Homeಅಂತರಾಷ್ಟ್ರೀಯಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

- Advertisement -
- Advertisement -

ಜರ್ಮನಿಯಲ್ಲಿ ಭಾನುವಾರ (ಫೆ.23) ನಡೆದ ರಾಷ್ಟ್ರೀಯ ಚುನಾವಣೆಯಲ್ಲಿ ಫ್ರೆಡ್ರಿಕ್ ಮರ್ಝ್‌  ನೇತೃತ್ವದ ಸಂಪ್ರದಾಯವಾದಿ ಮೈತ್ರಿಕೂಟ ಗೆಲುವು ಸಾಧಿಸಿದೆ. ತೀವ್ರ ಬಲಪಂಥೀಯ ಪಕ್ಷ ಆಲ್ಟರ್ನೇಟಿವ್ ಫಾರ್ ಜರ್ಮನಿ (ಎಎಫ್‌ಡಿ) ಮತ ಗಳಿಕೆಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಅಂತಿಮ ಮತ ಎಣಿಕೆಯ ಫಲಿತಾಂಶದ ಪ್ರಕಾರ, ಎಎಫ್‌ಡಿ ತನ್ನ ಮತ ಗಳಿಕೆಯನ್ನು ಈ ಬಾರಿ ದ್ವಿಗುಣಗೊಳಿಸಿಕೊಂಡಿದ್ದು, ಶೇ.19.5ರಷ್ಟು ಪಡೆದುಕೊಂಡಿದೆ. ಎಎಫ್‌ಡಿ ಜರ್ಮನಿಯ ನಾಗರಿಕರಲ್ಲಿ ಬಿತ್ತಿದ ವಲಸೆ ಮತ್ತು ಭದ್ರತೆ ಕುರಿತ ಆತಂಕ ಮತಗಳಿಕೆ ಹೆಚ್ಚಿಸಲು ಕಾರಣವಾಗಿದೆ ಎಂದು ವರದಿಗಳು ಹೇಳಿವೆ.

ಮೆರ್ಜ್ ಅವರ ಸಿಡಿಯು/ಸಿಎಸ್‌ಯು ಮೈತ್ರಿಕೂಟ ಶೇ.28.5ರಷ್ಟು ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದೆ. ನಿರ್ಗಮಿತ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಸೆಂಟರ್-ಲೆಫ್ಟ್ ಸೋಶಿಯಲ್ ಡೆಮಾಕ್ರೇಟ್ಸ್ (ಎಸ್‌ಪಿಡಿ) ಶೇ.16ರಷ್ಟು ಮಗಳನ್ನು ಮಾತ್ರ ಗಳಿಸಲು ಸಫಲವಾಗಿದೆ.

ಮಾಜಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರ ಪಕ್ಷದ ದೀರ್ಘಕಾಲದ ಪ್ರತಿಸ್ಪರ್ಧಿ ಮೆರ್ಜ್, ಅಕ್ರಮ ವಲಸೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ತನ್ನ ಕರಾಳ ನಾಜಿ ಇತಿಹಾಸಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಇನ್ನೂ ಪ್ರಯತ್ನಿಸುತ್ತಿರುವ ದೇಶದಲ್ಲಿ ಎಎಫ್‌ಡಿಯ ಮತಗಳಿಕೆ ಎಲ್ಲರನ್ನು ಆಶ್ವರ್ಯಗೊಳಿಸಿದೆ. ಏಕೆಂದರೆ, ಸಿಡಿಯು/ಸಿಎಎಸ್‌ಯು ಸೇರಿದಂತೆ ಎಲ್ಲಾ ಪಕ್ಷಗಳು ಎಎಫ್‌ಡಿ ಹೆಚ್ಚು ಮತಗಳಿಸದಂತೆ ತಡೆಯಲು ಪ್ರಯತ್ನಿಸಿತ್ತು.

ಸದ್ಯಕ್ಕೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮಿತ್ರಪಕ್ಷಗಳ ಬೆಂಬಲವನ್ನು ಹೊಂದಿರುವ ಎಎಫ್‌ಡಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಸಜ್ಜಾಗಿದೆ. ಇತರ ಎಲ್ಲಾ ಪಕ್ಷಗಳು ಅದನ್ನು ಅಧಿಕಾರದಿಂದ ದೂರವಿಡುವ ಪ್ರತಿಜ್ಞೆ ಮಾಡಿತ್ತು.

