Homeಅಂತರಾಷ್ಟ್ರೀಯಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಹೊಸ ಸರ್ಕಾರದ ಸಚಿವ ಸಂಪುಟದಲ್ಲಿ 8 ಮಹಿಳೆಯರು 8 ಪುರುಷರು ಇರಲಿದ್ದಾರೆ

- Advertisement -
- Advertisement -

ಜರ್ಮನಿಯಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಎಂಟು ಪುರುಷರು ಮತ್ತು ಎಂಟು ಮಹಿಳೆಯರನ್ನು ಒಳಗೊಂಡ ಲಿಂಗ ಸಮಾನತೆಯ ಸಚಿವ ಸಂಪುಟ ರಚನೆಯಾಗಿದೆ. ಜರ್ಮನಿಯ ಈ ಹಿಂದಿನ ಚಾನ್ಸಲರ್‌ ಆಗಿದ್ದ ಏಂಜೆಲಾ ಮರ್ಕೆಲ್ ಅವರು ಪುರುಷ ಉತ್ತರಾಧಿಕಾರಿ ಓಲಾಫ್ ಸ್ಕೋಲ್ಜ್ ಅವರಿಗೆ ತಮ್ಮ ಅಧಿಕಾರವನ್ನು ಹಸ್ತಾಂತರಿಸುತ್ತಿದ್ದರೂ, ಹಿಂದಿನ ಸರ್ಕಾರಕ್ಕಿಂತ ಹೆಚ್ಚು ಮಹಿಳೆಯರನ್ನು ಹೊಸ ಸರ್ಕಾರ ಹೊಂದಲಿದೆ. ಜರ್ಮನಿಯಲ್ಲಿ 16 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪುರುಷ ಚಾನ್ಸಲರ್‌ ಅಧಿಕಾರ ವಹಿಸುತ್ತಿದ್ದಾರೆ.

‘ಜರ್ಮನಿ ಚಾನ್ಸೆಲರ್’ ಎಂದರೆ ಜರ್ಮನಿ ಸರ್ಕಾರದ ಮುಖ್ಯಸ್ಥ ಮತ್ತು ಮುಖ್ಯ ಕಾರ್ಯನಿರ್ವಾಹಕರಾಗಿದ್ದಾರೆ. ಯುದ್ದದ ಸಮಯದಲ್ಲಿ ಜರ್ಮನ್ ಸಶಸ್ತ್ರ ಪಡೆಗಳ ಕಮಾಂಡರ್ ಇನ್ ಚೀಫ್ ಜರ್ಮನಿಯ ಚಾನ್ಸೆಲರ್‌ ಅವರೇ ಆಗಿರುತ್ತಾರೆ.

ಇದನ್ನೂ ಓದಿ: ಸ್ತ್ರೀ ಪುರುಷರಲ್ಲಿ ಸಮಾನತೆ ಸಾಧ್ಯವೇ?: ಎಚ್ ಎಸ್ ಶ್ರೀಮತಿ

ಜರ್ಮನಿಯ ಹೊಸ ಚಾನ್ಸಲರ್‌ ಓಲಾಫ್ ಸ್ಕೋಲ್ಜ್ ಅವರು ಚುನಾವಣೆಯ ಸಮಯದಲ್ಲೇ ತಮ್ಮ ಸರ್ಕಾರಕ್ಕೆ ಪುರುಷರಂತೆ ಹೆಚ್ಚಿನ ಮಹಿಳೆಯರನ್ನು ನೇಮಿಸುವ ಬಗ್ಗೆ ಭರವಸೆ ನೀಡಿದ್ದರು. ಇದೀಗ ಅವರ ಚುನಾವಣಾ ಭರವಸೆಯನ್ನು ಉಳಿಸಿಕೊಂಡಿದ್ದಾರೆ. ಜೊತೆಗೆ, ಭದ್ರತೆ ಮತ್ತು ರಾಜತಾಂತ್ರಿಕತೆಗೆ ಸಂಬಂಧಿಸಿದ ಎಲ್ಲವನ್ನೂ ಮಹಿಳೆಯರೇ ಮುನ್ನಡೆಸುತ್ತಾರೆ.

ಈ ಬಾರಿ ಜರ್ಮನಿಯು ತನ್ನ ಮೊದಲ ಮಹಿಳಾ ವಿದೇಶಾಂಗ ಮಂತ್ರಿ ಮತ್ತು ಮೊದಲ ಮಹಿಳಾ ಆಂತರಿಕ ಮಂತ್ರಿಯನ್ನು ಹೊಂದಲಿದೆ. ದೇಶವು ಸತತ ಮೂರನೇ ಬಾರಿಗೆ ಮಹಿಳಾ ರಕ್ಷಣಾ ಸಚಿವೆಯನ್ನೂ ಪಡೆಯಲಿದೆ.

“ಭದ್ರತೆಯು ಈ ಸರ್ಕಾರದಲ್ಲಿ ಪ್ರಬಲ ಮಹಿಳೆಯರ ಕೈಯಲ್ಲಿ ಇರುತ್ತದೆ” ಎಂದು ಓಲಾಫ್ ಸ್ಕೋಲ್ಜ್‌ ಸೋಮವಾರ ಹೇಳಿದ್ದಾರೆ. ಓಲಾಫ್ ಸ್ಕೋಲ್ಜ್‌ ಸೋಶಿಯಲ್ ಡೆಮಾಕ್ರಟ್ ಪಕ್ಷದವರಾಗಿದ್ದು, ಪ್ರೋಗ್ರೇಸಿವ್‌ ಗ್ರೀನ್ಸ್ ಮತ್ತು ಲಿಬರ್ಟೇರಿಯನ್ ಫ್ರೀ ಡೆಮೋಕ್ರಾಟ್‌ ಜೊತೆ ಸೇರಿಕೊಂಡು ಮೂರು ಪಕ್ಷದ ಮೈತ್ರಿ ಒಕ್ಕೂಟವನ್ನು ಮುನ್ನಡೆಸುತ್ತಾರೆ.

