Homeಮುಖಪುಟಲಾಕ್‌ಡೌನ್‌ನಿಂದ ಮುಚ್ಚಿದ ಜನರಿಕ್‌ ಮಳಿಗೆಗಳು : ಬಡವರ ಕೈಗೆಟುಕದ ಜನೌಷಧಿ

ಲಾಕ್‌ಡೌನ್‌ನಿಂದ ಮುಚ್ಚಿದ ಜನರಿಕ್‌ ಮಳಿಗೆಗಳು : ಬಡವರ ಕೈಗೆಟುಕದ ಜನೌಷಧಿ

- Advertisement -
- Advertisement -

ಕೊರೊನ ವೈರಸ್ ಸೋಂಕು ಹರಡದಂತೆ ಲಾಕ್ ಡೌನ್ ಮಾಡಿದ ಮೇಲೆ ರಾಜ್ಯದಲ್ಲಿ ಜನರಿಕ್ ಮಳಿಗೆಗಳು ಮುಚ್ಚಿವೆ. ಔಷಧಿಗಳ ಪೂರೈಕೆಯಿಲ್ಲದೆ ಜನರಿಕ್ ಜನೌಷಧಿ ಮಳಿಗೆಗಳನ್ನು ಬಂದ್ ಮಾಡಿರುವುದರಿಂದ ದಿನ ಬಳಕೆಯ ಮಾತ್ರೆಗಳು ಸಿಗದೆ ರೋಗಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಡಿಮೆ ಬೆಲೆಗೆ ಜನರಿಕ್ ಜನೌಷಧಿ ಮಳಿಗೆಯಲ್ಲಿ ಕಡಿಮೆ ಬೆಲೆಗೆ ದೊರೆಯುತ್ತಿದ್ದ ಔಷಧಿಗಳನ್ನು ಖಾಗಸಿ ಮೆಡಿಕಲ್ ಸ್ಟೋರ್ ಗಳಲ್ಲಿ ದುಬಾರಿ ಬೆಲೆತೆತ್ತು ಖರೀದಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸು ಜನರಿಕ್ ಜನೌಷಧಿ ಮಳಿಗೆಗಳು. ದೇಶಾದ್ಯಂತ ಕಡಿಮೆ ಅಂದರೆ ಮೂಲ ಬೆಲೆಗೆ ಕೊಡುವುದಾಗಿ ಘೋಷಿಸಿದ ಪ್ರಧಾನಿ ಜನರಿಕ್ ಜನೌಷಧಿ ಮಳಿಗೆಗಳನ್ನು ಆರಂಭಿಸಿದರು ಇಲ್ಲಿಯವರೆಗೂ ಜನರು ತಮಗೆ ಬೇಕಾದ ಅಗತ್ಯ ಮಾತ್ರೆಗಳನ್ನು ಈ ಮಳಿಗೆಗಳಲ್ಲಿ ಕಡಿಮೆ ಬೆಲೆಗೆ ಖರೀದಿಸಿ ರೋಗ ನಿಯಂತ್ರಣದಲ್ಲಿರುವಂತೆ ಕಾಪಾಡಿಕೊಂಡು ಬಂದಿದ್ದರು. ಕೈಗೆಟಕುವ ದರದಲ್ಲಿ ದೊರೆಯುತ್ತಿದ್ದ ಮಾತ್ರೆ ಗಳ ಲಾಕ್ ಡೌನ್ ಆದ ಮೇಲೆ ಪೂರೈಕೆ ಸಂಪೂರ್ಣ ಸ್ಥಗಿತವಾಗಿದೆ. ಇದರಿಂದ ಎಲ್ಲೆಡೆ ಜನೌಷಧಿ ಮಳಿಗೆಗಳನ್ನು ಮುಚ್ಚಲಾಗಿದೆ.

ರಾಜ್ಯದಲ್ಲಿ 524 ಜನರಿಕ್ ಜನೌಷಧಿ ಮಳಿಗೆಗಳಿವೆ ಎಂಬುದನ್ನು ಸರ್ಕಾರದ ಅಂಕಿಅಂಶ ದೃಡೀಕರಿಸುತ್ತವೆ. ಪ್ರತಿಯೊಂದು ಜಿಲ್ಲಾ ಹಾಗೂ ತಾಲೂಕು ಕೇಂದ್ರದಲ್ಲೂ ಮಳಿಗೆ ತೆರೆದು ಬಡವರಿಗೆ ಕಡಿಮೆ ಬೆಲೆಗೆ ಮಾತ್ರೆ ನೀಡಲಾಗುತ್ತಿದೆ. ಜಿಲ್ಲಾ ಕೇಂದ್ರದ ಜನಸಂಖ್ಯೆಯ ಆಧಾರದಲ್ಲಿ ಮಳಿಗೆ ತೆರೆದಿದ್ದು ಬೆಂಗಳೂರಿನಲ್ಲಿ ರಾಜ್ಯದ ಅರ್ಧದಷ್ಟು ಮಳಿಗೆಗಳಿವೆ ಎಂಬ ಅಂದಾಜಿದೆ. ಮಾರ್ಚ್ 23 ರಂದು ಲಾಕ್ ಡೌನ್ ಮಾಡಿದ ನಂತರ ಜನೌಷಧಿ ಕೇಂದ್ರಗಳಲ್ಲಿದ್ದ ಮಾತ್ರೆಗಳು ಖಾಲಿಯಾಗಿವೆ. ರಕ್ತದೊತ್ತಡ, ಮಧುಮೇಹ, ನೋವು ನಿವಾರಕ, ಜಾಂಡೀಸ್, ಹೃದಯ ಸಂಬಂಧಿ ಕಾಯಿಲೆಗಳಿಗೂ ಸೇರಿ 200 ಬಗೆಯ ಮಾತ್ರೆಗಳು ದೊರೆಯುತ್ತವೆ ಎಂದು ಸರ್ಕಾರವೇ ಹೇಳಿಕೊಂಡಿದೆ.

