Homeಮುಖಪುಟಅನಿಮಲ್ ಫಾರ್ಮ್‌ ನೆನಪು ಮಾಡುವ ಸರ್ಕಾರದ ದಿನಕ್ಕೊಂದು ನಿಯಮಗಳು!

ಅನಿಮಲ್ ಫಾರ್ಮ್‌ ನೆನಪು ಮಾಡುವ ಸರ್ಕಾರದ ದಿನಕ್ಕೊಂದು ನಿಯಮಗಳು!

ಇಂದು ಖ್ಯಾತ ಕಾದಂಬರಿಕಾರಿ ಜಾರ್ಜ್ ಆರ್ವೆಲ್ ಹುಟ್ಟಿದ ದಿನ. ಅವರ ಎರಡು ಕೃತಿಗಳನ್ನು ಇಂದಿನ ಭಾರತದ ಸಂದರ್ಭಕ್ಕೆ ಅನ್ವಯಿಸಿದ್ದಾರೆ ಡೇಟಾಮ್ಯಾಟಿಕ್ಸ್‌ರವರು.

- Advertisement -
- Advertisement -

ನಾವು ಸಣ್ಣವರಿದ್ದಾಗ ಭಾರತದ ಸ್ವರೂಪದ ಬಗ್ಗೆ ಒಂದು ಹಾಡು ಹೇಳತಿದ್ದೆವಿ- ಕೇಸರಿ – ಬಿಳಿ – ಹಸಿರು ಬಣ್ಣ ನಡುವೆ ಚಕ್ರವು ಅಂತ ಅದರಾಗ ಒಂದು ಸಾಲು ಇತ್ತು.

ಈ ಬಣ್ಣಗಳ ನಡುವೆ ರಾಜಕೀಯ ಹುಟ್ಟತದ ಅಂತ ನಮಗ ಗೊತ್ತಿರಲಿಲ್ಲ. ಇದರ ಬಗ್ಗೆ ಸ್ವಲ್ಪ ತಿಳಕೊಳ್ಳೋಣ.

ಮೊಟ್ಟ ಮೊದಲಿಗೆ, ಅಂದರ ಲಕ್ಷಾಂತರ ಮಂದಿಗೆ ಕೊರೋನಾ ಬಂದು, ಸಾವಿರಾರು ಜನ ಸತ್ತ ಮ್ಯಾಲೆ, ಭಾರತ ಸರಕಾರದ ಕಣ್ಣು ತೆರದು ಲಾಕಡೌನು (ಕೀಲಿ ಕಿಟಕ್) ಘೋಷಿಸಿತು. ಆಮ್ಯಾಲೆ ದೇಶದ 700 ಜಿಲ್ಲೆಗಳನ್ನ ಕೆಂಪು, ಕಿತ್ತಳೆ ಹಾಗೂ ಹಸಿರು ಅಂತ ಹೇಳಿ ವಿಭಜನೆ ಮಾಡಿತು.

ಅದರ ಹಿಂದಿನ ಕಾರಣ ಅಂದರೆ 1. ಯಾವುದೇ ಜಿಲ್ಲೆಯೊಳಗ ಒಂದು ಕೊರೊನಾ ಪ್ರಕರಣ ಇದ್ದರೂ ಅದು ಕೆಂಪು. 2. ಯಾವುದೇ ಪ್ರಕರಣ ಇರದಿದ್ದರ ಅದು ಹಸಿರು ಹಾಗೂ 3. ಕಳೆದ 14 ದಿನದಲ್ಲಿ ಒಂದೂ ಹೊಸ ಪ್ರಕರಣ ಇರಲಿಲ್ಲ ಅಂದರ ಅದು ಕಿತ್ತಳೆ.

ಕೆಂಪು ಜಿಲ್ಲೆಯೊಳಗ ಯಾವುದೇ ಆರ್ಥಿಕ ಚಟುವಟಿಕೆ ಇಲ್ಲ, ಓಡಾಟ ಇಲ್ಲ. ಕಿತ್ತಳೆಯೊಳಗ ಬಹಳ ಮಟ್ಟಿಗೆ ಪ್ರತಿಬಂಧ ಹಾಗೂ ಹಸಿರಿನೊಳಗ ಎಲ್ಲ ರೀತಿಯ ಚಟುವಟಿಕೆ ಹಾಗೂ ಓಡಾಟ ಮುಕ್ತ.