“ಸಂಪುಟದಲ್ಲಿ ಮಹಿಳೆಯರು ಮತ್ತು ಪುರುಷರು ಸಮಾನವಾಗಿ ಇದ್ದಾರೆ. ಆದ್ದರಿಂದ ಮಹಿಳೆಯರು ಕೂಡಾ ಅರ್ಧದಷ್ಟು ಶಕ್ತಿಯನ್ನು ಪಡೆಯುತ್ತಾರೆ. ನಾವು ಇದನ್ನು ಅರಿತುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ನನಗೆ ತುಂಬಾ ಹೆಮ್ಮೆ ಇದೆ” ಎಂದು ಓಲಾಫ್ ಸ್ಕೋಲ್ಜ್ ಹೇಳಿದ್ದಾರೆ.

ಇದನ್ನೂ ಓದಿ: 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ಭರತನಾಟ್ಯ ಕಲಾವಿದೆ ನರ್ತಕಿ

16 ವರ್ಷಗಳಿಂದ ಜರ್ಮನಿಯ ಚಾನ್ಸೆಲರ್‌ ಆಗಿದ್ದ ಏಂಜೆಲಾ ಮರ್ಕೆಲ್, ಸಂಪ್ರದಾಯವಾದಿಯಾಗಿದ್ದು, ಫೆಮಿನಿಸ್ಟ್ ಪದದಿಂದ ದೂರವಿದ್ದರು. ತನ್ನ ಅಧಿಕಾರದ ಕೊನೆಯ ವರ್ಷಗಳವರೆಗೆ ಅವರು ಮಹಿಳೆಯರ ಪ್ರಗತಿಯ ವಿಷಯವಾಗಿ ವಿರಳವಾಗಿ ಮಾತನಾಡಿದ್ದರು. ಅವರ ಸಚಿವ ಸಂಪುಟದಲ್ಲಿ ಮಹಿಳಾ ಮಂತ್ರಿಗಳು ಮತ್ತು ಶಾಸಕರ ಸಂಖ್ಯೆ ಸುಮಾರು ಮೂರನೇ ಒಂದು ಭಾಗದಷ್ಟು ಅಷ್ಟೇ ಇತ್ತು.

ಈ ವಾರ ಅಧಿಕಾರ ವಹಿಸಿಕೊಳ್ಳಲಿರುವ ಮಹಿಳೆಯರು ತಮ್ಮ ಸಚಿವಾಲಯದ ಮೇಲೆ ಛಾಪು ಮೂಡಿಸುವ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಗ್ರೀನ್ಸ್‌ ಪಕ್ಷದಿಂದ ಚಾನ್ಸೆಲರ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಜರ್ಮನಿಯ ಹೊಸ ವಿದೇಶಾಂಗ ಮಂತ್ರಿ ಅನ್ನಾಲೆನಾ ಬೇರ್‌ಬಾಕ್, ಚೀನಾ ಮತ್ತು ರಷ್ಯಾದಂತಹ ಆಯಕಟ್ಟಿನ ಪ್ರತಿಸ್ಪರ್ಧಿಗಳ ಕಡೆಗೆ ಕಠಿಣವಾದ ನಡೆಯನ್ನು ಅನುಸರಿಸಲಿದ್ದೇನೆ ಎಂದು ತನ್ನ ಯೋಜನೆಯ ಬಗ್ಗೆ ಪ್ರತಿಜ್ಞೆ ಮಾಡಿದ್ದಾರೆ.

ದೇಶದ ನೂತನ ಆಂತರಿಕ ಮಂತ್ರಿ ನ್ಯಾನ್ಸಿ ಫೈಸರ್ ಅವರು, ಉದಾರವಾದಿ ಪ್ರಜಾಪ್ರಭುತ್ವ ಎದುರಿಸುತ್ತಿರುವ ದೊಡ್ಡ ಬೆದರಿಕೆಯಾದ ಬಲಪಂಥೀಯ ಉಗ್ರವಾದದ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ.

“ಲಿಂಗ ಸಮಾನತೆ ಹೊಂದಿರುವ ಕ್ಯಾಬಿನೆಟ್‌ನ ಭಾಗವಾಗಲು ನಾನು ಕೃತಜ್ಞಳಾಗಿದ್ದೇನೆ. ಇದಕ್ಕಾಗಿ ನಾನು ಹಲವು ವರ್ಷಗಳಿಂದ ಹೋರಾಡಿದ್ದೇನೆ. ಇದು ನಮ್ಮ ದೇಶದ ಎಲ್ಲಾ ಮಹಿಳೆಯರ ಸಂಕೇತವಾಗಿದೆ” ಎಂದು ನೂತನ ವಸತಿ ಮತ್ತು ನಗರಾಭಿವೃದ್ಧಿ ಸಚಿವರಾದ ಕ್ಲಾರಾ ಗೆವಿಟ್ಜ್ ಹೇಳಿದ್ದಾರೆ.

ಇದನ್ನೂ ಓದಿ:ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...