Homeಅಂತರಾಷ್ಟ್ರೀಯಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಜರ್ಮನಿಯ ಹೊಸ ಸರ್ಕಾರದಲ್ಲಿ ಲಿಂಗ ಸಮಾನತೆಯ ಸಚಿವ ಸಂಪುಟ!

ಹೊಸ ಸರ್ಕಾರದ ಸಚಿವ ಸಂಪುಟದಲ್ಲಿ 8 ಮಹಿಳೆಯರು 8 ಪುರುಷರು ಇರಲಿದ್ದಾರೆ

- Advertisement -
- Advertisement -

ಜರ್ಮನಿಯಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಎಂಟು ಪುರುಷರು ಮತ್ತು ಎಂಟು ಮಹಿಳೆಯರನ್ನು ಒಳಗೊಂಡ ಲಿಂಗ ಸಮಾನತೆಯ ಸಚಿವ ಸಂಪುಟ ರಚನೆಯಾಗಿದೆ. ಜರ್ಮನಿಯ ಈ ಹಿಂದಿನ ಚಾನ್ಸಲರ್‌ ಆಗಿದ್ದ ಏಂಜೆಲಾ ಮರ್ಕೆಲ್ ಅವರು ಪುರುಷ ಉತ್ತರಾಧಿಕಾರಿ ಓಲಾಫ್ ಸ್ಕೋಲ್ಜ್ ಅವರಿಗೆ ತಮ್ಮ ಅಧಿಕಾರವನ್ನು ಹಸ್ತಾಂತರಿಸುತ್ತಿದ್ದರೂ, ಹಿಂದಿನ ಸರ್ಕಾರಕ್ಕಿಂತ ಹೆಚ್ಚು ಮಹಿಳೆಯರನ್ನು ಹೊಸ ಸರ್ಕಾರ ಹೊಂದಲಿದೆ. ಜರ್ಮನಿಯಲ್ಲಿ 16 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪುರುಷ ಚಾನ್ಸಲರ್‌ ಅಧಿಕಾರ ವಹಿಸುತ್ತಿದ್ದಾರೆ.

‘ಜರ್ಮನಿ ಚಾನ್ಸೆಲರ್’ ಎಂದರೆ ಜರ್ಮನಿ ಸರ್ಕಾರದ ಮುಖ್ಯಸ್ಥ ಮತ್ತು ಮುಖ್ಯ ಕಾರ್ಯನಿರ್ವಾಹಕರಾಗಿದ್ದಾರೆ. ಯುದ್ದದ ಸಮಯದಲ್ಲಿ ಜರ್ಮನ್ ಸಶಸ್ತ್ರ ಪಡೆಗಳ ಕಮಾಂಡರ್ ಇನ್ ಚೀಫ್ ಜರ್ಮನಿಯ ಚಾನ್ಸೆಲರ್‌ ಅವರೇ ಆಗಿರುತ್ತಾರೆ.

ಇದನ್ನೂ ಓದಿ: ಸ್ತ್ರೀ ಪುರುಷರಲ್ಲಿ ಸಮಾನತೆ ಸಾಧ್ಯವೇ?: ಎಚ್ ಎಸ್ ಶ್ರೀಮತಿ

ಜರ್ಮನಿಯ ಹೊಸ ಚಾನ್ಸಲರ್‌ ಓಲಾಫ್ ಸ್ಕೋಲ್ಜ್ ಅವರು ಚುನಾವಣೆಯ ಸಮಯದಲ್ಲೇ ತಮ್ಮ ಸರ್ಕಾರಕ್ಕೆ ಪುರುಷರಂತೆ ಹೆಚ್ಚಿನ ಮಹಿಳೆಯರನ್ನು ನೇಮಿಸುವ ಬಗ್ಗೆ ಭರವಸೆ ನೀಡಿದ್ದರು. ಇದೀಗ ಅವರ ಚುನಾವಣಾ ಭರವಸೆಯನ್ನು ಉಳಿಸಿಕೊಂಡಿದ್ದಾರೆ. ಜೊತೆಗೆ, ಭದ್ರತೆ ಮತ್ತು ರಾಜತಾಂತ್ರಿಕತೆಗೆ ಸಂಬಂಧಿಸಿದ ಎಲ್ಲವನ್ನೂ ಮಹಿಳೆಯರೇ ಮುನ್ನಡೆಸುತ್ತಾರೆ.

ಈ ಬಾರಿ ಜರ್ಮನಿಯು ತನ್ನ ಮೊದಲ ಮಹಿಳಾ ವಿದೇಶಾಂಗ ಮಂತ್ರಿ ಮತ್ತು ಮೊದಲ ಮಹಿಳಾ ಆಂತರಿಕ ಮಂತ್ರಿಯನ್ನು ಹೊಂದಲಿದೆ. ದೇಶವು ಸತತ ಮೂರನೇ ಬಾರಿಗೆ ಮಹಿಳಾ ರಕ್ಷಣಾ ಸಚಿವೆಯನ್ನೂ ಪಡೆಯಲಿದೆ.

