Homeಮುಖಪುಟಅನಿಮಲ್ ಫಾರ್ಮ್‌ ನೆನಪು ಮಾಡುವ ಸರ್ಕಾರದ ದಿನಕ್ಕೊಂದು ನಿಯಮಗಳು!

ಅನಿಮಲ್ ಫಾರ್ಮ್‌ ನೆನಪು ಮಾಡುವ ಸರ್ಕಾರದ ದಿನಕ್ಕೊಂದು ನಿಯಮಗಳು!

ಇಂದು ಖ್ಯಾತ ಕಾದಂಬರಿಕಾರಿ ಜಾರ್ಜ್ ಆರ್ವೆಲ್ ಹುಟ್ಟಿದ ದಿನ. ಅವರ ಎರಡು ಕೃತಿಗಳನ್ನು ಇಂದಿನ ಭಾರತದ ಸಂದರ್ಭಕ್ಕೆ ಅನ್ವಯಿಸಿದ್ದಾರೆ ಡೇಟಾಮ್ಯಾಟಿಕ್ಸ್‌ರವರು.

- Advertisement -
- Advertisement -

ನಾವು ಸಣ್ಣವರಿದ್ದಾಗ ಭಾರತದ ಸ್ವರೂಪದ ಬಗ್ಗೆ ಒಂದು ಹಾಡು ಹೇಳತಿದ್ದೆವಿ- ಕೇಸರಿ – ಬಿಳಿ – ಹಸಿರು ಬಣ್ಣ ನಡುವೆ ಚಕ್ರವು ಅಂತ ಅದರಾಗ ಒಂದು ಸಾಲು ಇತ್ತು.

ಈ ಬಣ್ಣಗಳ ನಡುವೆ ರಾಜಕೀಯ ಹುಟ್ಟತದ ಅಂತ ನಮಗ ಗೊತ್ತಿರಲಿಲ್ಲ. ಇದರ ಬಗ್ಗೆ ಸ್ವಲ್ಪ ತಿಳಕೊಳ್ಳೋಣ.

ಮೊಟ್ಟ ಮೊದಲಿಗೆ, ಅಂದರ ಲಕ್ಷಾಂತರ ಮಂದಿಗೆ ಕೊರೋನಾ ಬಂದು, ಸಾವಿರಾರು ಜನ ಸತ್ತ ಮ್ಯಾಲೆ, ಭಾರತ ಸರಕಾರದ ಕಣ್ಣು ತೆರದು ಲಾಕಡೌನು (ಕೀಲಿ ಕಿಟಕ್) ಘೋಷಿಸಿತು. ಆಮ್ಯಾಲೆ ದೇಶದ 700 ಜಿಲ್ಲೆಗಳನ್ನ ಕೆಂಪು, ಕಿತ್ತಳೆ ಹಾಗೂ ಹಸಿರು ಅಂತ ಹೇಳಿ ವಿಭಜನೆ ಮಾಡಿತು.

ಅದರ ಹಿಂದಿನ ಕಾರಣ ಅಂದರೆ 1. ಯಾವುದೇ ಜಿಲ್ಲೆಯೊಳಗ ಒಂದು ಕೊರೊನಾ ಪ್ರಕರಣ ಇದ್ದರೂ ಅದು ಕೆಂಪು. 2. ಯಾವುದೇ ಪ್ರಕರಣ ಇರದಿದ್ದರ ಅದು ಹಸಿರು ಹಾಗೂ 3. ಕಳೆದ 14 ದಿನದಲ್ಲಿ ಒಂದೂ ಹೊಸ ಪ್ರಕರಣ ಇರಲಿಲ್ಲ ಅಂದರ ಅದು ಕಿತ್ತಳೆ.

ಕೆಂಪು ಜಿಲ್ಲೆಯೊಳಗ ಯಾವುದೇ ಆರ್ಥಿಕ ಚಟುವಟಿಕೆ ಇಲ್ಲ, ಓಡಾಟ ಇಲ್ಲ. ಕಿತ್ತಳೆಯೊಳಗ ಬಹಳ ಮಟ್ಟಿಗೆ ಪ್ರತಿಬಂಧ ಹಾಗೂ ಹಸಿರಿನೊಳಗ ಎಲ್ಲ ರೀತಿಯ ಚಟುವಟಿಕೆ ಹಾಗೂ ಓಡಾಟ ಮುಕ್ತ.

