Homeಅಂತರಾಷ್ಟ್ರೀಯಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಹೊಸ ಸರ್ಕಾರದ ಸಚಿವ ಸಂಪುಟದಲ್ಲಿ 8 ಮಹಿಳೆಯರು 8 ಪುರುಷರು ಇರಲಿದ್ದಾರೆ

- Advertisement -
- Advertisement -

ಜರ್ಮನಿಯಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಎಂಟು ಪುರುಷರು ಮತ್ತು ಎಂಟು ಮಹಿಳೆಯರನ್ನು ಒಳಗೊಂಡ ಲಿಂಗ ಸಮಾನತೆಯ ಸಚಿವ ಸಂಪುಟ ರಚನೆಯಾಗಿದೆ. ಜರ್ಮನಿಯ ಈ ಹಿಂದಿನ ಚಾನ್ಸಲರ್‌ ಆಗಿದ್ದ ಏಂಜೆಲಾ ಮರ್ಕೆಲ್ ಅವರು ಪುರುಷ ಉತ್ತರಾಧಿಕಾರಿ ಓಲಾಫ್ ಸ್ಕೋಲ್ಜ್ ಅವರಿಗೆ ತಮ್ಮ ಅಧಿಕಾರವನ್ನು ಹಸ್ತಾಂತರಿಸುತ್ತಿದ್ದರೂ, ಹಿಂದಿನ ಸರ್ಕಾರಕ್ಕಿಂತ ಹೆಚ್ಚು ಮಹಿಳೆಯರನ್ನು ಹೊಸ ಸರ್ಕಾರ ಹೊಂದಲಿದೆ. ಜರ್ಮನಿಯಲ್ಲಿ 16 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪುರುಷ ಚಾನ್ಸಲರ್‌ ಅಧಿಕಾರ ವಹಿಸುತ್ತಿದ್ದಾರೆ.

‘ಜರ್ಮನಿ ಚಾನ್ಸೆಲರ್’ ಎಂದರೆ ಜರ್ಮನಿ ಸರ್ಕಾರದ ಮುಖ್ಯಸ್ಥ ಮತ್ತು ಮುಖ್ಯ ಕಾರ್ಯನಿರ್ವಾಹಕರಾಗಿದ್ದಾರೆ. ಯುದ್ದದ ಸಮಯದಲ್ಲಿ ಜರ್ಮನ್ ಸಶಸ್ತ್ರ ಪಡೆಗಳ ಕಮಾಂಡರ್ ಇನ್ ಚೀಫ್ ಜರ್ಮನಿಯ ಚಾನ್ಸೆಲರ್‌ ಅವರೇ ಆಗಿರುತ್ತಾರೆ.

ಇದನ್ನೂ ಓದಿ: ಸ್ತ್ರೀ ಪುರುಷರಲ್ಲಿ ಸಮಾನತೆ ಸಾಧ್ಯವೇ?: ಎಚ್ ಎಸ್ ಶ್ರೀಮತಿ

ಜರ್ಮನಿಯ ಹೊಸ ಚಾನ್ಸಲರ್‌ ಓಲಾಫ್ ಸ್ಕೋಲ್ಜ್ ಅವರು ಚುನಾವಣೆಯ ಸಮಯದಲ್ಲೇ ತಮ್ಮ ಸರ್ಕಾರಕ್ಕೆ ಪುರುಷರಂತೆ ಹೆಚ್ಚಿನ ಮಹಿಳೆಯರನ್ನು ನೇಮಿಸುವ ಬಗ್ಗೆ ಭರವಸೆ ನೀಡಿದ್ದರು. ಇದೀಗ ಅವರ ಚುನಾವಣಾ ಭರವಸೆಯನ್ನು ಉಳಿಸಿಕೊಂಡಿದ್ದಾರೆ. ಜೊತೆಗೆ, ಭದ್ರತೆ ಮತ್ತು ರಾಜತಾಂತ್ರಿಕತೆಗೆ ಸಂಬಂಧಿಸಿದ ಎಲ್ಲವನ್ನೂ ಮಹಿಳೆಯರೇ ಮುನ್ನಡೆಸುತ್ತಾರೆ.

ಈ ಬಾರಿ ಜರ್ಮನಿಯು ತನ್ನ ಮೊದಲ ಮಹಿಳಾ ವಿದೇಶಾಂಗ ಮಂತ್ರಿ ಮತ್ತು ಮೊದಲ ಮಹಿಳಾ ಆಂತರಿಕ ಮಂತ್ರಿಯನ್ನು ಹೊಂದಲಿದೆ. ದೇಶವು ಸತತ ಮೂರನೇ ಬಾರಿಗೆ ಮಹಿಳಾ ರಕ್ಷಣಾ ಸಚಿವೆಯನ್ನೂ ಪಡೆಯಲಿದೆ.

“ಭದ್ರತೆಯು ಈ ಸರ್ಕಾರದಲ್ಲಿ ಪ್ರಬಲ ಮಹಿಳೆಯರ ಕೈಯಲ್ಲಿ ಇರುತ್ತದೆ” ಎಂದು ಓಲಾಫ್ ಸ್ಕೋಲ್ಜ್‌ ಸೋಮವಾರ ಹೇಳಿದ್ದಾರೆ. ಓಲಾಫ್ ಸ್ಕೋಲ್ಜ್‌ ಸೋಶಿಯಲ್ ಡೆಮಾಕ್ರಟ್ ಪಕ್ಷದವರಾಗಿದ್ದು, ಪ್ರೋಗ್ರೇಸಿವ್‌ ಗ್ರೀನ್ಸ್ ಮತ್ತು ಲಿಬರ್ಟೇರಿಯನ್ ಫ್ರೀ ಡೆಮೋಕ್ರಾಟ್‌ ಜೊತೆ ಸೇರಿಕೊಂಡು ಮೂರು ಪಕ್ಷದ ಮೈತ್ರಿ ಒಕ್ಕೂಟವನ್ನು ಮುನ್ನಡೆಸುತ್ತಾರೆ.

