Homeಅಂತರಾಷ್ಟ್ರೀಯಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

- Advertisement -
- Advertisement -

ಜರ್ಮನಿಯಲ್ಲಿ ಭಾನುವಾರ (ಫೆ.23) ನಡೆದ ರಾಷ್ಟ್ರೀಯ ಚುನಾವಣೆಯಲ್ಲಿ ಫ್ರೆಡ್ರಿಕ್ ಮರ್ಝ್‌  ನೇತೃತ್ವದ ಸಂಪ್ರದಾಯವಾದಿ ಮೈತ್ರಿಕೂಟ ಗೆಲುವು ಸಾಧಿಸಿದೆ. ತೀವ್ರ ಬಲಪಂಥೀಯ ಪಕ್ಷ ಆಲ್ಟರ್ನೇಟಿವ್ ಫಾರ್ ಜರ್ಮನಿ (ಎಎಫ್‌ಡಿ) ಮತ ಗಳಿಕೆಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಅಂತಿಮ ಮತ ಎಣಿಕೆಯ ಫಲಿತಾಂಶದ ಪ್ರಕಾರ, ಎಎಫ್‌ಡಿ ತನ್ನ ಮತ ಗಳಿಕೆಯನ್ನು ಈ ಬಾರಿ ದ್ವಿಗುಣಗೊಳಿಸಿಕೊಂಡಿದ್ದು, ಶೇ.19.5ರಷ್ಟು ಪಡೆದುಕೊಂಡಿದೆ. ಎಎಫ್‌ಡಿ ಜರ್ಮನಿಯ ನಾಗರಿಕರಲ್ಲಿ ಬಿತ್ತಿದ ವಲಸೆ ಮತ್ತು ಭದ್ರತೆ ಕುರಿತ ಆತಂಕ ಮತಗಳಿಕೆ ಹೆಚ್ಚಿಸಲು ಕಾರಣವಾಗಿದೆ ಎಂದು ವರದಿಗಳು ಹೇಳಿವೆ.

ಮೆರ್ಜ್ ಅವರ ಸಿಡಿಯು/ಸಿಎಸ್‌ಯು ಮೈತ್ರಿಕೂಟ ಶೇ.28.5ರಷ್ಟು ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದೆ. ನಿರ್ಗಮಿತ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಸೆಂಟರ್-ಲೆಫ್ಟ್ ಸೋಶಿಯಲ್ ಡೆಮಾಕ್ರೇಟ್ಸ್ (ಎಸ್‌ಪಿಡಿ) ಶೇ.16ರಷ್ಟು ಮಗಳನ್ನು ಮಾತ್ರ ಗಳಿಸಲು ಸಫಲವಾಗಿದೆ.

ಮಾಜಿ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರ ಪಕ್ಷದ ದೀರ್ಘಕಾಲದ ಪ್ರತಿಸ್ಪರ್ಧಿ ಮೆರ್ಜ್, ಅಕ್ರಮ ವಲಸೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ತನ್ನ ಕರಾಳ ನಾಜಿ ಇತಿಹಾಸಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಇನ್ನೂ ಪ್ರಯತ್ನಿಸುತ್ತಿರುವ ದೇಶದಲ್ಲಿ ಎಎಫ್‌ಡಿಯ ಮತಗಳಿಕೆ ಎಲ್ಲರನ್ನು ಆಶ್ವರ್ಯಗೊಳಿಸಿದೆ. ಏಕೆಂದರೆ, ಸಿಡಿಯು/ಸಿಎಎಸ್‌ಯು ಸೇರಿದಂತೆ ಎಲ್ಲಾ ಪಕ್ಷಗಳು ಎಎಫ್‌ಡಿ ಹೆಚ್ಚು ಮತಗಳಿಸದಂತೆ ತಡೆಯಲು ಪ್ರಯತ್ನಿಸಿತ್ತು.

ಸದ್ಯಕ್ಕೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮಿತ್ರಪಕ್ಷಗಳ ಬೆಂಬಲವನ್ನು ಹೊಂದಿರುವ ಎಎಫ್‌ಡಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಸಜ್ಜಾಗಿದೆ. ಇತರ ಎಲ್ಲಾ ಪಕ್ಷಗಳು ಅದನ್ನು ಅಧಿಕಾರದಿಂದ ದೂರವಿಡುವ ಪ್ರತಿಜ್ಞೆ ಮಾಡಿತ್ತು.

