Homeಮುಖಪುಟಅಮೆರಿಕನ್ ಕುಕೇಶಿಯನ್ (ಶ್ವೇತವರ್ಣಿಯ)ರ ನಿಜಮುಖ ಬಯಲಿಗಿಡುವ ಸಿನಿಮಾ 'ಗೆಟ್ ಔಟ್'!

ಅಮೆರಿಕನ್ ಕುಕೇಶಿಯನ್ (ಶ್ವೇತವರ್ಣಿಯ)ರ ನಿಜಮುಖ ಬಯಲಿಗಿಡುವ ಸಿನಿಮಾ ‘ಗೆಟ್ ಔಟ್’!

2017ರ ಫೆಬ್ರವರಿಯಲ್ಲಿ ಅಮೆರಿಕಾದಲ್ಲಿ ತೆರೆಕಂಡ ಈ ಸಿನೆಮಾ ಅತ್ಯುತ್ತಮ ಚಿತ್ರಕಥೆಗಾಗಿ ಆಸ್ಕರ್ ಪುರಸ್ಕಾರವನ್ನೂ ಪಡೆದಿರುವುದು ಗಮನಾರ್ಹ

- Advertisement -
- Advertisement -

ಅಮೆರಿಕಾ ಸಮಾಜದೊಳಗೊಂದು ಪಾತಾಳಗರುಡಿ ಬಿಟ್ಟು ಸಮಾಜೋ-ರಾಜಕೀಯ ದೃಷ್ಟಿಕೋನದಿಂದ ನೋಡುತ್ತಾ ಆಲ್ಲಿನ ಸಂಗತಿಗಳನ್ನು ಅತ್ಯುತ್ತಮ ರೀತಿಯಲ್ಲಿ ಸಿನೆಮ್ಯಾಟಿಕ್ ಪರಿಭಾಷೆಯಲ್ಲಿ ಕಟ್ಟಿಕೊಟ್ಟಿರುವ “ಗೆಟೌಟ್” ನಾನಾ ಕಾರಣಗಳಿಂದ ಈ ಕಾಲಘಟ್ಟದ ಬಹುಮುಖ್ಯವಾದ ಸಿನೆಮಾ. ಇದರ ಬಗ್ಗೆ ಅಲ್ಲಿ ತೀವ್ರವಾದ ಚರ್ಚೆಗಳಾಗುತ್ತಿವೆ. ಇದರಿಂದಾಗಿ ಈ ಚಿತ್ರ ಅಲ್ಲಿ ಎಬ್ಬಿಸಿರುವ ಕಂಪನಗಳ ಮಹತ್ವದ ಅರಿವಾಗುತ್ತದೆ. ಇನ್ನೊಂದು ಮಹತ್ವದ ಸಂಗತಿಯೆಂದರೆ ಈ ಚಿತ್ರ ನೋಡಿದ ನಂತರ ಅಮೆರಿಕಾದ ಕರಿಯರು; ಹೀಗೆನ್ನುವ ಬದಲು ಅಮೆರಿಕಾದ ದಲಿತರು ಎನ್ನುವುದೇ ಹೆಚ್ಚು ಸೂಕ್ತ. ಇವರ ಮತ್ತು ಭಾರತದ ದಲಿತರ ಸಾಮಾಜಿಕ ಸ್ಥಿತಿಗತಿಗಳು ಒಂದೇ… ಇವರಿಬ್ಬರೂ ಸಮಾಜೋ –ರಾಜಕೀಯ ಸ್ಥಾನಮಾನಗಳಿಂದ ನಿಜವಾದ ಅರ್ಥದಲ್ಲಿ ವಂಚಿತರು ಎನಿಸುತ್ತದೆ.

