Homeಮುಖಪುಟಅಮೆರಿಕನ್ ಕುಕೇಶಿಯನ್ (ಶ್ವೇತವರ್ಣಿಯ)ರ ನಿಜಮುಖ ಬಯಲಿಗಿಡುವ ಸಿನಿಮಾ 'ಗೆಟ್ ಔಟ್'!

ಅಮೆರಿಕನ್ ಕುಕೇಶಿಯನ್ (ಶ್ವೇತವರ್ಣಿಯ)ರ ನಿಜಮುಖ ಬಯಲಿಗಿಡುವ ಸಿನಿಮಾ ‘ಗೆಟ್ ಔಟ್’!

2017ರ ಫೆಬ್ರವರಿಯಲ್ಲಿ ಅಮೆರಿಕಾದಲ್ಲಿ ತೆರೆಕಂಡ ಈ ಸಿನೆಮಾ ಅತ್ಯುತ್ತಮ ಚಿತ್ರಕಥೆಗಾಗಿ ಆಸ್ಕರ್ ಪುರಸ್ಕಾರವನ್ನೂ ಪಡೆದಿರುವುದು ಗಮನಾರ್ಹ

- Advertisement -
- Advertisement -

ಅಮೆರಿಕಾ ಸಮಾಜದೊಳಗೊಂದು ಪಾತಾಳಗರುಡಿ ಬಿಟ್ಟು ಸಮಾಜೋ-ರಾಜಕೀಯ ದೃಷ್ಟಿಕೋನದಿಂದ ನೋಡುತ್ತಾ ಆಲ್ಲಿನ ಸಂಗತಿಗಳನ್ನು ಅತ್ಯುತ್ತಮ ರೀತಿಯಲ್ಲಿ ಸಿನೆಮ್ಯಾಟಿಕ್ ಪರಿಭಾಷೆಯಲ್ಲಿ ಕಟ್ಟಿಕೊಟ್ಟಿರುವ “ಗೆಟೌಟ್” ನಾನಾ ಕಾರಣಗಳಿಂದ ಈ ಕಾಲಘಟ್ಟದ ಬಹುಮುಖ್ಯವಾದ ಸಿನೆಮಾ. ಇದರ ಬಗ್ಗೆ ಅಲ್ಲಿ ತೀವ್ರವಾದ ಚರ್ಚೆಗಳಾಗುತ್ತಿವೆ. ಇದರಿಂದಾಗಿ ಈ ಚಿತ್ರ ಅಲ್ಲಿ ಎಬ್ಬಿಸಿರುವ ಕಂಪನಗಳ ಮಹತ್ವದ ಅರಿವಾಗುತ್ತದೆ. ಇನ್ನೊಂದು ಮಹತ್ವದ ಸಂಗತಿಯೆಂದರೆ ಈ ಚಿತ್ರ ನೋಡಿದ ನಂತರ ಅಮೆರಿಕಾದ ಕರಿಯರು; ಹೀಗೆನ್ನುವ ಬದಲು ಅಮೆರಿಕಾದ ದಲಿತರು ಎನ್ನುವುದೇ ಹೆಚ್ಚು ಸೂಕ್ತ. ಇವರ ಮತ್ತು ಭಾರತದ ದಲಿತರ ಸಾಮಾಜಿಕ ಸ್ಥಿತಿಗತಿಗಳು ಒಂದೇ… ಇವರಿಬ್ಬರೂ ಸಮಾಜೋ –ರಾಜಕೀಯ ಸ್ಥಾನಮಾನಗಳಿಂದ ನಿಜವಾದ ಅರ್ಥದಲ್ಲಿ ವಂಚಿತರು ಎನಿಸುತ್ತದೆ.

