Homeಮುಖಪುಟಗಾಝಾದಲ್ಲಿ ಇಸ್ರೇಲ್‌ನಿಂದ ನರಮೇಧ: ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದ ಮಂಡಿಸಿದ ದ.ಆಫ್ರಿಕಾ

ಗಾಝಾದಲ್ಲಿ ಇಸ್ರೇಲ್‌ನಿಂದ ನರಮೇಧ: ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದ ಮಂಡಿಸಿದ ದ.ಆಫ್ರಿಕಾ

- Advertisement -
- Advertisement -

ಗಾಝಾ ಮೇಲಿನ ಇಸ್ರೇಲ್‌ ದಾಳಿಯನ್ನು ‘ನರಮೇಧ’ ಎಂದು ಬಣ್ಣಿಸಿರುವ ದಕ್ಷಿಣ ಆಫ್ರಿಕಾ ಅಂತಾರಾಷ್ಟ್ರೀಯ ನ್ಯಾಯಾಲಯ (ಇಂಟರ್‌ ನ್ಯಾಷನಲ್‌ ಕೋರ್ಟ್‌ ಆಫ್ ಜಸ್ಟೀಸ್‌) ಕ್ಕೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ಗುರುವಾರ ಪ್ರಾರಂಭಗೊಂಡಿದೆ.

ಡಿಸೆಂಬರ್ 29ರಂದು ವಿಶ್ವಸಂಸ್ಥೆಯ ಭಾಗವಾಗಿರುವ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಇಸ್ರೇಲ್ ವಿರುದ್ಧ ದಕ್ಷಿಣ ಆಫ್ರಿಕಾ ಅರ್ಜಿ ಸಲ್ಲಿಸಿದೆ. ಈ ಅರ್ಜಿಯಲ್ಲಿ, ಇಸ್ರೇಲ್ 1948ರ ನರಮೇಧ ತಡೆ ಸಮಾವೇಶ (ಜಿನೋಸೈಡ್ ಕನ್ವೆನ್ಷನ್) ನ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆಫ್ರಿಕಾ ಆರೋಪಿಸಿದ್ದು, ಗಾಝಾದ ಮೇಲಿನ ದಾಳಿಯನ್ನು ತಕ್ಷಣ ನಿಲ್ಲಿಸಲು ಇಸ್ರೇಲ್‌ಗೆ ಸೂಚಿಸುವಂತೆ ಕೋರಿದೆ.

ದಕ್ಷಿಣ ಆಫ್ರಿಕಾದ ವಾದವನ್ನು ಇಸ್ರೇಲ್ ತಳ್ಳಿ ಹಾಕಿದ್ದು, ನರಮೇಧ ಆರೋಪ ವಾಸ್ತವಕ್ಕೆ ದೂರವಾಗಿದೆ. ದಕ್ಷಿಣ ಆಫ್ರಿಕಾದ ಅರ್ಜಿಗೆ ಕಾನೂನು ಆಧಾರವಿಲ್ಲ. ದಕ್ಷಿಣ ಆಫ್ರಿಕಾ ಭಯೋತ್ಪಾದಕ ಸಂಘಟನೆಗಳಿಗೆ ಇಸ್ರೇಲ್‌ ಮೇಲೆ ದಾಳಿ ಮಾಡುವಂತೆ ಪ್ರೇರೇಪಿಸುತ್ತಿದೆ. ಹಾಗಾಗಿ, ಆ ಅರ್ಜಿಯನ್ನು ಪರಿಗಣಿಸಬಾರದು ಎಂದು ಹೇಳಿದೆ.

ವರ್ಲ್ಡ್ ಕೋರ್ಟ್ ಎಂದೂ ಕರೆಯಲ್ಪಡುವ ಹೇಗ್‌ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ಈ ವಾರ ಎರಡು ದಿನಗಳ ಕಾಲ ದಕ್ಷಿಣ ಆಫ್ರಿಕಾದಾ ಅರ್ಜಿಯ ವಿಚಾತರಣೆ ನಡೆಸಲಿದೆ. ಈ ಪ್ರಕರಣ ಇತ್ಯರ್ಥವಾಗಲು ವರ್ಷಗಳ ಸಮಯ ತೆಗೆದುಕೊಳ್ಳುವ ನಿರೀಕ್ಷೆಯಿದೆ.

