Homeಅಂತರಾಷ್ಟ್ರೀಯಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಹೊಸ ಸರ್ಕಾರದ ಸಚಿವ ಸಂಪುಟದಲ್ಲಿ 8 ಮಹಿಳೆಯರು 8 ಪುರುಷರು ಇರಲಿದ್ದಾರೆ

- Advertisement -
- Advertisement -

ಜರ್ಮನಿಯಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಎಂಟು ಪುರುಷರು ಮತ್ತು ಎಂಟು ಮಹಿಳೆಯರನ್ನು ಒಳಗೊಂಡ ಲಿಂಗ ಸಮಾನತೆಯ ಸಚಿವ ಸಂಪುಟ ರಚನೆಯಾಗಿದೆ. ಜರ್ಮನಿಯ ಈ ಹಿಂದಿನ ಚಾನ್ಸಲರ್‌ ಆಗಿದ್ದ ಏಂಜೆಲಾ ಮರ್ಕೆಲ್ ಅವರು ಪುರುಷ ಉತ್ತರಾಧಿಕಾರಿ ಓಲಾಫ್ ಸ್ಕೋಲ್ಜ್ ಅವರಿಗೆ ತಮ್ಮ ಅಧಿಕಾರವನ್ನು ಹಸ್ತಾಂತರಿಸುತ್ತಿದ್ದರೂ, ಹಿಂದಿನ ಸರ್ಕಾರಕ್ಕಿಂತ ಹೆಚ್ಚು ಮಹಿಳೆಯರನ್ನು ಹೊಸ ಸರ್ಕಾರ ಹೊಂದಲಿದೆ. ಜರ್ಮನಿಯಲ್ಲಿ 16 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪುರುಷ ಚಾನ್ಸಲರ್‌ ಅಧಿಕಾರ ವಹಿಸುತ್ತಿದ್ದಾರೆ.

‘ಜರ್ಮನಿ ಚಾನ್ಸೆಲರ್’ ಎಂದರೆ ಜರ್ಮನಿ ಸರ್ಕಾರದ ಮುಖ್ಯಸ್ಥ ಮತ್ತು ಮುಖ್ಯ ಕಾರ್ಯನಿರ್ವಾಹಕರಾಗಿದ್ದಾರೆ. ಯುದ್ದದ ಸಮಯದಲ್ಲಿ ಜರ್ಮನ್ ಸಶಸ್ತ್ರ ಪಡೆಗಳ ಕಮಾಂಡರ್ ಇನ್ ಚೀಫ್ ಜರ್ಮನಿಯ ಚಾನ್ಸೆಲರ್‌ ಅವರೇ ಆಗಿರುತ್ತಾರೆ.

ಇದನ್ನೂ ಓದಿ: ಸ್ತ್ರೀ ಪುರುಷರಲ್ಲಿ ಸಮಾನತೆ ಸಾಧ್ಯವೇ?: ಎಚ್ ಎಸ್ ಶ್ರೀಮತಿ

ಜರ್ಮನಿಯ ಹೊಸ ಚಾನ್ಸಲರ್‌ ಓಲಾಫ್ ಸ್ಕೋಲ್ಜ್ ಅವರು ಚುನಾವಣೆಯ ಸಮಯದಲ್ಲೇ ತಮ್ಮ ಸರ್ಕಾರಕ್ಕೆ ಪುರುಷರಂತೆ ಹೆಚ್ಚಿನ ಮಹಿಳೆಯರನ್ನು ನೇಮಿಸುವ ಬಗ್ಗೆ ಭರವಸೆ ನೀಡಿದ್ದರು. ಇದೀಗ ಅವರ ಚುನಾವಣಾ ಭರವಸೆಯನ್ನು ಉಳಿಸಿಕೊಂಡಿದ್ದಾರೆ. ಜೊತೆಗೆ, ಭದ್ರತೆ ಮತ್ತು ರಾಜತಾಂತ್ರಿಕತೆಗೆ ಸಂಬಂಧಿಸಿದ ಎಲ್ಲವನ್ನೂ ಮಹಿಳೆಯರೇ ಮುನ್ನಡೆಸುತ್ತಾರೆ.

ಈ ಬಾರಿ ಜರ್ಮನಿಯು ತನ್ನ ಮೊದಲ ಮಹಿಳಾ ವಿದೇಶಾಂಗ ಮಂತ್ರಿ ಮತ್ತು ಮೊದಲ ಮಹಿಳಾ ಆಂತರಿಕ ಮಂತ್ರಿಯನ್ನು ಹೊಂದಲಿದೆ. ದೇಶವು ಸತತ ಮೂರನೇ ಬಾರಿಗೆ ಮಹಿಳಾ ರಕ್ಷಣಾ ಸಚಿವೆಯನ್ನೂ ಪಡೆಯಲಿದೆ.

“ಭದ್ರತೆಯು ಈ ಸರ್ಕಾರದಲ್ಲಿ ಪ್ರಬಲ ಮಹಿಳೆಯರ ಕೈಯಲ್ಲಿ ಇರುತ್ತದೆ” ಎಂದು ಓಲಾಫ್ ಸ್ಕೋಲ್ಜ್‌ ಸೋಮವಾರ ಹೇಳಿದ್ದಾರೆ. ಓಲಾಫ್ ಸ್ಕೋಲ್ಜ್‌ ಸೋಶಿಯಲ್ ಡೆಮಾಕ್ರಟ್ ಪಕ್ಷದವರಾಗಿದ್ದು, ಪ್ರೋಗ್ರೇಸಿವ್‌ ಗ್ರೀನ್ಸ್ ಮತ್ತು ಲಿಬರ್ಟೇರಿಯನ್ ಫ್ರೀ ಡೆಮೋಕ್ರಾಟ್‌ ಜೊತೆ ಸೇರಿಕೊಂಡು ಮೂರು ಪಕ್ಷದ ಮೈತ್ರಿ ಒಕ್ಕೂಟವನ್ನು ಮುನ್ನಡೆಸುತ್ತಾರೆ.

