Homeಅಂತರಾಷ್ಟ್ರೀಯಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಹೊಸ ಸರ್ಕಾರದ ಸಚಿವ ಸಂಪುಟದಲ್ಲಿ 8 ಮಹಿಳೆಯರು 8 ಪುರುಷರು ಇರಲಿದ್ದಾರೆ

- Advertisement -
- Advertisement -

ಜರ್ಮನಿಯಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಎಂಟು ಪುರುಷರು ಮತ್ತು ಎಂಟು ಮಹಿಳೆಯರನ್ನು ಒಳಗೊಂಡ ಲಿಂಗ ಸಮಾನತೆಯ ಸಚಿವ ಸಂಪುಟ ರಚನೆಯಾಗಿದೆ. ಜರ್ಮನಿಯ ಈ ಹಿಂದಿನ ಚಾನ್ಸಲರ್‌ ಆಗಿದ್ದ ಏಂಜೆಲಾ ಮರ್ಕೆಲ್ ಅವರು ಪುರುಷ ಉತ್ತರಾಧಿಕಾರಿ ಓಲಾಫ್ ಸ್ಕೋಲ್ಜ್ ಅವರಿಗೆ ತಮ್ಮ ಅಧಿಕಾರವನ್ನು ಹಸ್ತಾಂತರಿಸುತ್ತಿದ್ದರೂ, ಹಿಂದಿನ ಸರ್ಕಾರಕ್ಕಿಂತ ಹೆಚ್ಚು ಮಹಿಳೆಯರನ್ನು ಹೊಸ ಸರ್ಕಾರ ಹೊಂದಲಿದೆ. ಜರ್ಮನಿಯಲ್ಲಿ 16 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪುರುಷ ಚಾನ್ಸಲರ್‌ ಅಧಿಕಾರ ವಹಿಸುತ್ತಿದ್ದಾರೆ.

‘ಜರ್ಮನಿ ಚಾನ್ಸೆಲರ್’ ಎಂದರೆ ಜರ್ಮನಿ ಸರ್ಕಾರದ ಮುಖ್ಯಸ್ಥ ಮತ್ತು ಮುಖ್ಯ ಕಾರ್ಯನಿರ್ವಾಹಕರಾಗಿದ್ದಾರೆ. ಯುದ್ದದ ಸಮಯದಲ್ಲಿ ಜರ್ಮನ್ ಸಶಸ್ತ್ರ ಪಡೆಗಳ ಕಮಾಂಡರ್ ಇನ್ ಚೀಫ್ ಜರ್ಮನಿಯ ಚಾನ್ಸೆಲರ್‌ ಅವರೇ ಆಗಿರುತ್ತಾರೆ.

ಇದನ್ನೂ ಓದಿ: ಸ್ತ್ರೀ ಪುರುಷರಲ್ಲಿ ಸಮಾನತೆ ಸಾಧ್ಯವೇ?: ಎಚ್ ಎಸ್ ಶ್ರೀಮತಿ

ಜರ್ಮನಿಯ ಹೊಸ ಚಾನ್ಸಲರ್‌ ಓಲಾಫ್ ಸ್ಕೋಲ್ಜ್ ಅವರು ಚುನಾವಣೆಯ ಸಮಯದಲ್ಲೇ ತಮ್ಮ ಸರ್ಕಾರಕ್ಕೆ ಪುರುಷರಂತೆ ಹೆಚ್ಚಿನ ಮಹಿಳೆಯರನ್ನು ನೇಮಿಸುವ ಬಗ್ಗೆ ಭರವಸೆ ನೀಡಿದ್ದರು. ಇದೀಗ ಅವರ ಚುನಾವಣಾ ಭರವಸೆಯನ್ನು ಉಳಿಸಿಕೊಂಡಿದ್ದಾರೆ. ಜೊತೆಗೆ, ಭದ್ರತೆ ಮತ್ತು ರಾಜತಾಂತ್ರಿಕತೆಗೆ ಸಂಬಂಧಿಸಿದ ಎಲ್ಲವನ್ನೂ ಮಹಿಳೆಯರೇ ಮುನ್ನಡೆಸುತ್ತಾರೆ.

ಈ ಬಾರಿ ಜರ್ಮನಿಯು ತನ್ನ ಮೊದಲ ಮಹಿಳಾ ವಿದೇಶಾಂಗ ಮಂತ್ರಿ ಮತ್ತು ಮೊದಲ ಮಹಿಳಾ ಆಂತರಿಕ ಮಂತ್ರಿಯನ್ನು ಹೊಂದಲಿದೆ. ದೇಶವು ಸತತ ಮೂರನೇ ಬಾರಿಗೆ ಮಹಿಳಾ ರಕ್ಷಣಾ ಸಚಿವೆಯನ್ನೂ ಪಡೆಯಲಿದೆ.

“ಭದ್ರತೆಯು ಈ ಸರ್ಕಾರದಲ್ಲಿ ಪ್ರಬಲ ಮಹಿಳೆಯರ ಕೈಯಲ್ಲಿ ಇರುತ್ತದೆ” ಎಂದು ಓಲಾಫ್ ಸ್ಕೋಲ್ಜ್‌ ಸೋಮವಾರ ಹೇಳಿದ್ದಾರೆ. ಓಲಾಫ್ ಸ್ಕೋಲ್ಜ್‌ ಸೋಶಿಯಲ್ ಡೆಮಾಕ್ರಟ್ ಪಕ್ಷದವರಾಗಿದ್ದು, ಪ್ರೋಗ್ರೇಸಿವ್‌ ಗ್ರೀನ್ಸ್ ಮತ್ತು ಲಿಬರ್ಟೇರಿಯನ್ ಫ್ರೀ ಡೆಮೋಕ್ರಾಟ್‌ ಜೊತೆ ಸೇರಿಕೊಂಡು ಮೂರು ಪಕ್ಷದ ಮೈತ್ರಿ ಒಕ್ಕೂಟವನ್ನು ಮುನ್ನಡೆಸುತ್ತಾರೆ.

