Homeಅಂತರಾಷ್ಟ್ರೀಯಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

- Advertisement -
- Advertisement -

ಜರ್ಮನಿಯಲ್ಲಿ ಭಾನುವಾರ (ಫೆ.23) ನಡೆದ ರಾಷ್ಟ್ರೀಯ ಚುನಾವಣೆಯಲ್ಲಿ ಫ್ರೆಡ್ರಿಕ್ ಮರ್ಝ್‌  ನೇತೃತ್ವದ ಸಂಪ್ರದಾಯವಾದಿ ಮೈತ್ರಿಕೂಟ ಗೆಲುವು ಸಾಧಿಸಿದೆ. ತೀವ್ರ ಬಲಪಂಥೀಯ ಪಕ್ಷ ಆಲ್ಟರ್ನೇಟಿವ್ ಫಾರ್ ಜರ್ಮನಿ (ಎಎಫ್‌ಡಿ) ಮತ ಗಳಿಕೆಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಅಂತಿಮ ಮತ ಎಣಿಕೆಯ ಫಲಿತಾಂಶದ ಪ್ರಕಾರ, ಎಎಫ್‌ಡಿ ತನ್ನ ಮತ ಗಳಿಕೆಯನ್ನು ಈ ಬಾರಿ ದ್ವಿಗುಣಗೊಳಿಸಿಕೊಂಡಿದ್ದು, ಶೇ.19.5ರಷ್ಟು ಪಡೆದುಕೊಂಡಿದೆ. ಎಎಫ್‌ಡಿ ಜರ್ಮನಿಯ ನಾಗರಿಕರಲ್ಲಿ ಬಿತ್ತಿದ ವಲಸೆ ಮತ್ತು ಭದ್ರತೆ ಕುರಿತ ಆತಂಕ ಮತಗಳಿಕೆ ಹೆಚ್ಚಿಸಲು ಕಾರಣವಾಗಿದೆ ಎಂದು ವರದಿಗಳು ಹೇಳಿವೆ.

ಮೆರ್ಜ್ ಅವರ ಸಿಡಿಯು/ಸಿಎಸ್‌ಯು ಮೈತ್ರಿಕೂಟ ಶೇ.28.5ರಷ್ಟು ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದೆ. ನಿರ್ಗಮಿತ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಸೆಂಟರ್-ಲೆಫ್ಟ್ ಸೋಶಿಯಲ್ ಡೆಮಾಕ್ರೇಟ್ಸ್ (ಎಸ್‌ಪಿಡಿ) ಶೇ.16ರಷ್ಟು ಮಗಳನ್ನು ಮಾತ್ರ ಗಳಿಸಲು ಸಫಲವಾಗಿದೆ.

ಮಾಜಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರ ಪಕ್ಷದ ದೀರ್ಘಕಾಲದ ಪ್ರತಿಸ್ಪರ್ಧಿ ಮೆರ್ಜ್, ಅಕ್ರಮ ವಲಸೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ತನ್ನ ಕರಾಳ ನಾಜಿ ಇತಿಹಾಸಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಇನ್ನೂ ಪ್ರಯತ್ನಿಸುತ್ತಿರುವ ದೇಶದಲ್ಲಿ ಎಎಫ್‌ಡಿಯ ಮತಗಳಿಕೆ ಎಲ್ಲರನ್ನು ಆಶ್ವರ್ಯಗೊಳಿಸಿದೆ. ಏಕೆಂದರೆ, ಸಿಡಿಯು/ಸಿಎಎಸ್‌ಯು ಸೇರಿದಂತೆ ಎಲ್ಲಾ ಪಕ್ಷಗಳು ಎಎಫ್‌ಡಿ ಹೆಚ್ಚು ಮತಗಳಿಸದಂತೆ ತಡೆಯಲು ಪ್ರಯತ್ನಿಸಿತ್ತು.

ಸದ್ಯಕ್ಕೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮಿತ್ರಪಕ್ಷಗಳ ಬೆಂಬಲವನ್ನು ಹೊಂದಿರುವ ಎಎಫ್‌ಡಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಸಜ್ಜಾಗಿದೆ. ಇತರ ಎಲ್ಲಾ ಪಕ್ಷಗಳು ಅದನ್ನು ಅಧಿಕಾರದಿಂದ ದೂರವಿಡುವ ಪ್ರತಿಜ್ಞೆ ಮಾಡಿತ್ತು.