ಆದರೆ, ಎಎಫ್‌ಡಿ ನಾಯಕಿ ಆಲಿಸ್ ವೀಡೆಲ್ ಐತಿಹಾಸಿಕ ಫಲಿತಾಂಶವನ್ನು ಶ್ಲಾಘಿಸಿದ್ದು, ನಮ್ಮ ಪಕ್ಷ ಸಿಡಿಯು/ಸಿಎಸ್‌ಯು ಜೊತೆ ಸೇರಿ ಆಡಳಿತ ನಡೆಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಈಗ ಉಸ್ತುವಾರಿ ಚಾನ್ಸೆಲರ್ ಆಗಿರುವ ನಿರ್ಗಮಿತ ಸ್ಕೋಲ್ಜ್ ಅವರಿಂದ ಅಧಿಕಾರವಹಿಸಿಕೊಳ್ಳಲಿರುವ ಮೆರ್ಜ್ ಅವರು ಹೊಸ ಸಮ್ಮಿಶ್ರ ಸರ್ಕಾರ ರಚಿಸಬೇಕಿದೆ. ಈಸ್ಟರ್ ವೇಳೆಗೆ ಅವರ ಸರ್ಕಾರ ರಚಿಸುವ ಸಾಧ್ಯತೆ ಇದೆ. ಅದುವರೆಗೆ ಜರ್ಮನಿಯ ಸರ್ಕಾರವಿಲ್ಲದೆ ಮುನ್ನಡೆಯಬೇಕಿದೆ.

“ಸಮ್ಮಿಶ್ರ ಸರ್ಕಾರ ರಚಿಸುವ ಸಂಬಂಧ ಸುದೀರ್ಘ ಮಾತುಕತೆ ಮತ್ತು ವಿಳಂಬ ನೀತಿ ಸರಿಯಲ್ಲ. ಹೊರಗಿನ ಜಗತ್ತು ನಮ್ಮನ್ನು ಕಾಯುತ್ತಾ ಕೂತಿಲ್ಲ. ಶೀಘ್ರದಲ್ಲೇ ಸರ್ಕಾರ ರಚಿಸಬೇಕಿದೆ” ಎಂದು ವಿಜಯ ಘೋಷಣೆ ಬಳಿಕ ಮೆರ್ಜ್ ಹೇಳಿದ್ದಾರೆ.

ಬಹುಮತ ಪಡೆಯಲು ಮೆರ್ಜ್ ಅವರು ಮೊದಲು ಎಸ್‌ಪಿಡಿಯನ್ನು ಸಂಪರ್ಕಿಸುವ ಸಾಧ್ಯತೆ ಇದೆ. ಆದರೆ, ಜರ್ಮನಿಯ ಸಾಂಪ್ರದಾಯಿಕ ಕಾರ್ಮಿಕರ ಪಕ್ಷವನ್ನು ಐತಿಹಾಸಿಕವಾಗಿ ಕಳಪೆ ಫಲಿತಾಂಶಕ್ಕೆ ಕೊಂಡೊಯ್ದ ಸ್ಕೋಲ್ಜ್ ಅವರನ್ನು ಹೊರಗಿಟ್ಟು ಮಾತುಕತೆ ನಡೆಯಬಹುದು ಎನ್ನಲಾಗಿದೆ.

ಬಹುಮತ ಪಡೆಯಲು ಸ್ಥಾನಗಳನ್ನು ಪಡೆಯಲು ಮೆರ್ಜ್ ಗ್ರೀನ್ಸ್ ಅನ್ನು ಕೂಡ ಸಂಪರ್ಕಿಸಬಹುದು. ಗ್ರೀನ್ಸ್  ಚುನಾವಣೆಯಲ್ಲಿ ಶೇಖಡ 12 ರಷ್ಟು ಮತಗಳಿಸಿದೆ. ಆದರೆ, ಸಿಡಿಯುನ ಬವೇರಿಯನ್ ಸಹೋದರ ಪಕ್ಷವಾದ ಸಿಎಸ್‌ಯು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಯುಎಸ್‌ಏಡ್‌ನ 2 ಸಾವಿರ ಉದ್ಯೋಗಿಗಳನ್ನು ವಜಾ ಮಾಡಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...