡೌನ್‌ನಿಂದ ಮುಚ್ಚಿದ ಜನರಿಕ್‌ ಮಳಿಗೆಗಳು : ಬಡವರ ಕೈಗೆಟುಕದ ಜನೌಷಧಿ

- Advertisement -
- Advertisement -

ಕೊರೊನ ವೈರಸ್ ಸೋಂಕು ಹರಡದಂತೆ ಲಾಕ್ ಡೌನ್ ಮಾಡಿದ ಮೇಲೆ ರಾಜ್ಯದಲ್ಲಿ ಜನರಿಕ್ ಮಳಿಗೆಗಳು ಮುಚ್ಚಿವೆ. ಔಷಧಿಗಳ ಪೂರೈಕೆಯಿಲ್ಲದೆ ಜನರಿಕ್ ಜನೌಷಧಿ ಮಳಿಗೆಗಳನ್ನು ಬಂದ್ ಮಾಡಿರುವುದರಿಂದ ದಿನ ಬಳಕೆಯ ಮಾತ್ರೆಗಳು ಸಿಗದೆ ರೋಗಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಡಿಮೆ ಬೆಲೆಗೆ ಜನರಿಕ್ ಜನೌಷಧಿ ಮಳಿಗೆಯಲ್ಲಿ ಕಡಿಮೆ ಬೆಲೆಗೆ ದೊರೆಯುತ್ತಿದ್ದ ಔಷಧಿಗಳನ್ನು ಖಾಗಸಿ ಮೆಡಿಕಲ್ ಸ್ಟೋರ್ ಗಳಲ್ಲಿ ದುಬಾರಿ ಬೆಲೆತೆತ್ತು ಖರೀದಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸು ಜನರಿಕ್ ಜನೌಷಧಿ ಮಳಿಗೆಗಳು. ದೇಶಾದ್ಯಂತ ಕಡಿಮೆ ಅಂದರೆ ಮೂಲ ಬೆಲೆಗೆ ಕೊಡುವುದಾಗಿ ಘೋಷಿಸಿದ ಪ್ರಧಾನಿ ಜನರಿಕ್ ಜನೌಷಧಿ ಮಳಿಗೆಗಳನ್ನು ಆರಂಭಿಸಿದರು ಇಲ್ಲಿಯವರೆಗೂ ಜನರು ತಮಗೆ ಬೇಕಾದ ಅಗತ್ಯ ಮಾತ್ರೆಗಳನ್ನು ಈ ಮಳಿಗೆಗಳಲ್ಲಿ ಕಡಿಮೆ ಬೆಲೆಗೆ ಖರೀದಿಸಿ ರೋಗ ನಿಯಂತ್ರಣದಲ್ಲಿರುವಂತೆ ಕಾಪಾಡಿಕೊಂಡು ಬಂದಿದ್ದರು. ಕೈಗೆಟಕುವ ದರದಲ್ಲಿ ದೊರೆಯುತ್ತಿದ್ದ ಮಾತ್ರೆ ಗಳ ಲಾಕ್ ಡೌನ್ ಆದ ಮೇಲೆ ಪೂರೈಕೆ ಸಂಪೂರ್ಣ ಸ್ಥಗಿತವಾಗಿದೆ. ಇದರಿಂದ ಎಲ್ಲೆಡೆ ಜನೌಷಧಿ ಮಳಿಗೆಗಳನ್ನು ಮುಚ್ಚಲಾಗಿದೆ.

ರಾಜ್ಯದಲ್ಲಿ 524 ಜನರಿಕ್ ಜನೌಷಧಿ ಮಳಿಗೆಗಳಿವೆ ಎಂಬುದನ್ನು ಸರ್ಕಾರದ ಅಂಕಿಅಂಶ ದೃಡೀಕರಿಸುತ್ತವೆ. ಪ್ರತಿಯೊಂದು ಜಿಲ್ಲಾ ಹಾಗೂ ತಾಲೂಕು ಕೇಂದ್ರದಲ್ಲೂ ಮಳಿಗೆ ತೆರೆದು ಬಡವರಿಗೆ ಕಡಿಮೆ ಬೆಲೆಗೆ ಮಾತ್ರೆ ನೀಡಲಾಗುತ್ತಿದೆ. ಜಿಲ್ಲಾ ಕೇಂದ್ರದ ಜನಸಂಖ್ಯೆಯ ಆಧಾರದಲ್ಲಿ ಮಳಿಗೆ ತೆರೆದಿದ್ದು ಬೆಂಗಳೂರಿನಲ್ಲಿ ರಾಜ್ಯದ ಅರ್ಧದಷ್ಟು ಮಳಿಗೆಗಳಿವೆ ಎಂಬ ಅಂದಾಜಿದೆ. ಮಾರ್ಚ್ 23 ರಂದು ಲಾಕ್ ಡೌನ್ ಮಾಡಿದ ನಂತರ ಜನೌಷಧಿ ಕೇಂದ್ರಗಳಲ್ಲಿದ್ದ ಮಾತ್ರೆಗಳು ಖಾಲಿಯಾಗಿವೆ. ರಕ್ತದೊತ್ತಡ, ಮಧುಮೇಹ, ನೋವು ನಿವಾರಕ, ಜಾಂಡೀಸ್, ಹೃದಯ ಸಂಬಂಧಿ ಕಾಯಿಲೆಗಳಿಗೂ ಸೇರಿ 200 ಬಗೆಯ ಮಾತ್ರೆಗಳು ದೊರೆಯುತ್ತವೆ ಎಂದು ಸರ್ಕಾರವೇ ಹೇಳಿಕೊಂಡಿದೆ.

