Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

- Advertisement -
- Advertisement -

ಆಫ್ರಿಕನ್-ಅಮೇರಿಕನ್ ಜಾರ್ಜ್ ಫ್ಲಾಯ್ಡ್‌ನನ್ನು ಕೊಲೆ ಮಾಡಿದ ಆರೋಪದ ಮೇಲೆ ಮಾಜಿ ಮಿನ್ನಿಯಾಪೊಲಿಸ್ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್ ಅಪರಾಧಿ ಎಂದು ಸಾಬೀತುಗೊಂಡಿದ್ದು ಶಿಕ್ಷೆಗೆ ಗುರಿಯಾಗಿದ್ದಾನೆ. ಮಂಗಳವಾರ ಈ ತೀರ್ಪು ಪ್ರಕಟಗೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಪ್ರಕರಣ ಅಮೆರಿಕದಲ್ಲಿ ತೀವ್ರ ಚರ್ಚೆಯ ವಿಷಯವಾಗಿತ್ತು. ಪೊಲೀಸ್ ಹೊಣೆಗಾರಿಕೆ ಕುರಿತ ಪ್ರಮುಖ ಪರೀಕ್ಷೆಯೆಂದು ಇದನ್ನು ಪರಿಗಣಿಸಲಾಗಿತ್ತು.

ಎರಡನೇ-ದರ್ಜೆ (ಸೆಕೆಂಡ್ ಡಿಗ್ರಿ) ಕೊಲೆ, ಮೂರನೇ-ದರ್ಜೆ (ಥರ್ಡ್ ಡಿಗ್ರಿ) ಕೊಲೆ ಮತ್ತು ನರಹತ್ಯೆ – ಈ ಮೂರೂ ಆರೋಪಗಳಲ್ಲಿ 45 ವರ್ಷದ ಚೌವಿನ್ ತಪ್ಪಿತಸ್ಥನೆಂದು ಪರಿಗಣಿತರಾಗಿದ್ದಾನೆ..

ಮೂರು ವಾರಗಳ ವಿಚಾರಣೆಯ ನಂತರ ತೀರ್ಪುಗಳನ್ನು ಘೋಷಿಸಿದಾಗ ಭಾರಿ ಕಾವಲಿನಲ್ಲಿರುವ ಮಿನ್ನಿಯಾಪೊಲಿಸ್ ನ್ಯಾಯಾಲಯದ ಕೋಣೆಯ ಹೊರಗೆ ನೆರೆದಿದ್ದ ಜನಸಮೂಹವು ಸಂತಸ ವ್ಯಕ್ತಪಡಿಸಿತು.

ವಿವಿಧ ಜನಾಂಗಗಳಿಗೆ ಸೇರಿದ ಏಳು ಮಹಿಳಾ, ಐದು ಪುರುಷ ತೀರ್ಪುಗಾರರ ಸರ್ವಾನುಮತದ ತೀರ್ಪನ್ನು ಹೆನ್ನೆಪಿನ್ ಕೌಂಟಿ ನ್ಯಾಯಾಧೀಶ ಪೀಟರ್ ಕಾಹಿಲ್ ಓದಿದ ನಂತರ ಜಾಮೀನಿನ ಮೇಲೆ ಮುಕ್ತರಾಗಿದ್ದ ಚೌವಿನ್‌ಗೆ ಕೈಕೋಳ ತೊಡಿಸಲಾಗಿತು.

ಫೇಸ್ ಮಾಸ್ಕ್ ಧರಿಸಿದ್ದ ಮತ್ತು ಯಾವುದೇ ಬಾಹ್ಯ ಭಾವನೆಯನ್ನು ಪ್ರದರ್ಶಿಸದ ಚೌವಿನ್ ಅವನನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುವಾಗ ಜಾರ್ಜ್ ಫ್ಲಾಯ್ಡ್ ಸಹೋದರರಲ್ಲಿ ಒಬ್ಬರಾದ ಫಿಲೋನಿಸ್ ಫ್ಲಾಯ್ಡ್ ಪ್ರಾಸಿಕ್ಯೂಟರ್‌ಗಳನ್ನು ಅಭನಂದಿಸಿದರು.

