Homeಅಂತರಾಷ್ಟ್ರೀಯಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

- Advertisement -
- Advertisement -

ಜರ್ಮನಿಯಲ್ಲಿ ಭಾನುವಾರ (ಫೆ.23) ನಡೆದ ರಾಷ್ಟ್ರೀಯ ಚುನಾವಣೆಯಲ್ಲಿ ಫ್ರೆಡ್ರಿಕ್ ಮರ್ಝ್‌  ನೇತೃತ್ವದ ಸಂಪ್ರದಾಯವಾದಿ ಮೈತ್ರಿಕೂಟ ಗೆಲುವು ಸಾಧಿಸಿದೆ. ತೀವ್ರ ಬಲಪಂಥೀಯ ಪಕ್ಷ ಆಲ್ಟರ್ನೇಟಿವ್ ಫಾರ್ ಜರ್ಮನಿ (ಎಎಫ್‌ಡಿ) ಮತ ಗಳಿಕೆಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಅಂತಿಮ ಮತ ಎಣಿಕೆಯ ಫಲಿತಾಂಶದ ಪ್ರಕಾರ, ಎಎಫ್‌ಡಿ ತನ್ನ ಮತ ಗಳಿಕೆಯನ್ನು ಈ ಬಾರಿ ದ್ವಿಗುಣಗೊಳಿಸಿಕೊಂಡಿದ್ದು, ಶೇ.19.5ರಷ್ಟು ಪಡೆದುಕೊಂಡಿದೆ. ಎಎಫ್‌ಡಿ ಜರ್ಮನಿಯ ನಾಗರಿಕರಲ್ಲಿ ಬಿತ್ತಿದ ವಲಸೆ ಮತ್ತು ಭದ್ರತೆ ಕುರಿತ ಆತಂಕ ಮತಗಳಿಕೆ ಹೆಚ್ಚಿಸಲು ಕಾರಣವಾಗಿದೆ ಎಂದು ವರದಿಗಳು ಹೇಳಿವೆ.

ಮೆರ್ಜ್ ಅವರ ಸಿಡಿಯು/ಸಿಎಸ್‌ಯು ಮೈತ್ರಿಕೂಟ ಶೇ.28.5ರಷ್ಟು ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದೆ. ನಿರ್ಗಮಿತ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಸೆಂಟರ್-ಲೆಫ್ಟ್ ಸೋಶಿಯಲ್ ಡೆಮಾಕ್ರೇಟ್ಸ್ (ಎಸ್‌ಪಿಡಿ) ಶೇ.16ರಷ್ಟು ಮಗಳನ್ನು ಮಾತ್ರ ಗಳಿಸಲು ಸಫಲವಾಗಿದೆ.

ಮಾಜಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರ ಪಕ್ಷದ ದೀರ್ಘಕಾಲದ ಪ್ರತಿಸ್ಪರ್ಧಿ ಮೆರ್ಜ್, ಅಕ್ರಮ ವಲಸೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ತನ್ನ ಕರಾಳ ನಾಜಿ ಇತಿಹಾಸಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಇನ್ನೂ ಪ್ರಯತ್ನಿಸುತ್ತಿರುವ ದೇಶದಲ್ಲಿ ಎಎಫ್‌ಡಿಯ ಮತಗಳಿಕೆ ಎಲ್ಲರನ್ನು ಆಶ್ವರ್ಯಗೊಳಿಸಿದೆ. ಏಕೆಂದರೆ, ಸಿಡಿಯು/ಸಿಎಎಸ್‌ಯು ಸೇರಿದಂತೆ ಎಲ್ಲಾ ಪಕ್ಷಗಳು ಎಎಫ್‌ಡಿ ಹೆಚ್ಚು ಮತಗಳಿಸದಂತೆ ತಡೆಯಲು ಪ್ರಯತ್ನಿಸಿತ್ತು.

ಸದ್ಯಕ್ಕೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮಿತ್ರಪಕ್ಷಗಳ ಬೆಂಬಲವನ್ನು ಹೊಂದಿರುವ ಎಎಫ್‌ಡಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಸಜ್ಜಾಗಿದೆ. ಇತರ ಎಲ್ಲಾ ಪಕ್ಷಗಳು ಅದನ್ನು ಅಧಿಕಾರದಿಂದ ದೂರವಿಡುವ ಪ್ರತಿಜ್ಞೆ ಮಾಡಿತ್ತು.