ಇಂಥದ್ದೊಂದು ಥಿಯರಿಯನ್ನು ಹಾಲಿವುಡ್ ನಿರ್ದೇಶಕ ಜೋರ್ಡನ್ ಪಿಲೇ ಮುಂದಿಟ್ಟಿದ್ದಾರೆ ಎನಿಸುತ್ತದೆ. ಅವರ “ಗೆಟೌಟ್” ಸಿನೆಮಾ ಇಂಥದೊಂದು ಅಭಿಪ್ರಾಯವನ್ನು ಹುದುಗಿಸಿಕೊಂಡಿದೆ. ಇಂಥ ಥಿಯರಿ ಸುಮ್ಮನೆ ಮೂಡಿದ್ದಲ್ಲ. ಶತಶತಮಾನಗಳಿಂದಲೂ ಅಮೆರಿಕಾದಲ್ಲಿರುವ ಆಫ್ರಿಕನ್ –ಅಮೆರಿಕನ್ ಪ್ರಜೆಗಳು ತಾತ್ಸಾರ, ನಿಂದನೆ, ಅವಮಾನ, ಕಗ್ಗೊಲೆಗಳನ್ನು ಅನುಭವಿಸುತ್ತಲೇ ಬಂದಿದ್ದಾರೆ. ಅವರನ್ನು ಅವಮಾನಿಸುವ ಪ್ರಕರಣಗಳೂ ಇಂದಿಗೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಗೆಟೌಟ್ ಸಿನೆಮಾ ಮೂಡಿರುವಂತೆ ಕಾಣುತ್ತದೆ.

ಅಮೆರಿಕಾ ಸಿನೆ-ಟಿವಿರಂಗದಲ್ಲಿ ಜೋರ್ಡನ್ ಪಿಲೆಯದು ಖ್ಯಾತ ಹೆಸರು. ಹಲವು ಯಶಸ್ವಿ ಚಿತ್ರಗಳನ್ನು ಕೊಟ್ಟಿದ್ದಾರೆ. ಗೆಟೌಟ್ ಸಿನೆಮಾದ ವಿಶೇಷ ಸಂಗತಿಯೆಂದರೆ ನಿರ್ದೇಶಕರೇ ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಅಂದಹಾಗೆ ಪಿಲೆ ಕೂಡ ಆಫ್ರಿಕನ್ ಅಮೆರಿಕನ್. ಇದು ಕೂಡ ಇಥದ್ದೊಂದು ಥಿಯರಿಗೆ ಮತ್ತಷ್ಟೂ ಬಲಕೊಟ್ಟಿದೆ.

ಅಮೆರಿಕಾದ ಕುಕೇಶಿಯನ್ (ಶ್ವೇತವರ್ಣಿಯರು) ಆಫ್ರಿಕಾದವರನ್ನು ಶತಶತಮಾನಗಳ ಕಾಲ ಗುಲಾಮರನ್ನಾಗಿ ನಡೆಸಿಕೊಂಡಿದೆ. ಇಂದು ಗುಲಾಮಗಿರಿ ಪದ್ಧತಿ ಅಳಿದಿದೆ. ಆದರೆ ಅದನ್ನು ಕುಕೇಶಿಯನ್ ಸಮಾಜ ಬೇರೊಂದು ರೀತಿಯಲ್ಲಿ ಮುಂದುವರಿಸಿಕೊಂಡು ಬರುತ್ತಿದೆ ಎಂಬ ವಾದವನ್ನು ಜೋರ್ಡನ್ ಪಿಲೆ ನಮ್ಮ ಮುಂದಿಡುತ್ತಾರೆ.

ತಮ್ಮ ವಾದವನ್ನು ಕಥಾರೂಪಕ್ಕೆ ತಂದಿರುವ ಪಿಲೆ ಅದಕ್ಕೆ ಸಶಕ್ತ ಚಿತ್ರಕಥೆ ಸ್ವರೂಪ ನೀಡಿದ್ದಾರೆ. ಇದು ಎಷ್ಟು ಪರಿಪಕ್ವವಾಗಿದೆ ಎಂದರೆ ಎಲ್ಲಿಯೂ ಗೋಜಲು – ಗೊಂದಲವಿಲ್ಲ. ಸಂಭಾಷಣೆ ಕೂಡ ಅಷ್ಟೆ ಸ್ಪಷ್ಟತೆ-ನಿಖರತೆ ಹೊಂದಿದೆ. ಇದನ್ನು ಪಿಲೆ ಮತ್ತು ಅವರ ಸಂಗಡಿಗ ತಂತ್ರಜ್ಞರು ತೆರೆ ಮುಂದೆ ಕಾಣಿಸಿರುವ ರೀತಿ ಅನನ್ಯ.