“ಭದ್ರತೆಯು ಈ ಸರ್ಕಾರದಲ್ಲಿ ಪ್ರಬಲ ಮಹಿಳೆಯರ ಕೈಯಲ್ಲಿ ಇರುತ್ತದೆ” ಎಂದು ಓಲಾಫ್ ಸ್ಕೋಲ್ಜ್‌ ಸೋಮವಾರ ಹೇಳಿದ್ದಾರೆ. ಓಲಾಫ್ ಸ್ಕೋಲ್ಜ್‌ ಸೋಶಿಯಲ್ ಡೆಮಾಕ್ರಟ್ ಪಕ್ಷದವರಾಗಿದ್ದು, ಪ್ರೋಗ್ರೇಸಿವ್‌ ಗ್ರೀನ್ಸ್ ಮತ್ತು ಲಿಬರ್ಟೇರಿಯನ್ ಫ್ರೀ ಡೆಮೋಕ್ರಾಟ್‌ ಜೊತೆ ಸೇರಿಕೊಂಡು ಮೂರು ಪಕ್ಷದ ಮೈತ್ರಿ ಒಕ್ಕೂಟವನ್ನು ಮುನ್ನಡೆಸುತ್ತಾರೆ.

“ಸಂಪುಟದಲ್ಲಿ ಮಹಿಳೆಯರು ಮತ್ತು ಪುರುಷರು ಸಮಾನವಾಗಿ ಇದ್ದಾರೆ. ಆದ್ದರಿಂದ ಮಹಿಳೆಯರು ಕೂಡಾ ಅರ್ಧದಷ್ಟು ಶಕ್ತಿಯನ್ನು ಪಡೆಯುತ್ತಾರೆ. ನಾವು ಇದನ್ನು ಅರಿತುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ನನಗೆ ತುಂಬಾ ಹೆಮ್ಮೆ ಇದೆ” ಎಂದು ಓಲಾಫ್ ಸ್ಕೋಲ್ಜ್ ಹೇಳಿದ್ದಾರೆ.

ಇದನ್ನೂ ಓದಿ: 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ಭರತನಾಟ್ಯ ಕಲಾವಿದೆ ನರ್ತಕಿ

16 ವರ್ಷಗಳಿಂದ ಜರ್ಮನಿಯ ಚಾನ್ಸೆಲರ್‌ ಆಗಿದ್ದ ಏಂಜೆಲಾ ಮರ್ಕೆಲ್, ಸಂಪ್ರದಾಯವಾದಿಯಾಗಿದ್ದು, ಫೆಮಿನಿಸ್ಟ್ ಪದದಿಂದ ದೂರವಿದ್ದರು. ತನ್ನ ಅಧಿಕಾರದ ಕೊನೆಯ ವರ್ಷಗಳವರೆಗೆ ಅವರು ಮಹಿಳೆಯರ ಪ್ರಗತಿಯ ವಿಷಯವಾಗಿ ವಿರಳವಾಗಿ ಮಾತನಾಡಿದ್ದರು. ಅವರ ಸಚಿವ ಸಂಪುಟದಲ್ಲಿ ಮಹಿಳಾ ಮಂತ್ರಿಗಳು ಮತ್ತು ಶಾಸಕರ ಸಂಖ್ಯೆ ಸುಮಾರು ಮೂರನೇ ಒಂದು ಭಾಗದಷ್ಟು ಅಷ್ಟೇ ಇತ್ತು.

ಈ ವಾರ ಅಧಿಕಾರ ವಹಿಸಿಕೊಳ್ಳಲಿರುವ ಮಹಿಳೆಯರು ತಮ್ಮ ಸಚಿವಾಲಯದ ಮೇಲೆ ಛಾಪು ಮೂಡಿಸುವ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಗ್ರೀನ್ಸ್‌ ಪಕ್ಷದಿಂದ ಚಾನ್ಸೆಲರ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಜರ್ಮನಿಯ ಹೊಸ ವಿದೇಶಾಂಗ ಮಂತ್ರಿ ಅನ್ನಾಲೆನಾ ಬೇರ್‌ಬಾಕ್, ಚೀನಾ ಮತ್ತು ರಷ್ಯಾದಂತಹ ಆಯಕಟ್ಟಿನ ಪ್ರತಿಸ್ಪರ್ಧಿಗಳ ಕಡೆಗೆ ಕಠಿಣವಾದ ನಡೆಯನ್ನು ಅನುಸರಿಸಲಿದ್ದೇನೆ ಎಂದು ತನ್ನ ಯೋಜನೆಯ ಬಗ್ಗೆ ಪ್ರತಿಜ್ಞೆ ಮಾಡಿದ್ದಾರೆ.

ದೇಶದ ನೂತನ ಆಂತರಿಕ ಮಂತ್ರಿ ನ್ಯಾನ್ಸಿ ಫೈಸರ್ ಅವರು, ಉದಾರವಾದಿ ಪ್ರಜಾಪ್ರಭುತ್ವ ಎದುರಿಸುತ್ತಿರುವ ದೊಡ್ಡ ಬೆದರಿಕೆಯಾದ ಬಲಪಂಥೀಯ ಉಗ್ರವಾದದ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ.

“ಲಿಂಗ ಸಮಾನತೆ ಹೊಂದಿರುವ ಕ್ಯಾಬಿನೆಟ್‌ನ ಭಾಗವಾಗಲು ನಾನು ಕೃತಜ್ಞಳಾಗಿದ್ದೇನೆ. ಇದಕ್ಕಾಗಿ ನಾನು ಹಲವು ವರ್ಷಗಳಿಂದ ಹೋರಾಡಿದ್ದೇನೆ. ಇದು ನಮ್ಮ ದೇಶದ ಎಲ್ಲಾ ಮಹಿಳೆಯರ ಸಂಕೇತವಾಗಿದೆ” ಎಂದು ನೂತನ ವಸತಿ ಮತ್ತು ನಗರಾಭಿವೃದ್ಧಿ ಸಚಿವರಾದ ಕ್ಲಾರಾ ಗೆವಿಟ್ಜ್ ಹೇಳಿದ್ದಾರೆ.

ಇದನ್ನೂ ಓದಿ:ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...