Homeಮುಖಪುಟಅನಿಮಲ್ ಫಾರ್ಮ್‌ ನೆನಪು ಮಾಡುವ ಸರ್ಕಾರದ ದಿನಕ್ಕೊಂದು ನಿಯಮಗಳು!

ಅನಿಮಲ್ ಫಾರ್ಮ್‌ ನೆನಪು ಮಾಡುವ ಸರ್ಕಾರದ ದಿನಕ್ಕೊಂದು ನಿಯಮಗಳು!

ಇಂದು ಖ್ಯಾತ ಕಾದಂಬರಿಕಾರಿ ಜಾರ್ಜ್ ಆರ್ವೆಲ್ ಹುಟ್ಟಿದ ದಿನ. ಅವರ ಎರಡು ಕೃತಿಗಳನ್ನು ಇಂದಿನ ಭಾರತದ ಸಂದರ್ಭಕ್ಕೆ ಅನ್ವಯಿಸಿದ್ದಾರೆ ಡೇಟಾಮ್ಯಾಟಿಕ್ಸ್‌ರವರು.

- Advertisement -
- Advertisement -

ನಾವು ಸಣ್ಣವರಿದ್ದಾಗ ಭಾರತದ ಸ್ವರೂಪದ ಬಗ್ಗೆ ಒಂದು ಹಾಡು ಹೇಳತಿದ್ದೆವಿ- ಕೇಸರಿ – ಬಿಳಿ – ಹಸಿರು ಬಣ್ಣ ನಡುವೆ ಚಕ್ರವು ಅಂತ ಅದರಾಗ ಒಂದು ಸಾಲು ಇತ್ತು.

ಈ ಬಣ್ಣಗಳ ನಡುವೆ ರಾಜಕೀಯ ಹುಟ್ಟತದ ಅಂತ ನಮಗ ಗೊತ್ತಿರಲಿಲ್ಲ. ಇದರ ಬಗ್ಗೆ ಸ್ವಲ್ಪ ತಿಳಕೊಳ್ಳೋಣ.

ಮೊಟ್ಟ ಮೊದಲಿಗೆ, ಅಂದರ ಲಕ್ಷಾಂತರ ಮಂದಿಗೆ ಕೊರೋನಾ ಬಂದು, ಸಾವಿರಾರು ಜನ ಸತ್ತ ಮ್ಯಾಲೆ, ಭಾರತ ಸರಕಾರದ ಕಣ್ಣು ತೆರದು ಲಾಕಡೌನು (ಕೀಲಿ ಕಿಟಕ್) ಘೋಷಿಸಿತು. ಆಮ್ಯಾಲೆ ದೇಶದ 700 ಜಿಲ್ಲೆಗಳನ್ನ ಕೆಂಪು, ಕಿತ್ತಳೆ ಹಾಗೂ ಹಸಿರು ಅಂತ ಹೇಳಿ ವಿಭಜನೆ ಮಾಡಿತು.

ಅದರ ಹಿಂದಿನ ಕಾರಣ ಅಂದರೆ 1. ಯಾವುದೇ ಜಿಲ್ಲೆಯೊಳಗ ಒಂದು ಕೊರೊನಾ ಪ್ರಕರಣ ಇದ್ದರೂ ಅದು ಕೆಂಪು. 2. ಯಾವುದೇ ಪ್ರಕರಣ ಇರದಿದ್ದರ ಅದು ಹಸಿರು ಹಾಗೂ 3. ಕಳೆದ 14 ದಿನದಲ್ಲಿ ಒಂದೂ ಹೊಸ ಪ್ರಕರಣ ಇರಲಿಲ್ಲ ಅಂದರ ಅದು ಕಿತ್ತಳೆ.

ಕೆಂಪು ಜಿಲ್ಲೆಯೊಳಗ ಯಾವುದೇ ಆರ್ಥಿಕ ಚಟುವಟಿಕೆ ಇಲ್ಲ, ಓಡಾಟ ಇಲ್ಲ. ಕಿತ್ತಳೆಯೊಳಗ ಬಹಳ ಮಟ್ಟಿಗೆ ಪ್ರತಿಬಂಧ ಹಾಗೂ ಹಸಿರಿನೊಳಗ ಎಲ್ಲ ರೀತಿಯ ಚಟುವಟಿಕೆ ಹಾಗೂ ಓಡಾಟ ಮುಕ್ತ.

