Homeಅಂತರಾಷ್ಟ್ರೀಯಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಹೊಸ ಸರ್ಕಾರದ ಸಚಿವ ಸಂಪುಟದಲ್ಲಿ 8 ಮಹಿಳೆಯರು 8 ಪುರುಷರು ಇರಲಿದ್ದಾರೆ

- Advertisement -
- Advertisement -

ಜರ್ಮನಿಯಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಎಂಟು ಪುರುಷರು ಮತ್ತು ಎಂಟು ಮಹಿಳೆಯರನ್ನು ಒಳಗೊಂಡ ಲಿಂಗ ಸಮಾನತೆಯ ಸಚಿವ ಸಂಪುಟ ರಚನೆಯಾಗಿದೆ. ಜರ್ಮನಿಯ ಈ ಹಿಂದಿನ ಚಾನ್ಸಲರ್‌ ಆಗಿದ್ದ ಏಂಜೆಲಾ ಮರ್ಕೆಲ್ ಅವರು ಪುರುಷ ಉತ್ತರಾಧಿಕಾರಿ ಓಲಾಫ್ ಸ್ಕೋಲ್ಜ್ ಅವರಿಗೆ ತಮ್ಮ ಅಧಿಕಾರವನ್ನು ಹಸ್ತಾಂತರಿಸುತ್ತಿದ್ದರೂ, ಹಿಂದಿನ ಸರ್ಕಾರಕ್ಕಿಂತ ಹೆಚ್ಚು ಮಹಿಳೆಯರನ್ನು ಹೊಸ ಸರ್ಕಾರ ಹೊಂದಲಿದೆ. ಜರ್ಮನಿಯಲ್ಲಿ 16 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪುರುಷ ಚಾನ್ಸಲರ್‌ ಅಧಿಕಾರ ವಹಿಸುತ್ತಿದ್ದಾರೆ.

‘ಜರ್ಮನಿ ಚಾನ್ಸೆಲರ್’ ಎಂದರೆ ಜರ್ಮನಿ ಸರ್ಕಾರದ ಮುಖ್ಯಸ್ಥ ಮತ್ತು ಮುಖ್ಯ ಕಾರ್ಯನಿರ್ವಾಹಕರಾಗಿದ್ದಾರೆ. ಯುದ್ದದ ಸಮಯದಲ್ಲಿ ಜರ್ಮನ್ ಸಶಸ್ತ್ರ ಪಡೆಗಳ ಕಮಾಂಡರ್ ಇನ್ ಚೀಫ್ ಜರ್ಮನಿಯ ಚಾನ್ಸೆಲರ್‌ ಅವರೇ ಆಗಿರುತ್ತಾರೆ.

ಇದನ್ನೂ ಓದಿ: ಸ್ತ್ರೀ ಪುರುಷರಲ್ಲಿ ಸಮಾನತೆ ಸಾಧ್ಯವೇ?: ಎಚ್ ಎಸ್ ಶ್ರೀಮತಿ

ಜರ್ಮನಿಯ ಹೊಸ ಚಾನ್ಸಲರ್‌ ಓಲಾಫ್ ಸ್ಕೋಲ್ಜ್ ಅವರು ಚುನಾವಣೆಯ ಸಮಯದಲ್ಲೇ ತಮ್ಮ ಸರ್ಕಾರಕ್ಕೆ ಪುರುಷರಂತೆ ಹೆಚ್ಚಿನ ಮಹಿಳೆಯರನ್ನು ನೇಮಿಸುವ ಬಗ್ಗೆ ಭರವಸೆ ನೀಡಿದ್ದರು. ಇದೀಗ ಅವರ ಚುನಾವಣಾ ಭರವಸೆಯನ್ನು ಉಳಿಸಿಕೊಂಡಿದ್ದಾರೆ. ಜೊತೆಗೆ, ಭದ್ರತೆ ಮತ್ತು ರಾಜತಾಂತ್ರಿಕತೆಗೆ ಸಂಬಂಧಿಸಿದ ಎಲ್ಲವನ್ನೂ ಮಹಿಳೆಯರೇ ಮುನ್ನಡೆಸುತ್ತಾರೆ.

ಈ ಬಾರಿ ಜರ್ಮನಿಯು ತನ್ನ ಮೊದಲ ಮಹಿಳಾ ವಿದೇಶಾಂಗ ಮಂತ್ರಿ ಮತ್ತು ಮೊದಲ ಮಹಿಳಾ ಆಂತರಿಕ ಮಂತ್ರಿಯನ್ನು ಹೊಂದಲಿದೆ. ದೇಶವು ಸತತ ಮೂರನೇ ಬಾರಿಗೆ ಮಹಿಳಾ ರಕ್ಷಣಾ ಸಚಿವೆಯನ್ನೂ ಪಡೆಯಲಿದೆ.

“ಭದ್ರತೆಯು ಈ ಸರ್ಕಾರದಲ್ಲಿ ಪ್ರಬಲ ಮಹಿಳೆಯರ ಕೈಯಲ್ಲಿ ಇರುತ್ತದೆ” ಎಂದು ಓಲಾಫ್ ಸ್ಕೋಲ್ಜ್‌ ಸೋಮವಾರ ಹೇಳಿದ್ದಾರೆ. ಓಲಾಫ್ ಸ್ಕೋಲ್ಜ್‌ ಸೋಶಿಯಲ್ ಡೆಮಾಕ್ರಟ್ ಪಕ್ಷದವರಾಗಿದ್ದು, ಪ್ರೋಗ್ರೇಸಿವ್‌ ಗ್ರೀನ್ಸ್ ಮತ್ತು ಲಿಬರ್ಟೇರಿಯನ್ ಫ್ರೀ ಡೆಮೋಕ್ರಾಟ್‌ ಜೊತೆ ಸೇರಿಕೊಂಡು ಮೂರು ಪಕ್ಷದ ಮೈತ್ರಿ ಒಕ್ಕೂಟವನ್ನು ಮುನ್ನಡೆಸುತ್ತಾರೆ.