ಆದರ ಸಮಸ್ಯಾ ಏನಪಾ ಅಂದರ ಎಂದಿನಂತೆ ಕೇಂದ್ರ ಸರಕಾರ ಕೀಲಿ ಕಿಟಕ್ ಆಗಲಿ, ಇತರ ಪರಿಹಾರ ಕ್ರಮಗಳನ್ನಾಗಲೀ ಸಾರಾಸಾರ ವಿಚಾರ ಮಾಡಿ ಮಾಡಿರಲಿಲ್ಲ.

ಇದರಿಂದ ದೊಡ್ಡ ಆಭಾಸ ಆತು. ಒಂದು ಸಾವಿರ ಕೇಸು ಇರೋ ಮುಂಬೈ ಕಿತ್ತಳೆ ವಲಯದಾಗ ಬಂದು, ಕರ್ನಾಟದ 14 ಜಿಲ್ಲೆ ಗಳು ಕೆಂಪು ವಲಯದಾಗ ಬಂದವು.

ಕೇಂದ್ರದ ಆಳುವ ಪಕ್ಷಕ್ಕೆ ಅತಿ ಹೆಚ್ಚು ದೇಣಿಗೆ ಕೊಟ್ಟ ಖಾಸಗಿ ಕಂಪನಿಗಳು ಸರಕಾರದ ಮೇಲೆ ಒತ್ತಡ ಹಾಕಿದರು. ಮುಂಬೈ- ಅಹಮದಾಬಾದು- ಸುರತ ಮುಂತಾದ ಕಡೆ ಕಾರಖಾನೆ- ಅಂಗಡಿ ತೆಗೆಯಬಹುದಾದರೆ ನಮ್ಮಲ್ಲೆ ಯಾಕೆ ಬೇಡ ಅಂತ ತಕರಾರು ಮಾಡಿದರು. ಅವರು ತಮ್ಮ ತಮ್ಮ ನೌಕರರಿಗೆ ಸಂಬಳ ಕೊಟ್ಟಿದ್ದರೋ ಇಲ್ಲೋ, ಆದರೆ ಪಿಎಂ ಕೇರ್ಸ ಅನ್ನೋ ಹುಂಡಿಗೆ ರೊಕ್ಕ ಹಾಕಿ ಭಕ್ತಿಯಿಂದ ಕೈ ಮುಗದಿದ್ದರು.

ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದ್ದಕ್ಕ ಜನರಿಗೆ ತೊಂದರೆ ಆಗಿತ್ತು. ಸರಕಾರಕ್ಕೆ ತೆರಿಗೆ ಸಿಗಲಾರದ ಹಂಗ ಆಗಿತ್ತು. ಸರಕಾರಿ ನೌಕರರಿಗೆ ಸಂಬಳ ತಡಾ ಆಗಲಿಕ್ಕೆ ಸುರು ಆಗಿತ್ತು. ವಿಶ್ವಬ್ಯಾಂಕು, ಮೋಡಿ, ಮತ್ತು ಇತರ ಸಂಸ್ಥೆಗಳು ಭಾರತದ ನಿವ್ವಳ ಉತ್ಪನ್ನ ಶೇಕಡಾ 1-2 ರ ಒಳಗೆ ಇಳಿಯಲಿದೆ ಅಂತ ಭವಿಷ್ಯ ಹೇಳಲಿಕ್ಕೆ ಸುರು ಮಾಡಿದರು.

ಅಷ್ಟರೊಳಗೆ ಪಂತ ಪ್ರಧಾನ ನಮೋ ಅವರು ಮೂರನೇ ಕೀಲಿ ಕಿಟಕ್ ಘೋಷಣೆ ಮಾಡಿದ್ದರು. ಇನ್ನು ಅದನ್ನು ಹೆಂಗ ಸರಿ ಮಾಡಬೇಕು ಅಂತ ಯಾರಿಗೂ ಗೊತ್ತಿರಲಿಲ್ಲ.

