Homeಮುಖಪುಟಅಮೆರಿಕನ್ ಕುಕೇಶಿಯನ್ (ಶ್ವೇತವರ್ಣಿಯ)ರ ನಿಜಮುಖ ಬಯಲಿಗಿಡುವ ಸಿನಿಮಾ 'ಗೆಟ್ ಔಟ್'!

ಅಮೆರಿಕನ್ ಕುಕೇಶಿಯನ್ (ಶ್ವೇತವರ್ಣಿಯ)ರ ನಿಜಮುಖ ಬಯಲಿಗಿಡುವ ಸಿನಿಮಾ ‘ಗೆಟ್ ಔಟ್’!

2017ರ ಫೆಬ್ರವರಿಯಲ್ಲಿ ಅಮೆರಿಕಾದಲ್ಲಿ ತೆರೆಕಂಡ ಈ ಸಿನೆಮಾ ಅತ್ಯುತ್ತಮ ಚಿತ್ರಕಥೆಗಾಗಿ ಆಸ್ಕರ್ ಪುರಸ್ಕಾರವನ್ನೂ ಪಡೆದಿರುವುದು ಗಮನಾರ್ಹ

- Advertisement -
- Advertisement -

ಅಮೆರಿಕಾ ಸಮಾಜದೊಳಗೊಂದು ಪಾತಾಳಗರುಡಿ ಬಿಟ್ಟು ಸಮಾಜೋ-ರಾಜಕೀಯ ದೃಷ್ಟಿಕೋನದಿಂದ ನೋಡುತ್ತಾ ಆಲ್ಲಿನ ಸಂಗತಿಗಳನ್ನು ಅತ್ಯುತ್ತಮ ರೀತಿಯಲ್ಲಿ ಸಿನೆಮ್ಯಾಟಿಕ್ ಪರಿಭಾಷೆಯಲ್ಲಿ ಕಟ್ಟಿಕೊಟ್ಟಿರುವ “ಗೆಟೌಟ್” ನಾನಾ ಕಾರಣಗಳಿಂದ ಈ ಕಾಲಘಟ್ಟದ ಬಹುಮುಖ್ಯವಾದ ಸಿನೆಮಾ. ಇದರ ಬಗ್ಗೆ ಅಲ್ಲಿ ತೀವ್ರವಾದ ಚರ್ಚೆಗಳಾಗುತ್ತಿವೆ. ಇದರಿಂದಾಗಿ ಈ ಚಿತ್ರ ಅಲ್ಲಿ ಎಬ್ಬಿಸಿರುವ ಕಂಪನಗಳ ಮಹತ್ವದ ಅರಿವಾಗುತ್ತದೆ. ಇನ್ನೊಂದು ಮಹತ್ವದ ಸಂಗತಿಯೆಂದರೆ ಈ ಚಿತ್ರ ನೋಡಿದ ನಂತರ ಅಮೆರಿಕಾದ ಕರಿಯರು; ಹೀಗೆನ್ನುವ ಬದಲು ಅಮೆರಿಕಾದ ದಲಿತರು ಎನ್ನುವುದೇ ಹೆಚ್ಚು ಸೂಕ್ತ. ಇವರ ಮತ್ತು ಭಾರತದ ದಲಿತರ ಸಾಮಾಜಿಕ ಸ್ಥಿತಿಗತಿಗಳು ಒಂದೇ… ಇವರಿಬ್ಬರೂ ಸಮಾಜೋ –ರಾಜಕೀಯ ಸ್ಥಾನಮಾನಗಳಿಂದ ನಿಜವಾದ ಅರ್ಥದಲ್ಲಿ ವಂಚಿತರು ಎನಿಸುತ್ತದೆ.

