Homeಅಂತರಾಷ್ಟ್ರೀಯಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಹೊಸ ಸರ್ಕಾರದ ಸಚಿವ ಸಂಪುಟದಲ್ಲಿ 8 ಮಹಿಳೆಯರು 8 ಪುರುಷರು ಇರಲಿದ್ದಾರೆ

- Advertisement -
- Advertisement -

ಜರ್ಮನಿಯಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಎಂಟು ಪುರುಷರು ಮತ್ತು ಎಂಟು ಮಹಿಳೆಯರನ್ನು ಒಳಗೊಂಡ ಲಿಂಗ ಸಮಾನತೆಯ ಸಚಿವ ಸಂಪುಟ ರಚನೆಯಾಗಿದೆ. ಜರ್ಮನಿಯ ಈ ಹಿಂದಿನ ಚಾನ್ಸಲರ್‌ ಆಗಿದ್ದ ಏಂಜೆಲಾ ಮರ್ಕೆಲ್ ಅವರು ಪುರುಷ ಉತ್ತರಾಧಿಕಾರಿ ಓಲಾಫ್ ಸ್ಕೋಲ್ಜ್ ಅವರಿಗೆ ತಮ್ಮ ಅಧಿಕಾರವನ್ನು ಹಸ್ತಾಂತರಿಸುತ್ತಿದ್ದರೂ, ಹಿಂದಿನ ಸರ್ಕಾರಕ್ಕಿಂತ ಹೆಚ್ಚು ಮಹಿಳೆಯರನ್ನು ಹೊಸ ಸರ್ಕಾರ ಹೊಂದಲಿದೆ. ಜರ್ಮನಿಯಲ್ಲಿ 16 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪುರುಷ ಚಾನ್ಸಲರ್‌ ಅಧಿಕಾರ ವಹಿಸುತ್ತಿದ್ದಾರೆ.

‘ಜರ್ಮನಿ ಚಾನ್ಸೆಲರ್’ ಎಂದರೆ ಜರ್ಮನಿ ಸರ್ಕಾರದ ಮುಖ್ಯಸ್ಥ ಮತ್ತು ಮುಖ್ಯ ಕಾರ್ಯನಿರ್ವಾಹಕರಾಗಿದ್ದಾರೆ. ಯುದ್ದದ ಸಮಯದಲ್ಲಿ ಜರ್ಮನ್ ಸಶಸ್ತ್ರ ಪಡೆಗಳ ಕಮಾಂಡರ್ ಇನ್ ಚೀಫ್ ಜರ್ಮನಿಯ ಚಾನ್ಸೆಲರ್‌ ಅವರೇ ಆಗಿರುತ್ತಾರೆ.

ಇದನ್ನೂ ಓದಿ: ಸ್ತ್ರೀ ಪುರುಷರಲ್ಲಿ ಸಮಾನತೆ ಸಾಧ್ಯವೇ?: ಎಚ್ ಎಸ್ ಶ್ರೀಮತಿ

ಜರ್ಮನಿಯ ಹೊಸ ಚಾನ್ಸಲರ್‌ ಓಲಾಫ್ ಸ್ಕೋಲ್ಜ್ ಅವರು ಚುನಾವಣೆಯ ಸಮಯದಲ್ಲೇ ತಮ್ಮ ಸರ್ಕಾರಕ್ಕೆ ಪುರುಷರಂತೆ ಹೆಚ್ಚಿನ ಮಹಿಳೆಯರನ್ನು ನೇಮಿಸುವ ಬಗ್ಗೆ ಭರವಸೆ ನೀಡಿದ್ದರು. ಇದೀಗ ಅವರ ಚುನಾವಣಾ ಭರವಸೆಯನ್ನು ಉಳಿಸಿಕೊಂಡಿದ್ದಾರೆ. ಜೊತೆಗೆ, ಭದ್ರತೆ ಮತ್ತು ರಾಜತಾಂತ್ರಿಕತೆಗೆ ಸಂಬಂಧಿಸಿದ ಎಲ್ಲವನ್ನೂ ಮಹಿಳೆಯರೇ ಮುನ್ನಡೆಸುತ್ತಾರೆ.

ಈ ಬಾರಿ ಜರ್ಮನಿಯು ತನ್ನ ಮೊದಲ ಮಹಿಳಾ ವಿದೇಶಾಂಗ ಮಂತ್ರಿ ಮತ್ತು ಮೊದಲ ಮಹಿಳಾ ಆಂತರಿಕ ಮಂತ್ರಿಯನ್ನು ಹೊಂದಲಿದೆ. ದೇಶವು ಸತತ ಮೂರನೇ ಬಾರಿಗೆ ಮಹಿಳಾ ರಕ್ಷಣಾ ಸಚಿವೆಯನ್ನೂ ಪಡೆಯಲಿದೆ.

“ಭದ್ರತೆಯು ಈ ಸರ್ಕಾರದಲ್ಲಿ ಪ್ರಬಲ ಮಹಿಳೆಯರ ಕೈಯಲ್ಲಿ ಇರುತ್ತದೆ” ಎಂದು ಓಲಾಫ್ ಸ್ಕೋಲ್ಜ್‌ ಸೋಮವಾರ ಹೇಳಿದ್ದಾರೆ. ಓಲಾಫ್ ಸ್ಕೋಲ್ಜ್‌ ಸೋಶಿಯಲ್ ಡೆಮಾಕ್ರಟ್ ಪಕ್ಷದವರಾಗಿದ್ದು, ಪ್ರೋಗ್ರೇಸಿವ್‌ ಗ್ರೀನ್ಸ್ ಮತ್ತು ಲಿಬರ್ಟೇರಿಯನ್ ಫ್ರೀ ಡೆಮೋಕ್ರಾಟ್‌ ಜೊತೆ ಸೇರಿಕೊಂಡು ಮೂರು ಪಕ್ಷದ ಮೈತ್ರಿ ಒಕ್ಕೂಟವನ್ನು ಮುನ್ನಡೆಸುತ್ತಾರೆ.