“ಸಂಪುಟದಲ್ಲಿ ಮಹಿಳೆಯರು ಮತ್ತು ಪುರುಷರು ಸಮಾನವಾಗಿ ಇದ್ದಾರೆ. ಆದ್ದರಿಂದ ಮಹಿಳೆಯರು ಕೂಡಾ ಅರ್ಧದಷ್ಟು ಶಕ್ತಿಯನ್ನು ಪಡೆಯುತ್ತಾರೆ. ನಾವು ಇದನ್ನು ಅರಿತುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ನನಗೆ ತುಂಬಾ ಹೆಮ್ಮೆ ಇದೆ” ಎಂದು ಓಲಾಫ್ ಸ್ಕೋಲ್ಜ್ ಹೇಳಿದ್ದಾರೆ.

ಇದನ್ನೂ ಓದಿ: 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ಭರತನಾಟ್ಯ ಕಲಾವಿದೆ ನರ್ತಕಿ

16 ವರ್ಷಗಳಿಂದ ಜರ್ಮನಿಯ ಚಾನ್ಸೆಲರ್‌ ಆಗಿದ್ದ ಏಂಜೆಲಾ ಮರ್ಕೆಲ್, ಸಂಪ್ರದಾಯವಾದಿಯಾಗಿದ್ದು, ಫೆಮಿನಿಸ್ಟ್ ಪದದಿಂದ ದೂರವಿದ್ದರು. ತನ್ನ ಅಧಿಕಾರದ ಕೊನೆಯ ವರ್ಷಗಳವರೆಗೆ ಅವರು ಮಹಿಳೆಯರ ಪ್ರಗತಿಯ ವಿಷಯವಾಗಿ ವಿರಳವಾಗಿ ಮಾತನಾಡಿದ್ದರು. ಅವರ ಸಚಿವ ಸಂಪುಟದಲ್ಲಿ ಮಹಿಳಾ ಮಂತ್ರಿಗಳು ಮತ್ತು ಶಾಸಕರ ಸಂಖ್ಯೆ ಸುಮಾರು ಮೂರನೇ ಒಂದು ಭಾಗದಷ್ಟು ಅಷ್ಟೇ ಇತ್ತು.

ಈ ವಾರ ಅಧಿಕಾರ ವಹಿಸಿಕೊಳ್ಳಲಿರುವ ಮಹಿಳೆಯರು ತಮ್ಮ ಸಚಿವಾಲಯದ ಮೇಲೆ ಛಾಪು ಮೂಡಿಸುವ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಗ್ರೀನ್ಸ್‌ ಪಕ್ಷದಿಂದ ಚಾನ್ಸೆಲರ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಜರ್ಮನಿಯ ಹೊಸ ವಿದೇಶಾಂಗ ಮಂತ್ರಿ ಅನ್ನಾಲೆನಾ ಬೇರ್‌ಬಾಕ್, ಚೀನಾ ಮತ್ತು ರಷ್ಯಾದಂತಹ ಆಯಕಟ್ಟಿನ ಪ್ರತಿಸ್ಪರ್ಧಿಗಳ ಕಡೆಗೆ ಕಠಿಣವಾದ ನಡೆಯನ್ನು ಅನುಸರಿಸಲಿದ್ದೇನೆ ಎಂದು ತನ್ನ ಯೋಜನೆಯ ಬಗ್ಗೆ ಪ್ರತಿಜ್ಞೆ ಮಾಡಿದ್ದಾರೆ.

ದೇಶದ ನೂತನ ಆಂತರಿಕ ಮಂತ್ರಿ ನ್ಯಾನ್ಸಿ ಫೈಸರ್ ಅವರು, ಉದಾರವಾದಿ ಪ್ರಜಾಪ್ರಭುತ್ವ ಎದುರಿಸುತ್ತಿರುವ ದೊಡ್ಡ ಬೆದರಿಕೆಯಾದ ಬಲಪಂಥೀಯ ಉಗ್ರವಾದದ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ.

“ಲಿಂಗ ಸಮಾನತೆ ಹೊಂದಿರುವ ಕ್ಯಾಬಿನೆಟ್‌ನ ಭಾಗವಾಗಲು ನಾನು ಕೃತಜ್ಞಳಾಗಿದ್ದೇನೆ. ಇದಕ್ಕಾಗಿ ನಾನು ಹಲವು ವರ್ಷಗಳಿಂದ ಹೋರಾಡಿದ್ದೇನೆ. ಇದು ನಮ್ಮ ದೇಶದ ಎಲ್ಲಾ ಮಹಿಳೆಯರ ಸಂಕೇತವಾಗಿದೆ” ಎಂದು ನೂತನ ವಸತಿ ಮತ್ತು ನಗರಾಭಿವೃದ್ಧಿ ಸಚಿವರಾದ ಕ್ಲಾರಾ ಗೆವಿಟ್ಜ್ ಹೇಳಿದ್ದಾರೆ.

ಇದನ್ನೂ ಓದಿ:ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...