ಇಂಥದ್ದೊಂದು ಥಿಯರಿಯನ್ನು ಹಾಲಿವುಡ್ ನಿರ್ದೇಶಕ ಜೋರ್ಡನ್ ಪಿಲೇ ಮುಂದಿಟ್ಟಿದ್ದಾರೆ ಎನಿಸುತ್ತದೆ. ಅವರ “ಗೆಟೌಟ್” ಸಿನೆಮಾ ಇಂಥದೊಂದು ಅಭಿಪ್ರಾಯವನ್ನು ಹುದುಗಿಸಿಕೊಂಡಿದೆ. ಇಂಥ ಥಿಯರಿ ಸುಮ್ಮನೆ ಮೂಡಿದ್ದಲ್ಲ. ಶತಶತಮಾನಗಳಿಂದಲೂ ಅಮೆರಿಕಾದಲ್ಲಿರುವ ಆಫ್ರಿಕನ್ –ಅಮೆರಿಕನ್ ಪ್ರಜೆಗಳು ತಾತ್ಸಾರ, ನಿಂದನೆ, ಅವಮಾನ, ಕಗ್ಗೊಲೆಗಳನ್ನು ಅನುಭವಿಸುತ್ತಲೇ ಬಂದಿದ್ದಾರೆ. ಅವರನ್ನು ಅವಮಾನಿಸುವ ಪ್ರಕರಣಗಳೂ ಇಂದಿಗೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಗೆಟೌಟ್ ಸಿನೆಮಾ ಮೂಡಿರುವಂತೆ ಕಾಣುತ್ತದೆ.

ಅಮೆರಿಕಾ ಸಿನೆ-ಟಿವಿರಂಗದಲ್ಲಿ ಜೋರ್ಡನ್ ಪಿಲೆಯದು ಖ್ಯಾತ ಹೆಸರು. ಹಲವು ಯಶಸ್ವಿ ಚಿತ್ರಗಳನ್ನು ಕೊಟ್ಟಿದ್ದಾರೆ. ಗೆಟೌಟ್ ಸಿನೆಮಾದ ವಿಶೇಷ ಸಂಗತಿಯೆಂದರೆ ನಿರ್ದೇಶಕರೇ ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಅಂದಹಾಗೆ ಪಿಲೆ ಕೂಡ ಆಫ್ರಿಕನ್ ಅಮೆರಿಕನ್. ಇದು ಕೂಡ ಇಥದ್ದೊಂದು ಥಿಯರಿಗೆ ಮತ್ತಷ್ಟೂ ಬಲಕೊಟ್ಟಿದೆ.

ಅಮೆರಿಕಾದ ಕುಕೇಶಿಯನ್ (ಶ್ವೇತವರ್ಣಿಯರು) ಆಫ್ರಿಕಾದವರನ್ನು ಶತಶತಮಾನಗಳ ಕಾಲ ಗುಲಾಮರನ್ನಾಗಿ ನಡೆಸಿಕೊಂಡಿದೆ. ಇಂದು ಗುಲಾಮಗಿರಿ ಪದ್ಧತಿ ಅಳಿದಿದೆ. ಆದರೆ ಅದನ್ನು ಕುಕೇಶಿಯನ್ ಸಮಾಜ ಬೇರೊಂದು ರೀತಿಯಲ್ಲಿ ಮುಂದುವರಿಸಿಕೊಂಡು ಬರುತ್ತಿದೆ ಎಂಬ ವಾದವನ್ನು ಜೋರ್ಡನ್ ಪಿಲೆ ನಮ್ಮ ಮುಂದಿಡುತ್ತಾರೆ.

ತಮ್ಮ ವಾದವನ್ನು ಕಥಾರೂಪಕ್ಕೆ ತಂದಿರುವ ಪಿಲೆ ಅದಕ್ಕೆ ಸಶಕ್ತ ಚಿತ್ರಕಥೆ ಸ್ವರೂಪ ನೀಡಿದ್ದಾರೆ. ಇದು ಎಷ್ಟು ಪರಿಪಕ್ವವಾಗಿದೆ ಎಂದರೆ ಎಲ್ಲಿಯೂ ಗೋಜಲು – ಗೊಂದಲವಿಲ್ಲ. ಸಂಭಾಷಣೆ ಕೂಡ ಅಷ್ಟೆ ಸ್ಪಷ್ಟತೆ-ನಿಖರತೆ ಹೊಂದಿದೆ. ಇದನ್ನು ಪಿಲೆ ಮತ್ತು ಅವರ ಸಂಗಡಿಗ ತಂತ್ರಜ್ಞರು ತೆರೆ ಮುಂದೆ ಕಾಣಿಸಿರುವ ರೀತಿ ಅನನ್ಯ.