“ಗೆಟೌಟ್” ಸಾಮಾಜಿಕ-ರಾಜಕೀಯ ಕಥನ. ಕೊಂಚ ಹಳಿ ತಪ್ಪಿದ್ದರೂ ಇದೊಂದು ನಿರ್ದೇಶಕನ ಹಳಹಳಿಕೆಯ ದುರ್ಬಲ ಡಾಕ್ಯುಮೆಂಟರಿಯಾಗುವ ಸಾಧ್ಯತೆ ದಟ್ಟವಾಗಿತ್ತು. ಆದರೆ ಜೋರ್ಡನ್ ಪಿಲೆಯ ಪರಿಶ‍್ರಮ ಅದಕ್ಕೆ ಅವಕಾಶ ನೀಡಿಲ್ಲ. ಈ ಕಾರಣದಿಂದ ಸಿನೆಮಾದ ಎಲ್ಲ ದೃಷ್ಟಿಕೋನಗಳಲ್ಲಿಯೂ ಇದು ಅತ್ಯುತ್ತಮ.

ಗೆಟೌಟ್ ಹಂತಹಂತವಾಗಿ ಬೆಳೆಯುತ್ತಾ ಹೋಗುತ್ತದೆ. ಆಗರ್ಭ ಶ್ರೀಮಂತ ಕುಕೇಶಿಯನ್ ಮನೆತನದ ಯುವತಿ ರೋಸಿ ಆರ್ಮಿಟೆಜ್ ತನ್ನ ಆಫ್ರಿಕನ್ –ಅಮೆರಿನ್ ಬಾಯ್ ಫ್ರೆಂಡ್ ಕ್ರಿಸ್ ಜೊತೆ ತನ್ನ ಅರಮನೆಯಂಥ ಮನೆಗೆ ಅಡಿಯಿಡುತ್ತಾಳೆ. ಕಾಲಿಟ್ಟ ಗಳಿಗೆಯಿಂದಲೂ ಕ್ರಿಸ್ ಗೆ ನಾನಾರೀತಿಯ ಮಾನಸಿಕ ಯಾತನೆಗಳು ಶುರುವಾಗುತ್ತವೆ. ರೋಸಿ ಅಪ್ಪ ಡೀನ್ ಅರ್ಮಿಟೇಜ್ ನರರೋಗ ಶಾಸ್ತ್ರಜ್ಞ. ಅಮ್ಮ ಕ್ಯಾಥ್ರೆನ್ ಕೀನರ್ ಸಮ್ಮೋಹಿನಿ ತಜ್ಞೆ.

ಈ ಎರಡು ಪಾತ್ರಗಳು ಮಾಡುತ್ತಿರುವ ವೃತ್ತಿಗಳು ಕೂಡ ಸಾಂಕೇತಿಕ. ಡೀನ್ ಅರ್ಮಿಟೇಜ್ ತನ್ನ ಮನೆತನದ ಹೆಗ್ಗಳಿಕೆಗಳನ್ನು ಹೇಳಿಕೊಳ್ಳುತ್ತಾ ಹೋಗುತ್ತಾನೆ. ಪ್ರತಿಹಂತದಲ್ಲಿಯೂ ಆ ಎಲ್ಲ ಮಾತುಗಳು ಆತ ಆಫ್ರಿಕನ್ –ಅಮೆರಿಕನ್ ಸಮುದಾಯ (ಕರಿಯರು) ದವರ ಬಗ್ಗೆ ಹೊಂದಿರುವ ಹೇವರಿಕೆಗಳನ್ನು ವ್ಯಕ್ತ ಮಾಡುತ್ತಲೇ ಹೋಗುತ್ತವೆ. ಈತನ ಹೆಂಡತಿ, ಮಗ ಕೂಡ ಇದೇ ಸ್ವಭಾವದವರು: ಚಿತ್ರದ ಕೊನೆಕೊನೆ ಹಂತ ನಮ್ಮನ್ನು ಮತ್ತೊಂದು ಮಹಾನ್ ಶಾಕ್ ಗೆ ದೂಡುತ್ತದೆ. ಅದನ್ನು ನಾನಿಲ್ಲಿ ವಿವರಿಸಲು ಹೋಗುವುದಿಲ್ಲ.

