Homeಮುಖಪುಟಲಾಕ್‌ಡೌನ್‌ನಿಂದ ಮುಚ್ಚಿದ ಜನರಿಕ್‌ ಮಳಿಗೆಗಳು : ಬಡವರ ಕೈಗೆಟುಕದ ಜನೌಷಧಿ

ಲಾಕ್‌ಡೌನ್‌ನಿಂದ ಮುಚ್ಚಿದ ಜನರಿಕ್‌ ಮಳಿಗೆಗಳು : ಬಡವರ ಕೈಗೆಟುಕದ ಜನೌಷಧಿ

- Advertisement -
- Advertisement -

ಕೊರೊನ ವೈರಸ್ ಸೋಂಕು ಹರಡದಂತೆ ಲಾಕ್ ಡೌನ್ ಮಾಡಿದ ಮೇಲೆ ರಾಜ್ಯದಲ್ಲಿ ಜನರಿಕ್ ಮಳಿಗೆಗಳು ಮುಚ್ಚಿವೆ. ಔಷಧಿಗಳ ಪೂರೈಕೆಯಿಲ್ಲದೆ ಜನರಿಕ್ ಜನೌಷಧಿ ಮಳಿಗೆಗಳನ್ನು ಬಂದ್ ಮಾಡಿರುವುದರಿಂದ ದಿನ ಬಳಕೆಯ ಮಾತ್ರೆಗಳು ಸಿಗದೆ ರೋಗಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಡಿಮೆ ಬೆಲೆಗೆ ಜನರಿಕ್ ಜನೌಷಧಿ ಮಳಿಗೆಯಲ್ಲಿ ಕಡಿಮೆ ಬೆಲೆಗೆ ದೊರೆಯುತ್ತಿದ್ದ ಔಷಧಿಗಳನ್ನು ಖಾಗಸಿ ಮೆಡಿಕಲ್ ಸ್ಟೋರ್ ಗಳಲ್ಲಿ ದುಬಾರಿ ಬೆಲೆತೆತ್ತು ಖರೀದಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸು ಜನರಿಕ್ ಜನೌಷಧಿ ಮಳಿಗೆಗಳು. ದೇಶಾದ್ಯಂತ ಕಡಿಮೆ ಅಂದರೆ ಮೂಲ ಬೆಲೆಗೆ ಕೊಡುವುದಾಗಿ ಘೋಷಿಸಿದ ಪ್ರಧಾನಿ ಜನರಿಕ್ ಜನೌಷಧಿ ಮಳಿಗೆಗಳನ್ನು ಆರಂಭಿಸಿದರು ಇಲ್ಲಿಯವರೆಗೂ ಜನರು ತಮಗೆ ಬೇಕಾದ ಅಗತ್ಯ ಮಾತ್ರೆಗಳನ್ನು ಈ ಮಳಿಗೆಗಳಲ್ಲಿ ಕಡಿಮೆ ಬೆಲೆಗೆ ಖರೀದಿಸಿ ರೋಗ ನಿಯಂತ್ರಣದಲ್ಲಿರುವಂತೆ ಕಾಪಾಡಿಕೊಂಡು ಬಂದಿದ್ದರು. ಕೈಗೆಟಕುವ ದರದಲ್ಲಿ ದೊರೆಯುತ್ತಿದ್ದ ಮಾತ್ರೆ ಗಳ ಲಾಕ್ ಡೌನ್ ಆದ ಮೇಲೆ ಪೂರೈಕೆ ಸಂಪೂರ್ಣ ಸ್ಥಗಿತವಾಗಿದೆ. ಇದರಿಂದ ಎಲ್ಲೆಡೆ ಜನೌಷಧಿ ಮಳಿಗೆಗಳನ್ನು ಮುಚ್ಚಲಾಗಿದೆ.

ರಾಜ್ಯದಲ್ಲಿ 524 ಜನರಿಕ್ ಜನೌಷಧಿ ಮಳಿಗೆಗಳಿವೆ ಎಂಬುದನ್ನು ಸರ್ಕಾರದ ಅಂಕಿಅಂಶ ದೃಡೀಕರಿಸುತ್ತವೆ. ಪ್ರತಿಯೊಂದು ಜಿಲ್ಲಾ ಹಾಗೂ ತಾಲೂಕು ಕೇಂದ್ರದಲ್ಲೂ ಮಳಿಗೆ ತೆರೆದು ಬಡವರಿಗೆ ಕಡಿಮೆ ಬೆಲೆಗೆ ಮಾತ್ರೆ ನೀಡಲಾಗುತ್ತಿದೆ. ಜಿಲ್ಲಾ ಕೇಂದ್ರದ ಜನಸಂಖ್ಯೆಯ ಆಧಾರದಲ್ಲಿ ಮಳಿಗೆ ತೆರೆದಿದ್ದು ಬೆಂಗಳೂರಿನಲ್ಲಿ ರಾಜ್ಯದ ಅರ್ಧದಷ್ಟು ಮಳಿಗೆಗಳಿವೆ ಎಂಬ ಅಂದಾಜಿದೆ. ಮಾರ್ಚ್ 23 ರಂದು ಲಾಕ್ ಡೌನ್ ಮಾಡಿದ ನಂತರ ಜನೌಷಧಿ ಕೇಂದ್ರಗಳಲ್ಲಿದ್ದ ಮಾತ್ರೆಗಳು ಖಾಲಿಯಾಗಿವೆ. ರಕ್ತದೊತ್ತಡ, ಮಧುಮೇಹ, ನೋವು ನಿವಾರಕ, ಜಾಂಡೀಸ್, ಹೃದಯ ಸಂಬಂಧಿ ಕಾಯಿಲೆಗಳಿಗೂ ಸೇರಿ 200 ಬಗೆಯ ಮಾತ್ರೆಗಳು ದೊರೆಯುತ್ತವೆ ಎಂದು ಸರ್ಕಾರವೇ ಹೇಳಿಕೊಂಡಿದೆ.