“ಗೆಟೌಟ್” ಸಾಮಾಜಿಕ-ರಾಜಕೀಯ ಕಥನ. ಕೊಂಚ ಹಳಿ ತಪ್ಪಿದ್ದರೂ ಇದೊಂದು ನಿರ್ದೇಶಕನ ಹಳಹಳಿಕೆಯ ದುರ್ಬಲ ಡಾಕ್ಯುಮೆಂಟರಿಯಾಗುವ ಸಾಧ್ಯತೆ ದಟ್ಟವಾಗಿತ್ತು. ಆದರೆ ಜೋರ್ಡನ್ ಪಿಲೆಯ ಪರಿಶ‍್ರಮ ಅದಕ್ಕೆ ಅವಕಾಶ ನೀಡಿಲ್ಲ. ಈ ಕಾರಣದಿಂದ ಸಿನೆಮಾದ ಎಲ್ಲ ದೃಷ್ಟಿಕೋನಗಳಲ್ಲಿಯೂ ಇದು ಅತ್ಯುತ್ತಮ.

ಗೆಟೌಟ್ ಹಂತಹಂತವಾಗಿ ಬೆಳೆಯುತ್ತಾ ಹೋಗುತ್ತದೆ. ಆಗರ್ಭ ಶ್ರೀಮಂತ ಕುಕೇಶಿಯನ್ ಮನೆತನದ ಯುವತಿ ರೋಸಿ ಆರ್ಮಿಟೆಜ್ ತನ್ನ ಆಫ್ರಿಕನ್ –ಅಮೆರಿನ್ ಬಾಯ್ ಫ್ರೆಂಡ್ ಕ್ರಿಸ್ ಜೊತೆ ತನ್ನ ಅರಮನೆಯಂಥ ಮನೆಗೆ ಅಡಿಯಿಡುತ್ತಾಳೆ. ಕಾಲಿಟ್ಟ ಗಳಿಗೆಯಿಂದಲೂ ಕ್ರಿಸ್ ಗೆ ನಾನಾರೀತಿಯ ಮಾನಸಿಕ ಯಾತನೆಗಳು ಶುರುವಾಗುತ್ತವೆ. ರೋಸಿ ಅಪ್ಪ ಡೀನ್ ಅರ್ಮಿಟೇಜ್ ನರರೋಗ ಶಾಸ್ತ್ರಜ್ಞ. ಅಮ್ಮ ಕ್ಯಾಥ್ರೆನ್ ಕೀನರ್ ಸಮ್ಮೋಹಿನಿ ತಜ್ಞೆ.

ಈ ಎರಡು ಪಾತ್ರಗಳು ಮಾಡುತ್ತಿರುವ ವೃತ್ತಿಗಳು ಕೂಡ ಸಾಂಕೇತಿಕ. ಡೀನ್ ಅರ್ಮಿಟೇಜ್ ತನ್ನ ಮನೆತನದ ಹೆಗ್ಗಳಿಕೆಗಳನ್ನು ಹೇಳಿಕೊಳ್ಳುತ್ತಾ ಹೋಗುತ್ತಾನೆ. ಪ್ರತಿಹಂತದಲ್ಲಿಯೂ ಆ ಎಲ್ಲ ಮಾತುಗಳು ಆತ ಆಫ್ರಿಕನ್ –ಅಮೆರಿಕನ್ ಸಮುದಾಯ (ಕರಿಯರು) ದವರ ಬಗ್ಗೆ ಹೊಂದಿರುವ ಹೇವರಿಕೆಗಳನ್ನು ವ್ಯಕ್ತ ಮಾಡುತ್ತಲೇ ಹೋಗುತ್ತವೆ. ಈತನ ಹೆಂಡತಿ, ಮಗ ಕೂಡ ಇದೇ ಸ್ವಭಾವದವರು: ಚಿತ್ರದ ಕೊನೆಕೊನೆ ಹಂತ ನಮ್ಮನ್ನು ಮತ್ತೊಂದು ಮಹಾನ್ ಶಾಕ್ ಗೆ ದೂಡುತ್ತದೆ. ಅದನ್ನು ನಾನಿಲ್ಲಿ ವಿವರಿಸಲು ಹೋಗುವುದಿಲ್ಲ.

