Homeಮುಖಪುಟಅನಿಮಲ್ ಫಾರ್ಮ್‌ ನೆನಪು ಮಾಡುವ ಸರ್ಕಾರದ ದಿನಕ್ಕೊಂದು ನಿಯಮಗಳು!

ಅನಿಮಲ್ ಫಾರ್ಮ್‌ ನೆನಪು ಮಾಡುವ ಸರ್ಕಾರದ ದಿನಕ್ಕೊಂದು ನಿಯಮಗಳು!

ಇಂದು ಖ್ಯಾತ ಕಾದಂಬರಿಕಾರಿ ಜಾರ್ಜ್ ಆರ್ವೆಲ್ ಹುಟ್ಟಿದ ದಿನ. ಅವರ ಎರಡು ಕೃತಿಗಳನ್ನು ಇಂದಿನ ಭಾರತದ ಸಂದರ್ಭಕ್ಕೆ ಅನ್ವಯಿಸಿದ್ದಾರೆ ಡೇಟಾಮ್ಯಾಟಿಕ್ಸ್‌ರವರು.

- Advertisement -
- Advertisement -

ನಾವು ಸಣ್ಣವರಿದ್ದಾಗ ಭಾರತದ ಸ್ವರೂಪದ ಬಗ್ಗೆ ಒಂದು ಹಾಡು ಹೇಳತಿದ್ದೆವಿ- ಕೇಸರಿ – ಬಿಳಿ – ಹಸಿರು ಬಣ್ಣ ನಡುವೆ ಚಕ್ರವು ಅಂತ ಅದರಾಗ ಒಂದು ಸಾಲು ಇತ್ತು.

ಈ ಬಣ್ಣಗಳ ನಡುವೆ ರಾಜಕೀಯ ಹುಟ್ಟತದ ಅಂತ ನಮಗ ಗೊತ್ತಿರಲಿಲ್ಲ. ಇದರ ಬಗ್ಗೆ ಸ್ವಲ್ಪ ತಿಳಕೊಳ್ಳೋಣ.

ಮೊಟ್ಟ ಮೊದಲಿಗೆ, ಅಂದರ ಲಕ್ಷಾಂತರ ಮಂದಿಗೆ ಕೊರೋನಾ ಬಂದು, ಸಾವಿರಾರು ಜನ ಸತ್ತ ಮ್ಯಾಲೆ, ಭಾರತ ಸರಕಾರದ ಕಣ್ಣು ತೆರದು ಲಾಕಡೌನು (ಕೀಲಿ ಕಿಟಕ್) ಘೋಷಿಸಿತು. ಆಮ್ಯಾಲೆ ದೇಶದ 700 ಜಿಲ್ಲೆಗಳನ್ನ ಕೆಂಪು, ಕಿತ್ತಳೆ ಹಾಗೂ ಹಸಿರು ಅಂತ ಹೇಳಿ ವಿಭಜನೆ ಮಾಡಿತು.

ಅದರ ಹಿಂದಿನ ಕಾರಣ ಅಂದರೆ 1. ಯಾವುದೇ ಜಿಲ್ಲೆಯೊಳಗ ಒಂದು ಕೊರೊನಾ ಪ್ರಕರಣ ಇದ್ದರೂ ಅದು ಕೆಂಪು. 2. ಯಾವುದೇ ಪ್ರಕರಣ ಇರದಿದ್ದರ ಅದು ಹಸಿರು ಹಾಗೂ 3. ಕಳೆದ 14 ದಿನದಲ್ಲಿ ಒಂದೂ ಹೊಸ ಪ್ರಕರಣ ಇರಲಿಲ್ಲ ಅಂದರ ಅದು ಕಿತ್ತಳೆ.

ಕೆಂಪು ಜಿಲ್ಲೆಯೊಳಗ ಯಾವುದೇ ಆರ್ಥಿಕ ಚಟುವಟಿಕೆ ಇಲ್ಲ, ಓಡಾಟ ಇಲ್ಲ. ಕಿತ್ತಳೆಯೊಳಗ ಬಹಳ ಮಟ್ಟಿಗೆ ಪ್ರತಿಬಂಧ ಹಾಗೂ ಹಸಿರಿನೊಳಗ ಎಲ್ಲ ರೀತಿಯ ಚಟುವಟಿಕೆ ಹಾಗೂ ಓಡಾಟ ಮುಕ್ತ.