ಆದರೆ, ಎಎಫ್‌ಡಿ ನಾಯಕಿ ಆಲಿಸ್ ವೀಡೆಲ್ ಐತಿಹಾಸಿಕ ಫಲಿತಾಂಶವನ್ನು ಶ್ಲಾಘಿಸಿದ್ದು, ನಮ್ಮ ಪಕ್ಷ ಸಿಡಿಯು/ಸಿಎಸ್‌ಯು ಜೊತೆ ಸೇರಿ ಆಡಳಿತ ನಡೆಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಈಗ ಉಸ್ತುವಾರಿ ಚಾನ್ಸೆಲರ್ ಆಗಿರುವ ನಿರ್ಗಮಿತ ಸ್ಕೋಲ್ಜ್ ಅವರಿಂದ ಅಧಿಕಾರವಹಿಸಿಕೊಳ್ಳಲಿರುವ ಮೆರ್ಜ್ ಅವರು ಹೊಸ ಸಮ್ಮಿಶ್ರ ಸರ್ಕಾರ ರಚಿಸಬೇಕಿದೆ. ಈಸ್ಟರ್ ವೇಳೆಗೆ ಅವರ ಸರ್ಕಾರ ರಚಿಸುವ ಸಾಧ್ಯತೆ ಇದೆ. ಅದುವರೆಗೆ ಜರ್ಮನಿಯ ಸರ್ಕಾರವಿಲ್ಲದೆ ಮುನ್ನಡೆಯಬೇಕಿದೆ.

“ಸಮ್ಮಿಶ್ರ ಸರ್ಕಾರ ರಚಿಸುವ ಸಂಬಂಧ ಸುದೀರ್ಘ ಮಾತುಕತೆ ಮತ್ತು ವಿಳಂಬ ನೀತಿ ಸರಿಯಲ್ಲ. ಹೊರಗಿನ ಜಗತ್ತು ನಮ್ಮನ್ನು ಕಾಯುತ್ತಾ ಕೂತಿಲ್ಲ. ಶೀಘ್ರದಲ್ಲೇ ಸರ್ಕಾರ ರಚಿಸಬೇಕಿದೆ” ಎಂದು ವಿಜಯ ಘೋಷಣೆ ಬಳಿಕ ಮೆರ್ಜ್ ಹೇಳಿದ್ದಾರೆ.

ಬಹುಮತ ಪಡೆಯಲು ಮೆರ್ಜ್ ಅವರು ಮೊದಲು ಎಸ್‌ಪಿಡಿಯನ್ನು ಸಂಪರ್ಕಿಸುವ ಸಾಧ್ಯತೆ ಇದೆ. ಆದರೆ, ಜರ್ಮನಿಯ ಸಾಂಪ್ರದಾಯಿಕ ಕಾರ್ಮಿಕರ ಪಕ್ಷವನ್ನು ಐತಿಹಾಸಿಕವಾಗಿ ಕಳಪೆ ಫಲಿತಾಂಶಕ್ಕೆ ಕೊಂಡೊಯ್ದ ಸ್ಕೋಲ್ಜ್ ಅವರನ್ನು ಹೊರಗಿಟ್ಟು ಮಾತುಕತೆ ನಡೆಯಬಹುದು ಎನ್ನಲಾಗಿದೆ.

ಬಹುಮತ ಪಡೆಯಲು ಸ್ಥಾನಗಳನ್ನು ಪಡೆಯಲು ಮೆರ್ಜ್ ಗ್ರೀನ್ಸ್ ಅನ್ನು ಕೂಡ ಸಂಪರ್ಕಿಸಬಹುದು. ಗ್ರೀನ್ಸ್  ಚುನಾವಣೆಯಲ್ಲಿ ಶೇಖಡ 12 ರಷ್ಟು ಮತಗಳಿಸಿದೆ. ಆದರೆ, ಸಿಡಿಯುನ ಬವೇರಿಯನ್ ಸಹೋದರ ಪಕ್ಷವಾದ ಸಿಎಸ್‌ಯು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಯುಎಸ್‌ಏಡ್‌ನ 2 ಸಾವಿರ ಉದ್ಯೋಗಿಗಳನ್ನು ವಜಾ ಮಾಡಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...