ಆದರ ಸಮಸ್ಯಾ ಏನಪಾ ಅಂದರ ಎಂದಿನಂತೆ ಕೇಂದ್ರ ಸರಕಾರ ಕೀಲಿ ಕಿಟಕ್ ಆಗಲಿ, ಇತರ ಪರಿಹಾರ ಕ್ರಮಗಳನ್ನಾಗಲೀ ಸಾರಾಸಾರ ವಿಚಾರ ಮಾಡಿ ಮಾಡಿರಲಿಲ್ಲ.

ಇದರಿಂದ ದೊಡ್ಡ ಆಭಾಸ ಆತು. ಒಂದು ಸಾವಿರ ಕೇಸು ಇರೋ ಮುಂಬೈ ಕಿತ್ತಳೆ ವಲಯದಾಗ ಬಂದು, ಕರ್ನಾಟದ 14 ಜಿಲ್ಲೆ ಗಳು ಕೆಂಪು ವಲಯದಾಗ ಬಂದವು.

ಕೇಂದ್ರದ ಆಳುವ ಪಕ್ಷಕ್ಕೆ ಅತಿ ಹೆಚ್ಚು ದೇಣಿಗೆ ಕೊಟ್ಟ ಖಾಸಗಿ ಕಂಪನಿಗಳು ಸರಕಾರದ ಮೇಲೆ ಒತ್ತಡ ಹಾಕಿದರು. ಮುಂಬೈ- ಅಹಮದಾಬಾದು- ಸುರತ ಮುಂತಾದ ಕಡೆ ಕಾರಖಾನೆ- ಅಂಗಡಿ ತೆಗೆಯಬಹುದಾದರೆ ನಮ್ಮಲ್ಲೆ ಯಾಕೆ ಬೇಡ ಅಂತ ತಕರಾರು ಮಾಡಿದರು. ಅವರು ತಮ್ಮ ತಮ್ಮ ನೌಕರರಿಗೆ ಸಂಬಳ ಕೊಟ್ಟಿದ್ದರೋ ಇಲ್ಲೋ, ಆದರೆ ಪಿಎಂ ಕೇರ್ಸ ಅನ್ನೋ ಹುಂಡಿಗೆ ರೊಕ್ಕ ಹಾಕಿ ಭಕ್ತಿಯಿಂದ ಕೈ ಮುಗದಿದ್ದರು.

ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದ್ದಕ್ಕ ಜನರಿಗೆ ತೊಂದರೆ ಆಗಿತ್ತು. ಸರಕಾರಕ್ಕೆ ತೆರಿಗೆ ಸಿಗಲಾರದ ಹಂಗ ಆಗಿತ್ತು. ಸರಕಾರಿ ನೌಕರರಿಗೆ ಸಂಬಳ ತಡಾ ಆಗಲಿಕ್ಕೆ ಸುರು ಆಗಿತ್ತು. ವಿಶ್ವಬ್ಯಾಂಕು, ಮೋಡಿ, ಮತ್ತು ಇತರ ಸಂಸ್ಥೆಗಳು ಭಾರತದ ನಿವ್ವಳ ಉತ್ಪನ್ನ ಶೇಕಡಾ 1-2 ರ ಒಳಗೆ ಇಳಿಯಲಿದೆ ಅಂತ ಭವಿಷ್ಯ ಹೇಳಲಿಕ್ಕೆ ಸುರು ಮಾಡಿದರು.

ಅಷ್ಟರೊಳಗೆ ಪಂತ ಪ್ರಧಾನ ನಮೋ ಅವರು ಮೂರನೇ ಕೀಲಿ ಕಿಟಕ್ ಘೋಷಣೆ ಮಾಡಿದ್ದರು. ಇನ್ನು ಅದನ್ನು ಹೆಂಗ ಸರಿ ಮಾಡಬೇಕು ಅಂತ ಯಾರಿಗೂ ಗೊತ್ತಿರಲಿಲ್ಲ.