ಇಂಥದ್ದೊಂದು ಥಿಯರಿಯನ್ನು ಹಾಲಿವುಡ್ ನಿರ್ದೇಶಕ ಜೋರ್ಡನ್ ಪಿಲೇ ಮುಂದಿಟ್ಟಿದ್ದಾರೆ ಎನಿಸುತ್ತದೆ. ಅವರ “ಗೆಟೌಟ್” ಸಿನೆಮಾ ಇಂಥದೊಂದು ಅಭಿಪ್ರಾಯವನ್ನು ಹುದುಗಿಸಿಕೊಂಡಿದೆ. ಇಂಥ ಥಿಯರಿ ಸುಮ್ಮನೆ ಮೂಡಿದ್ದಲ್ಲ. ಶತಶತಮಾನಗಳಿಂದಲೂ ಅಮೆರಿಕಾದಲ್ಲಿರುವ ಆಫ್ರಿಕನ್ –ಅಮೆರಿಕನ್ ಪ್ರಜೆಗಳು ತಾತ್ಸಾರ, ನಿಂದನೆ, ಅವಮಾನ, ಕಗ್ಗೊಲೆಗಳನ್ನು ಅನುಭವಿಸುತ್ತಲೇ ಬಂದಿದ್ದಾರೆ. ಅವರನ್ನು ಅವಮಾನಿಸುವ ಪ್ರಕರಣಗಳೂ ಇಂದಿಗೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಗೆಟೌಟ್ ಸಿನೆಮಾ ಮೂಡಿರುವಂತೆ ಕಾಣುತ್ತದೆ.

ಅಮೆರಿಕಾ ಸಿನೆ-ಟಿವಿರಂಗದಲ್ಲಿ ಜೋರ್ಡನ್ ಪಿಲೆಯದು ಖ್ಯಾತ ಹೆಸರು. ಹಲವು ಯಶಸ್ವಿ ಚಿತ್ರಗಳನ್ನು ಕೊಟ್ಟಿದ್ದಾರೆ. ಗೆಟೌಟ್ ಸಿನೆಮಾದ ವಿಶೇಷ ಸಂಗತಿಯೆಂದರೆ ನಿರ್ದೇಶಕರೇ ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಅಂದಹಾಗೆ ಪಿಲೆ ಕೂಡ ಆಫ್ರಿಕನ್ ಅಮೆರಿಕನ್. ಇದು ಕೂಡ ಇಥದ್ದೊಂದು ಥಿಯರಿಗೆ ಮತ್ತಷ್ಟೂ ಬಲಕೊಟ್ಟಿದೆ.

ಅಮೆರಿಕಾದ ಕುಕೇಶಿಯನ್ (ಶ್ವೇತವರ್ಣಿಯರು) ಆಫ್ರಿಕಾದವರನ್ನು ಶತಶತಮಾನಗಳ ಕಾಲ ಗುಲಾಮರನ್ನಾಗಿ ನಡೆಸಿಕೊಂಡಿದೆ. ಇಂದು ಗುಲಾಮಗಿರಿ ಪದ್ಧತಿ ಅಳಿದಿದೆ. ಆದರೆ ಅದನ್ನು ಕುಕೇಶಿಯನ್ ಸಮಾಜ ಬೇರೊಂದು ರೀತಿಯಲ್ಲಿ ಮುಂದುವರಿಸಿಕೊಂಡು ಬರುತ್ತಿದೆ ಎಂಬ ವಾದವನ್ನು ಜೋರ್ಡನ್ ಪಿಲೆ ನಮ್ಮ ಮುಂದಿಡುತ್ತಾರೆ.

ತಮ್ಮ ವಾದವನ್ನು ಕಥಾರೂಪಕ್ಕೆ ತಂದಿರುವ ಪಿಲೆ ಅದಕ್ಕೆ ಸಶಕ್ತ ಚಿತ್ರಕಥೆ ಸ್ವರೂಪ ನೀಡಿದ್ದಾರೆ. ಇದು ಎಷ್ಟು ಪರಿಪಕ್ವವಾಗಿದೆ ಎಂದರೆ ಎಲ್ಲಿಯೂ ಗೋಜಲು – ಗೊಂದಲವಿಲ್ಲ. ಸಂಭಾಷಣೆ ಕೂಡ ಅಷ್ಟೆ ಸ್ಪಷ್ಟತೆ-ನಿಖರತೆ ಹೊಂದಿದೆ. ಇದನ್ನು ಪಿಲೆ ಮತ್ತು ಅವರ ಸಂಗಡಿಗ ತಂತ್ರಜ್ಞರು ತೆರೆ ಮುಂದೆ ಕಾಣಿಸಿರುವ ರೀತಿ ಅನನ್ಯ.

