Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

- Advertisement -
- Advertisement -

ಆಫ್ರಿಕನ್-ಅಮೇರಿಕನ್ ಜಾರ್ಜ್ ಫ್ಲಾಯ್ಡ್‌ನನ್ನು ಕೊಲೆ ಮಾಡಿದ ಆರೋಪದ ಮೇಲೆ ಮಾಜಿ ಮಿನ್ನಿಯಾಪೊಲಿಸ್ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್ ಅಪರಾಧಿ ಎಂದು ಸಾಬೀತುಗೊಂಡಿದ್ದು ಶಿಕ್ಷೆಗೆ ಗುರಿಯಾಗಿದ್ದಾನೆ. ಮಂಗಳವಾರ ಈ ತೀರ್ಪು ಪ್ರಕಟಗೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಪ್ರಕರಣ ಅಮೆರಿಕದಲ್ಲಿ ತೀವ್ರ ಚರ್ಚೆಯ ವಿಷಯವಾಗಿತ್ತು. ಪೊಲೀಸ್ ಹೊಣೆಗಾರಿಕೆ ಕುರಿತ ಪ್ರಮುಖ ಪರೀಕ್ಷೆಯೆಂದು ಇದನ್ನು ಪರಿಗಣಿಸಲಾಗಿತ್ತು.

ಎರಡನೇ-ದರ್ಜೆ (ಸೆಕೆಂಡ್ ಡಿಗ್ರಿ) ಕೊಲೆ, ಮೂರನೇ-ದರ್ಜೆ (ಥರ್ಡ್ ಡಿಗ್ರಿ) ಕೊಲೆ ಮತ್ತು ನರಹತ್ಯೆ – ಈ ಮೂರೂ ಆರೋಪಗಳಲ್ಲಿ 45 ವರ್ಷದ ಚೌವಿನ್ ತಪ್ಪಿತಸ್ಥನೆಂದು ಪರಿಗಣಿತರಾಗಿದ್ದಾನೆ..

ಮೂರು ವಾರಗಳ ವಿಚಾರಣೆಯ ನಂತರ ತೀರ್ಪುಗಳನ್ನು ಘೋಷಿಸಿದಾಗ ಭಾರಿ ಕಾವಲಿನಲ್ಲಿರುವ ಮಿನ್ನಿಯಾಪೊಲಿಸ್ ನ್ಯಾಯಾಲಯದ ಕೋಣೆಯ ಹೊರಗೆ ನೆರೆದಿದ್ದ ಜನಸಮೂಹವು ಸಂತಸ ವ್ಯಕ್ತಪಡಿಸಿತು.

ವಿವಿಧ ಜನಾಂಗಗಳಿಗೆ ಸೇರಿದ ಏಳು ಮಹಿಳಾ, ಐದು ಪುರುಷ ತೀರ್ಪುಗಾರರ ಸರ್ವಾನುಮತದ ತೀರ್ಪನ್ನು ಹೆನ್ನೆಪಿನ್ ಕೌಂಟಿ ನ್ಯಾಯಾಧೀಶ ಪೀಟರ್ ಕಾಹಿಲ್ ಓದಿದ ನಂತರ ಜಾಮೀನಿನ ಮೇಲೆ ಮುಕ್ತರಾಗಿದ್ದ ಚೌವಿನ್‌ಗೆ ಕೈಕೋಳ ತೊಡಿಸಲಾಗಿತು.

ಫೇಸ್ ಮಾಸ್ಕ್ ಧರಿಸಿದ್ದ ಮತ್ತು ಯಾವುದೇ ಬಾಹ್ಯ ಭಾವನೆಯನ್ನು ಪ್ರದರ್ಶಿಸದ ಚೌವಿನ್ ಅವನನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುವಾಗ ಜಾರ್ಜ್ ಫ್ಲಾಯ್ಡ್ ಸಹೋದರರಲ್ಲಿ ಒಬ್ಬರಾದ ಫಿಲೋನಿಸ್ ಫ್ಲಾಯ್ಡ್ ಪ್ರಾಸಿಕ್ಯೂಟರ್‌ಗಳನ್ನು ಅಭನಂದಿಸಿದರು.