ಗೆಟ್ ಔಟ್ ಚಿತ್ರದ ದೃಶ್ಯ

ಡೀನ್ ಅರ್ಮಿಟೇಜ್ ತಾನು ಲಿಬರಲ್ ಧೋರಣೆಯುಳ್ಳವನು, ಅಮೆರಿಕಾದ ಅಧ್ಯಕ್ಷಿಯ ಚುನಾವಣೆಯಲ್ಲಿ ಬರಾಕ್ ಒಬಾಮನನ್ನು ಬೆಂಬಲಿಸಿದೆ ಎನ್ನುತ್ತಾನೆ. ಮಾತುಗಳು ಪ್ರಗತಿಪರತೆಯ ಮುಖವಾಡ ಹೊಂದಿವೆ. ಆದರೆ ಆತನ ಅಂತರಂಗದಲ್ಲಿ ಜನಾಂಗೀಯ ದ್ವೇಷ ಮಡುಗಟ್ಟಿದೆ.

ಡೀನ್ ಅರ್ಮಿಟೇಜ್ ಮನೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಆಫ್ರಿಕನ್ –ಅಮೆರಿಕನ್ ಸಮುದಾಯದವರು. ಇವರ ವರ್ತನೆ, ಹಾವಭಾವ-ಸ್ವಭಾವ ಎಲ್ಲವೂ ಕೃತಕ ಎಂದು ಕ್ರಿಸ್ ಗೆ ಮೇಲಿಂದ ಮೇಲೆ ಅನಿಸತೊಡಗುತ್ತದೆ. ಈ ದೊಡ್ಡಮನೆಯ ಪಾರ್ಟಿಗೆ ಬಂದ ಕುಕೇಶಿಯನ್ ಸಮುದಾಯದವರಿಗೂ ಕೂಡ ಆಫ್ರಿಕನ್ –ಅಮೆರಿಕನ್ ಸಮುದಾಯದ ಬಗ್ಗೆ ಹೇವರಿಕೆ ನೋಟ. ಅಲ್ಲೊಬ್ಬ ಕಪ್ಪುವರ್ಣೀಯ ಯುವಕನ ಜೊತೆ ಆತನಿಗಿಂತ ವಯಸಿನಲ್ಲಿ ಸಾಕಷ್ಟು ಹಿರಿಯಳಾದ ಮಹಿಳೆ ಸಾಂಗತ್ಯ ಹೊಂದಿರುತ್ತಾಳೆ. ಅದ್ಹೇಕೆ ಎಂದು ಚಿತ್ರ ತನ್ನದೇ ಧಾಟಿಯಲ್ಲಿ ವಿವರಿಸುತ್ತದೆ.

ತನ್ನ ಗ್ರಹಿಕೆಗಳೆಲ್ಲವನ್ನೂ ಕ್ರಿಶ್ ತನ್ನ ಪೊಲೀಸ್ ಗೆಳೆಯನ ಜೊತೆ ಪೋನಿನಲ್ಲಿ ಹಂಚಿಕೊಳ್ಳುತ್ತಿರುತ್ತಾನೆ. ಅದು ಕೂಡ ಕೊನೆಯಲ್ಲಿ ಈತನ ನೆರವಿಗೆ ಬರುತ್ತದೆ. ಕ್ರಿಸ್ ಗೆ ಕುಕೇಶಿಯನ್ ರೋಸಿ ಮನೆತನದ ಎಲ್ಲರ  ಸ್ವಭಾವ ಆಷಾಢಭೂತಿತನದಿಂದ ಕೂಡಿದೆ, ಬೇಗನೆ ಇಲ್ಲಿಂದ ಪಾರಾಗಬೇಕು ಎಂದು ಮನದಟ್ಟಾಗುತ್ತದೆ. ಹೊರಡಲು ಅನುವಾಗುತ್ತಾನೆ. ಅಷ್ಟರಲ್ಲೆ ಆತನ ಕೊಲೆಯ ಪಿತೂರಿ ನಡೆಯುತ್ತದೆ. ಇದರಿಂದ ಕ್ರಿಸ್ ಹೇಗೆ ಪಾರಾದ ಎನ್ನುವುದನ್ನು ಸಿನೆಮಾ ನೋಡಿ ಅರಿಯುವುದೇ ಸೂಕ್ತ.