2016ರ ಅಂಕಿಅಂಶಗಳು ಹೇಳುವಂತೆ ರಾಜ್ಯದ 21 ಜಿಲ್ಲೆಗಳಲ್ಲಿ 200 ಜನರಿಕ್ ಜನೌಷಧಿ ಕೇಂದ್ರಗಳಿದ್ದವು.  ಇದರಲ್ಲಿ 147 ತಾಲೂಕು ಕೇಂದ್ರದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲೂ ಮಳಿಗೆಗಳನ್ನು ತೆರೆದು ರೋಗಿಗಳಿಗೆ ಅಗತ್ಯ ಮಾತ್ರೆಗಳನ್ನು ಪೂರೈಕೆ ಮಾಡಲಾಗುತ್ತಿತ್ತು. ಲಾಕ್ ಡೌನ್ ಪರಿಣಾಮ ಈ ಜನರಿಕ್ ಕೇಂದ್ರ ಗಳ ಮೇಲೆ ಬೀರಿದ್ದು ಮಾತ್ರೆಗಳು ದೊರೆಯುತ್ತಿಲ್ಲ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ಮುಖಂಡ ಸೈಯದ್ ಮುಜೀಬ್, ತುಮಕೂರು ಜಿಲ್ಲಾಸ್ಪತ್ರೆಯಲ್ಲಿರುವ ಮಳಿಗೆಯೂ ಸೇರಿದಂತೆ ಎಲ್ಲೆಡೆ ಜನರಿಕ್ ಮಳಿಗೆಗಳು ಮುಚ್ಚಿವೆ. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ಜಿಲ್ಲಾ ಸರ್ಜನ್ ಜನರಿಕ್ ಮಳಿಗೆಗಳಿಗೆ ಮಾತ್ರೆಗಳು ಪೂರೈಕೆ ಆಗುತ್ತಿಲ್ಲ ಎಂದು ಹೇಳುತ್ತಾರೆ. ಬಡಕುಟುಂಬದ ರೋಗಿಗಳಿಗೆ ಅತ್ಯಂತ ಕಡಿಮೆ ಬೆಲೆಗೆ ದೊರೆಯುತ್ತಿದ್ದ ಮಾತ್ರೆಗಳೇ ಸಿಗುತ್ತಿಲ್ಲ ಹೀಗಾಗಿ ತುರ್ತು ಸೇವೆಗಳಡಿ ತಂದು ಜನರಿಕ್ ಮಳಿಗೆಗಳಿಗೆ ಕೂಡಲೇ ಮಾತ್ರೆಗಳನ್ನು ಪೂರೈಕೆ ಮಾಡಬೇಕು. ರೋಗಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಜನರಿಕ್ ಜನೌಷಧಿ ಮಳಿಗೆಗಳನ್ನು ಮುಚ್ಚಿ ಖಾಸಗಿ ಮೆಡಿಕಲ್ ಶಾಪ್‌ಗಳನ್ನು ತೆರೆದಿದ್ದು ಖಾಸಗಿಯವರ ಲಾಬಿಗೆ ಸರ್ಕಾರ ಮಣಿದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಕೊರೊನ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿರುವ ನಡುವೆಯೇ ದಿನಬಳಕೆಯ ಮಾತ್ರೆಗಳು ದೊರೆಯದಿರುವುದರಿಂದ ರೋಗಿಗಳು ಖಾಸಗಿಯಾಗಿ ದುಬಾರಿ ವೆಚ್ಚ ಮಾಡಿ ಮಾತ್ರೆಗಳನ್ನು ಖರೀದಿಸಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ಸರ್ಕಾರ ಮಧ್ಯೆ ಪ್ರವೇಶ ಮಾಡಿ ಜನರಿಕ್ ಜನೌಷಧಿ ಮಳಿಗೆಗಳಿಗೆ ಮಾತ್ರೆಗಳನ್ನು ಪೂರೈಕೆ ಮಾಡುವಂತೆ ಒತ್ತಾಯ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...