ಆದರ ಸಮಸ್ಯಾ ಏನಪಾ ಅಂದರ ಎಂದಿನಂತೆ ಕೇಂದ್ರ ಸರಕಾರ ಕೀಲಿ ಕಿಟಕ್ ಆಗಲಿ, ಇತರ ಪರಿಹಾರ ಕ್ರಮಗಳನ್ನಾಗಲೀ ಸಾರಾಸಾರ ವಿಚಾರ ಮಾಡಿ ಮಾಡಿರಲಿಲ್ಲ.

ಇದರಿಂದ ದೊಡ್ಡ ಆಭಾಸ ಆತು. ಒಂದು ಸಾವಿರ ಕೇಸು ಇರೋ ಮುಂಬೈ ಕಿತ್ತಳೆ ವಲಯದಾಗ ಬಂದು, ಕರ್ನಾಟದ 14 ಜಿಲ್ಲೆ ಗಳು ಕೆಂಪು ವಲಯದಾಗ ಬಂದವು.

ಕೇಂದ್ರದ ಆಳುವ ಪಕ್ಷಕ್ಕೆ ಅತಿ ಹೆಚ್ಚು ದೇಣಿಗೆ ಕೊಟ್ಟ ಖಾಸಗಿ ಕಂಪನಿಗಳು ಸರಕಾರದ ಮೇಲೆ ಒತ್ತಡ ಹಾಕಿದರು. ಮುಂಬೈ- ಅಹಮದಾಬಾದು- ಸುರತ ಮುಂತಾದ ಕಡೆ ಕಾರಖಾನೆ- ಅಂಗಡಿ ತೆಗೆಯಬಹುದಾದರೆ ನಮ್ಮಲ್ಲೆ ಯಾಕೆ ಬೇಡ ಅಂತ ತಕರಾರು ಮಾಡಿದರು. ಅವರು ತಮ್ಮ ತಮ್ಮ ನೌಕರರಿಗೆ ಸಂಬಳ ಕೊಟ್ಟಿದ್ದರೋ ಇಲ್ಲೋ, ಆದರೆ ಪಿಎಂ ಕೇರ್ಸ ಅನ್ನೋ ಹುಂಡಿಗೆ ರೊಕ್ಕ ಹಾಕಿ ಭಕ್ತಿಯಿಂದ ಕೈ ಮುಗದಿದ್ದರು.

ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದ್ದಕ್ಕ ಜನರಿಗೆ ತೊಂದರೆ ಆಗಿತ್ತು. ಸರಕಾರಕ್ಕೆ ತೆರಿಗೆ ಸಿಗಲಾರದ ಹಂಗ ಆಗಿತ್ತು. ಸರಕಾರಿ ನೌಕರರಿಗೆ ಸಂಬಳ ತಡಾ ಆಗಲಿಕ್ಕೆ ಸುರು ಆಗಿತ್ತು. ವಿಶ್ವಬ್ಯಾಂಕು, ಮೋಡಿ, ಮತ್ತು ಇತರ ಸಂಸ್ಥೆಗಳು ಭಾರತದ ನಿವ್ವಳ ಉತ್ಪನ್ನ ಶೇಕಡಾ 1-2 ರ ಒಳಗೆ ಇಳಿಯಲಿದೆ ಅಂತ ಭವಿಷ್ಯ ಹೇಳಲಿಕ್ಕೆ ಸುರು ಮಾಡಿದರು.

ಅಷ್ಟರೊಳಗೆ ಪಂತ ಪ್ರಧಾನ ನಮೋ ಅವರು ಮೂರನೇ ಕೀಲಿ ಕಿಟಕ್ ಘೋಷಣೆ ಮಾಡಿದ್ದರು. ಇನ್ನು ಅದನ್ನು ಹೆಂಗ ಸರಿ ಮಾಡಬೇಕು ಅಂತ ಯಾರಿಗೂ ಗೊತ್ತಿರಲಿಲ್ಲ.

