Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

- Advertisement -
- Advertisement -

ಆಫ್ರಿಕನ್-ಅಮೇರಿಕನ್ ಜಾರ್ಜ್ ಫ್ಲಾಯ್ಡ್‌ನನ್ನು ಕೊಲೆ ಮಾಡಿದ ಆರೋಪದ ಮೇಲೆ ಮಾಜಿ ಮಿನ್ನಿಯಾಪೊಲಿಸ್ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್ ಅಪರಾಧಿ ಎಂದು ಸಾಬೀತುಗೊಂಡಿದ್ದು ಶಿಕ್ಷೆಗೆ ಗುರಿಯಾಗಿದ್ದಾನೆ. ಮಂಗಳವಾರ ಈ ತೀರ್ಪು ಪ್ರಕಟಗೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಪ್ರಕರಣ ಅಮೆರಿಕದಲ್ಲಿ ತೀವ್ರ ಚರ್ಚೆಯ ವಿಷಯವಾಗಿತ್ತು. ಪೊಲೀಸ್ ಹೊಣೆಗಾರಿಕೆ ಕುರಿತ ಪ್ರಮುಖ ಪರೀಕ್ಷೆಯೆಂದು ಇದನ್ನು ಪರಿಗಣಿಸಲಾಗಿತ್ತು.

ಎರಡನೇ-ದರ್ಜೆ (ಸೆಕೆಂಡ್ ಡಿಗ್ರಿ) ಕೊಲೆ, ಮೂರನೇ-ದರ್ಜೆ (ಥರ್ಡ್ ಡಿಗ್ರಿ) ಕೊಲೆ ಮತ್ತು ನರಹತ್ಯೆ – ಈ ಮೂರೂ ಆರೋಪಗಳಲ್ಲಿ 45 ವರ್ಷದ ಚೌವಿನ್ ತಪ್ಪಿತಸ್ಥನೆಂದು ಪರಿಗಣಿತರಾಗಿದ್ದಾನೆ..

ಮೂರು ವಾರಗಳ ವಿಚಾರಣೆಯ ನಂತರ ತೀರ್ಪುಗಳನ್ನು ಘೋಷಿಸಿದಾಗ ಭಾರಿ ಕಾವಲಿನಲ್ಲಿರುವ ಮಿನ್ನಿಯಾಪೊಲಿಸ್ ನ್ಯಾಯಾಲಯದ ಕೋಣೆಯ ಹೊರಗೆ ನೆರೆದಿದ್ದ ಜನಸಮೂಹವು ಸಂತಸ ವ್ಯಕ್ತಪಡಿಸಿತು.

ವಿವಿಧ ಜನಾಂಗಗಳಿಗೆ ಸೇರಿದ ಏಳು ಮಹಿಳಾ, ಐದು ಪುರುಷ ತೀರ್ಪುಗಾರರ ಸರ್ವಾನುಮತದ ತೀರ್ಪನ್ನು ಹೆನ್ನೆಪಿನ್ ಕೌಂಟಿ ನ್ಯಾಯಾಧೀಶ ಪೀಟರ್ ಕಾಹಿಲ್ ಓದಿದ ನಂತರ ಜಾಮೀನಿನ ಮೇಲೆ ಮುಕ್ತರಾಗಿದ್ದ ಚೌವಿನ್‌ಗೆ ಕೈಕೋಳ ತೊಡಿಸಲಾಗಿತು.

ಫೇಸ್ ಮಾಸ್ಕ್ ಧರಿಸಿದ್ದ ಮತ್ತು ಯಾವುದೇ ಬಾಹ್ಯ ಭಾವನೆಯನ್ನು ಪ್ರದರ್ಶಿಸದ ಚೌವಿನ್ ಅವನನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುವಾಗ ಜಾರ್ಜ್ ಫ್ಲಾಯ್ಡ್ ಸಹೋದರರಲ್ಲಿ ಒಬ್ಬರಾದ ಫಿಲೋನಿಸ್ ಫ್ಲಾಯ್ಡ್ ಪ್ರಾಸಿಕ್ಯೂಟರ್‌ಗಳನ್ನು ಅಭನಂದಿಸಿದರು.

