Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

- Advertisement -
- Advertisement -

ಆಫ್ರಿಕನ್-ಅಮೇರಿಕನ್ ಜಾರ್ಜ್ ಫ್ಲಾಯ್ಡ್‌ನನ್ನು ಕೊಲೆ ಮಾಡಿದ ಆರೋಪದ ಮೇಲೆ ಮಾಜಿ ಮಿನ್ನಿಯಾಪೊಲಿಸ್ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್ ಅಪರಾಧಿ ಎಂದು ಸಾಬೀತುಗೊಂಡಿದ್ದು ಶಿಕ್ಷೆಗೆ ಗುರಿಯಾಗಿದ್ದಾನೆ. ಮಂಗಳವಾರ ಈ ತೀರ್ಪು ಪ್ರಕಟಗೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಪ್ರಕರಣ ಅಮೆರಿಕದಲ್ಲಿ ತೀವ್ರ ಚರ್ಚೆಯ ವಿಷಯವಾಗಿತ್ತು. ಪೊಲೀಸ್ ಹೊಣೆಗಾರಿಕೆ ಕುರಿತ ಪ್ರಮುಖ ಪರೀಕ್ಷೆಯೆಂದು ಇದನ್ನು ಪರಿಗಣಿಸಲಾಗಿತ್ತು.

ಎರಡನೇ-ದರ್ಜೆ (ಸೆಕೆಂಡ್ ಡಿಗ್ರಿ) ಕೊಲೆ, ಮೂರನೇ-ದರ್ಜೆ (ಥರ್ಡ್ ಡಿಗ್ರಿ) ಕೊಲೆ ಮತ್ತು ನರಹತ್ಯೆ – ಈ ಮೂರೂ ಆರೋಪಗಳಲ್ಲಿ 45 ವರ್ಷದ ಚೌವಿನ್ ತಪ್ಪಿತಸ್ಥನೆಂದು ಪರಿಗಣಿತರಾಗಿದ್ದಾನೆ..

ಮೂರು ವಾರಗಳ ವಿಚಾರಣೆಯ ನಂತರ ತೀರ್ಪುಗಳನ್ನು ಘೋಷಿಸಿದಾಗ ಭಾರಿ ಕಾವಲಿನಲ್ಲಿರುವ ಮಿನ್ನಿಯಾಪೊಲಿಸ್ ನ್ಯಾಯಾಲಯದ ಕೋಣೆಯ ಹೊರಗೆ ನೆರೆದಿದ್ದ ಜನಸಮೂಹವು ಸಂತಸ ವ್ಯಕ್ತಪಡಿಸಿತು.

ವಿವಿಧ ಜನಾಂಗಗಳಿಗೆ ಸೇರಿದ ಏಳು ಮಹಿಳಾ, ಐದು ಪುರುಷ ತೀರ್ಪುಗಾರರ ಸರ್ವಾನುಮತದ ತೀರ್ಪನ್ನು ಹೆನ್ನೆಪಿನ್ ಕೌಂಟಿ ನ್ಯಾಯಾಧೀಶ ಪೀಟರ್ ಕಾಹಿಲ್ ಓದಿದ ನಂತರ ಜಾಮೀನಿನ ಮೇಲೆ ಮುಕ್ತರಾಗಿದ್ದ ಚೌವಿನ್‌ಗೆ ಕೈಕೋಳ ತೊಡಿಸಲಾಗಿತು.

ಫೇಸ್ ಮಾಸ್ಕ್ ಧರಿಸಿದ್ದ ಮತ್ತು ಯಾವುದೇ ಬಾಹ್ಯ ಭಾವನೆಯನ್ನು ಪ್ರದರ್ಶಿಸದ ಚೌವಿನ್ ಅವನನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುವಾಗ ಜಾರ್ಜ್ ಫ್ಲಾಯ್ಡ್ ಸಹೋದರರಲ್ಲಿ ಒಬ್ಬರಾದ ಫಿಲೋನಿಸ್ ಫ್ಲಾಯ್ಡ್ ಪ್ರಾಸಿಕ್ಯೂಟರ್‌ಗಳನ್ನು ಅಭನಂದಿಸಿದರು.