2016ರ ಅಂಕಿಅಂಶಗಳು ಹೇಳುವಂತೆ ರಾಜ್ಯದ 21 ಜಿಲ್ಲೆಗಳಲ್ಲಿ 200 ಜನರಿಕ್ ಜನೌಷಧಿ ಕೇಂದ್ರಗಳಿದ್ದವು.  ಇದರಲ್ಲಿ 147 ತಾಲೂಕು ಕೇಂದ್ರದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲೂ ಮಳಿಗೆಗಳನ್ನು ತೆರೆದು ರೋಗಿಗಳಿಗೆ ಅಗತ್ಯ ಮಾತ್ರೆಗಳನ್ನು ಪೂರೈಕೆ ಮಾಡಲಾಗುತ್ತಿತ್ತು. ಲಾಕ್ ಡೌನ್ ಪರಿಣಾಮ ಈ ಜನರಿಕ್ ಕೇಂದ್ರ ಗಳ ಮೇಲೆ ಬೀರಿದ್ದು ಮಾತ್ರೆಗಳು ದೊರೆಯುತ್ತಿಲ್ಲ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ಮುಖಂಡ ಸೈಯದ್ ಮುಜೀಬ್, ತುಮಕೂರು ಜಿಲ್ಲಾಸ್ಪತ್ರೆಯಲ್ಲಿರುವ ಮಳಿಗೆಯೂ ಸೇರಿದಂತೆ ಎಲ್ಲೆಡೆ ಜನರಿಕ್ ಮಳಿಗೆಗಳು ಮುಚ್ಚಿವೆ. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ಜಿಲ್ಲಾ ಸರ್ಜನ್ ಜನರಿಕ್ ಮಳಿಗೆಗಳಿಗೆ ಮಾತ್ರೆಗಳು ಪೂರೈಕೆ ಆಗುತ್ತಿಲ್ಲ ಎಂದು ಹೇಳುತ್ತಾರೆ. ಬಡಕುಟುಂಬದ ರೋಗಿಗಳಿಗೆ ಅತ್ಯಂತ ಕಡಿಮೆ ಬೆಲೆಗೆ ದೊರೆಯುತ್ತಿದ್ದ ಮಾತ್ರೆಗಳೇ ಸಿಗುತ್ತಿಲ್ಲ ಹೀಗಾಗಿ ತುರ್ತು ಸೇವೆಗಳಡಿ ತಂದು ಜನರಿಕ್ ಮಳಿಗೆಗಳಿಗೆ ಕೂಡಲೇ ಮಾತ್ರೆಗಳನ್ನು ಪೂರೈಕೆ ಮಾಡಬೇಕು. ರೋಗಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಜನರಿಕ್ ಜನೌಷಧಿ ಮಳಿಗೆಗಳನ್ನು ಮುಚ್ಚಿ ಖಾಸಗಿ ಮೆಡಿಕಲ್ ಶಾಪ್‌ಗಳನ್ನು ತೆರೆದಿದ್ದು ಖಾಸಗಿಯವರ ಲಾಬಿಗೆ ಸರ್ಕಾರ ಮಣಿದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಕೊರೊನ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿರುವ ನಡುವೆಯೇ ದಿನಬಳಕೆಯ ಮಾತ್ರೆಗಳು ದೊರೆಯದಿರುವುದರಿಂದ ರೋಗಿಗಳು ಖಾಸಗಿಯಾಗಿ ದುಬಾರಿ ವೆಚ್ಚ ಮಾಡಿ ಮಾತ್ರೆಗಳನ್ನು ಖರೀದಿಸಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕೂಡಲೇ ಸರ್ಕಾರ ಮಧ್ಯೆ ಪ್ರವೇಶ ಮಾಡಿ ಜನರಿಕ್ ಜನೌಷಧಿ ಮಳಿಗೆಗಳಿಗೆ ಮಾತ್ರೆಗಳನ್ನು ಪೂರೈಕೆ ಮಾಡುವಂತೆ ಒತ್ತಾಯ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...