Homeಅಂತರಾಷ್ಟ್ರೀಯಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಹೊಸ ಸರ್ಕಾರದ ಸಚಿವ ಸಂಪುಟದಲ್ಲಿ 8 ಮಹಿಳೆಯರು 8 ಪುರುಷರು ಇರಲಿದ್ದಾರೆ

- Advertisement -
- Advertisement -

ಜರ್ಮನಿಯಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಎಂಟು ಪುರುಷರು ಮತ್ತು ಎಂಟು ಮಹಿಳೆಯರನ್ನು ಒಳಗೊಂಡ ಲಿಂಗ ಸಮಾನತೆಯ ಸಚಿವ ಸಂಪುಟ ರಚನೆಯಾಗಿದೆ. ಜರ್ಮನಿಯ ಈ ಹಿಂದಿನ ಚಾನ್ಸಲರ್‌ ಆಗಿದ್ದ ಏಂಜೆಲಾ ಮರ್ಕೆಲ್ ಅವರು ಪುರುಷ ಉತ್ತರಾಧಿಕಾರಿ ಓಲಾಫ್ ಸ್ಕೋಲ್ಜ್ ಅವರಿಗೆ ತಮ್ಮ ಅಧಿಕಾರವನ್ನು ಹಸ್ತಾಂತರಿಸುತ್ತಿದ್ದರೂ, ಹಿಂದಿನ ಸರ್ಕಾರಕ್ಕಿಂತ ಹೆಚ್ಚು ಮಹಿಳೆಯರನ್ನು ಹೊಸ ಸರ್ಕಾರ ಹೊಂದಲಿದೆ. ಜರ್ಮನಿಯಲ್ಲಿ 16 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪುರುಷ ಚಾನ್ಸಲರ್‌ ಅಧಿಕಾರ ವಹಿಸುತ್ತಿದ್ದಾರೆ.

‘ಜರ್ಮನಿ ಚಾನ್ಸೆಲರ್’ ಎಂದರೆ ಜರ್ಮನಿ ಸರ್ಕಾರದ ಮುಖ್ಯಸ್ಥ ಮತ್ತು ಮುಖ್ಯ ಕಾರ್ಯನಿರ್ವಾಹಕರಾಗಿದ್ದಾರೆ. ಯುದ್ದದ ಸಮಯದಲ್ಲಿ ಜರ್ಮನ್ ಸಶಸ್ತ್ರ ಪಡೆಗಳ ಕಮಾಂಡರ್ ಇನ್ ಚೀಫ್ ಜರ್ಮನಿಯ ಚಾನ್ಸೆಲರ್‌ ಅವರೇ ಆಗಿರುತ್ತಾರೆ.

ಇದನ್ನೂ ಓದಿ: ಸ್ತ್ರೀ ಪುರುಷರಲ್ಲಿ ಸಮಾನತೆ ಸಾಧ್ಯವೇ?: ಎಚ್ ಎಸ್ ಶ್ರೀಮತಿ

ಜರ್ಮನಿಯ ಹೊಸ ಚಾನ್ಸಲರ್‌ ಓಲಾಫ್ ಸ್ಕೋಲ್ಜ್ ಅವರು ಚುನಾವಣೆಯ ಸಮಯದಲ್ಲೇ ತಮ್ಮ ಸರ್ಕಾರಕ್ಕೆ ಪುರುಷರಂತೆ ಹೆಚ್ಚಿನ ಮಹಿಳೆಯರನ್ನು ನೇಮಿಸುವ ಬಗ್ಗೆ ಭರವಸೆ ನೀಡಿದ್ದರು. ಇದೀಗ ಅವರ ಚುನಾವಣಾ ಭರವಸೆಯನ್ನು ಉಳಿಸಿಕೊಂಡಿದ್ದಾರೆ. ಜೊತೆಗೆ, ಭದ್ರತೆ ಮತ್ತು ರಾಜತಾಂತ್ರಿಕತೆಗೆ ಸಂಬಂಧಿಸಿದ ಎಲ್ಲವನ್ನೂ ಮಹಿಳೆಯರೇ ಮುನ್ನಡೆಸುತ್ತಾರೆ.

ಈ ಬಾರಿ ಜರ್ಮನಿಯು ತನ್ನ ಮೊದಲ ಮಹಿಳಾ ವಿದೇಶಾಂಗ ಮಂತ್ರಿ ಮತ್ತು ಮೊದಲ ಮಹಿಳಾ ಆಂತರಿಕ ಮಂತ್ರಿಯನ್ನು ಹೊಂದಲಿದೆ. ದೇಶವು ಸತತ ಮೂರನೇ ಬಾರಿಗೆ ಮಹಿಳಾ ರಕ್ಷಣಾ ಸಚಿವೆಯನ್ನೂ ಪಡೆಯಲಿದೆ.

“ಭದ್ರತೆಯು ಈ ಸರ್ಕಾರದಲ್ಲಿ ಪ್ರಬಲ ಮಹಿಳೆಯರ ಕೈಯಲ್ಲಿ ಇರುತ್ತದೆ” ಎಂದು ಓಲಾಫ್ ಸ್ಕೋಲ್ಜ್‌ ಸೋಮವಾರ ಹೇಳಿದ್ದಾರೆ. ಓಲಾಫ್ ಸ್ಕೋಲ್ಜ್‌ ಸೋಶಿಯಲ್ ಡೆಮಾಕ್ರಟ್ ಪಕ್ಷದವರಾಗಿದ್ದು, ಪ್ರೋಗ್ರೇಸಿವ್‌ ಗ್ರೀನ್ಸ್ ಮತ್ತು ಲಿಬರ್ಟೇರಿಯನ್ ಫ್ರೀ ಡೆಮೋಕ್ರಾಟ್‌ ಜೊತೆ ಸೇರಿಕೊಂಡು ಮೂರು ಪಕ್ಷದ ಮೈತ್ರಿ ಒಕ್ಕೂಟವನ್ನು ಮುನ್ನಡೆಸುತ್ತಾರೆ.