“ಸಂಪುಟದಲ್ಲಿ ಮಹಿಳೆಯರು ಮತ್ತು ಪುರುಷರು ಸಮಾನವಾಗಿ ಇದ್ದಾರೆ. ಆದ್ದರಿಂದ ಮಹಿಳೆಯರು ಕೂಡಾ ಅರ್ಧದಷ್ಟು ಶಕ್ತಿಯನ್ನು ಪಡೆಯುತ್ತಾರೆ. ನಾವು ಇದನ್ನು ಅರಿತುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ನನಗೆ ತುಂಬಾ ಹೆಮ್ಮೆ ಇದೆ” ಎಂದು ಓಲಾಫ್ ಸ್ಕೋಲ್ಜ್ ಹೇಳಿದ್ದಾರೆ.

ಇದನ್ನೂ ಓದಿ: 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ಭರತನಾಟ್ಯ ಕಲಾವಿದೆ ನರ್ತಕಿ

16 ವರ್ಷಗಳಿಂದ ಜರ್ಮನಿಯ ಚಾನ್ಸೆಲರ್‌ ಆಗಿದ್ದ ಏಂಜೆಲಾ ಮರ್ಕೆಲ್, ಸಂಪ್ರದಾಯವಾದಿಯಾಗಿದ್ದು, ಫೆಮಿನಿಸ್ಟ್ ಪದದಿಂದ ದೂರವಿದ್ದರು. ತನ್ನ ಅಧಿಕಾರದ ಕೊನೆಯ ವರ್ಷಗಳವರೆಗೆ ಅವರು ಮಹಿಳೆಯರ ಪ್ರಗತಿಯ ವಿಷಯವಾಗಿ ವಿರಳವಾಗಿ ಮಾತನಾಡಿದ್ದರು. ಅವರ ಸಚಿವ ಸಂಪುಟದಲ್ಲಿ ಮಹಿಳಾ ಮಂತ್ರಿಗಳು ಮತ್ತು ಶಾಸಕರ ಸಂಖ್ಯೆ ಸುಮಾರು ಮೂರನೇ ಒಂದು ಭಾಗದಷ್ಟು ಅಷ್ಟೇ ಇತ್ತು.

ಈ ವಾರ ಅಧಿಕಾರ ವಹಿಸಿಕೊಳ್ಳಲಿರುವ ಮಹಿಳೆಯರು ತಮ್ಮ ಸಚಿವಾಲಯದ ಮೇಲೆ ಛಾಪು ಮೂಡಿಸುವ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಗ್ರೀನ್ಸ್‌ ಪಕ್ಷದಿಂದ ಚಾನ್ಸೆಲರ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಜರ್ಮನಿಯ ಹೊಸ ವಿದೇಶಾಂಗ ಮಂತ್ರಿ ಅನ್ನಾಲೆನಾ ಬೇರ್‌ಬಾಕ್, ಚೀನಾ ಮತ್ತು ರಷ್ಯಾದಂತಹ ಆಯಕಟ್ಟಿನ ಪ್ರತಿಸ್ಪರ್ಧಿಗಳ ಕಡೆಗೆ ಕಠಿಣವಾದ ನಡೆಯನ್ನು ಅನುಸರಿಸಲಿದ್ದೇನೆ ಎಂದು ತನ್ನ ಯೋಜನೆಯ ಬಗ್ಗೆ ಪ್ರತಿಜ್ಞೆ ಮಾಡಿದ್ದಾರೆ.

ದೇಶದ ನೂತನ ಆಂತರಿಕ ಮಂತ್ರಿ ನ್ಯಾನ್ಸಿ ಫೈಸರ್ ಅವರು, ಉದಾರವಾದಿ ಪ್ರಜಾಪ್ರಭುತ್ವ ಎದುರಿಸುತ್ತಿರುವ ದೊಡ್ಡ ಬೆದರಿಕೆಯಾದ ಬಲಪಂಥೀಯ ಉಗ್ರವಾದದ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ.

“ಲಿಂಗ ಸಮಾನತೆ ಹೊಂದಿರುವ ಕ್ಯಾಬಿನೆಟ್‌ನ ಭಾಗವಾಗಲು ನಾನು ಕೃತಜ್ಞಳಾಗಿದ್ದೇನೆ. ಇದಕ್ಕಾಗಿ ನಾನು ಹಲವು ವರ್ಷಗಳಿಂದ ಹೋರಾಡಿದ್ದೇನೆ. ಇದು ನಮ್ಮ ದೇಶದ ಎಲ್ಲಾ ಮಹಿಳೆಯರ ಸಂಕೇತವಾಗಿದೆ” ಎಂದು ನೂತನ ವಸತಿ ಮತ್ತು ನಗರಾಭಿವೃದ್ಧಿ ಸಚಿವರಾದ ಕ್ಲಾರಾ ಗೆವಿಟ್ಜ್ ಹೇಳಿದ್ದಾರೆ.

ಇದನ್ನೂ ಓದಿ:ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...