ಎಪ್ರಿಲ 30 ರಂದು ಕೇಂದ್ರದ ಕೆಲವು ಅಧಿಕಾರಿಗಳು ಒಂದು ಸಭೆ ನಡೆಸಿದರು. ಅದರಾಗ ಈ ಹಿಂದೆ ಮಾಡಿದ ಕಲರ ಕೋಡಿಂಗ (ವರ್ಣಾಧಾರಿತ ವಿಭಜನೆ) ಸರಿ ಇಲ್ಲ. ಅದನ್ನ ಬದಲಾಯಿಸಬೇಕು. ಬರೇ ಪ್ರಕರಣ ಪತ್ತೆ ಆಗೋದು ಮುಖ್ಯ ಅಲ್ಲ. ಅದರ ಸಂಖ್ಯೆ ಎಷ್ಟು ದಿನದೊಳಗ ದುಪ್ಪಟ್ಟು ಆಗತಾವು, ಎಷ್ಟು ಜನ ಗುಣ ಆಗಿದ್ದಾರ, ರಾಜ್ಯ ಹಾಗೂ ಜಿಲ್ಲೆ ಆಡಳಿತ ಎಷ್ಟರ ಮಟ್ಟಿಗೆ ತಯಾರು ಆಗಿದಾರು ಮುಂತಾದ ವಿಷಯಗಳನ್ನ ಆಧರಿಸಿ ಕೆಂಪು ನಿರ್ಧರಿಸೋಣ. ಕಳೆದ 21 ದಿನದೊಳಗ ಪ್ರಕರಣ ಇಲ್ಲಾ ಅಂದರ ಅದು ಹಸಿರು ಅಂತ ಅನ್ನೋಣ. ಇವು ಎರಡೂ ಇಲ್ಲದವು ಕಿತ್ತಳೆ ಜಿಲ್ಲೆಗಳು ಅಂತ ಆಗಲಿ ಅಂತ ಹೇಳಿದರು.

ರಾಜ್ಯ ಸರಕಾರಗಳು ಕೆಂಪು- ಕಿತ್ತಳೆ ಇದ್ದದ್ದನ್ನು ಹಸಿರು ಮಾಡಬಹುದು. ಆದರೆ ಉಲ್ಟಾ ಮಾಡಲು ಬರೋದಿಲ್ಲ. ಪಟ್ಟಿ ಬದಲಾವಣೆ ಮಾಡೋದಾದರ ನಾವು ಮಾಡತೇವಿ ಅಂದರು. ಕರ್ನಾಟಕದಲ್ಲಿ ಇದ್ದ 14 ಕೆಂಪು ಜಿಲ್ಲೆಗಳ ಸಂಖ್ಯೆ ಮೂರಕ್ಕೆ ಇಳಿಯಿತು.

ಹಿಂಗಾಗಿ ಮೂರನೇ ಹಂತದ ಲಾಕ್ ಡೌನ ಇದ್ದರೂ ಕೂಡ ಕಾರ್ಖಾನೆ- ಅಂಗಡಿ ತೆರೆಯಲಾಯಿತು. ಅತಿ ಕಮ್ಮಿ ಪ್ರಕರಣ ಇದ್ದಾಗ ಬಂದು ಮಾಡಿದ ಅಂಗಡಿಗಳು ಅತಿ ಹೆಚ್ಚು ಪ್ರಕರಣಗಳು ದಾಖಲಾದ ಮೇಲೆ ತೆರೆದುಕೊಂಡವು. ಇದೇ ನಿರ್ಧಾರ ತೊಗೊಳ್ಳೋದು ಆಗಿದ್ದರ ಇಷ್ಟೆಲ್ಲಾ ಸರ್ಕಸ್ಸು ಯಾಕ ಮಾಡಬೇಕಾಗಿತ್ತು. ಮೊದಲನೇ ದಿವಸವೇ ಈ ನಿರ್ಧಾರ ತೊಗೊಂಡಿದ್ದರ ಅಷ್ಟೊಂದು ಆರ್ಥಿಕ ಹಿನ್ನಡೆ ಆಗತಿರಲಿಲ್ಲ.