ಗೆಟ್ ಔಟ್ ಚಿತ್ರದ ದೃಶ್ಯ

ಡೀನ್ ಅರ್ಮಿಟೇಜ್ ತಾನು ಲಿಬರಲ್ ಧೋರಣೆಯುಳ್ಳವನು, ಅಮೆರಿಕಾದ ಅಧ್ಯಕ್ಷಿಯ ಚುನಾವಣೆಯಲ್ಲಿ ಬರಾಕ್ ಒಬಾಮನನ್ನು ಬೆಂಬಲಿಸಿದೆ ಎನ್ನುತ್ತಾನೆ. ಮಾತುಗಳು ಪ್ರಗತಿಪರತೆಯ ಮುಖವಾಡ ಹೊಂದಿವೆ. ಆದರೆ ಆತನ ಅಂತರಂಗದಲ್ಲಿ ಜನಾಂಗೀಯ ದ್ವೇಷ ಮಡುಗಟ್ಟಿದೆ.

ಡೀನ್ ಅರ್ಮಿಟೇಜ್ ಮನೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಆಫ್ರಿಕನ್ –ಅಮೆರಿಕನ್ ಸಮುದಾಯದವರು. ಇವರ ವರ್ತನೆ, ಹಾವಭಾವ-ಸ್ವಭಾವ ಎಲ್ಲವೂ ಕೃತಕ ಎಂದು ಕ್ರಿಸ್ ಗೆ ಮೇಲಿಂದ ಮೇಲೆ ಅನಿಸತೊಡಗುತ್ತದೆ. ಈ ದೊಡ್ಡಮನೆಯ ಪಾರ್ಟಿಗೆ ಬಂದ ಕುಕೇಶಿಯನ್ ಸಮುದಾಯದವರಿಗೂ ಕೂಡ ಆಫ್ರಿಕನ್ –ಅಮೆರಿಕನ್ ಸಮುದಾಯದ ಬಗ್ಗೆ ಹೇವರಿಕೆ ನೋಟ. ಅಲ್ಲೊಬ್ಬ ಕಪ್ಪುವರ್ಣೀಯ ಯುವಕನ ಜೊತೆ ಆತನಿಗಿಂತ ವಯಸಿನಲ್ಲಿ ಸಾಕಷ್ಟು ಹಿರಿಯಳಾದ ಮಹಿಳೆ ಸಾಂಗತ್ಯ ಹೊಂದಿರುತ್ತಾಳೆ. ಅದ್ಹೇಕೆ ಎಂದು ಚಿತ್ರ ತನ್ನದೇ ಧಾಟಿಯಲ್ಲಿ ವಿವರಿಸುತ್ತದೆ.

ತನ್ನ ಗ್ರಹಿಕೆಗಳೆಲ್ಲವನ್ನೂ ಕ್ರಿಶ್ ತನ್ನ ಪೊಲೀಸ್ ಗೆಳೆಯನ ಜೊತೆ ಪೋನಿನಲ್ಲಿ ಹಂಚಿಕೊಳ್ಳುತ್ತಿರುತ್ತಾನೆ. ಅದು ಕೂಡ ಕೊನೆಯಲ್ಲಿ ಈತನ ನೆರವಿಗೆ ಬರುತ್ತದೆ. ಕ್ರಿಸ್ ಗೆ ಕುಕೇಶಿಯನ್ ರೋಸಿ ಮನೆತನದ ಎಲ್ಲರ  ಸ್ವಭಾವ ಆಷಾಢಭೂತಿತನದಿಂದ ಕೂಡಿದೆ, ಬೇಗನೆ ಇಲ್ಲಿಂದ ಪಾರಾಗಬೇಕು ಎಂದು ಮನದಟ್ಟಾಗುತ್ತದೆ. ಹೊರಡಲು ಅನುವಾಗುತ್ತಾನೆ. ಅಷ್ಟರಲ್ಲೆ ಆತನ ಕೊಲೆಯ ಪಿತೂರಿ ನಡೆಯುತ್ತದೆ. ಇದರಿಂದ ಕ್ರಿಸ್ ಹೇಗೆ ಪಾರಾದ ಎನ್ನುವುದನ್ನು ಸಿನೆಮಾ ನೋಡಿ ಅರಿಯುವುದೇ ಸೂಕ್ತ.

