Homeಮುಖಪುಟಲಾಕ್‌ಡೌನ್‌ನಿಂದ ಮುಚ್ಚಿದ ಜನರಿಕ್‌ ಮಳಿಗೆಗಳು : ಬಡವರ ಕೈಗೆಟುಕದ ಜನೌಷಧಿ

ಲಾಕ್‌ಡೌನ್‌ನಿಂದ ಮುಚ್ಚಿದ ಜನರಿಕ್‌ ಮಳಿಗೆಗಳು : ಬಡವರ ಕೈಗೆಟುಕದ ಜನೌಷಧಿ

- Advertisement -
- Advertisement -

ಕೊರೊನ ವೈರಸ್ ಸೋಂಕು ಹರಡದಂತೆ ಲಾಕ್ ಡೌನ್ ಮಾಡಿದ ಮೇಲೆ ರಾಜ್ಯದಲ್ಲಿ ಜನರಿಕ್ ಮಳಿಗೆಗಳು ಮುಚ್ಚಿವೆ. ಔಷಧಿಗಳ ಪೂರೈಕೆಯಿಲ್ಲದೆ ಜನರಿಕ್ ಜನೌಷಧಿ ಮಳಿಗೆಗಳನ್ನು ಬಂದ್ ಮಾಡಿರುವುದರಿಂದ ದಿನ ಬಳಕೆಯ ಮಾತ್ರೆಗಳು ಸಿಗದೆ ರೋಗಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಡಿಮೆ ಬೆಲೆಗೆ ಜನರಿಕ್ ಜನೌಷಧಿ ಮಳಿಗೆಯಲ್ಲಿ ಕಡಿಮೆ ಬೆಲೆಗೆ ದೊರೆಯುತ್ತಿದ್ದ ಔಷಧಿಗಳನ್ನು ಖಾಗಸಿ ಮೆಡಿಕಲ್ ಸ್ಟೋರ್ ಗಳಲ್ಲಿ ದುಬಾರಿ ಬೆಲೆತೆತ್ತು ಖರೀದಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸು ಜನರಿಕ್ ಜನೌಷಧಿ ಮಳಿಗೆಗಳು. ದೇಶಾದ್ಯಂತ ಕಡಿಮೆ ಅಂದರೆ ಮೂಲ ಬೆಲೆಗೆ ಕೊಡುವುದಾಗಿ ಘೋಷಿಸಿದ ಪ್ರಧಾನಿ ಜನರಿಕ್ ಜನೌಷಧಿ ಮಳಿಗೆಗಳನ್ನು ಆರಂಭಿಸಿದರು ಇಲ್ಲಿಯವರೆಗೂ ಜನರು ತಮಗೆ ಬೇಕಾದ ಅಗತ್ಯ ಮಾತ್ರೆಗಳನ್ನು ಈ ಮಳಿಗೆಗಳಲ್ಲಿ ಕಡಿಮೆ ಬೆಲೆಗೆ ಖರೀದಿಸಿ ರೋಗ ನಿಯಂತ್ರಣದಲ್ಲಿರುವಂತೆ ಕಾಪಾಡಿಕೊಂಡು ಬಂದಿದ್ದರು. ಕೈಗೆಟಕುವ ದರದಲ್ಲಿ ದೊರೆಯುತ್ತಿದ್ದ ಮಾತ್ರೆ ಗಳ ಲಾಕ್ ಡೌನ್ ಆದ ಮೇಲೆ ಪೂರೈಕೆ ಸಂಪೂರ್ಣ ಸ್ಥಗಿತವಾಗಿದೆ. ಇದರಿಂದ ಎಲ್ಲೆಡೆ ಜನೌಷಧಿ ಮಳಿಗೆಗಳನ್ನು ಮುಚ್ಚಲಾಗಿದೆ.

ರಾಜ್ಯದಲ್ಲಿ 524 ಜನರಿಕ್ ಜನೌಷಧಿ ಮಳಿಗೆಗಳಿವೆ ಎಂಬುದನ್ನು ಸರ್ಕಾರದ ಅಂಕಿಅಂಶ ದೃಡೀಕರಿಸುತ್ತವೆ. ಪ್ರತಿಯೊಂದು ಜಿಲ್ಲಾ ಹಾಗೂ ತಾಲೂಕು ಕೇಂದ್ರದಲ್ಲೂ ಮಳಿಗೆ ತೆರೆದು ಬಡವರಿಗೆ ಕಡಿಮೆ ಬೆಲೆಗೆ ಮಾತ್ರೆ ನೀಡಲಾಗುತ್ತಿದೆ. ಜಿಲ್ಲಾ ಕೇಂದ್ರದ ಜನಸಂಖ್ಯೆಯ ಆಧಾರದಲ್ಲಿ ಮಳಿಗೆ ತೆರೆದಿದ್ದು ಬೆಂಗಳೂರಿನಲ್ಲಿ ರಾಜ್ಯದ ಅರ್ಧದಷ್ಟು ಮಳಿಗೆಗಳಿವೆ ಎಂಬ ಅಂದಾಜಿದೆ. ಮಾರ್ಚ್ 23 ರಂದು ಲಾಕ್ ಡೌನ್ ಮಾಡಿದ ನಂತರ ಜನೌಷಧಿ ಕೇಂದ್ರಗಳಲ್ಲಿದ್ದ ಮಾತ್ರೆಗಳು ಖಾಲಿಯಾಗಿವೆ. ರಕ್ತದೊತ್ತಡ, ಮಧುಮೇಹ, ನೋವು ನಿವಾರಕ, ಜಾಂಡೀಸ್, ಹೃದಯ ಸಂಬಂಧಿ ಕಾಯಿಲೆಗಳಿಗೂ ಸೇರಿ 200 ಬಗೆಯ ಮಾತ್ರೆಗಳು ದೊರೆಯುತ್ತವೆ ಎಂದು ಸರ್ಕಾರವೇ ಹೇಳಿಕೊಂಡಿದೆ.