ಇಂದಿಗೂ ಅಮೆರಿಕಾದಲ್ಲಿ ಜನಾಂಗೀಯ ದ್ವೇಷ ನಿಂತಿಲ್ಲ. ಕುಕೇಶಿಯನ್ (ಶ್ವೇತವರ್ಣೀಯರು) ಆಫ್ರಿಕನ್ –ಅಮೆರಿಕನ್ಸ್ ವ್ಯಕ್ತಿಗಳನ್ನು ಕಗ್ಗೊಲೆ ಮಾಡಿದ ವರದಿಗಳು ಆಗಾಗ್ಗೆ ಬರುತ್ತಲೇ ಇವೆ. ಅಲ್ಲಿನ ಪೊಲೀಸ್ ಇಲಾಖೆಯ ಕುಕೇಶಿಯನ್ಸ್ ಗಳಲ್ಲಿಯೂ ಇಂಥ ಜನಾಂಗೀಯ ದ್ವೇಷವಿದೆ. ಕಪ್ಪುವರ್ಣೀಯರು, ಶ್ವೇತವರ್ಣೀಯ ಪೊಲೀಸ್ ಅಧಿಕಾರಿಗಳ ಗುಂಡೇಟಿಗೆ ವಿನಾಃಕಾರಣ ಬಲಿಯಾದ ಉದಾಹರಣೆಗಳು ಸಾಕಷ್ಟು.

ಇಂಥ ಉದಾಹರಣೆಗಳು ಕೂಡ “ಗೆಟೌಟ್” ಸಿನೆಮಾದ ಅಂತ್ಯ ಬದಲಾಗಲು ಕಾರಣವಾಗಿದೆ. ಈ ಮೊದಲು ಇದರ ಕ್ಲೈಮ್ಯಾಕ್ಸ್ ಬೇರೆಯದೇ ಆಗಿತ್ತು. ಯಾವಾಗ ಅಲ್ಲಿನ ಪೊಲೀಸರ ಎನ್ ಕೌಂಟರಿಗೆ ಕಪ್ಪುವರ್ಣೀಯರು ಬಲಿಯಾಗುವ ಪ್ರಕರಣಗಳು ಹೆಚ್ಚಾಯಿತೋ ಆಗ ನಿರ್ದೇಶಕ ಜೋರ್ಡನ್ ಪಿಲೆ ಮತ್ತು ತಂಡದವರು ಕ್ಲೈಮ್ಯಾಕ್ಸ್ ಗೆ ಬೇರೆಯದೇ ಸ್ವರೂಪ ನೀಡಲು ನಿರ್ಧರಿಸಿದರು.

ಕುಕೇಶಿಯನ್ ಸಮಾಜದಲ್ಲಿ ಮಡುಗಟ್ಟಿರುವ ಜನಾಂಗೀಯ ದ್ವೇಷ ಯಾವ ಆಯಾಮಗಳನ್ನು ತೆಗೆದುಕೊಂಡಿದೆ, ಅದು ಯಾವ ಸ್ವರೂಪದಲ್ಲಿ ಮುಂದುವರಿದಿದೆ ಎನ್ನುವುದನ್ನು ನಿರ್ದೇಶಕ ಜೋರ್ಡನ್ ಪಿಲೆ ಗ್ರಹಿಸಿ  ಮುಂದಿಟ್ಟಿರುವ ರೀತಿ ನಮ್ಮನ್ನು ಬೆಚ್ಚಿಬೀಳಿಸುತ್ತದೆ.