ಇಂದಿಗೂ ಅಮೆರಿಕಾದಲ್ಲಿ ಜನಾಂಗೀಯ ದ್ವೇಷ ನಿಂತಿಲ್ಲ. ಕುಕೇಶಿಯನ್ (ಶ್ವೇತವರ್ಣೀಯರು) ಆಫ್ರಿಕನ್ –ಅಮೆರಿಕನ್ಸ್ ವ್ಯಕ್ತಿಗಳನ್ನು ಕಗ್ಗೊಲೆ ಮಾಡಿದ ವರದಿಗಳು ಆಗಾಗ್ಗೆ ಬರುತ್ತಲೇ ಇವೆ. ಅಲ್ಲಿನ ಪೊಲೀಸ್ ಇಲಾಖೆಯ ಕುಕೇಶಿಯನ್ಸ್ ಗಳಲ್ಲಿಯೂ ಇಂಥ ಜನಾಂಗೀಯ ದ್ವೇಷವಿದೆ. ಕಪ್ಪುವರ್ಣೀಯರು, ಶ್ವೇತವರ್ಣೀಯ ಪೊಲೀಸ್ ಅಧಿಕಾರಿಗಳ ಗುಂಡೇಟಿಗೆ ವಿನಾಃಕಾರಣ ಬಲಿಯಾದ ಉದಾಹರಣೆಗಳು ಸಾಕಷ್ಟು.

ಇಂಥ ಉದಾಹರಣೆಗಳು ಕೂಡ “ಗೆಟೌಟ್” ಸಿನೆಮಾದ ಅಂತ್ಯ ಬದಲಾಗಲು ಕಾರಣವಾಗಿದೆ. ಈ ಮೊದಲು ಇದರ ಕ್ಲೈಮ್ಯಾಕ್ಸ್ ಬೇರೆಯದೇ ಆಗಿತ್ತು. ಯಾವಾಗ ಅಲ್ಲಿನ ಪೊಲೀಸರ ಎನ್ ಕೌಂಟರಿಗೆ ಕಪ್ಪುವರ್ಣೀಯರು ಬಲಿಯಾಗುವ ಪ್ರಕರಣಗಳು ಹೆಚ್ಚಾಯಿತೋ ಆಗ ನಿರ್ದೇಶಕ ಜೋರ್ಡನ್ ಪಿಲೆ ಮತ್ತು ತಂಡದವರು ಕ್ಲೈಮ್ಯಾಕ್ಸ್ ಗೆ ಬೇರೆಯದೇ ಸ್ವರೂಪ ನೀಡಲು ನಿರ್ಧರಿಸಿದರು.

ಕುಕೇಶಿಯನ್ ಸಮಾಜದಲ್ಲಿ ಮಡುಗಟ್ಟಿರುವ ಜನಾಂಗೀಯ ದ್ವೇಷ ಯಾವ ಆಯಾಮಗಳನ್ನು ತೆಗೆದುಕೊಂಡಿದೆ, ಅದು ಯಾವ ಸ್ವರೂಪದಲ್ಲಿ ಮುಂದುವರಿದಿದೆ ಎನ್ನುವುದನ್ನು ನಿರ್ದೇಶಕ ಜೋರ್ಡನ್ ಪಿಲೆ ಗ್ರಹಿಸಿ  ಮುಂದಿಟ್ಟಿರುವ ರೀತಿ ನಮ್ಮನ್ನು ಬೆಚ್ಚಿಬೀಳಿಸುತ್ತದೆ.