ಎಪ್ರಿಲ 30 ರಂದು ಕೇಂದ್ರದ ಕೆಲವು ಅಧಿಕಾರಿಗಳು ಒಂದು ಸಭೆ ನಡೆಸಿದರು. ಅದರಾಗ ಈ ಹಿಂದೆ ಮಾಡಿದ ಕಲರ ಕೋಡಿಂಗ (ವರ್ಣಾಧಾರಿತ ವಿಭಜನೆ) ಸರಿ ಇಲ್ಲ. ಅದನ್ನ ಬದಲಾಯಿಸಬೇಕು. ಬರೇ ಪ್ರಕರಣ ಪತ್ತೆ ಆಗೋದು ಮುಖ್ಯ ಅಲ್ಲ. ಅದರ ಸಂಖ್ಯೆ ಎಷ್ಟು ದಿನದೊಳಗ ದುಪ್ಪಟ್ಟು ಆಗತಾವು, ಎಷ್ಟು ಜನ ಗುಣ ಆಗಿದ್ದಾರ, ರಾಜ್ಯ ಹಾಗೂ ಜಿಲ್ಲೆ ಆಡಳಿತ ಎಷ್ಟರ ಮಟ್ಟಿಗೆ ತಯಾರು ಆಗಿದಾರು ಮುಂತಾದ ವಿಷಯಗಳನ್ನ ಆಧರಿಸಿ ಕೆಂಪು ನಿರ್ಧರಿಸೋಣ. ಕಳೆದ 21 ದಿನದೊಳಗ ಪ್ರಕರಣ ಇಲ್ಲಾ ಅಂದರ ಅದು ಹಸಿರು ಅಂತ ಅನ್ನೋಣ. ಇವು ಎರಡೂ ಇಲ್ಲದವು ಕಿತ್ತಳೆ ಜಿಲ್ಲೆಗಳು ಅಂತ ಆಗಲಿ ಅಂತ ಹೇಳಿದರು.

ರಾಜ್ಯ ಸರಕಾರಗಳು ಕೆಂಪು- ಕಿತ್ತಳೆ ಇದ್ದದ್ದನ್ನು ಹಸಿರು ಮಾಡಬಹುದು. ಆದರೆ ಉಲ್ಟಾ ಮಾಡಲು ಬರೋದಿಲ್ಲ. ಪಟ್ಟಿ ಬದಲಾವಣೆ ಮಾಡೋದಾದರ ನಾವು ಮಾಡತೇವಿ ಅಂದರು. ಕರ್ನಾಟಕದಲ್ಲಿ ಇದ್ದ 14 ಕೆಂಪು ಜಿಲ್ಲೆಗಳ ಸಂಖ್ಯೆ ಮೂರಕ್ಕೆ ಇಳಿಯಿತು.

ಹಿಂಗಾಗಿ ಮೂರನೇ ಹಂತದ ಲಾಕ್ ಡೌನ ಇದ್ದರೂ ಕೂಡ ಕಾರ್ಖಾನೆ- ಅಂಗಡಿ ತೆರೆಯಲಾಯಿತು. ಅತಿ ಕಮ್ಮಿ ಪ್ರಕರಣ ಇದ್ದಾಗ ಬಂದು ಮಾಡಿದ ಅಂಗಡಿಗಳು ಅತಿ ಹೆಚ್ಚು ಪ್ರಕರಣಗಳು ದಾಖಲಾದ ಮೇಲೆ ತೆರೆದುಕೊಂಡವು. ಇದೇ ನಿರ್ಧಾರ ತೊಗೊಳ್ಳೋದು ಆಗಿದ್ದರ ಇಷ್ಟೆಲ್ಲಾ ಸರ್ಕಸ್ಸು ಯಾಕ ಮಾಡಬೇಕಾಗಿತ್ತು. ಮೊದಲನೇ ದಿವಸವೇ ಈ ನಿರ್ಧಾರ ತೊಗೊಂಡಿದ್ದರ ಅಷ್ಟೊಂದು ಆರ್ಥಿಕ ಹಿನ್ನಡೆ ಆಗತಿರಲಿಲ್ಲ.