ಆದರೆ, ಎಎಫ್‌ಡಿ ನಾಯಕಿ ಆಲಿಸ್ ವೀಡೆಲ್ ಐತಿಹಾಸಿಕ ಫಲಿತಾಂಶವನ್ನು ಶ್ಲಾಘಿಸಿದ್ದು, ನಮ್ಮ ಪಕ್ಷ ಸಿಡಿಯು/ಸಿಎಸ್‌ಯು ಜೊತೆ ಸೇರಿ ಆಡಳಿತ ನಡೆಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಈಗ ಉಸ್ತುವಾರಿ ಚಾನ್ಸೆಲರ್ ಆಗಿರುವ ನಿರ್ಗಮಿತ ಸ್ಕೋಲ್ಜ್ ಅವರಿಂದ ಅಧಿಕಾರವಹಿಸಿಕೊಳ್ಳಲಿರುವ ಮೆರ್ಜ್ ಅವರು ಹೊಸ ಸಮ್ಮಿಶ್ರ ಸರ್ಕಾರ ರಚಿಸಬೇಕಿದೆ. ಈಸ್ಟರ್ ವೇಳೆಗೆ ಅವರ ಸರ್ಕಾರ ರಚಿಸುವ ಸಾಧ್ಯತೆ ಇದೆ. ಅದುವರೆಗೆ ಜರ್ಮನಿಯ ಸರ್ಕಾರವಿಲ್ಲದೆ ಮುನ್ನಡೆಯಬೇಕಿದೆ.

“ಸಮ್ಮಿಶ್ರ ಸರ್ಕಾರ ರಚಿಸುವ ಸಂಬಂಧ ಸುದೀರ್ಘ ಮಾತುಕತೆ ಮತ್ತು ವಿಳಂಬ ನೀತಿ ಸರಿಯಲ್ಲ. ಹೊರಗಿನ ಜಗತ್ತು ನಮ್ಮನ್ನು ಕಾಯುತ್ತಾ ಕೂತಿಲ್ಲ. ಶೀಘ್ರದಲ್ಲೇ ಸರ್ಕಾರ ರಚಿಸಬೇಕಿದೆ” ಎಂದು ವಿಜಯ ಘೋಷಣೆ ಬಳಿಕ ಮೆರ್ಜ್ ಹೇಳಿದ್ದಾರೆ.

ಬಹುಮತ ಪಡೆಯಲು ಮೆರ್ಜ್ ಅವರು ಮೊದಲು ಎಸ್‌ಪಿಡಿಯನ್ನು ಸಂಪರ್ಕಿಸುವ ಸಾಧ್ಯತೆ ಇದೆ. ಆದರೆ, ಜರ್ಮನಿಯ ಸಾಂಪ್ರದಾಯಿಕ ಕಾರ್ಮಿಕರ ಪಕ್ಷವನ್ನು ಐತಿಹಾಸಿಕವಾಗಿ ಕಳಪೆ ಫಲಿತಾಂಶಕ್ಕೆ ಕೊಂಡೊಯ್ದ ಸ್ಕೋಲ್ಜ್ ಅವರನ್ನು ಹೊರಗಿಟ್ಟು ಮಾತುಕತೆ ನಡೆಯಬಹುದು ಎನ್ನಲಾಗಿದೆ.

ಬಹುಮತ ಪಡೆಯಲು ಸ್ಥಾನಗಳನ್ನು ಪಡೆಯಲು ಮೆರ್ಜ್ ಗ್ರೀನ್ಸ್ ಅನ್ನು ಕೂಡ ಸಂಪರ್ಕಿಸಬಹುದು. ಗ್ರೀನ್ಸ್  ಚುನಾವಣೆಯಲ್ಲಿ ಶೇಖಡ 12 ರಷ್ಟು ಮತಗಳಿಸಿದೆ. ಆದರೆ, ಸಿಡಿಯುನ ಬವೇರಿಯನ್ ಸಹೋದರ ಪಕ್ಷವಾದ ಸಿಎಸ್‌ಯು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಯುಎಸ್‌ಏಡ್‌ನ 2 ಸಾವಿರ ಉದ್ಯೋಗಿಗಳನ್ನು ವಜಾ ಮಾಡಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...