“ಗೆಟೌಟ್” ಸಾಮಾಜಿಕ-ರಾಜಕೀಯ ಕಥನ. ಕೊಂಚ ಹಳಿ ತಪ್ಪಿದ್ದರೂ ಇದೊಂದು ನಿರ್ದೇಶಕನ ಹಳಹಳಿಕೆಯ ದುರ್ಬಲ ಡಾಕ್ಯುಮೆಂಟರಿಯಾಗುವ ಸಾಧ್ಯತೆ ದಟ್ಟವಾಗಿತ್ತು. ಆದರೆ ಜೋರ್ಡನ್ ಪಿಲೆಯ ಪರಿಶ‍್ರಮ ಅದಕ್ಕೆ ಅವಕಾಶ ನೀಡಿಲ್ಲ. ಈ ಕಾರಣದಿಂದ ಸಿನೆಮಾದ ಎಲ್ಲ ದೃಷ್ಟಿಕೋನಗಳಲ್ಲಿಯೂ ಇದು ಅತ್ಯುತ್ತಮ.

ಗೆಟೌಟ್ ಹಂತಹಂತವಾಗಿ ಬೆಳೆಯುತ್ತಾ ಹೋಗುತ್ತದೆ. ಆಗರ್ಭ ಶ್ರೀಮಂತ ಕುಕೇಶಿಯನ್ ಮನೆತನದ ಯುವತಿ ರೋಸಿ ಆರ್ಮಿಟೆಜ್ ತನ್ನ ಆಫ್ರಿಕನ್ –ಅಮೆರಿನ್ ಬಾಯ್ ಫ್ರೆಂಡ್ ಕ್ರಿಸ್ ಜೊತೆ ತನ್ನ ಅರಮನೆಯಂಥ ಮನೆಗೆ ಅಡಿಯಿಡುತ್ತಾಳೆ. ಕಾಲಿಟ್ಟ ಗಳಿಗೆಯಿಂದಲೂ ಕ್ರಿಸ್ ಗೆ ನಾನಾರೀತಿಯ ಮಾನಸಿಕ ಯಾತನೆಗಳು ಶುರುವಾಗುತ್ತವೆ. ರೋಸಿ ಅಪ್ಪ ಡೀನ್ ಅರ್ಮಿಟೇಜ್ ನರರೋಗ ಶಾಸ್ತ್ರಜ್ಞ. ಅಮ್ಮ ಕ್ಯಾಥ್ರೆನ್ ಕೀನರ್ ಸಮ್ಮೋಹಿನಿ ತಜ್ಞೆ.

ಈ ಎರಡು ಪಾತ್ರಗಳು ಮಾಡುತ್ತಿರುವ ವೃತ್ತಿಗಳು ಕೂಡ ಸಾಂಕೇತಿಕ. ಡೀನ್ ಅರ್ಮಿಟೇಜ್ ತನ್ನ ಮನೆತನದ ಹೆಗ್ಗಳಿಕೆಗಳನ್ನು ಹೇಳಿಕೊಳ್ಳುತ್ತಾ ಹೋಗುತ್ತಾನೆ. ಪ್ರತಿಹಂತದಲ್ಲಿಯೂ ಆ ಎಲ್ಲ ಮಾತುಗಳು ಆತ ಆಫ್ರಿಕನ್ –ಅಮೆರಿಕನ್ ಸಮುದಾಯ (ಕರಿಯರು) ದವರ ಬಗ್ಗೆ ಹೊಂದಿರುವ ಹೇವರಿಕೆಗಳನ್ನು ವ್ಯಕ್ತ ಮಾಡುತ್ತಲೇ ಹೋಗುತ್ತವೆ. ಈತನ ಹೆಂಡತಿ, ಮಗ ಕೂಡ ಇದೇ ಸ್ವಭಾವದವರು: ಚಿತ್ರದ ಕೊನೆಕೊನೆ ಹಂತ ನಮ್ಮನ್ನು ಮತ್ತೊಂದು ಮಹಾನ್ ಶಾಕ್ ಗೆ ದೂಡುತ್ತದೆ. ಅದನ್ನು ನಾನಿಲ್ಲಿ ವಿವರಿಸಲು ಹೋಗುವುದಿಲ್ಲ.

