Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

- Advertisement -
- Advertisement -

ಆಫ್ರಿಕನ್-ಅಮೇರಿಕನ್ ಜಾರ್ಜ್ ಫ್ಲಾಯ್ಡ್‌ನನ್ನು ಕೊಲೆ ಮಾಡಿದ ಆರೋಪದ ಮೇಲೆ ಮಾಜಿ ಮಿನ್ನಿಯಾಪೊಲಿಸ್ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್ ಅಪರಾಧಿ ಎಂದು ಸಾಬೀತುಗೊಂಡಿದ್ದು ಶಿಕ್ಷೆಗೆ ಗುರಿಯಾಗಿದ್ದಾನೆ. ಮಂಗಳವಾರ ಈ ತೀರ್ಪು ಪ್ರಕಟಗೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಪ್ರಕರಣ ಅಮೆರಿಕದಲ್ಲಿ ತೀವ್ರ ಚರ್ಚೆಯ ವಿಷಯವಾಗಿತ್ತು. ಪೊಲೀಸ್ ಹೊಣೆಗಾರಿಕೆ ಕುರಿತ ಪ್ರಮುಖ ಪರೀಕ್ಷೆಯೆಂದು ಇದನ್ನು ಪರಿಗಣಿಸಲಾಗಿತ್ತು.

ಎರಡನೇ-ದರ್ಜೆ (ಸೆಕೆಂಡ್ ಡಿಗ್ರಿ) ಕೊಲೆ, ಮೂರನೇ-ದರ್ಜೆ (ಥರ್ಡ್ ಡಿಗ್ರಿ) ಕೊಲೆ ಮತ್ತು ನರಹತ್ಯೆ – ಈ ಮೂರೂ ಆರೋಪಗಳಲ್ಲಿ 45 ವರ್ಷದ ಚೌವಿನ್ ತಪ್ಪಿತಸ್ಥನೆಂದು ಪರಿಗಣಿತರಾಗಿದ್ದಾನೆ..

ಮೂರು ವಾರಗಳ ವಿಚಾರಣೆಯ ನಂತರ ತೀರ್ಪುಗಳನ್ನು ಘೋಷಿಸಿದಾಗ ಭಾರಿ ಕಾವಲಿನಲ್ಲಿರುವ ಮಿನ್ನಿಯಾಪೊಲಿಸ್ ನ್ಯಾಯಾಲಯದ ಕೋಣೆಯ ಹೊರಗೆ ನೆರೆದಿದ್ದ ಜನಸಮೂಹವು ಸಂತಸ ವ್ಯಕ್ತಪಡಿಸಿತು.

ವಿವಿಧ ಜನಾಂಗಗಳಿಗೆ ಸೇರಿದ ಏಳು ಮಹಿಳಾ, ಐದು ಪುರುಷ ತೀರ್ಪುಗಾರರ ಸರ್ವಾನುಮತದ ತೀರ್ಪನ್ನು ಹೆನ್ನೆಪಿನ್ ಕೌಂಟಿ ನ್ಯಾಯಾಧೀಶ ಪೀಟರ್ ಕಾಹಿಲ್ ಓದಿದ ನಂತರ ಜಾಮೀನಿನ ಮೇಲೆ ಮುಕ್ತರಾಗಿದ್ದ ಚೌವಿನ್‌ಗೆ ಕೈಕೋಳ ತೊಡಿಸಲಾಗಿತು.

ಫೇಸ್ ಮಾಸ್ಕ್ ಧರಿಸಿದ್ದ ಮತ್ತು ಯಾವುದೇ ಬಾಹ್ಯ ಭಾವನೆಯನ್ನು ಪ್ರದರ್ಶಿಸದ ಚೌವಿನ್ ಅವನನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ಯುವಾಗ ಜಾರ್ಜ್ ಫ್ಲಾಯ್ಡ್ ಸಹೋದರರಲ್ಲಿ ಒಬ್ಬರಾದ ಫಿಲೋನಿಸ್ ಫ್ಲಾಯ್ಡ್ ಪ್ರಾಸಿಕ್ಯೂಟರ್‌ಗಳನ್ನು ಅಭನಂದಿಸಿದರು.