2016ರ ಅಂಕಿಅಂಶಗಳು ಹೇಳುವಂತೆ ರಾಜ್ಯದ 21 ಜಿಲ್ಲೆಗಳಲ್ಲಿ 200 ಜನರಿಕ್ ಜನೌಷಧಿ ಕೇಂದ್ರಗಳಿದ್ದವು.  ಇದರಲ್ಲಿ 147 ತಾಲೂಕು ಕೇಂದ್ರದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲೂ ಮಳಿಗೆಗಳನ್ನು ತೆರೆದು ರೋಗಿಗಳಿಗೆ ಅಗತ್ಯ ಮಾತ್ರೆಗಳನ್ನು ಪೂರೈಕೆ ಮಾಡಲಾಗುತ್ತಿತ್ತು. ಲಾಕ್ ಡೌನ್ ಪರಿಣಾಮ ಈ ಜನರಿಕ್ ಕೇಂದ್ರ ಗಳ ಮೇಲೆ ಬೀರಿದ್ದು ಮಾತ್ರೆಗಳು ದೊರೆಯುತ್ತಿಲ್ಲ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ಮುಖಂಡ ಸೈಯದ್ ಮುಜೀಬ್, ತುಮಕೂರು ಜಿಲ್ಲಾಸ್ಪತ್ರೆಯಲ್ಲಿರುವ ಮಳಿಗೆಯೂ ಸೇರಿದಂತೆ ಎಲ್ಲೆಡೆ ಜನರಿಕ್ ಮಳಿಗೆಗಳು ಮುಚ್ಚಿವೆ. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ಜಿಲ್ಲಾ ಸರ್ಜನ್ ಜನರಿಕ್ ಮಳಿಗೆಗಳಿಗೆ ಮಾತ್ರೆಗಳು ಪೂರೈಕೆ ಆಗುತ್ತಿಲ್ಲ ಎಂದು ಹೇಳುತ್ತಾರೆ. ಬಡಕುಟುಂಬದ ರೋಗಿಗಳಿಗೆ ಅತ್ಯಂತ ಕಡಿಮೆ ಬೆಲೆಗೆ ದೊರೆಯುತ್ತಿದ್ದ ಮಾತ್ರೆಗಳೇ ಸಿಗುತ್ತಿಲ್ಲ ಹೀಗಾಗಿ ತುರ್ತು ಸೇವೆಗಳಡಿ ತಂದು ಜನರಿಕ್ ಮಳಿಗೆಗಳಿಗೆ ಕೂಡಲೇ ಮಾತ್ರೆಗಳನ್ನು ಪೂರೈಕೆ ಮಾಡಬೇಕು. ರೋಗಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಜನರಿಕ್ ಜನೌಷಧಿ ಮಳಿಗೆಗಳನ್ನು ಮುಚ್ಚಿ ಖಾಸಗಿ ಮೆಡಿಕಲ್ ಶಾಪ್‌ಗಳನ್ನು ತೆರೆದಿದ್ದು ಖಾಸಗಿಯವರ ಲಾಬಿಗೆ ಸರ್ಕಾರ ಮಣಿದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಕೊರೊನ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿರುವ ನಡುವೆಯೇ ದಿನಬಳಕೆಯ ಮಾತ್ರೆಗಳು ದೊರೆಯದಿರುವುದರಿಂದ ರೋಗಿಗಳು ಖಾಸಗಿಯಾಗಿ ದುಬಾರಿ ವೆಚ್ಚ ಮಾಡಿ ಮಾತ್ರೆಗಳನ್ನು ಖರೀದಿಸಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ಸರ್ಕಾರ ಮಧ್ಯೆ ಪ್ರವೇಶ ಮಾಡಿ ಜನರಿಕ್ ಜನೌಷಧಿ ಮಳಿಗೆಗಳಿಗೆ ಮಾತ್ರೆಗಳನ್ನು ಪೂರೈಕೆ ಮಾಡುವಂತೆ ಒತ್ತಾಯ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...