ಈ ಬಣ್ಣಗಳ ರಾಜಕಾರಣಕ್ಕೆ ವರ್ಣಕಾರಣ ಅನ್ನಬಹುದು. ಯಾಕ ಹಿಂಗಂದರ, ಸರಕಾರದ ನಿರ್ಧಾರಗಳು ವಿಜ್ಞಾನಿಗಳ ಮಾತು ಕೇಳಿ ನಡೆಯುತ್ತಿಲ್ಲ. ಅವು ಕೆಲವು ಐಎಎಸ್ಸು ಅಧಿಕಾರಿಗಳು ಹಾಗೂ ಕೆಲವೇ ಕೆಲವು ರಾಜಕಾರಣಿಗಳ ಮನಸೋಇಚ್ಛಿ ನಿರ್ಧಾರಗಳು. ಇವುಗಳಿಂದ ಯಾರಿಗೂ ಸ್ಪಷ್ಟತೆ ಇಲ್ಲ. ಯಾರಿಗೂ ಇವು ಸರಿಯಾಗಿ ಅರ್ಥವಾಗಿಲ್ಲ. ಇವುಗಳ ಬಗ್ಗೆ ಯಾರೂ ವೈಯಕ್ತಿಯ ಜವಾಬುದಾರಿ ತೊಗೊಳ್ಳೋದಿಲ್ಲ. ಸಧ್ಯಕ್ಕಂತೂ ಈ ಮುಖ ಇಲ್ಲದ ನಿರ್ಧಾರಗಳಿಂದ ನಮಗ ಮುಕ್ತಿ ಇಲ್ಲವೇನೋ.

ದೂರದರ್ಶಿ ಸಾಹಿತಿ ಭವಿಷ್ಯದಲ್ಲಿ ನಡಿಯೋದನ್ನು ಇಂದೇ ನಡೆದಂತೆ ಚಿತ್ರಿಸಿದ ಜಾರ್ಜ್ ಆರ್ವೆಲ್ ಅವರ ಅತಿ ಜನಪ್ರಿಯ ಕಾದಂಬರಿಯ ಹೆಸರು ʻ1984ʼ. ಅದರೊಳಗೆ ಕೆಲವು ಜನ ತಮ್ಮ ದೇಶದ ಜನರನ್ನ ಕತ್ತಲೆಯೊಳಗೆ ಇಟ್ಟು ಸರಕಾರ ನಡೆಸತಾರ. ಕಾಲ್ಪನಿಕ ʻಹಿರಿಯ ಅಣ್ಣʼನ ಹೆದರಿಕೆಯಿಂದ ಜನರ ಮೇಲೆ ದಬ್ಬಾಳಿಕೆ ನಡಸತಾರ.

ಅದೇ ಲೇಖಕನ ಇನ್ನೊಂದು ಕಾದಂಬರಿ ʻಎನಿಮಲ್ ಫಾರ್ಮʼ.

ರೈತನೊಬ್ಬನ ಮನೆಯ ಹಿತ್ತಲದಲ್ಲಿ ನಡೆಯುವ ಕತೆ ಇದು. ಬರೀ ತಿಂದುಂಡು ಹಾಯಾಗಿ ಮಲಗುವ ಚಾಲಾಕಿ ಹಂದಿಗಳು ಸರಕಾರ ರಚಿಸಿ ತಾವೇ ರಾಜರಾಗಿ ಬಿಡತಾರ. ರೈತನ ಹೊಲದಲ್ಲಿ ಕಷ್ಟಪಟ್ಟು ದುಡಿಯುವ ಕುದುರೆಗಳನ್ನು ಕಾರ್ಮಿಕರನ್ನಾಗಿ ಮಾಡಿಕೊಳ್ಳತಾವು. ಆ ತೋಟದ ಮನೆಯಲ್ಲಿ ಒಂದು ಫಲಕ ಇರತೈತಿ. ಅದರ ಮೇಲೆ ಇವತ್ತಿನ ನೀತಿ- ನಿಯಮಗಳು ಅಂತ ಬರದಿರತಾವು. ಅದನ್ನ ಯಾರು ಬರದಿತಾರ ಅಂತ ಯಾರಿಗೂ ಗೊತ್ತಿರೋದಿಲ್ಲ. ಅದರಾಗ ಒಂದು – ಎರಡು ಅಂತ ಹೇಳಿ ನಿಯಮಗಳ ಪಟ್ಟಿನ ಇರತೈತಿ. ಅವನ್ನ ಎಲ್ಲ ಪ್ರಾಣಿಗಳು ಭಕ್ತಿಯಿಂದ ಪಾಲಿಸತಿರತಾವು.