ಜೋರ್ಡನ್ ಪಿಲೆ

ಈ ಸಿನೆಮಾಕ್ಕೆ ಟೊನಿ ಲಿವರ್ ಕ್ಯಾಮೆರಾ ಹಿಡಿದಿದ್ದಾರೆ. ಅದು ಚಿತ್ರಕಥೆಯ ಸಶಕ್ತತೆಯನ್ನು ಮತ್ತಷ್ಟೂ ಹೆಚ್ಚಿಸಿದೆ. ಮೈಕೆಲ್ ಅಬ್ಲಸ್ ನೀಡಿರುವ ಸಂಗೀತಕ್ಕೂ ಇದೇ ಮಾತು ಸಲ್ಲುತ್ತದೆ. 2017ರ ಫೆಬ್ರವರಿಯಲ್ಲಿ ಅಮೆರಿಕಾದಲ್ಲಿ ತೆರೆಕಂಡ ಈ ಸಿನೆಮಾ ಅತ್ಯುತ್ತಮ ಚಿತ್ರಕಥೆಗಾಗಿ ಆಸ್ಕರ್ ಪುರಸ್ಕಾರವನ್ನೂ ಪಡೆದಿರುವುದು ಗಮನಾರ್ಹ.

ಅಭಿನಯದ ಬಗ್ಗೆ ಹೇಳುವುದಾದರೆ ಕ್ರಿಸ್ ಆಗಿರುವ ಡ್ಯಾನಿಯಲ್ ಅಭಿನಯ ಅನನ್ಯ. ಈತನ ಕಂಗಳೇ ಸಂಭಾಷಣೆಗಳನ್ನು ಹೇಳುತ್ತವೆ. ಕೆಲವೊಂದು ದೃಶ್ಯಗಳಲ್ಲಿ ಈತನ ಅಭಿನಯ ಅಬ್ಬಾ ಎಂಬ ಉದ್ಗಾರದೊಡನೆ ಮೆಚ್ಚುಗೆ ಪಡೆಯುತ್ತದೆ. ರೋಸ್ ಅರ್ಮಿಟೇಜ್ ಆಗಿರುವ ಆಲಿಸನ್ ವಿಲಿಯಮ್ಸ್, ಮಿಸ್ಸಿ ಅರ್ಮಿಟೇಜ್ ಆಗಿರುವ ಕ್ಯಾಥೆರಿನ್ ಕೀರ್ನರ್, ಡೀನ್ ಅರ್ಮಿಟೇಜ್ ಪಾತ್ರಧಾರಿ ಬ್ರಾಡ್ಲಿ, ಜಿಮ್ ಹಡ್ಸನ್ ಆಗಿ ಅಭಿನಯಿಸಿರುವ ಸ್ಟಿಫನ್ ರೂಟ್ ಅಭಿನಯ ಮನೋಜ್ಞ.

ಅಮೆರಿಕಾ ಸಮಾಜದೊಳಗೊಂದು ಪಾತಾಳಗರುಡಿ ಬಿಟ್ಟು ಸಮಾಜೋ-ರಾಜಕೀಯ ದೃಷ್ಟಿಕೋನದಿಂದ ನೋಡುತ್ತಾ ಆಲ್ಲಿನ ಸಂಗತಿಗಳನ್ನು ಅತ್ಯುತ್ತಮ ರೀತಿಯಲ್ಲಿ ಸಿನೆಮ್ಯಾಟಿಕ್ ಪರಿಭಾಷೆಯಲ್ಲಿ ಕಟ್ಟಿಕೊಟ್ಟಿರುವ “ಗೆಟೌಟ್” ನಾನಾ ಕಾರಣಗಳಿಂದ ಈ ಕಾಲಘಟ್ಟದ ಬಹುಮುಖ್ಯವಾದ ಸಿನೆಮಾ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...