ಈ ಬಣ್ಣಗಳ ರಾಜಕಾರಣಕ್ಕೆ ವರ್ಣಕಾರಣ ಅನ್ನಬಹುದು. ಯಾಕ ಹಿಂಗಂದರ, ಸರಕಾರದ ನಿರ್ಧಾರಗಳು ವಿಜ್ಞಾನಿಗಳ ಮಾತು ಕೇಳಿ ನಡೆಯುತ್ತಿಲ್ಲ. ಅವು ಕೆಲವು ಐಎಎಸ್ಸು ಅಧಿಕಾರಿಗಳು ಹಾಗೂ ಕೆಲವೇ ಕೆಲವು ರಾಜಕಾರಣಿಗಳ ಮನಸೋಇಚ್ಛಿ ನಿರ್ಧಾರಗಳು. ಇವುಗಳಿಂದ ಯಾರಿಗೂ ಸ್ಪಷ್ಟತೆ ಇಲ್ಲ. ಯಾರಿಗೂ ಇವು ಸರಿಯಾಗಿ ಅರ್ಥವಾಗಿಲ್ಲ. ಇವುಗಳ ಬಗ್ಗೆ ಯಾರೂ ವೈಯಕ್ತಿಯ ಜವಾಬುದಾರಿ ತೊಗೊಳ್ಳೋದಿಲ್ಲ. ಸಧ್ಯಕ್ಕಂತೂ ಈ ಮುಖ ಇಲ್ಲದ ನಿರ್ಧಾರಗಳಿಂದ ನಮಗ ಮುಕ್ತಿ ಇಲ್ಲವೇನೋ.

ದೂರದರ್ಶಿ ಸಾಹಿತಿ ಭವಿಷ್ಯದಲ್ಲಿ ನಡಿಯೋದನ್ನು ಇಂದೇ ನಡೆದಂತೆ ಚಿತ್ರಿಸಿದ ಜಾರ್ಜ್ ಆರ್ವೆಲ್ ಅವರ ಅತಿ ಜನಪ್ರಿಯ ಕಾದಂಬರಿಯ ಹೆಸರು ʻ1984ʼ. ಅದರೊಳಗೆ ಕೆಲವು ಜನ ತಮ್ಮ ದೇಶದ ಜನರನ್ನ ಕತ್ತಲೆಯೊಳಗೆ ಇಟ್ಟು ಸರಕಾರ ನಡೆಸತಾರ. ಕಾಲ್ಪನಿಕ ʻಹಿರಿಯ ಅಣ್ಣʼನ ಹೆದರಿಕೆಯಿಂದ ಜನರ ಮೇಲೆ ದಬ್ಬಾಳಿಕೆ ನಡಸತಾರ.

ಅದೇ ಲೇಖಕನ ಇನ್ನೊಂದು ಕಾದಂಬರಿ ʻಎನಿಮಲ್ ಫಾರ್ಮʼ.

ರೈತನೊಬ್ಬನ ಮನೆಯ ಹಿತ್ತಲದಲ್ಲಿ ನಡೆಯುವ ಕತೆ ಇದು. ಬರೀ ತಿಂದುಂಡು ಹಾಯಾಗಿ ಮಲಗುವ ಚಾಲಾಕಿ ಹಂದಿಗಳು ಸರಕಾರ ರಚಿಸಿ ತಾವೇ ರಾಜರಾಗಿ ಬಿಡತಾರ. ರೈತನ ಹೊಲದಲ್ಲಿ ಕಷ್ಟಪಟ್ಟು ದುಡಿಯುವ ಕುದುರೆಗಳನ್ನು ಕಾರ್ಮಿಕರನ್ನಾಗಿ ಮಾಡಿಕೊಳ್ಳತಾವು. ಆ ತೋಟದ ಮನೆಯಲ್ಲಿ ಒಂದು ಫಲಕ ಇರತೈತಿ. ಅದರ ಮೇಲೆ ಇವತ್ತಿನ ನೀತಿ- ನಿಯಮಗಳು ಅಂತ ಬರದಿರತಾವು. ಅದನ್ನ ಯಾರು ಬರದಿತಾರ ಅಂತ ಯಾರಿಗೂ ಗೊತ್ತಿರೋದಿಲ್ಲ. ಅದರಾಗ ಒಂದು – ಎರಡು ಅಂತ ಹೇಳಿ ನಿಯಮಗಳ ಪಟ್ಟಿನ ಇರತೈತಿ. ಅವನ್ನ ಎಲ್ಲ ಪ್ರಾಣಿಗಳು ಭಕ್ತಿಯಿಂದ ಪಾಲಿಸತಿರತಾವು.