“ಸಂಪುಟದಲ್ಲಿ ಮಹಿಳೆಯರು ಮತ್ತು ಪುರುಷರು ಸಮಾನವಾಗಿ ಇದ್ದಾರೆ. ಆದ್ದರಿಂದ ಮಹಿಳೆಯರು ಕೂಡಾ ಅರ್ಧದಷ್ಟು ಶಕ್ತಿಯನ್ನು ಪಡೆಯುತ್ತಾರೆ. ನಾವು ಇದನ್ನು ಅರಿತುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ನನಗೆ ತುಂಬಾ ಹೆಮ್ಮೆ ಇದೆ” ಎಂದು ಓಲಾಫ್ ಸ್ಕೋಲ್ಜ್ ಹೇಳಿದ್ದಾರೆ.

ಇದನ್ನೂ ಓದಿ: 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ಭರತನಾಟ್ಯ ಕಲಾವಿದೆ ನರ್ತಕಿ

16 ವರ್ಷಗಳಿಂದ ಜರ್ಮನಿಯ ಚಾನ್ಸೆಲರ್‌ ಆಗಿದ್ದ ಏಂಜೆಲಾ ಮರ್ಕೆಲ್, ಸಂಪ್ರದಾಯವಾದಿಯಾಗಿದ್ದು, ಫೆಮಿನಿಸ್ಟ್ ಪದದಿಂದ ದೂರವಿದ್ದರು. ತನ್ನ ಅಧಿಕಾರದ ಕೊನೆಯ ವರ್ಷಗಳವರೆಗೆ ಅವರು ಮಹಿಳೆಯರ ಪ್ರಗತಿಯ ವಿಷಯವಾಗಿ ವಿರಳವಾಗಿ ಮಾತನಾಡಿದ್ದರು. ಅವರ ಸಚಿವ ಸಂಪುಟದಲ್ಲಿ ಮಹಿಳಾ ಮಂತ್ರಿಗಳು ಮತ್ತು ಶಾಸಕರ ಸಂಖ್ಯೆ ಸುಮಾರು ಮೂರನೇ ಒಂದು ಭಾಗದಷ್ಟು ಅಷ್ಟೇ ಇತ್ತು.

ಈ ವಾರ ಅಧಿಕಾರ ವಹಿಸಿಕೊಳ್ಳಲಿರುವ ಮಹಿಳೆಯರು ತಮ್ಮ ಸಚಿವಾಲಯದ ಮೇಲೆ ಛಾಪು ಮೂಡಿಸುವ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಗ್ರೀನ್ಸ್‌ ಪಕ್ಷದಿಂದ ಚಾನ್ಸೆಲರ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಜರ್ಮನಿಯ ಹೊಸ ವಿದೇಶಾಂಗ ಮಂತ್ರಿ ಅನ್ನಾಲೆನಾ ಬೇರ್‌ಬಾಕ್, ಚೀನಾ ಮತ್ತು ರಷ್ಯಾದಂತಹ ಆಯಕಟ್ಟಿನ ಪ್ರತಿಸ್ಪರ್ಧಿಗಳ ಕಡೆಗೆ ಕಠಿಣವಾದ ನಡೆಯನ್ನು ಅನುಸರಿಸಲಿದ್ದೇನೆ ಎಂದು ತನ್ನ ಯೋಜನೆಯ ಬಗ್ಗೆ ಪ್ರತಿಜ್ಞೆ ಮಾಡಿದ್ದಾರೆ.

ದೇಶದ ನೂತನ ಆಂತರಿಕ ಮಂತ್ರಿ ನ್ಯಾನ್ಸಿ ಫೈಸರ್ ಅವರು, ಉದಾರವಾದಿ ಪ್ರಜಾಪ್ರಭುತ್ವ ಎದುರಿಸುತ್ತಿರುವ ದೊಡ್ಡ ಬೆದರಿಕೆಯಾದ ಬಲಪಂಥೀಯ ಉಗ್ರವಾದದ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ.

“ಲಿಂಗ ಸಮಾನತೆ ಹೊಂದಿರುವ ಕ್ಯಾಬಿನೆಟ್‌ನ ಭಾಗವಾಗಲು ನಾನು ಕೃತಜ್ಞಳಾಗಿದ್ದೇನೆ. ಇದಕ್ಕಾಗಿ ನಾನು ಹಲವು ವರ್ಷಗಳಿಂದ ಹೋರಾಡಿದ್ದೇನೆ. ಇದು ನಮ್ಮ ದೇಶದ ಎಲ್ಲಾ ಮಹಿಳೆಯರ ಸಂಕೇತವಾಗಿದೆ” ಎಂದು ನೂತನ ವಸತಿ ಮತ್ತು ನಗರಾಭಿವೃದ್ಧಿ ಸಚಿವರಾದ ಕ್ಲಾರಾ ಗೆವಿಟ್ಜ್ ಹೇಳಿದ್ದಾರೆ.

ಇದನ್ನೂ ಓದಿ:ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...