ಚೌವಿನ್ ಅತ್ಯಂತ ಗಂಭೀರವಾದ ಆರೋಪದ ಮೇಲೆ 40 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಲಿದ್ದಾರೆ ಎನ್ನಲಾಗಿದ್ದು, ಶಿಕ್ಷೆಯ ಪ್ರಮಾಣವನ್ನು ನಂತರ ಘೋಷಿಸಲಾಗುತ್ತದೆ.
ಪೊಲೀಸ್ ಅಧಿಕಾರಿ ಚೌವಿನ್, ಫ್ಲಾಯ್ಡ್‌ನ ಕುತ್ತಿಗೆಗೆ ಒಂಬತ್ತು ನಿಮಿಷಗಳಿಗಿಂತ ಹೆಚ್ಚು ಕಾಲ ಮಂಡಿಯೂರಿ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದು, ಫ್ಲಾಯ್ಡ್ ಉಸಿರುಗಟ್ಟಿ ಮೃತರಾಗಿದ್ದರು.

ನಕಲಿ ಬಿಲ್ ಆರೋಪದ ಮೇಲೆ ಮೇ 25, 2020 ರಂದು ಬಂಧನಕ್ಕೊಳಗಾದ 46 ವರ್ಷದ ಫ್ಲಾಯ್ಡ್ ಹತ್ಯೆ ವಿಶ್ವದಾದ್ಯಂತ ಜನಾಂಗೀಯ ಅನ್ಯಾಯ ಮತ್ತು ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟನೆಗೆ ನಾಂದಿ ಹಾಡಿತು. ಅಮೆರಿಕದಲ್ಲಿ ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಅಂದೋಲನ ತೀವ್ರವಾಗಿತ್ತು.

ಅಧ್ಯಕ್ಷ ಜೋ ಬಿಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ತೀರ್ಪಿನ ನಂತರ ಫ್ಲಾಯ್ಡ್ ಕುಟುಂಬದ ಸದಸ್ಯರಿಗೆ ಕರೆ ಮಾಡಿ ಮಾತನಾಡಿದರು. “ಇದರಿಂದ ಒಮ್ಮೆಲೇ ಏನೂ ಉತ್ತಮವಾಗುವುದಿಲ್ಲ, ಆದರೆ ಕನಿಷ್ಠ ದೇವರು ಈಗ ಸ್ವಲ್ಪ ನ್ಯಾಯದ ಕಡೆಗಿದ್ದಾನೆ ಎಂದು ಸಾಬೀತಾಗಿದೆ’ ಎಂದು ಬಿಡೆನ್ ಹೇಳಿದರು.

“ಇದು ಅಮೆರಿಕದಲ್ಲಿ ನ್ಯಾಯದ ದಿನ” ಎಂದು ಅಮೆರಿಕದ ಮೊದಲ ಕಪ್ಪು ವರ್ಣೀಯ ಉಪಾಧ್ಯಕ್ಷೆ ಹ್ಯಾರಿಸ್ ಹೇಳಿದ್ದಾರೆ. “ಇತಿಹಾಸವು ಈ ಕ್ಷಣದಲ್ಲಿ ಹಿಂತಿರುಗಿ ನೋಡುತ್ತದೆ’ ಎಂದು ಅವರು ಹೇಳಿದ್ದಾರೆ.

ಫ್ಲಾಯ್ಡ್ ಕುಟುಂಬ ವಕೀಲ ಬೆನ್ ಕ್ರಾಂಪ್ ಈ ತೀರ್ಪನ್ನು ನಾಗರಿಕ ಹಕ್ಕುಗಳ ಮಹತ್ವದ ವಿಜಯ, ಎಂದಿದ್ದಾರೆ.

ಅಮೆರಿಕದ ಮೊದಲ ಕಪ್ಪು ವರ್ಣೀಯ ಅಧ್ಯಕ್ಷ ಬರಾಕ್ ಒಬಾಮಾ, “ತೀರ್ಪುಗಾರರು ಸರಿಯಾದ ಕೆಲಸವನ್ನು ಮಾಡಿದ್ದಾರೆ, ಆದರೆ ನಿಜವಾದ ನ್ಯಾಯಕ್ಕೆ ಇನ್ನೂ ಹೆಚ್ಚಿನ ಅಗತ್ಯವಿದೆ” ಎಂದು ಹೇಳಿದ್ದಾರೆ.

ಫ್ಲಾಯ್ಡ್ ಬಂಧನದಲ್ಲಿ ಭಾಗಿಯಾಗಿರುವ ಇತರ ಮೂವರು ಮಾಜಿ ಪೊಲೀಸ್ ಅಧಿಕಾರಿಗಳು ಈ ವರ್ಷದ ಕೊನೆಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.


ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...