ಆದರ ಸಮಸ್ಯಾ ಏನಪಾ ಅಂದರ ಎಂದಿನಂತೆ ಕೇಂದ್ರ ಸರಕಾರ ಕೀಲಿ ಕಿಟಕ್ ಆಗಲಿ, ಇತರ ಪರಿಹಾರ ಕ್ರಮಗಳನ್ನಾಗಲೀ ಸಾರಾಸಾರ ವಿಚಾರ ಮಾಡಿ ಮಾಡಿರಲಿಲ್ಲ.

ಇದರಿಂದ ದೊಡ್ಡ ಆಭಾಸ ಆತು. ಒಂದು ಸಾವಿರ ಕೇಸು ಇರೋ ಮುಂಬೈ ಕಿತ್ತಳೆ ವಲಯದಾಗ ಬಂದು, ಕರ್ನಾಟದ 14 ಜಿಲ್ಲೆ ಗಳು ಕೆಂಪು ವಲಯದಾಗ ಬಂದವು.

ಕೇಂದ್ರದ ಆಳುವ ಪಕ್ಷಕ್ಕೆ ಅತಿ ಹೆಚ್ಚು ದೇಣಿಗೆ ಕೊಟ್ಟ ಖಾಸಗಿ ಕಂಪನಿಗಳು ಸರಕಾರದ ಮೇಲೆ ಒತ್ತಡ ಹಾಕಿದರು. ಮುಂಬೈ- ಅಹಮದಾಬಾದು- ಸುರತ ಮುಂತಾದ ಕಡೆ ಕಾರಖಾನೆ- ಅಂಗಡಿ ತೆಗೆಯಬಹುದಾದರೆ ನಮ್ಮಲ್ಲೆ ಯಾಕೆ ಬೇಡ ಅಂತ ತಕರಾರು ಮಾಡಿದರು. ಅವರು ತಮ್ಮ ತಮ್ಮ ನೌಕರರಿಗೆ ಸಂಬಳ ಕೊಟ್ಟಿದ್ದರೋ ಇಲ್ಲೋ, ಆದರೆ ಪಿಎಂ ಕೇರ್ಸ ಅನ್ನೋ ಹುಂಡಿಗೆ ರೊಕ್ಕ ಹಾಕಿ ಭಕ್ತಿಯಿಂದ ಕೈ ಮುಗದಿದ್ದರು.

ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದ್ದಕ್ಕ ಜನರಿಗೆ ತೊಂದರೆ ಆಗಿತ್ತು. ಸರಕಾರಕ್ಕೆ ತೆರಿಗೆ ಸಿಗಲಾರದ ಹಂಗ ಆಗಿತ್ತು. ಸರಕಾರಿ ನೌಕರರಿಗೆ ಸಂಬಳ ತಡಾ ಆಗಲಿಕ್ಕೆ ಸುರು ಆಗಿತ್ತು. ವಿಶ್ವಬ್ಯಾಂಕು, ಮೋಡಿ, ಮತ್ತು ಇತರ ಸಂಸ್ಥೆಗಳು ಭಾರತದ ನಿವ್ವಳ ಉತ್ಪನ್ನ ಶೇಕಡಾ 1-2 ರ ಒಳಗೆ ಇಳಿಯಲಿದೆ ಅಂತ ಭವಿಷ್ಯ ಹೇಳಲಿಕ್ಕೆ ಸುರು ಮಾಡಿದರು.

ಅಷ್ಟರೊಳಗೆ ಪಂತ ಪ್ರಧಾನ ನಮೋ ಅವರು ಮೂರನೇ ಕೀಲಿ ಕಿಟಕ್ ಘೋಷಣೆ ಮಾಡಿದ್ದರು. ಇನ್ನು ಅದನ್ನು ಹೆಂಗ ಸರಿ ಮಾಡಬೇಕು ಅಂತ ಯಾರಿಗೂ ಗೊತ್ತಿರಲಿಲ್ಲ.