ಆದರ ಅವರ ಮೇಲೆ ದ್ವೇಷ ಸಾಧಿಸೋ ದೃಷ್ಟಿಯಿಂದ ಆ ಹಂದಿಗಳು ಒಂದು ಸಂಚು ರೂಪಿಸತಾವು. ರಾತ್ರಿ ಎಲ್ಲರೂ ಮಲಗಿದಾಗ ಎದ್ದು ಬಂದು ಆ ಪಟ್ಟಿಯ ಕೊನೆಯ ನಿಯಮಗಳನ್ನ ಅಳಿಸಿ ಸಂಪೂರ್ಣ ತದ್ವಿರುದ್ಧ ವಾದ ನಿಯಮಗಳನ್ನ ಬರದು ಬಿಡತಾವು. ಮರು ದಿನ ಬೆಳಿಗ್ಗೆ ಎದ್ದು ನಿನ್ನೆ ಎಲ್ಲರೂ ನಿಯಮ ಉಲ್ಲಂಘಿಸಿದ್ದೀರಿ ಅಂತ ಹೇಳಿ ಶಿಕ್ಷೆ ಕೊಡತಾವು. ಉಳಿದ ಪ್ರಾಣಿಗಳು ʻಇಲ್ಲ. ನಾವು ಇದರಲ್ಲಿ ಬರೆದ ನಿಯಮಗಳನ್ನೇ ಪಾಲನೆ ಮಾಡಿದ್ದೇವೆʼ ಅಂತ ತಿರುಗಿ ವಾದ ಮಾಡಿದರೆ, ಎಲ್ಲಿದೆ ನೋಡಿ? ಇಲ್ಲಿರುವ ನಿಯಮವೇ ಬೇರೆ, ನೀವು ಮಾಡಿದ್ದೇ ಬೇರೆ ಅಂತ ಅವರನ್ನು ಹೆದರಿಸುತ್ತವೆʼ.

ಕೊನೆಗೂ ಇವತ್ತಿನ ನಿಯಮ ಏನು? ನಿನ್ನೆಯದು ಏನು? ನಾಳೆಯದು ಏನು ಅಂತ ಯಾರಿಗೂ ಸರಿಯಾಗಿ ಗೊತ್ತೇ ಆಗೋದಿಲ್ಲ. ಆ ಸಂಶಯ, ಅಸ್ಪಷ್ಟತೆ, ಸಂದೇಹ, ಅಪಾರದರ್ಶಕತೆಗಳ ವಾತಾವರಣದಲ್ಲಿಯೇ ಜೀವನ ಮುಂದುವರೆಯುತ್ತದೆ. ನಿಯಮ ಪಾಲಿಸುವರಿಗೂ, ಆರಕ್ಷಕರಿಗೂ, ನಿಯಮ ಮುರಿಯುವವರಿಗೂ, ಜನಸಾಮಾನ್ಯರಿಗೂ ಎಲ್ಲರಿಗೂ ಭಯದ ವಾತಾವರಣ ಇರುತ್ತದೆ.

ಇವತ್ತಿನ ಆಗುಹೋಗುಗಳು ನಮಗ ಎನಿಮಲ್ ಫಾರ್ಮಿನ ನೆನಪು ಮಾಡಿಕೊಡತಾವು. ಅಚ್ಛೇ ದಿನ್ ಹೋಗಲಿ, ಬೊಹುತ ಬೂರೆ ದಿನ ಆನೆವಾಲೆ ಹೈಂ ಅಂತ ಅನ್ನಿಸತೈತಿ.


ಇದನ್ನೂ ಓದಿ: ನಾವು ನಂಬರ್ ಒನ್… ಯಾವುದರಲ್ಲಿ – ದೇಶ ಮಾರುವುದರಲ್ಲಿ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...