2016ರ ಅಂಕಿಅಂಶಗಳು ಹೇಳುವಂತೆ ರಾಜ್ಯದ 21 ಜಿಲ್ಲೆಗಳಲ್ಲಿ 200 ಜನರಿಕ್ ಜನೌಷಧಿ ಕೇಂದ್ರಗಳಿದ್ದವು.  ಇದರಲ್ಲಿ 147 ತಾಲೂಕು ಕೇಂದ್ರದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲೂ ಮಳಿಗೆಗಳನ್ನು ತೆರೆದು ರೋಗಿಗಳಿಗೆ ಅಗತ್ಯ ಮಾತ್ರೆಗಳನ್ನು ಪೂರೈಕೆ ಮಾಡಲಾಗುತ್ತಿತ್ತು. ಲಾಕ್ ಡೌನ್ ಪರಿಣಾಮ ಈ ಜನರಿಕ್ ಕೇಂದ್ರ ಗಳ ಮೇಲೆ ಬೀರಿದ್ದು ಮಾತ್ರೆಗಳು ದೊರೆಯುತ್ತಿಲ್ಲ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ಮುಖಂಡ ಸೈಯದ್ ಮುಜೀಬ್, ತುಮಕೂರು ಜಿಲ್ಲಾಸ್ಪತ್ರೆಯಲ್ಲಿರುವ ಮಳಿಗೆಯೂ ಸೇರಿದಂತೆ ಎಲ್ಲೆಡೆ ಜನರಿಕ್ ಮಳಿಗೆಗಳು ಮುಚ್ಚಿವೆ. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ಜಿಲ್ಲಾ ಸರ್ಜನ್ ಜನರಿಕ್ ಮಳಿಗೆಗಳಿಗೆ ಮಾತ್ರೆಗಳು ಪೂರೈಕೆ ಆಗುತ್ತಿಲ್ಲ ಎಂದು ಹೇಳುತ್ತಾರೆ. ಬಡಕುಟುಂಬದ ರೋಗಿಗಳಿಗೆ ಅತ್ಯಂತ ಕಡಿಮೆ ಬೆಲೆಗೆ ದೊರೆಯುತ್ತಿದ್ದ ಮಾತ್ರೆಗಳೇ ಸಿಗುತ್ತಿಲ್ಲ ಹೀಗಾಗಿ ತುರ್ತು ಸೇವೆಗಳಡಿ ತಂದು ಜನರಿಕ್ ಮಳಿಗೆಗಳಿಗೆ ಕೂಡಲೇ ಮಾತ್ರೆಗಳನ್ನು ಪೂರೈಕೆ ಮಾಡಬೇಕು. ರೋಗಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಜನರಿಕ್ ಜನೌಷಧಿ ಮಳಿಗೆಗಳನ್ನು ಮುಚ್ಚಿ ಖಾಸಗಿ ಮೆಡಿಕಲ್ ಶಾಪ್‌ಗಳನ್ನು ತೆರೆದಿದ್ದು ಖಾಸಗಿಯವರ ಲಾಬಿಗೆ ಸರ್ಕಾರ ಮಣಿದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಕೊರೊನ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿರುವ ನಡುವೆಯೇ ದಿನಬಳಕೆಯ ಮಾತ್ರೆಗಳು ದೊರೆಯದಿರುವುದರಿಂದ ರೋಗಿಗಳು ಖಾಸಗಿಯಾಗಿ ದುಬಾರಿ ವೆಚ್ಚ ಮಾಡಿ ಮಾತ್ರೆಗಳನ್ನು ಖರೀದಿಸಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ಸರ್ಕಾರ ಮಧ್ಯೆ ಪ್ರವೇಶ ಮಾಡಿ ಜನರಿಕ್ ಜನೌಷಧಿ ಮಳಿಗೆಗಳಿಗೆ ಮಾತ್ರೆಗಳನ್ನು ಪೂರೈಕೆ ಮಾಡುವಂತೆ ಒತ್ತಾಯ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...