ಎಪ್ರಿಲ 30 ರಂದು ಕೇಂದ್ರದ ಕೆಲವು ಅಧಿಕಾರಿಗಳು ಒಂದು ಸಭೆ ನಡೆಸಿದರು. ಅದರಾಗ ಈ ಹಿಂದೆ ಮಾಡಿದ ಕಲರ ಕೋಡಿಂಗ (ವರ್ಣಾಧಾರಿತ ವಿಭಜನೆ) ಸರಿ ಇಲ್ಲ. ಅದನ್ನ ಬದಲಾಯಿಸಬೇಕು. ಬರೇ ಪ್ರಕರಣ ಪತ್ತೆ ಆಗೋದು ಮುಖ್ಯ ಅಲ್ಲ. ಅದರ ಸಂಖ್ಯೆ ಎಷ್ಟು ದಿನದೊಳಗ ದುಪ್ಪಟ್ಟು ಆಗತಾವು, ಎಷ್ಟು ಜನ ಗುಣ ಆಗಿದ್ದಾರ, ರಾಜ್ಯ ಹಾಗೂ ಜಿಲ್ಲೆ ಆಡಳಿತ ಎಷ್ಟರ ಮಟ್ಟಿಗೆ ತಯಾರು ಆಗಿದಾರು ಮುಂತಾದ ವಿಷಯಗಳನ್ನ ಆಧರಿಸಿ ಕೆಂಪು ನಿರ್ಧರಿಸೋಣ. ಕಳೆದ 21 ದಿನದೊಳಗ ಪ್ರಕರಣ ಇಲ್ಲಾ ಅಂದರ ಅದು ಹಸಿರು ಅಂತ ಅನ್ನೋಣ. ಇವು ಎರಡೂ ಇಲ್ಲದವು ಕಿತ್ತಳೆ ಜಿಲ್ಲೆಗಳು ಅಂತ ಆಗಲಿ ಅಂತ ಹೇಳಿದರು.

ರಾಜ್ಯ ಸರಕಾರಗಳು ಕೆಂಪು- ಕಿತ್ತಳೆ ಇದ್ದದ್ದನ್ನು ಹಸಿರು ಮಾಡಬಹುದು. ಆದರೆ ಉಲ್ಟಾ ಮಾಡಲು ಬರೋದಿಲ್ಲ. ಪಟ್ಟಿ ಬದಲಾವಣೆ ಮಾಡೋದಾದರ ನಾವು ಮಾಡತೇವಿ ಅಂದರು. ಕರ್ನಾಟಕದಲ್ಲಿ ಇದ್ದ 14 ಕೆಂಪು ಜಿಲ್ಲೆಗಳ ಸಂಖ್ಯೆ ಮೂರಕ್ಕೆ ಇಳಿಯಿತು.

ಹಿಂಗಾಗಿ ಮೂರನೇ ಹಂತದ ಲಾಕ್ ಡೌನ ಇದ್ದರೂ ಕೂಡ ಕಾರ್ಖಾನೆ- ಅಂಗಡಿ ತೆರೆಯಲಾಯಿತು. ಅತಿ ಕಮ್ಮಿ ಪ್ರಕರಣ ಇದ್ದಾಗ ಬಂದು ಮಾಡಿದ ಅಂಗಡಿಗಳು ಅತಿ ಹೆಚ್ಚು ಪ್ರಕರಣಗಳು ದಾಖಲಾದ ಮೇಲೆ ತೆರೆದುಕೊಂಡವು. ಇದೇ ನಿರ್ಧಾರ ತೊಗೊಳ್ಳೋದು ಆಗಿದ್ದರ ಇಷ್ಟೆಲ್ಲಾ ಸರ್ಕಸ್ಸು ಯಾಕ ಮಾಡಬೇಕಾಗಿತ್ತು. ಮೊದಲನೇ ದಿವಸವೇ ಈ ನಿರ್ಧಾರ ತೊಗೊಂಡಿದ್ದರ ಅಷ್ಟೊಂದು ಆರ್ಥಿಕ ಹಿನ್ನಡೆ ಆಗತಿರಲಿಲ್ಲ.