ಆದರೆ, ಎಎಫ್‌ಡಿ ನಾಯಕಿ ಆಲಿಸ್ ವೀಡೆಲ್ ಐತಿಹಾಸಿಕ ಫಲಿತಾಂಶವನ್ನು ಶ್ಲಾಘಿಸಿದ್ದು, ನಮ್ಮ ಪಕ್ಷ ಸಿಡಿಯು/ಸಿಎಸ್‌ಯು ಜೊತೆ ಸೇರಿ ಆಡಳಿತ ನಡೆಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಈಗ ಉಸ್ತುವಾರಿ ಚಾನ್ಸೆಲರ್ ಆಗಿರುವ ನಿರ್ಗಮಿತ ಸ್ಕೋಲ್ಜ್ ಅವರಿಂದ ಅಧಿಕಾರವಹಿಸಿಕೊಳ್ಳಲಿರುವ ಮೆರ್ಜ್ ಅವರು ಹೊಸ ಸಮ್ಮಿಶ್ರ ಸರ್ಕಾರ ರಚಿಸಬೇಕಿದೆ. ಈಸ್ಟರ್ ವೇಳೆಗೆ ಅವರ ಸರ್ಕಾರ ರಚಿಸುವ ಸಾಧ್ಯತೆ ಇದೆ. ಅದುವರೆಗೆ ಜರ್ಮನಿಯ ಸರ್ಕಾರವಿಲ್ಲದೆ ಮುನ್ನಡೆಯಬೇಕಿದೆ.

“ಸಮ್ಮಿಶ್ರ ಸರ್ಕಾರ ರಚಿಸುವ ಸಂಬಂಧ ಸುದೀರ್ಘ ಮಾತುಕತೆ ಮತ್ತು ವಿಳಂಬ ನೀತಿ ಸರಿಯಲ್ಲ. ಹೊರಗಿನ ಜಗತ್ತು ನಮ್ಮನ್ನು ಕಾಯುತ್ತಾ ಕೂತಿಲ್ಲ. ಶೀಘ್ರದಲ್ಲೇ ಸರ್ಕಾರ ರಚಿಸಬೇಕಿದೆ” ಎಂದು ವಿಜಯ ಘೋಷಣೆ ಬಳಿಕ ಮೆರ್ಜ್ ಹೇಳಿದ್ದಾರೆ.

ಬಹುಮತ ಪಡೆಯಲು ಮೆರ್ಜ್ ಅವರು ಮೊದಲು ಎಸ್‌ಪಿಡಿಯನ್ನು ಸಂಪರ್ಕಿಸುವ ಸಾಧ್ಯತೆ ಇದೆ. ಆದರೆ, ಜರ್ಮನಿಯ ಸಾಂಪ್ರದಾಯಿಕ ಕಾರ್ಮಿಕರ ಪಕ್ಷವನ್ನು ಐತಿಹಾಸಿಕವಾಗಿ ಕಳಪೆ ಫಲಿತಾಂಶಕ್ಕೆ ಕೊಂಡೊಯ್ದ ಸ್ಕೋಲ್ಜ್ ಅವರನ್ನು ಹೊರಗಿಟ್ಟು ಮಾತುಕತೆ ನಡೆಯಬಹುದು ಎನ್ನಲಾಗಿದೆ.

ಬಹುಮತ ಪಡೆಯಲು ಸ್ಥಾನಗಳನ್ನು ಪಡೆಯಲು ಮೆರ್ಜ್ ಗ್ರೀನ್ಸ್ ಅನ್ನು ಕೂಡ ಸಂಪರ್ಕಿಸಬಹುದು. ಗ್ರೀನ್ಸ್  ಚುನಾವಣೆಯಲ್ಲಿ ಶೇಖಡ 12 ರಷ್ಟು ಮತಗಳಿಸಿದೆ. ಆದರೆ, ಸಿಡಿಯುನ ಬವೇರಿಯನ್ ಸಹೋದರ ಪಕ್ಷವಾದ ಸಿಎಸ್‌ಯು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಯುಎಸ್‌ಏಡ್‌ನ 2 ಸಾವಿರ ಉದ್ಯೋಗಿಗಳನ್ನು ವಜಾ ಮಾಡಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...