ಎಪ್ರಿಲ 30 ರಂದು ಕೇಂದ್ರದ ಕೆಲವು ಅಧಿಕಾರಿಗಳು ಒಂದು ಸಭೆ ನಡೆಸಿದರು. ಅದರಾಗ ಈ ಹಿಂದೆ ಮಾಡಿದ ಕಲರ ಕೋಡಿಂಗ (ವರ್ಣಾಧಾರಿತ ವಿಭಜನೆ) ಸರಿ ಇಲ್ಲ. ಅದನ್ನ ಬದಲಾಯಿಸಬೇಕು. ಬರೇ ಪ್ರಕರಣ ಪತ್ತೆ ಆಗೋದು ಮುಖ್ಯ ಅಲ್ಲ. ಅದರ ಸಂಖ್ಯೆ ಎಷ್ಟು ದಿನದೊಳಗ ದುಪ್ಪಟ್ಟು ಆಗತಾವು, ಎಷ್ಟು ಜನ ಗುಣ ಆಗಿದ್ದಾರ, ರಾಜ್ಯ ಹಾಗೂ ಜಿಲ್ಲೆ ಆಡಳಿತ ಎಷ್ಟರ ಮಟ್ಟಿಗೆ ತಯಾರು ಆಗಿದಾರು ಮುಂತಾದ ವಿಷಯಗಳನ್ನ ಆಧರಿಸಿ ಕೆಂಪು ನಿರ್ಧರಿಸೋಣ. ಕಳೆದ 21 ದಿನದೊಳಗ ಪ್ರಕರಣ ಇಲ್ಲಾ ಅಂದರ ಅದು ಹಸಿರು ಅಂತ ಅನ್ನೋಣ. ಇವು ಎರಡೂ ಇಲ್ಲದವು ಕಿತ್ತಳೆ ಜಿಲ್ಲೆಗಳು ಅಂತ ಆಗಲಿ ಅಂತ ಹೇಳಿದರು.

ರಾಜ್ಯ ಸರಕಾರಗಳು ಕೆಂಪು- ಕಿತ್ತಳೆ ಇದ್ದದ್ದನ್ನು ಹಸಿರು ಮಾಡಬಹುದು. ಆದರೆ ಉಲ್ಟಾ ಮಾಡಲು ಬರೋದಿಲ್ಲ. ಪಟ್ಟಿ ಬದಲಾವಣೆ ಮಾಡೋದಾದರ ನಾವು ಮಾಡತೇವಿ ಅಂದರು. ಕರ್ನಾಟಕದಲ್ಲಿ ಇದ್ದ 14 ಕೆಂಪು ಜಿಲ್ಲೆಗಳ ಸಂಖ್ಯೆ ಮೂರಕ್ಕೆ ಇಳಿಯಿತು.

ಹಿಂಗಾಗಿ ಮೂರನೇ ಹಂತದ ಲಾಕ್ ಡೌನ ಇದ್ದರೂ ಕೂಡ ಕಾರ್ಖಾನೆ- ಅಂಗಡಿ ತೆರೆಯಲಾಯಿತು. ಅತಿ ಕಮ್ಮಿ ಪ್ರಕರಣ ಇದ್ದಾಗ ಬಂದು ಮಾಡಿದ ಅಂಗಡಿಗಳು ಅತಿ ಹೆಚ್ಚು ಪ್ರಕರಣಗಳು ದಾಖಲಾದ ಮೇಲೆ ತೆರೆದುಕೊಂಡವು. ಇದೇ ನಿರ್ಧಾರ ತೊಗೊಳ್ಳೋದು ಆಗಿದ್ದರ ಇಷ್ಟೆಲ್ಲಾ ಸರ್ಕಸ್ಸು ಯಾಕ ಮಾಡಬೇಕಾಗಿತ್ತು. ಮೊದಲನೇ ದಿವಸವೇ ಈ ನಿರ್ಧಾರ ತೊಗೊಂಡಿದ್ದರ ಅಷ್ಟೊಂದು ಆರ್ಥಿಕ ಹಿನ್ನಡೆ ಆಗತಿರಲಿಲ್ಲ.