ಈ ಬಣ್ಣಗಳ ರಾಜಕಾರಣಕ್ಕೆ ವರ್ಣಕಾರಣ ಅನ್ನಬಹುದು. ಯಾಕ ಹಿಂಗಂದರ, ಸರಕಾರದ ನಿರ್ಧಾರಗಳು ವಿಜ್ಞಾನಿಗಳ ಮಾತು ಕೇಳಿ ನಡೆಯುತ್ತಿಲ್ಲ. ಅವು ಕೆಲವು ಐಎಎಸ್ಸು ಅಧಿಕಾರಿಗಳು ಹಾಗೂ ಕೆಲವೇ ಕೆಲವು ರಾಜಕಾರಣಿಗಳ ಮನಸೋಇಚ್ಛಿ ನಿರ್ಧಾರಗಳು. ಇವುಗಳಿಂದ ಯಾರಿಗೂ ಸ್ಪಷ್ಟತೆ ಇಲ್ಲ. ಯಾರಿಗೂ ಇವು ಸರಿಯಾಗಿ ಅರ್ಥವಾಗಿಲ್ಲ. ಇವುಗಳ ಬಗ್ಗೆ ಯಾರೂ ವೈಯಕ್ತಿಯ ಜವಾಬುದಾರಿ ತೊಗೊಳ್ಳೋದಿಲ್ಲ. ಸಧ್ಯಕ್ಕಂತೂ ಈ ಮುಖ ಇಲ್ಲದ ನಿರ್ಧಾರಗಳಿಂದ ನಮಗ ಮುಕ್ತಿ ಇಲ್ಲವೇನೋ.

ದೂರದರ್ಶಿ ಸಾಹಿತಿ ಭವಿಷ್ಯದಲ್ಲಿ ನಡಿಯೋದನ್ನು ಇಂದೇ ನಡೆದಂತೆ ಚಿತ್ರಿಸಿದ ಜಾರ್ಜ್ ಆರ್ವೆಲ್ ಅವರ ಅತಿ ಜನಪ್ರಿಯ ಕಾದಂಬರಿಯ ಹೆಸರು ʻ1984ʼ. ಅದರೊಳಗೆ ಕೆಲವು ಜನ ತಮ್ಮ ದೇಶದ ಜನರನ್ನ ಕತ್ತಲೆಯೊಳಗೆ ಇಟ್ಟು ಸರಕಾರ ನಡೆಸತಾರ. ಕಾಲ್ಪನಿಕ ʻಹಿರಿಯ ಅಣ್ಣʼನ ಹೆದರಿಕೆಯಿಂದ ಜನರ ಮೇಲೆ ದಬ್ಬಾಳಿಕೆ ನಡಸತಾರ.

ಅದೇ ಲೇಖಕನ ಇನ್ನೊಂದು ಕಾದಂಬರಿ ʻಎನಿಮಲ್ ಫಾರ್ಮʼ.

ರೈತನೊಬ್ಬನ ಮನೆಯ ಹಿತ್ತಲದಲ್ಲಿ ನಡೆಯುವ ಕತೆ ಇದು. ಬರೀ ತಿಂದುಂಡು ಹಾಯಾಗಿ ಮಲಗುವ ಚಾಲಾಕಿ ಹಂದಿಗಳು ಸರಕಾರ ರಚಿಸಿ ತಾವೇ ರಾಜರಾಗಿ ಬಿಡತಾರ. ರೈತನ ಹೊಲದಲ್ಲಿ ಕಷ್ಟಪಟ್ಟು ದುಡಿಯುವ ಕುದುರೆಗಳನ್ನು ಕಾರ್ಮಿಕರನ್ನಾಗಿ ಮಾಡಿಕೊಳ್ಳತಾವು. ಆ ತೋಟದ ಮನೆಯಲ್ಲಿ ಒಂದು ಫಲಕ ಇರತೈತಿ. ಅದರ ಮೇಲೆ ಇವತ್ತಿನ ನೀತಿ- ನಿಯಮಗಳು ಅಂತ ಬರದಿರತಾವು. ಅದನ್ನ ಯಾರು ಬರದಿತಾರ ಅಂತ ಯಾರಿಗೂ ಗೊತ್ತಿರೋದಿಲ್ಲ. ಅದರಾಗ ಒಂದು – ಎರಡು ಅಂತ ಹೇಳಿ ನಿಯಮಗಳ ಪಟ್ಟಿನ ಇರತೈತಿ. ಅವನ್ನ ಎಲ್ಲ ಪ್ರಾಣಿಗಳು ಭಕ್ತಿಯಿಂದ ಪಾಲಿಸತಿರತಾವು.