ಗೆಟ್ ಔಟ್ ಚಿತ್ರದ ದೃಶ್ಯ

ಡೀನ್ ಅರ್ಮಿಟೇಜ್ ತಾನು ಲಿಬರಲ್ ಧೋರಣೆಯುಳ್ಳವನು, ಅಮೆರಿಕಾದ ಅಧ್ಯಕ್ಷಿಯ ಚುನಾವಣೆಯಲ್ಲಿ ಬರಾಕ್ ಒಬಾಮನನ್ನು ಬೆಂಬಲಿಸಿದೆ ಎನ್ನುತ್ತಾನೆ. ಮಾತುಗಳು ಪ್ರಗತಿಪರತೆಯ ಮುಖವಾಡ ಹೊಂದಿವೆ. ಆದರೆ ಆತನ ಅಂತರಂಗದಲ್ಲಿ ಜನಾಂಗೀಯ ದ್ವೇಷ ಮಡುಗಟ್ಟಿದೆ.

ಡೀನ್ ಅರ್ಮಿಟೇಜ್ ಮನೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಆಫ್ರಿಕನ್ –ಅಮೆರಿಕನ್ ಸಮುದಾಯದವರು. ಇವರ ವರ್ತನೆ, ಹಾವಭಾವ-ಸ್ವಭಾವ ಎಲ್ಲವೂ ಕೃತಕ ಎಂದು ಕ್ರಿಸ್ ಗೆ ಮೇಲಿಂದ ಮೇಲೆ ಅನಿಸತೊಡಗುತ್ತದೆ. ಈ ದೊಡ್ಡಮನೆಯ ಪಾರ್ಟಿಗೆ ಬಂದ ಕುಕೇಶಿಯನ್ ಸಮುದಾಯದವರಿಗೂ ಕೂಡ ಆಫ್ರಿಕನ್ –ಅಮೆರಿಕನ್ ಸಮುದಾಯದ ಬಗ್ಗೆ ಹೇವರಿಕೆ ನೋಟ. ಅಲ್ಲೊಬ್ಬ ಕಪ್ಪುವರ್ಣೀಯ ಯುವಕನ ಜೊತೆ ಆತನಿಗಿಂತ ವಯಸಿನಲ್ಲಿ ಸಾಕಷ್ಟು ಹಿರಿಯಳಾದ ಮಹಿಳೆ ಸಾಂಗತ್ಯ ಹೊಂದಿರುತ್ತಾಳೆ. ಅದ್ಹೇಕೆ ಎಂದು ಚಿತ್ರ ತನ್ನದೇ ಧಾಟಿಯಲ್ಲಿ ವಿವರಿಸುತ್ತದೆ.

ತನ್ನ ಗ್ರಹಿಕೆಗಳೆಲ್ಲವನ್ನೂ ಕ್ರಿಶ್ ತನ್ನ ಪೊಲೀಸ್ ಗೆಳೆಯನ ಜೊತೆ ಪೋನಿನಲ್ಲಿ ಹಂಚಿಕೊಳ್ಳುತ್ತಿರುತ್ತಾನೆ. ಅದು ಕೂಡ ಕೊನೆಯಲ್ಲಿ ಈತನ ನೆರವಿಗೆ ಬರುತ್ತದೆ. ಕ್ರಿಸ್ ಗೆ ಕುಕೇಶಿಯನ್ ರೋಸಿ ಮನೆತನದ ಎಲ್ಲರ  ಸ್ವಭಾವ ಆಷಾಢಭೂತಿತನದಿಂದ ಕೂಡಿದೆ, ಬೇಗನೆ ಇಲ್ಲಿಂದ ಪಾರಾಗಬೇಕು ಎಂದು ಮನದಟ್ಟಾಗುತ್ತದೆ. ಹೊರಡಲು ಅನುವಾಗುತ್ತಾನೆ. ಅಷ್ಟರಲ್ಲೆ ಆತನ ಕೊಲೆಯ ಪಿತೂರಿ ನಡೆಯುತ್ತದೆ. ಇದರಿಂದ ಕ್ರಿಸ್ ಹೇಗೆ ಪಾರಾದ ಎನ್ನುವುದನ್ನು ಸಿನೆಮಾ ನೋಡಿ ಅರಿಯುವುದೇ ಸೂಕ್ತ.