ಚೌವಿನ್ ಅತ್ಯಂತ ಗಂಭೀರವಾದ ಆರೋಪದ ಮೇಲೆ 40 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಲಿದ್ದಾರೆ ಎನ್ನಲಾಗಿದ್ದು, ಶಿಕ್ಷೆಯ ಪ್ರಮಾಣವನ್ನು ನಂತರ ಘೋಷಿಸಲಾಗುತ್ತದೆ.
ಪೊಲೀಸ್ ಅಧಿಕಾರಿ ಚೌವಿನ್, ಫ್ಲಾಯ್ಡ್‌ನ ಕುತ್ತಿಗೆಗೆ ಒಂಬತ್ತು ನಿಮಿಷಗಳಿಗಿಂತ ಹೆಚ್ಚು ಕಾಲ ಮಂಡಿಯೂರಿ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದು, ಫ್ಲಾಯ್ಡ್ ಉಸಿರುಗಟ್ಟಿ ಮೃತರಾಗಿದ್ದರು.

ನಕಲಿ ಬಿಲ್ ಆರೋಪದ ಮೇಲೆ ಮೇ 25, 2020 ರಂದು ಬಂಧನಕ್ಕೊಳಗಾದ 46 ವರ್ಷದ ಫ್ಲಾಯ್ಡ್ ಹತ್ಯೆ ವಿಶ್ವದಾದ್ಯಂತ ಜನಾಂಗೀಯ ಅನ್ಯಾಯ ಮತ್ತು ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟನೆಗೆ ನಾಂದಿ ಹಾಡಿತು. ಅಮೆರಿಕದಲ್ಲಿ ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಅಂದೋಲನ ತೀವ್ರವಾಗಿತ್ತು.

ಅಧ್ಯಕ್ಷ ಜೋ ಬಿಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ತೀರ್ಪಿನ ನಂತರ ಫ್ಲಾಯ್ಡ್ ಕುಟುಂಬದ ಸದಸ್ಯರಿಗೆ ಕರೆ ಮಾಡಿ ಮಾತನಾಡಿದರು. “ಇದರಿಂದ ಒಮ್ಮೆಲೇ ಏನೂ ಉತ್ತಮವಾಗುವುದಿಲ್ಲ, ಆದರೆ ಕನಿಷ್ಠ ದೇವರು ಈಗ ಸ್ವಲ್ಪ ನ್ಯಾಯದ ಕಡೆಗಿದ್ದಾನೆ ಎಂದು ಸಾಬೀತಾಗಿದೆ’ ಎಂದು ಬಿಡೆನ್ ಹೇಳಿದರು.

“ಇದು ಅಮೆರಿಕದಲ್ಲಿ ನ್ಯಾಯದ ದಿನ” ಎಂದು ಅಮೆರಿಕದ ಮೊದಲ ಕಪ್ಪು ವರ್ಣೀಯ ಉಪಾಧ್ಯಕ್ಷೆ ಹ್ಯಾರಿಸ್ ಹೇಳಿದ್ದಾರೆ. “ಇತಿಹಾಸವು ಈ ಕ್ಷಣದಲ್ಲಿ ಹಿಂತಿರುಗಿ ನೋಡುತ್ತದೆ’ ಎಂದು ಅವರು ಹೇಳಿದ್ದಾರೆ.

ಫ್ಲಾಯ್ಡ್ ಕುಟುಂಬ ವಕೀಲ ಬೆನ್ ಕ್ರಾಂಪ್ ಈ ತೀರ್ಪನ್ನು ನಾಗರಿಕ ಹಕ್ಕುಗಳ ಮಹತ್ವದ ವಿಜಯ, ಎಂದಿದ್ದಾರೆ.

ಅಮೆರಿಕದ ಮೊದಲ ಕಪ್ಪು ವರ್ಣೀಯ ಅಧ್ಯಕ್ಷ ಬರಾಕ್ ಒಬಾಮಾ, “ತೀರ್ಪುಗಾರರು ಸರಿಯಾದ ಕೆಲಸವನ್ನು ಮಾಡಿದ್ದಾರೆ, ಆದರೆ ನಿಜವಾದ ನ್ಯಾಯಕ್ಕೆ ಇನ್ನೂ ಹೆಚ್ಚಿನ ಅಗತ್ಯವಿದೆ” ಎಂದು ಹೇಳಿದ್ದಾರೆ.

ಫ್ಲಾಯ್ಡ್ ಬಂಧನದಲ್ಲಿ ಭಾಗಿಯಾಗಿರುವ ಇತರ ಮೂವರು ಮಾಜಿ ಪೊಲೀಸ್ ಅಧಿಕಾರಿಗಳು ಈ ವರ್ಷದ ಕೊನೆಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.


ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...