“ಸಂಪುಟದಲ್ಲಿ ಮಹಿಳೆಯರು ಮತ್ತು ಪುರುಷರು ಸಮಾನವಾಗಿ ಇದ್ದಾರೆ. ಆದ್ದರಿಂದ ಮಹಿಳೆಯರು ಕೂಡಾ ಅರ್ಧದಷ್ಟು ಶಕ್ತಿಯನ್ನು ಪಡೆಯುತ್ತಾರೆ. ನಾವು ಇದನ್ನು ಅರಿತುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ನನಗೆ ತುಂಬಾ ಹೆಮ್ಮೆ ಇದೆ” ಎಂದು ಓಲಾಫ್ ಸ್ಕೋಲ್ಜ್ ಹೇಳಿದ್ದಾರೆ.

ಇದನ್ನೂ ಓದಿ: 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ಭರತನಾಟ್ಯ ಕಲಾವಿದೆ ನರ್ತಕಿ

16 ವರ್ಷಗಳಿಂದ ಜರ್ಮನಿಯ ಚಾನ್ಸೆಲರ್‌ ಆಗಿದ್ದ ಏಂಜೆಲಾ ಮರ್ಕೆಲ್, ಸಂಪ್ರದಾಯವಾದಿಯಾಗಿದ್ದು, ಫೆಮಿನಿಸ್ಟ್ ಪದದಿಂದ ದೂರವಿದ್ದರು. ತನ್ನ ಅಧಿಕಾರದ ಕೊನೆಯ ವರ್ಷಗಳವರೆಗೆ ಅವರು ಮಹಿಳೆಯರ ಪ್ರಗತಿಯ ವಿಷಯವಾಗಿ ವಿರಳವಾಗಿ ಮಾತನಾಡಿದ್ದರು. ಅವರ ಸಚಿವ ಸಂಪುಟದಲ್ಲಿ ಮಹಿಳಾ ಮಂತ್ರಿಗಳು ಮತ್ತು ಶಾಸಕರ ಸಂಖ್ಯೆ ಸುಮಾರು ಮೂರನೇ ಒಂದು ಭಾಗದಷ್ಟು ಅಷ್ಟೇ ಇತ್ತು.

ಈ ವಾರ ಅಧಿಕಾರ ವಹಿಸಿಕೊಳ್ಳಲಿರುವ ಮಹಿಳೆಯರು ತಮ್ಮ ಸಚಿವಾಲಯದ ಮೇಲೆ ಛಾಪು ಮೂಡಿಸುವ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಗ್ರೀನ್ಸ್‌ ಪಕ್ಷದಿಂದ ಚಾನ್ಸೆಲರ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಜರ್ಮನಿಯ ಹೊಸ ವಿದೇಶಾಂಗ ಮಂತ್ರಿ ಅನ್ನಾಲೆನಾ ಬೇರ್‌ಬಾಕ್, ಚೀನಾ ಮತ್ತು ರಷ್ಯಾದಂತಹ ಆಯಕಟ್ಟಿನ ಪ್ರತಿಸ್ಪರ್ಧಿಗಳ ಕಡೆಗೆ ಕಠಿಣವಾದ ನಡೆಯನ್ನು ಅನುಸರಿಸಲಿದ್ದೇನೆ ಎಂದು ತನ್ನ ಯೋಜನೆಯ ಬಗ್ಗೆ ಪ್ರತಿಜ್ಞೆ ಮಾಡಿದ್ದಾರೆ.

ದೇಶದ ನೂತನ ಆಂತರಿಕ ಮಂತ್ರಿ ನ್ಯಾನ್ಸಿ ಫೈಸರ್ ಅವರು, ಉದಾರವಾದಿ ಪ್ರಜಾಪ್ರಭುತ್ವ ಎದುರಿಸುತ್ತಿರುವ ದೊಡ್ಡ ಬೆದರಿಕೆಯಾದ ಬಲಪಂಥೀಯ ಉಗ್ರವಾದದ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ.

“ಲಿಂಗ ಸಮಾನತೆ ಹೊಂದಿರುವ ಕ್ಯಾಬಿನೆಟ್‌ನ ಭಾಗವಾಗಲು ನಾನು ಕೃತಜ್ಞಳಾಗಿದ್ದೇನೆ. ಇದಕ್ಕಾಗಿ ನಾನು ಹಲವು ವರ್ಷಗಳಿಂದ ಹೋರಾಡಿದ್ದೇನೆ. ಇದು ನಮ್ಮ ದೇಶದ ಎಲ್ಲಾ ಮಹಿಳೆಯರ ಸಂಕೇತವಾಗಿದೆ” ಎಂದು ನೂತನ ವಸತಿ ಮತ್ತು ನಗರಾಭಿವೃದ್ಧಿ ಸಚಿವರಾದ ಕ್ಲಾರಾ ಗೆವಿಟ್ಜ್ ಹೇಳಿದ್ದಾರೆ.

ಇದನ್ನೂ ಓದಿ:ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...