Homeಮುಖಪುಟಚುನಾವಣಾ ಭಾಷಣದಿಂದ ಹೊರಬಂದು ಮಣಿಪುರಕ್ಕೆ ಆದ್ಯತೆ ನೀಡಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಚುನಾವಣಾ ಭಾಷಣದಿಂದ ಹೊರಬಂದು ಮಣಿಪುರಕ್ಕೆ ಆದ್ಯತೆ ನೀಡಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ‘ಒಂದು ವರ್ಷದ ನಂತರವೂ ಕಲಹದಿಂದ ಪೀಡಿತ ಈಶಾನ್ಯ ರಾಜ್ಯದ ಪರಿಸ್ಥಿತಿಯು ಬಗೆಹರಿಯದೆ ಉಳಿದಿದೆ ಮತ್ತು ಆದ್ಯತೆಯ ಮೇಲೆ ಪರಿಹರಿಸಬೇಕು’ ಎಂದು ಹೇಳಿದರು.

ಆರ್‌ಎಸ್‌ಎಸ್‌ ಸಂಘಟನೆಯ ‘ಕಾರ್ಯಕರ್ತ ವಿಕಾಸ ವರ್ಗ-ದ್ವಿತೀಯ’ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿವಿಧೆಡೆ ಮತ್ತು ಸಮಾಜದಲ್ಲಿ ಸಂಘರ್ಷಗಳು ಒಳ್ಳೆಯದಲ್ಲ. ‘ರಾಷ್ಟ್ರ ಎದುರಿಸುತ್ತಿರುವ ಸಮಸ್ಯೆಗಳತ್ತ ಗಮನ ಹರಿಸಿ’ ಎಂದು ಹೇಳಿದ್ದಾರೆ.

“ಮಣಿಪುರ ಕಳೆದ ಒಂದು ವರ್ಷದಿಂದ ಶಾಂತಿಗಾಗಿ ಕಾಯುತ್ತಿದೆ. 10 ವರ್ಷಗಳ ಹಿಂದೆ ಮಣಿಪುರದಲ್ಲಿ ಶಾಂತಿ ಇತ್ತು. ಅಲ್ಲಿ ಬಂದೂಕು ಸಂಸ್ಕೃತಿ ಮುಗಿದಂತೆ ಭಾಸವಾಯಿತು. ಆದರೆ, ರಾಜ್ಯವು ಇದ್ದಕ್ಕಿದ್ದಂತೆ ಹಿಂಸಾಚಾರವನ್ನು ಕಂಡಿದೆ” ಎಂದು ಅವರು ಹೇಳಿದರು.

ಚುನಾವಣೆಯ ವಾಕ್ಚಾತುರ್ಯವನ್ನು ಮೀರಿ ರಾಷ್ಟ್ರದ ತುರ್ತು ಸಮಸ್ಯೆಗಳನ್ನು ಪರಿಹರಿಸುವತ್ತ ಗಮನ ಹರಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. “ಮಣಿಪುರದ ಪರಿಸ್ಥಿತಿಯನ್ನು ಆದ್ಯತೆಯೊಂದಿಗೆ ಪರಿಗಣಿಸಬೇಕಾಗಿದೆ. ಚುನಾವಣಾ ವಾಕ್ಚಾತುರ್ಯದಿಂದ ಹೊರಬರಲು ಮತ್ತು ರಾಷ್ಟ್ರ ಎದುರಿಸುತ್ತಿರುವ ಸಮಸ್ಯೆಗಳ ಮೇಲೆ ಕೇಂದ್ರೀಕರಿಸುವ ಅಗತ್ಯವಿದೆ” ಎಂದು ಆರ್‌ಎಸ್‌ಎಸ್ ಮುಖ್ಯಸ್ಥರು ಪ್ರತಿಪಾದಿಸಿದ್ದಾರೆ.