ಇಂದಿಗೂ ಅಮೆರಿಕಾದಲ್ಲಿ ಜನಾಂಗೀಯ ದ್ವೇಷ ನಿಂತಿಲ್ಲ. ಕುಕೇಶಿಯನ್ (ಶ್ವೇತವರ್ಣೀಯರು) ಆಫ್ರಿಕನ್ –ಅಮೆರಿಕನ್ಸ್ ವ್ಯಕ್ತಿಗಳನ್ನು ಕಗ್ಗೊಲೆ ಮಾಡಿದ ವರದಿಗಳು ಆಗಾಗ್ಗೆ ಬರುತ್ತಲೇ ಇವೆ. ಅಲ್ಲಿನ ಪೊಲೀಸ್ ಇಲಾಖೆಯ ಕುಕೇಶಿಯನ್ಸ್ ಗಳಲ್ಲಿಯೂ ಇಂಥ ಜನಾಂಗೀಯ ದ್ವೇಷವಿದೆ. ಕಪ್ಪುವರ್ಣೀಯರು, ಶ್ವೇತವರ್ಣೀಯ ಪೊಲೀಸ್ ಅಧಿಕಾರಿಗಳ ಗುಂಡೇಟಿಗೆ ವಿನಾಃಕಾರಣ ಬಲಿಯಾದ ಉದಾಹರಣೆಗಳು ಸಾಕಷ್ಟು.

ಇಂಥ ಉದಾಹರಣೆಗಳು ಕೂಡ “ಗೆಟೌಟ್” ಸಿನೆಮಾದ ಅಂತ್ಯ ಬದಲಾಗಲು ಕಾರಣವಾಗಿದೆ. ಈ ಮೊದಲು ಇದರ ಕ್ಲೈಮ್ಯಾಕ್ಸ್ ಬೇರೆಯದೇ ಆಗಿತ್ತು. ಯಾವಾಗ ಅಲ್ಲಿನ ಪೊಲೀಸರ ಎನ್ ಕೌಂಟರಿಗೆ ಕಪ್ಪುವರ್ಣೀಯರು ಬಲಿಯಾಗುವ ಪ್ರಕರಣಗಳು ಹೆಚ್ಚಾಯಿತೋ ಆಗ ನಿರ್ದೇಶಕ ಜೋರ್ಡನ್ ಪಿಲೆ ಮತ್ತು ತಂಡದವರು ಕ್ಲೈಮ್ಯಾಕ್ಸ್ ಗೆ ಬೇರೆಯದೇ ಸ್ವರೂಪ ನೀಡಲು ನಿರ್ಧರಿಸಿದರು.

ಕುಕೇಶಿಯನ್ ಸಮಾಜದಲ್ಲಿ ಮಡುಗಟ್ಟಿರುವ ಜನಾಂಗೀಯ ದ್ವೇಷ ಯಾವ ಆಯಾಮಗಳನ್ನು ತೆಗೆದುಕೊಂಡಿದೆ, ಅದು ಯಾವ ಸ್ವರೂಪದಲ್ಲಿ ಮುಂದುವರಿದಿದೆ ಎನ್ನುವುದನ್ನು ನಿರ್ದೇಶಕ ಜೋರ್ಡನ್ ಪಿಲೆ ಗ್ರಹಿಸಿ  ಮುಂದಿಟ್ಟಿರುವ ರೀತಿ ನಮ್ಮನ್ನು ಬೆಚ್ಚಿಬೀಳಿಸುತ್ತದೆ.