ಚೌವಿನ್ ಅತ್ಯಂತ ಗಂಭೀರವಾದ ಆರೋಪದ ಮೇಲೆ 40 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಲಿದ್ದಾರೆ ಎನ್ನಲಾಗಿದ್ದು, ಶಿಕ್ಷೆಯ ಪ್ರಮಾಣವನ್ನು ನಂತರ ಘೋಷಿಸಲಾಗುತ್ತದೆ.
ಪೊಲೀಸ್ ಅಧಿಕಾರಿ ಚೌವಿನ್, ಫ್ಲಾಯ್ಡ್‌ನ ಕುತ್ತಿಗೆಗೆ ಒಂಬತ್ತು ನಿಮಿಷಗಳಿಗಿಂತ ಹೆಚ್ಚು ಕಾಲ ಮಂಡಿಯೂರಿ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದು, ಫ್ಲಾಯ್ಡ್ ಉಸಿರುಗಟ್ಟಿ ಮೃತರಾಗಿದ್ದರು.

ನಕಲಿ ಬಿಲ್ ಆರೋಪದ ಮೇಲೆ ಮೇ 25, 2020 ರಂದು ಬಂಧನಕ್ಕೊಳಗಾದ 46 ವರ್ಷದ ಫ್ಲಾಯ್ಡ್ ಹತ್ಯೆ ವಿಶ್ವದಾದ್ಯಂತ ಜನಾಂಗೀಯ ಅನ್ಯಾಯ ಮತ್ತು ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟನೆಗೆ ನಾಂದಿ ಹಾಡಿತು. ಅಮೆರಿಕದಲ್ಲಿ ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಅಂದೋಲನ ತೀವ್ರವಾಗಿತ್ತು.

ಅಧ್ಯಕ್ಷ ಜೋ ಬಿಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ತೀರ್ಪಿನ ನಂತರ ಫ್ಲಾಯ್ಡ್ ಕುಟುಂಬದ ಸದಸ್ಯರಿಗೆ ಕರೆ ಮಾಡಿ ಮಾತನಾಡಿದರು. “ಇದರಿಂದ ಒಮ್ಮೆಲೇ ಏನೂ ಉತ್ತಮವಾಗುವುದಿಲ್ಲ, ಆದರೆ ಕನಿಷ್ಠ ದೇವರು ಈಗ ಸ್ವಲ್ಪ ನ್ಯಾಯದ ಕಡೆಗಿದ್ದಾನೆ ಎಂದು ಸಾಬೀತಾಗಿದೆ’ ಎಂದು ಬಿಡೆನ್ ಹೇಳಿದರು.

“ಇದು ಅಮೆರಿಕದಲ್ಲಿ ನ್ಯಾಯದ ದಿನ” ಎಂದು ಅಮೆರಿಕದ ಮೊದಲ ಕಪ್ಪು ವರ್ಣೀಯ ಉಪಾಧ್ಯಕ್ಷೆ ಹ್ಯಾರಿಸ್ ಹೇಳಿದ್ದಾರೆ. “ಇತಿಹಾಸವು ಈ ಕ್ಷಣದಲ್ಲಿ ಹಿಂತಿರುಗಿ ನೋಡುತ್ತದೆ’ ಎಂದು ಅವರು ಹೇಳಿದ್ದಾರೆ.

ಫ್ಲಾಯ್ಡ್ ಕುಟುಂಬ ವಕೀಲ ಬೆನ್ ಕ್ರಾಂಪ್ ಈ ತೀರ್ಪನ್ನು ನಾಗರಿಕ ಹಕ್ಕುಗಳ ಮಹತ್ವದ ವಿಜಯ, ಎಂದಿದ್ದಾರೆ.

ಅಮೆರಿಕದ ಮೊದಲ ಕಪ್ಪು ವರ್ಣೀಯ ಅಧ್ಯಕ್ಷ ಬರಾಕ್ ಒಬಾಮಾ, “ತೀರ್ಪುಗಾರರು ಸರಿಯಾದ ಕೆಲಸವನ್ನು ಮಾಡಿದ್ದಾರೆ, ಆದರೆ ನಿಜವಾದ ನ್ಯಾಯಕ್ಕೆ ಇನ್ನೂ ಹೆಚ್ಚಿನ ಅಗತ್ಯವಿದೆ” ಎಂದು ಹೇಳಿದ್ದಾರೆ.

ಫ್ಲಾಯ್ಡ್ ಬಂಧನದಲ್ಲಿ ಭಾಗಿಯಾಗಿರುವ ಇತರ ಮೂವರು ಮಾಜಿ ಪೊಲೀಸ್ ಅಧಿಕಾರಿಗಳು ಈ ವರ್ಷದ ಕೊನೆಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.


ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...