ಚೌವಿನ್ ಅತ್ಯಂತ ಗಂಭೀರವಾದ ಆರೋಪದ ಮೇಲೆ 40 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಲಿದ್ದಾರೆ ಎನ್ನಲಾಗಿದ್ದು, ಶಿಕ್ಷೆಯ ಪ್ರಮಾಣವನ್ನು ನಂತರ ಘೋಷಿಸಲಾಗುತ್ತದೆ.
ಪೊಲೀಸ್ ಅಧಿಕಾರಿ ಚೌವಿನ್, ಫ್ಲಾಯ್ಡ್‌ನ ಕುತ್ತಿಗೆಗೆ ಒಂಬತ್ತು ನಿಮಿಷಗಳಿಗಿಂತ ಹೆಚ್ಚು ಕಾಲ ಮಂಡಿಯೂರಿ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದು, ಫ್ಲಾಯ್ಡ್ ಉಸಿರುಗಟ್ಟಿ ಮೃತರಾಗಿದ್ದರು.

ನಕಲಿ ಬಿಲ್ ಆರೋಪದ ಮೇಲೆ ಮೇ 25, 2020 ರಂದು ಬಂಧನಕ್ಕೊಳಗಾದ 46 ವರ್ಷದ ಫ್ಲಾಯ್ಡ್ ಹತ್ಯೆ ವಿಶ್ವದಾದ್ಯಂತ ಜನಾಂಗೀಯ ಅನ್ಯಾಯ ಮತ್ತು ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟನೆಗೆ ನಾಂದಿ ಹಾಡಿತು. ಅಮೆರಿಕದಲ್ಲಿ ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಅಂದೋಲನ ತೀವ್ರವಾಗಿತ್ತು.

ಅಧ್ಯಕ್ಷ ಜೋ ಬಿಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ತೀರ್ಪಿನ ನಂತರ ಫ್ಲಾಯ್ಡ್ ಕುಟುಂಬದ ಸದಸ್ಯರಿಗೆ ಕರೆ ಮಾಡಿ ಮಾತನಾಡಿದರು. “ಇದರಿಂದ ಒಮ್ಮೆಲೇ ಏನೂ ಉತ್ತಮವಾಗುವುದಿಲ್ಲ, ಆದರೆ ಕನಿಷ್ಠ ದೇವರು ಈಗ ಸ್ವಲ್ಪ ನ್ಯಾಯದ ಕಡೆಗಿದ್ದಾನೆ ಎಂದು ಸಾಬೀತಾಗಿದೆ’ ಎಂದು ಬಿಡೆನ್ ಹೇಳಿದರು.

“ಇದು ಅಮೆರಿಕದಲ್ಲಿ ನ್ಯಾಯದ ದಿನ” ಎಂದು ಅಮೆರಿಕದ ಮೊದಲ ಕಪ್ಪು ವರ್ಣೀಯ ಉಪಾಧ್ಯಕ್ಷೆ ಹ್ಯಾರಿಸ್ ಹೇಳಿದ್ದಾರೆ. “ಇತಿಹಾಸವು ಈ ಕ್ಷಣದಲ್ಲಿ ಹಿಂತಿರುಗಿ ನೋಡುತ್ತದೆ’ ಎಂದು ಅವರು ಹೇಳಿದ್ದಾರೆ.

ಫ್ಲಾಯ್ಡ್ ಕುಟುಂಬ ವಕೀಲ ಬೆನ್ ಕ್ರಾಂಪ್ ಈ ತೀರ್ಪನ್ನು ನಾಗರಿಕ ಹಕ್ಕುಗಳ ಮಹತ್ವದ ವಿಜಯ, ಎಂದಿದ್ದಾರೆ.

ಅಮೆರಿಕದ ಮೊದಲ ಕಪ್ಪು ವರ್ಣೀಯ ಅಧ್ಯಕ್ಷ ಬರಾಕ್ ಒಬಾಮಾ, “ತೀರ್ಪುಗಾರರು ಸರಿಯಾದ ಕೆಲಸವನ್ನು ಮಾಡಿದ್ದಾರೆ, ಆದರೆ ನಿಜವಾದ ನ್ಯಾಯಕ್ಕೆ ಇನ್ನೂ ಹೆಚ್ಚಿನ ಅಗತ್ಯವಿದೆ” ಎಂದು ಹೇಳಿದ್ದಾರೆ.

ಫ್ಲಾಯ್ಡ್ ಬಂಧನದಲ್ಲಿ ಭಾಗಿಯಾಗಿರುವ ಇತರ ಮೂವರು ಮಾಜಿ ಪೊಲೀಸ್ ಅಧಿಕಾರಿಗಳು ಈ ವರ್ಷದ ಕೊನೆಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.


ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...