ಜೋರ್ಡನ್ ಪಿಲೆ

ಈ ಸಿನೆಮಾಕ್ಕೆ ಟೊನಿ ಲಿವರ್ ಕ್ಯಾಮೆರಾ ಹಿಡಿದಿದ್ದಾರೆ. ಅದು ಚಿತ್ರಕಥೆಯ ಸಶಕ್ತತೆಯನ್ನು ಮತ್ತಷ್ಟೂ ಹೆಚ್ಚಿಸಿದೆ. ಮೈಕೆಲ್ ಅಬ್ಲಸ್ ನೀಡಿರುವ ಸಂಗೀತಕ್ಕೂ ಇದೇ ಮಾತು ಸಲ್ಲುತ್ತದೆ. 2017ರ ಫೆಬ್ರವರಿಯಲ್ಲಿ ಅಮೆರಿಕಾದಲ್ಲಿ ತೆರೆಕಂಡ ಈ ಸಿನೆಮಾ ಅತ್ಯುತ್ತಮ ಚಿತ್ರಕಥೆಗಾಗಿ ಆಸ್ಕರ್ ಪುರಸ್ಕಾರವನ್ನೂ ಪಡೆದಿರುವುದು ಗಮನಾರ್ಹ.

ಅಭಿನಯದ ಬಗ್ಗೆ ಹೇಳುವುದಾದರೆ ಕ್ರಿಸ್ ಆಗಿರುವ ಡ್ಯಾನಿಯಲ್ ಅಭಿನಯ ಅನನ್ಯ. ಈತನ ಕಂಗಳೇ ಸಂಭಾಷಣೆಗಳನ್ನು ಹೇಳುತ್ತವೆ. ಕೆಲವೊಂದು ದೃಶ್ಯಗಳಲ್ಲಿ ಈತನ ಅಭಿನಯ ಅಬ್ಬಾ ಎಂಬ ಉದ್ಗಾರದೊಡನೆ ಮೆಚ್ಚುಗೆ ಪಡೆಯುತ್ತದೆ. ರೋಸ್ ಅರ್ಮಿಟೇಜ್ ಆಗಿರುವ ಆಲಿಸನ್ ವಿಲಿಯಮ್ಸ್, ಮಿಸ್ಸಿ ಅರ್ಮಿಟೇಜ್ ಆಗಿರುವ ಕ್ಯಾಥೆರಿನ್ ಕೀರ್ನರ್, ಡೀನ್ ಅರ್ಮಿಟೇಜ್ ಪಾತ್ರಧಾರಿ ಬ್ರಾಡ್ಲಿ, ಜಿಮ್ ಹಡ್ಸನ್ ಆಗಿ ಅಭಿನಯಿಸಿರುವ ಸ್ಟಿಫನ್ ರೂಟ್ ಅಭಿನಯ ಮನೋಜ್ಞ.

ಅಮೆರಿಕಾ ಸಮಾಜದೊಳಗೊಂದು ಪಾತಾಳಗರುಡಿ ಬಿಟ್ಟು ಸಮಾಜೋ-ರಾಜಕೀಯ ದೃಷ್ಟಿಕೋನದಿಂದ ನೋಡುತ್ತಾ ಆಲ್ಲಿನ ಸಂಗತಿಗಳನ್ನು ಅತ್ಯುತ್ತಮ ರೀತಿಯಲ್ಲಿ ಸಿನೆಮ್ಯಾಟಿಕ್ ಪರಿಭಾಷೆಯಲ್ಲಿ ಕಟ್ಟಿಕೊಟ್ಟಿರುವ “ಗೆಟೌಟ್” ನಾನಾ ಕಾರಣಗಳಿಂದ ಈ ಕಾಲಘಟ್ಟದ ಬಹುಮುಖ್ಯವಾದ ಸಿನೆಮಾ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...