ಆದರ ಅವರ ಮೇಲೆ ದ್ವೇಷ ಸಾಧಿಸೋ ದೃಷ್ಟಿಯಿಂದ ಆ ಹಂದಿಗಳು ಒಂದು ಸಂಚು ರೂಪಿಸತಾವು. ರಾತ್ರಿ ಎಲ್ಲರೂ ಮಲಗಿದಾಗ ಎದ್ದು ಬಂದು ಆ ಪಟ್ಟಿಯ ಕೊನೆಯ ನಿಯಮಗಳನ್ನ ಅಳಿಸಿ ಸಂಪೂರ್ಣ ತದ್ವಿರುದ್ಧ ವಾದ ನಿಯಮಗಳನ್ನ ಬರದು ಬಿಡತಾವು. ಮರು ದಿನ ಬೆಳಿಗ್ಗೆ ಎದ್ದು ನಿನ್ನೆ ಎಲ್ಲರೂ ನಿಯಮ ಉಲ್ಲಂಘಿಸಿದ್ದೀರಿ ಅಂತ ಹೇಳಿ ಶಿಕ್ಷೆ ಕೊಡತಾವು. ಉಳಿದ ಪ್ರಾಣಿಗಳು ʻಇಲ್ಲ. ನಾವು ಇದರಲ್ಲಿ ಬರೆದ ನಿಯಮಗಳನ್ನೇ ಪಾಲನೆ ಮಾಡಿದ್ದೇವೆʼ ಅಂತ ತಿರುಗಿ ವಾದ ಮಾಡಿದರೆ, ಎಲ್ಲಿದೆ ನೋಡಿ? ಇಲ್ಲಿರುವ ನಿಯಮವೇ ಬೇರೆ, ನೀವು ಮಾಡಿದ್ದೇ ಬೇರೆ ಅಂತ ಅವರನ್ನು ಹೆದರಿಸುತ್ತವೆʼ.

ಕೊನೆಗೂ ಇವತ್ತಿನ ನಿಯಮ ಏನು? ನಿನ್ನೆಯದು ಏನು? ನಾಳೆಯದು ಏನು ಅಂತ ಯಾರಿಗೂ ಸರಿಯಾಗಿ ಗೊತ್ತೇ ಆಗೋದಿಲ್ಲ. ಆ ಸಂಶಯ, ಅಸ್ಪಷ್ಟತೆ, ಸಂದೇಹ, ಅಪಾರದರ್ಶಕತೆಗಳ ವಾತಾವರಣದಲ್ಲಿಯೇ ಜೀವನ ಮುಂದುವರೆಯುತ್ತದೆ. ನಿಯಮ ಪಾಲಿಸುವರಿಗೂ, ಆರಕ್ಷಕರಿಗೂ, ನಿಯಮ ಮುರಿಯುವವರಿಗೂ, ಜನಸಾಮಾನ್ಯರಿಗೂ ಎಲ್ಲರಿಗೂ ಭಯದ ವಾತಾವರಣ ಇರುತ್ತದೆ.

ಇವತ್ತಿನ ಆಗುಹೋಗುಗಳು ನಮಗ ಎನಿಮಲ್ ಫಾರ್ಮಿನ ನೆನಪು ಮಾಡಿಕೊಡತಾವು. ಅಚ್ಛೇ ದಿನ್ ಹೋಗಲಿ, ಬೊಹುತ ಬೂರೆ ದಿನ ಆನೆವಾಲೆ ಹೈಂ ಅಂತ ಅನ್ನಿಸತೈತಿ.


ಇದನ್ನೂ ಓದಿ: ನಾವು ನಂಬರ್ ಒನ್… ಯಾವುದರಲ್ಲಿ – ದೇಶ ಮಾರುವುದರಲ್ಲಿ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...