“ಸಂಪುಟದಲ್ಲಿ ಮಹಿಳೆಯರು ಮತ್ತು ಪುರುಷರು ಸಮಾನವಾಗಿ ಇದ್ದಾರೆ. ಆದ್ದರಿಂದ ಮಹಿಳೆಯರು ಕೂಡಾ ಅರ್ಧದಷ್ಟು ಶಕ್ತಿಯನ್ನು ಪಡೆಯುತ್ತಾರೆ. ನಾವು ಇದನ್ನು ಅರಿತುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ನನಗೆ ತುಂಬಾ ಹೆಮ್ಮೆ ಇದೆ” ಎಂದು ಓಲಾಫ್ ಸ್ಕೋಲ್ಜ್ ಹೇಳಿದ್ದಾರೆ.

ಇದನ್ನೂ ಓದಿ: 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ಭರತನಾಟ್ಯ ಕಲಾವಿದೆ ನರ್ತಕಿ

16 ವರ್ಷಗಳಿಂದ ಜರ್ಮನಿಯ ಚಾನ್ಸೆಲರ್‌ ಆಗಿದ್ದ ಏಂಜೆಲಾ ಮರ್ಕೆಲ್, ಸಂಪ್ರದಾಯವಾದಿಯಾಗಿದ್ದು, ಫೆಮಿನಿಸ್ಟ್ ಪದದಿಂದ ದೂರವಿದ್ದರು. ತನ್ನ ಅಧಿಕಾರದ ಕೊನೆಯ ವರ್ಷಗಳವರೆಗೆ ಅವರು ಮಹಿಳೆಯರ ಪ್ರಗತಿಯ ವಿಷಯವಾಗಿ ವಿರಳವಾಗಿ ಮಾತನಾಡಿದ್ದರು. ಅವರ ಸಚಿವ ಸಂಪುಟದಲ್ಲಿ ಮಹಿಳಾ ಮಂತ್ರಿಗಳು ಮತ್ತು ಶಾಸಕರ ಸಂಖ್ಯೆ ಸುಮಾರು ಮೂರನೇ ಒಂದು ಭಾಗದಷ್ಟು ಅಷ್ಟೇ ಇತ್ತು.

ಈ ವಾರ ಅಧಿಕಾರ ವಹಿಸಿಕೊಳ್ಳಲಿರುವ ಮಹಿಳೆಯರು ತಮ್ಮ ಸಚಿವಾಲಯದ ಮೇಲೆ ಛಾಪು ಮೂಡಿಸುವ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಗ್ರೀನ್ಸ್‌ ಪಕ್ಷದಿಂದ ಚಾನ್ಸೆಲರ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಜರ್ಮನಿಯ ಹೊಸ ವಿದೇಶಾಂಗ ಮಂತ್ರಿ ಅನ್ನಾಲೆನಾ ಬೇರ್‌ಬಾಕ್, ಚೀನಾ ಮತ್ತು ರಷ್ಯಾದಂತಹ ಆಯಕಟ್ಟಿನ ಪ್ರತಿಸ್ಪರ್ಧಿಗಳ ಕಡೆಗೆ ಕಠಿಣವಾದ ನಡೆಯನ್ನು ಅನುಸರಿಸಲಿದ್ದೇನೆ ಎಂದು ತನ್ನ ಯೋಜನೆಯ ಬಗ್ಗೆ ಪ್ರತಿಜ್ಞೆ ಮಾಡಿದ್ದಾರೆ.

ದೇಶದ ನೂತನ ಆಂತರಿಕ ಮಂತ್ರಿ ನ್ಯಾನ್ಸಿ ಫೈಸರ್ ಅವರು, ಉದಾರವಾದಿ ಪ್ರಜಾಪ್ರಭುತ್ವ ಎದುರಿಸುತ್ತಿರುವ ದೊಡ್ಡ ಬೆದರಿಕೆಯಾದ ಬಲಪಂಥೀಯ ಉಗ್ರವಾದದ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ.

“ಲಿಂಗ ಸಮಾನತೆ ಹೊಂದಿರುವ ಕ್ಯಾಬಿನೆಟ್‌ನ ಭಾಗವಾಗಲು ನಾನು ಕೃತಜ್ಞಳಾಗಿದ್ದೇನೆ. ಇದಕ್ಕಾಗಿ ನಾನು ಹಲವು ವರ್ಷಗಳಿಂದ ಹೋರಾಡಿದ್ದೇನೆ. ಇದು ನಮ್ಮ ದೇಶದ ಎಲ್ಲಾ ಮಹಿಳೆಯರ ಸಂಕೇತವಾಗಿದೆ” ಎಂದು ನೂತನ ವಸತಿ ಮತ್ತು ನಗರಾಭಿವೃದ್ಧಿ ಸಚಿವರಾದ ಕ್ಲಾರಾ ಗೆವಿಟ್ಜ್ ಹೇಳಿದ್ದಾರೆ.

ಇದನ್ನೂ ಓದಿ:ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...