ಆದರ ಅವರ ಮೇಲೆ ದ್ವೇಷ ಸಾಧಿಸೋ ದೃಷ್ಟಿಯಿಂದ ಆ ಹಂದಿಗಳು ಒಂದು ಸಂಚು ರೂಪಿಸತಾವು. ರಾತ್ರಿ ಎಲ್ಲರೂ ಮಲಗಿದಾಗ ಎದ್ದು ಬಂದು ಆ ಪಟ್ಟಿಯ ಕೊನೆಯ ನಿಯಮಗಳನ್ನ ಅಳಿಸಿ ಸಂಪೂರ್ಣ ತದ್ವಿರುದ್ಧ ವಾದ ನಿಯಮಗಳನ್ನ ಬರದು ಬಿಡತಾವು. ಮರು ದಿನ ಬೆಳಿಗ್ಗೆ ಎದ್ದು ನಿನ್ನೆ ಎಲ್ಲರೂ ನಿಯಮ ಉಲ್ಲಂಘಿಸಿದ್ದೀರಿ ಅಂತ ಹೇಳಿ ಶಿಕ್ಷೆ ಕೊಡತಾವು. ಉಳಿದ ಪ್ರಾಣಿಗಳು ʻಇಲ್ಲ. ನಾವು ಇದರಲ್ಲಿ ಬರೆದ ನಿಯಮಗಳನ್ನೇ ಪಾಲನೆ ಮಾಡಿದ್ದೇವೆʼ ಅಂತ ತಿರುಗಿ ವಾದ ಮಾಡಿದರೆ, ಎಲ್ಲಿದೆ ನೋಡಿ? ಇಲ್ಲಿರುವ ನಿಯಮವೇ ಬೇರೆ, ನೀವು ಮಾಡಿದ್ದೇ ಬೇರೆ ಅಂತ ಅವರನ್ನು ಹೆದರಿಸುತ್ತವೆʼ.

ಕೊನೆಗೂ ಇವತ್ತಿನ ನಿಯಮ ಏನು? ನಿನ್ನೆಯದು ಏನು? ನಾಳೆಯದು ಏನು ಅಂತ ಯಾರಿಗೂ ಸರಿಯಾಗಿ ಗೊತ್ತೇ ಆಗೋದಿಲ್ಲ. ಆ ಸಂಶಯ, ಅಸ್ಪಷ್ಟತೆ, ಸಂದೇಹ, ಅಪಾರದರ್ಶಕತೆಗಳ ವಾತಾವರಣದಲ್ಲಿಯೇ ಜೀವನ ಮುಂದುವರೆಯುತ್ತದೆ. ನಿಯಮ ಪಾಲಿಸುವರಿಗೂ, ಆರಕ್ಷಕರಿಗೂ, ನಿಯಮ ಮುರಿಯುವವರಿಗೂ, ಜನಸಾಮಾನ್ಯರಿಗೂ ಎಲ್ಲರಿಗೂ ಭಯದ ವಾತಾವರಣ ಇರುತ್ತದೆ.

ಇವತ್ತಿನ ಆಗುಹೋಗುಗಳು ನಮಗ ಎನಿಮಲ್ ಫಾರ್ಮಿನ ನೆನಪು ಮಾಡಿಕೊಡತಾವು. ಅಚ್ಛೇ ದಿನ್ ಹೋಗಲಿ, ಬೊಹುತ ಬೂರೆ ದಿನ ಆನೆವಾಲೆ ಹೈಂ ಅಂತ ಅನ್ನಿಸತೈತಿ.


ಇದನ್ನೂ ಓದಿ: ನಾವು ನಂಬರ್ ಒನ್… ಯಾವುದರಲ್ಲಿ – ದೇಶ ಮಾರುವುದರಲ್ಲಿ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...