ಈ ಬಣ್ಣಗಳ ರಾಜಕಾರಣಕ್ಕೆ ವರ್ಣಕಾರಣ ಅನ್ನಬಹುದು. ಯಾಕ ಹಿಂಗಂದರ, ಸರಕಾರದ ನಿರ್ಧಾರಗಳು ವಿಜ್ಞಾನಿಗಳ ಮಾತು ಕೇಳಿ ನಡೆಯುತ್ತಿಲ್ಲ. ಅವು ಕೆಲವು ಐಎಎಸ್ಸು ಅಧಿಕಾರಿಗಳು ಹಾಗೂ ಕೆಲವೇ ಕೆಲವು ರಾಜಕಾರಣಿಗಳ ಮನಸೋಇಚ್ಛಿ ನಿರ್ಧಾರಗಳು. ಇವುಗಳಿಂದ ಯಾರಿಗೂ ಸ್ಪಷ್ಟತೆ ಇಲ್ಲ. ಯಾರಿಗೂ ಇವು ಸರಿಯಾಗಿ ಅರ್ಥವಾಗಿಲ್ಲ. ಇವುಗಳ ಬಗ್ಗೆ ಯಾರೂ ವೈಯಕ್ತಿಯ ಜವಾಬುದಾರಿ ತೊಗೊಳ್ಳೋದಿಲ್ಲ. ಸಧ್ಯಕ್ಕಂತೂ ಈ ಮುಖ ಇಲ್ಲದ ನಿರ್ಧಾರಗಳಿಂದ ನಮಗ ಮುಕ್ತಿ ಇಲ್ಲವೇನೋ.

ದೂರದರ್ಶಿ ಸಾಹಿತಿ ಭವಿಷ್ಯದಲ್ಲಿ ನಡಿಯೋದನ್ನು ಇಂದೇ ನಡೆದಂತೆ ಚಿತ್ರಿಸಿದ ಜಾರ್ಜ್ ಆರ್ವೆಲ್ ಅವರ ಅತಿ ಜನಪ್ರಿಯ ಕಾದಂಬರಿಯ ಹೆಸರು ʻ1984ʼ. ಅದರೊಳಗೆ ಕೆಲವು ಜನ ತಮ್ಮ ದೇಶದ ಜನರನ್ನ ಕತ್ತಲೆಯೊಳಗೆ ಇಟ್ಟು ಸರಕಾರ ನಡೆಸತಾರ. ಕಾಲ್ಪನಿಕ ʻಹಿರಿಯ ಅಣ್ಣʼನ ಹೆದರಿಕೆಯಿಂದ ಜನರ ಮೇಲೆ ದಬ್ಬಾಳಿಕೆ ನಡಸತಾರ.

ಅದೇ ಲೇಖಕನ ಇನ್ನೊಂದು ಕಾದಂಬರಿ ʻಎನಿಮಲ್ ಫಾರ್ಮʼ.

ರೈತನೊಬ್ಬನ ಮನೆಯ ಹಿತ್ತಲದಲ್ಲಿ ನಡೆಯುವ ಕತೆ ಇದು. ಬರೀ ತಿಂದುಂಡು ಹಾಯಾಗಿ ಮಲಗುವ ಚಾಲಾಕಿ ಹಂದಿಗಳು ಸರಕಾರ ರಚಿಸಿ ತಾವೇ ರಾಜರಾಗಿ ಬಿಡತಾರ. ರೈತನ ಹೊಲದಲ್ಲಿ ಕಷ್ಟಪಟ್ಟು ದುಡಿಯುವ ಕುದುರೆಗಳನ್ನು ಕಾರ್ಮಿಕರನ್ನಾಗಿ ಮಾಡಿಕೊಳ್ಳತಾವು. ಆ ತೋಟದ ಮನೆಯಲ್ಲಿ ಒಂದು ಫಲಕ ಇರತೈತಿ. ಅದರ ಮೇಲೆ ಇವತ್ತಿನ ನೀತಿ- ನಿಯಮಗಳು ಅಂತ ಬರದಿರತಾವು. ಅದನ್ನ ಯಾರು ಬರದಿತಾರ ಅಂತ ಯಾರಿಗೂ ಗೊತ್ತಿರೋದಿಲ್ಲ. ಅದರಾಗ ಒಂದು – ಎರಡು ಅಂತ ಹೇಳಿ ನಿಯಮಗಳ ಪಟ್ಟಿನ ಇರತೈತಿ. ಅವನ್ನ ಎಲ್ಲ ಪ್ರಾಣಿಗಳು ಭಕ್ತಿಯಿಂದ ಪಾಲಿಸತಿರತಾವು.