ಜೋರ್ಡನ್ ಪಿಲೆ

ಈ ಸಿನೆಮಾಕ್ಕೆ ಟೊನಿ ಲಿವರ್ ಕ್ಯಾಮೆರಾ ಹಿಡಿದಿದ್ದಾರೆ. ಅದು ಚಿತ್ರಕಥೆಯ ಸಶಕ್ತತೆಯನ್ನು ಮತ್ತಷ್ಟೂ ಹೆಚ್ಚಿಸಿದೆ. ಮೈಕೆಲ್ ಅಬ್ಲಸ್ ನೀಡಿರುವ ಸಂಗೀತಕ್ಕೂ ಇದೇ ಮಾತು ಸಲ್ಲುತ್ತದೆ. 2017ರ ಫೆಬ್ರವರಿಯಲ್ಲಿ ಅಮೆರಿಕಾದಲ್ಲಿ ತೆರೆಕಂಡ ಈ ಸಿನೆಮಾ ಅತ್ಯುತ್ತಮ ಚಿತ್ರಕಥೆಗಾಗಿ ಆಸ್ಕರ್ ಪುರಸ್ಕಾರವನ್ನೂ ಪಡೆದಿರುವುದು ಗಮನಾರ್ಹ.

ಅಭಿನಯದ ಬಗ್ಗೆ ಹೇಳುವುದಾದರೆ ಕ್ರಿಸ್ ಆಗಿರುವ ಡ್ಯಾನಿಯಲ್ ಅಭಿನಯ ಅನನ್ಯ. ಈತನ ಕಂಗಳೇ ಸಂಭಾಷಣೆಗಳನ್ನು ಹೇಳುತ್ತವೆ. ಕೆಲವೊಂದು ದೃಶ್ಯಗಳಲ್ಲಿ ಈತನ ಅಭಿನಯ ಅಬ್ಬಾ ಎಂಬ ಉದ್ಗಾರದೊಡನೆ ಮೆಚ್ಚುಗೆ ಪಡೆಯುತ್ತದೆ. ರೋಸ್ ಅರ್ಮಿಟೇಜ್ ಆಗಿರುವ ಆಲಿಸನ್ ವಿಲಿಯಮ್ಸ್, ಮಿಸ್ಸಿ ಅರ್ಮಿಟೇಜ್ ಆಗಿರುವ ಕ್ಯಾಥೆರಿನ್ ಕೀರ್ನರ್, ಡೀನ್ ಅರ್ಮಿಟೇಜ್ ಪಾತ್ರಧಾರಿ ಬ್ರಾಡ್ಲಿ, ಜಿಮ್ ಹಡ್ಸನ್ ಆಗಿ ಅಭಿನಯಿಸಿರುವ ಸ್ಟಿಫನ್ ರೂಟ್ ಅಭಿನಯ ಮನೋಜ್ಞ.

ಅಮೆರಿಕಾ ಸಮಾಜದೊಳಗೊಂದು ಪಾತಾಳಗರುಡಿ ಬಿಟ್ಟು ಸಮಾಜೋ-ರಾಜಕೀಯ ದೃಷ್ಟಿಕೋನದಿಂದ ನೋಡುತ್ತಾ ಆಲ್ಲಿನ ಸಂಗತಿಗಳನ್ನು ಅತ್ಯುತ್ತಮ ರೀತಿಯಲ್ಲಿ ಸಿನೆಮ್ಯಾಟಿಕ್ ಪರಿಭಾಷೆಯಲ್ಲಿ ಕಟ್ಟಿಕೊಟ್ಟಿರುವ “ಗೆಟೌಟ್” ನಾನಾ ಕಾರಣಗಳಿಂದ ಈ ಕಾಲಘಟ್ಟದ ಬಹುಮುಖ್ಯವಾದ ಸಿನೆಮಾ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...