ಚೌವಿನ್ ಅತ್ಯಂತ ಗಂಭೀರವಾದ ಆರೋಪದ ಮೇಲೆ 40 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಲಿದ್ದಾರೆ ಎನ್ನಲಾಗಿದ್ದು, ಶಿಕ್ಷೆಯ ಪ್ರಮಾಣವನ್ನು ನಂತರ ಘೋಷಿಸಲಾಗುತ್ತದೆ.
ಪೊಲೀಸ್ ಅಧಿಕಾರಿ ಚೌವಿನ್, ಫ್ಲಾಯ್ಡ್‌ನ ಕುತ್ತಿಗೆಗೆ ಒಂಬತ್ತು ನಿಮಿಷಗಳಿಗಿಂತ ಹೆಚ್ಚು ಕಾಲ ಮಂಡಿಯೂರಿ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದು, ಫ್ಲಾಯ್ಡ್ ಉಸಿರುಗಟ್ಟಿ ಮೃತರಾಗಿದ್ದರು.

ನಕಲಿ ಬಿಲ್ ಆರೋಪದ ಮೇಲೆ ಮೇ 25, 2020 ರಂದು ಬಂಧನಕ್ಕೊಳಗಾದ 46 ವರ್ಷದ ಫ್ಲಾಯ್ಡ್ ಹತ್ಯೆ ವಿಶ್ವದಾದ್ಯಂತ ಜನಾಂಗೀಯ ಅನ್ಯಾಯ ಮತ್ತು ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟನೆಗೆ ನಾಂದಿ ಹಾಡಿತು. ಅಮೆರಿಕದಲ್ಲಿ ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಅಂದೋಲನ ತೀವ್ರವಾಗಿತ್ತು.

ಅಧ್ಯಕ್ಷ ಜೋ ಬಿಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ತೀರ್ಪಿನ ನಂತರ ಫ್ಲಾಯ್ಡ್ ಕುಟುಂಬದ ಸದಸ್ಯರಿಗೆ ಕರೆ ಮಾಡಿ ಮಾತನಾಡಿದರು. “ಇದರಿಂದ ಒಮ್ಮೆಲೇ ಏನೂ ಉತ್ತಮವಾಗುವುದಿಲ್ಲ, ಆದರೆ ಕನಿಷ್ಠ ದೇವರು ಈಗ ಸ್ವಲ್ಪ ನ್ಯಾಯದ ಕಡೆಗಿದ್ದಾನೆ ಎಂದು ಸಾಬೀತಾಗಿದೆ’ ಎಂದು ಬಿಡೆನ್ ಹೇಳಿದರು.

“ಇದು ಅಮೆರಿಕದಲ್ಲಿ ನ್ಯಾಯದ ದಿನ” ಎಂದು ಅಮೆರಿಕದ ಮೊದಲ ಕಪ್ಪು ವರ್ಣೀಯ ಉಪಾಧ್ಯಕ್ಷೆ ಹ್ಯಾರಿಸ್ ಹೇಳಿದ್ದಾರೆ. “ಇತಿಹಾಸವು ಈ ಕ್ಷಣದಲ್ಲಿ ಹಿಂತಿರುಗಿ ನೋಡುತ್ತದೆ’ ಎಂದು ಅವರು ಹೇಳಿದ್ದಾರೆ.

ಫ್ಲಾಯ್ಡ್ ಕುಟುಂಬ ವಕೀಲ ಬೆನ್ ಕ್ರಾಂಪ್ ಈ ತೀರ್ಪನ್ನು ನಾಗರಿಕ ಹಕ್ಕುಗಳ ಮಹತ್ವದ ವಿಜಯ, ಎಂದಿದ್ದಾರೆ.

ಅಮೆರಿಕದ ಮೊದಲ ಕಪ್ಪು ವರ್ಣೀಯ ಅಧ್ಯಕ್ಷ ಬರಾಕ್ ಒಬಾಮಾ, “ತೀರ್ಪುಗಾರರು ಸರಿಯಾದ ಕೆಲಸವನ್ನು ಮಾಡಿದ್ದಾರೆ, ಆದರೆ ನಿಜವಾದ ನ್ಯಾಯಕ್ಕೆ ಇನ್ನೂ ಹೆಚ್ಚಿನ ಅಗತ್ಯವಿದೆ” ಎಂದು ಹೇಳಿದ್ದಾರೆ.

ಫ್ಲಾಯ್ಡ್ ಬಂಧನದಲ್ಲಿ ಭಾಗಿಯಾಗಿರುವ ಇತರ ಮೂವರು ಮಾಜಿ ಪೊಲೀಸ್ ಅಧಿಕಾರಿಗಳು ಈ ವರ್ಷದ ಕೊನೆಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.


ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...