ಆದರ ಅವರ ಮೇಲೆ ದ್ವೇಷ ಸಾಧಿಸೋ ದೃಷ್ಟಿಯಿಂದ ಆ ಹಂದಿಗಳು ಒಂದು ಸಂಚು ರೂಪಿಸತಾವು. ರಾತ್ರಿ ಎಲ್ಲರೂ ಮಲಗಿದಾಗ ಎದ್ದು ಬಂದು ಆ ಪಟ್ಟಿಯ ಕೊನೆಯ ನಿಯಮಗಳನ್ನ ಅಳಿಸಿ ಸಂಪೂರ್ಣ ತದ್ವಿರುದ್ಧ ವಾದ ನಿಯಮಗಳನ್ನ ಬರದು ಬಿಡತಾವು. ಮರು ದಿನ ಬೆಳಿಗ್ಗೆ ಎದ್ದು ನಿನ್ನೆ ಎಲ್ಲರೂ ನಿಯಮ ಉಲ್ಲಂಘಿಸಿದ್ದೀರಿ ಅಂತ ಹೇಳಿ ಶಿಕ್ಷೆ ಕೊಡತಾವು. ಉಳಿದ ಪ್ರಾಣಿಗಳು ʻಇಲ್ಲ. ನಾವು ಇದರಲ್ಲಿ ಬರೆದ ನಿಯಮಗಳನ್ನೇ ಪಾಲನೆ ಮಾಡಿದ್ದೇವೆʼ ಅಂತ ತಿರುಗಿ ವಾದ ಮಾಡಿದರೆ, ಎಲ್ಲಿದೆ ನೋಡಿ? ಇಲ್ಲಿರುವ ನಿಯಮವೇ ಬೇರೆ, ನೀವು ಮಾಡಿದ್ದೇ ಬೇರೆ ಅಂತ ಅವರನ್ನು ಹೆದರಿಸುತ್ತವೆʼ.

ಕೊನೆಗೂ ಇವತ್ತಿನ ನಿಯಮ ಏನು? ನಿನ್ನೆಯದು ಏನು? ನಾಳೆಯದು ಏನು ಅಂತ ಯಾರಿಗೂ ಸರಿಯಾಗಿ ಗೊತ್ತೇ ಆಗೋದಿಲ್ಲ. ಆ ಸಂಶಯ, ಅಸ್ಪಷ್ಟತೆ, ಸಂದೇಹ, ಅಪಾರದರ್ಶಕತೆಗಳ ವಾತಾವರಣದಲ್ಲಿಯೇ ಜೀವನ ಮುಂದುವರೆಯುತ್ತದೆ. ನಿಯಮ ಪಾಲಿಸುವರಿಗೂ, ಆರಕ್ಷಕರಿಗೂ, ನಿಯಮ ಮುರಿಯುವವರಿಗೂ, ಜನಸಾಮಾನ್ಯರಿಗೂ ಎಲ್ಲರಿಗೂ ಭಯದ ವಾತಾವರಣ ಇರುತ್ತದೆ.

ಇವತ್ತಿನ ಆಗುಹೋಗುಗಳು ನಮಗ ಎನಿಮಲ್ ಫಾರ್ಮಿನ ನೆನಪು ಮಾಡಿಕೊಡತಾವು. ಅಚ್ಛೇ ದಿನ್ ಹೋಗಲಿ, ಬೊಹುತ ಬೂರೆ ದಿನ ಆನೆವಾಲೆ ಹೈಂ ಅಂತ ಅನ್ನಿಸತೈತಿ.


ಇದನ್ನೂ ಓದಿ: ನಾವು ನಂಬರ್ ಒನ್… ಯಾವುದರಲ್ಲಿ – ದೇಶ ಮಾರುವುದರಲ್ಲಿ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...