ಜರ್ಮನಿಯ ನಾಝಿಗಳು ಯಹೂದಿಗಳ ನರಮೇಧ ನಡೆಸಿದ ಬಳಿಕ ನಡೆದ ಒಪ್ಪಂದದ ನಿಯಮಗಳನ್ನು ಇಸ್ರೇಲ್ ಸಂಪೂರ್ಣವಾಗಿ ಉಲ್ಲಂಘಿಸಿದೆ ಎಂದು ದಕ್ಷಿಣ ಆಫ್ರಿಕಾ ಆರೋಪಿಸಿದೆ.

ದಕ್ಷಿಣ ಆಫ್ರಿಕಾ ಹೇಳಿದ್ದೇನು?

ಇಸ್ರೇಲ್‌ ಗಾಝಾದಲ್ಲಿ ನರಮೇಧ ನಡೆಸುತ್ತಿದೆ ಎಂದು ದಕ್ಷಿಣ ಆಫ್ರಿಕಾ ಆರೋಪಿಸಿದ್ದು, ತಕ್ಷಣ ದಾಳಿ ನಿಲ್ಲಿಸಲು ಇಸ್ರೇಲ್‌ಗೆ ಸೂಚಿಸಬೇಕು ಎಂದು ಆಗ್ರಹಿಸಿದೆ. ಇಸ್ರೇಲ್‌ ಜಿನಿವಾ ನರಮೇಧ ತಡೆ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದೆ.

ದಕ್ಷಿಣ ಆಫ್ರಿಕಾದ ಆಡಳಿತಾರೂಡ ಆಫ್ರಿಕನ್ ನ್ಯಾಷನಲ್ ಕಾಂಗ್ರೆಸ್ ಪಕ್ಷವು, ಗಾಝಾ ಮತ್ತು ದಕ್ಷಿಣ ದಂಡೆಯಲ್ಲಿ ಇಸ್ರೇಲ್‌ ನಡೆಸುತ್ತಿರುವ ಆಕ್ರಮಣವನ್ನು ತನ್ನದೇ ವರ್ಣಬೇಧ ನೀತಿಯ ಇತಿಹಾಸಕ್ಕೆ ಹೋಲಿಸಿದೆ. ಯಾಸರ್ ಅರಾಫತ್‌ನ ಪ್ಯಾಲೆಸ್ತೀನ್ ಲಿಬರೇಶನ್ ಆರ್ಗನೈಸೇಶನ್ (ಪಿಎಲ್‌ಒ) ಅನ್ನು ಆಫ್ರಿಕಾ ಸಮರ್ಥಿಸಿಕೊಂಡಿದೆ.

ಅಕ್ಟೋಬರ್ 7,2023ರಂದು ಪ್ರಾರಂಭಗೊಂಡ ಇಸ್ರೇಲ್‌-ಹಮಾಸ್ ಸಂಘರ್ಷದಲ್ಲಿ ಇದುವರೆಗ ಮೃತಪಟ್ಟ ಅಮಾಯಕ ಪ್ಯಾಲೆಸ್ತೀನಿಯರ ಸಂಖ್ಯೆ 23 ಸಾವಿರಕ್ಕೆ ತಲುಪಿದೆ. ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ದಾಳಿ ನಡೆಸಿದ್ದ ಗಾಝಾದ ಹಮಾಸ್ ಗುಂಪು ಸುಮಾರು 1,200 ಜನರನ್ನು ಹತ್ಯೆ ಮಾಡಿತ್ತು. 2ರಷ್ಟು ಜನರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು. ಬಳಿಕ ಪ್ರಾರಂಭಗೊಂಡ ಇಸ್ರೇಲ್ ಆಕ್ರಮಣಕ್ಕೆ ಇದುವರೆಗೆ 23 ಸಾವಿರ ಜನರು ಬಲಿಯಾಗಿದ್ದಾರೆ.

ಇದನ್ನೂ ಓದಿ : ಅತ್ಯಾಚಾರ ಆರೋಪ: ನೇಪಾಳದ ವಿವಾದಾತ್ಮಕ ಧರ್ಮಗುರು ‘ಬುದ್ಧ ಬಾಲಕ’ನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...