“ಸಂಪುಟದಲ್ಲಿ ಮಹಿಳೆಯರು ಮತ್ತು ಪುರುಷರು ಸಮಾನವಾಗಿ ಇದ್ದಾರೆ. ಆದ್ದರಿಂದ ಮಹಿಳೆಯರು ಕೂಡಾ ಅರ್ಧದಷ್ಟು ಶಕ್ತಿಯನ್ನು ಪಡೆಯುತ್ತಾರೆ. ನಾವು ಇದನ್ನು ಅರಿತುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ನನಗೆ ತುಂಬಾ ಹೆಮ್ಮೆ ಇದೆ” ಎಂದು ಓಲಾಫ್ ಸ್ಕೋಲ್ಜ್ ಹೇಳಿದ್ದಾರೆ.

ಇದನ್ನೂ ಓದಿ: 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ಭರತನಾಟ್ಯ ಕಲಾವಿದೆ ನರ್ತಕಿ

16 ವರ್ಷಗಳಿಂದ ಜರ್ಮನಿಯ ಚಾನ್ಸೆಲರ್‌ ಆಗಿದ್ದ ಏಂಜೆಲಾ ಮರ್ಕೆಲ್, ಸಂಪ್ರದಾಯವಾದಿಯಾಗಿದ್ದು, ಫೆಮಿನಿಸ್ಟ್ ಪದದಿಂದ ದೂರವಿದ್ದರು. ತನ್ನ ಅಧಿಕಾರದ ಕೊನೆಯ ವರ್ಷಗಳವರೆಗೆ ಅವರು ಮಹಿಳೆಯರ ಪ್ರಗತಿಯ ವಿಷಯವಾಗಿ ವಿರಳವಾಗಿ ಮಾತನಾಡಿದ್ದರು. ಅವರ ಸಚಿವ ಸಂಪುಟದಲ್ಲಿ ಮಹಿಳಾ ಮಂತ್ರಿಗಳು ಮತ್ತು ಶಾಸಕರ ಸಂಖ್ಯೆ ಸುಮಾರು ಮೂರನೇ ಒಂದು ಭಾಗದಷ್ಟು ಅಷ್ಟೇ ಇತ್ತು.

ಈ ವಾರ ಅಧಿಕಾರ ವಹಿಸಿಕೊಳ್ಳಲಿರುವ ಮಹಿಳೆಯರು ತಮ್ಮ ಸಚಿವಾಲಯದ ಮೇಲೆ ಛಾಪು ಮೂಡಿಸುವ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಗ್ರೀನ್ಸ್‌ ಪಕ್ಷದಿಂದ ಚಾನ್ಸೆಲರ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಜರ್ಮನಿಯ ಹೊಸ ವಿದೇಶಾಂಗ ಮಂತ್ರಿ ಅನ್ನಾಲೆನಾ ಬೇರ್‌ಬಾಕ್, ಚೀನಾ ಮತ್ತು ರಷ್ಯಾದಂತಹ ಆಯಕಟ್ಟಿನ ಪ್ರತಿಸ್ಪರ್ಧಿಗಳ ಕಡೆಗೆ ಕಠಿಣವಾದ ನಡೆಯನ್ನು ಅನುಸರಿಸಲಿದ್ದೇನೆ ಎಂದು ತನ್ನ ಯೋಜನೆಯ ಬಗ್ಗೆ ಪ್ರತಿಜ್ಞೆ ಮಾಡಿದ್ದಾರೆ.

ದೇಶದ ನೂತನ ಆಂತರಿಕ ಮಂತ್ರಿ ನ್ಯಾನ್ಸಿ ಫೈಸರ್ ಅವರು, ಉದಾರವಾದಿ ಪ್ರಜಾಪ್ರಭುತ್ವ ಎದುರಿಸುತ್ತಿರುವ ದೊಡ್ಡ ಬೆದರಿಕೆಯಾದ ಬಲಪಂಥೀಯ ಉಗ್ರವಾದದ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ.

“ಲಿಂಗ ಸಮಾನತೆ ಹೊಂದಿರುವ ಕ್ಯಾಬಿನೆಟ್‌ನ ಭಾಗವಾಗಲು ನಾನು ಕೃತಜ್ಞಳಾಗಿದ್ದೇನೆ. ಇದಕ್ಕಾಗಿ ನಾನು ಹಲವು ವರ್ಷಗಳಿಂದ ಹೋರಾಡಿದ್ದೇನೆ. ಇದು ನಮ್ಮ ದೇಶದ ಎಲ್ಲಾ ಮಹಿಳೆಯರ ಸಂಕೇತವಾಗಿದೆ” ಎಂದು ನೂತನ ವಸತಿ ಮತ್ತು ನಗರಾಭಿವೃದ್ಧಿ ಸಚಿವರಾದ ಕ್ಲಾರಾ ಗೆವಿಟ್ಜ್ ಹೇಳಿದ್ದಾರೆ.

ಇದನ್ನೂ ಓದಿ:ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...