ಮಣಿಪುರ ಹಿಂಸಾಚಾರ ಹಿನ್ನೆಲೆ:

ಮಣಿಪುರವು ಕಳೆದ ವರ್ಷ ಮೇ ತಿಂಗಳಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಹಿಂಸಾಚಾರದಲ್ಲಿ ಮುಳುಗಿತು. ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟಿರುವ ಮೈತೇಯಿಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದ ನಾಗಾಗಳು ಮತ್ತು ಕುಕಿಗಳು ಜನಸಂಖ್ಯೆಯ ಶೇಕಡಾ 40 ರಷ್ಟಿದ್ದಾರೆ; ಅವರೆಲ್ಲಾ ಬೆಟ್ಟದ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. ಹಿಂಸಾಚಾರದಿಂದ ಸುಮಾರು 200 ಜನರು ಕೊಲ್ಲಲ್ಪಟ್ಟಿದ್ದು, ಸಾವಿರಾರು ಜನರು ರಾಜ್ಯದ ಹೊರಗಿನ ನಿರಾಶ್ರಿತರ ಶಿಬಿರಗಳಲ್ಲಿದ್ದಾರೆ ಮತ್ತು ಲಕ್ಷಗಟ್ಟಲೆ ಪುರುಷರು, ಮಹಿಳೆಯರು ಮತ್ತು ಮಕ್ಕಳನ್ನು ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

ಸೋಮವಾರ ಮುಂಜಾನೆ, ಶಂಕಿತ ಉಗ್ರರು ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಮುಂಗಡ ಭದ್ರತಾ ಬೆಂಗಾವಲು ಪಡೆಯ ಮೇಲೆ ಹೊಂಚುದಾಳಿ ನಡೆಸಿದರು. ಭದ್ರತಾ ಪಡೆಗಳ ವಾಹನಗಳ ಮೇಲೆ ಹಲವು ಬಾರಿ ಗುಂಡಿನ ದಾಳಿ ನಡೆಸಲಾಯಿತು. ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದರು, ಮತ್ತು ಗುಂಡಿನ ಚಕಮಕಿಯು ರಾಷ್ಟ್ರೀಯ ಹೆದ್ದಾರಿ 53 ರ ಉದ್ದಕ್ಕೂ ಕೋಟ್ಲೆನ್ ಗ್ರಾಮದ ಬಳಿ ಮುಂದುವರೆಯಿತು. ಹೊಂಚುದಾಳಿಯಲ್ಲಿ ಕನಿಷ್ಠ ಒಬ್ಬ ಭದ್ರತಾ ಸಿಬ್ಬಂದಿಗೆ ಬುಲೆಟ್ ಗಾಯಗಳಾಗಿವೆ ಎಂದು ಪೊಲೀಸ್ ವರದಿಗಳು ತಿಳಿಸಿವೆ.

ದೆಹಲಿಯಿಂದ ಇಂಫಾಲ್‌ಗೆ ಹಿಂದಿರುಗುತ್ತಿದ್ದ ಮುಖ್ಯಮಂತ್ರಿ ಬಿರೇನ್ ಸಿಂಗ್, ಇತ್ತೀಚಿನ ಹಿಂಸಾತ್ಮಕ ಘಟನೆಗಳ ನಂತರ ಪರಿಸ್ಥಿತಿಯನ್ನು ಅವಲೋಕಿಸಲು ಜಿರಿಬಾಮ್‌ಗೆ ಭೇಟಿ ನೀಡಲು ಯೋಜಿಸಿದ್ದರು. ಶನಿವಾರ ಶಂಕಿತ ಉಗ್ರಗಾಮಿಗಳು ಜಿರಿಬಾಮ್‌ನಲ್ಲಿ ಎರಡು ಪೊಲೀಸ್ ಔಟ್‌ಪೋಸ್ಟ್‌ಗಳು, ಅರಣ್ಯ ಬೀಟ್ ಕಚೇರಿ ಮತ್ತು ಕನಿಷ್ಠ 70 ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.

ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ಮಧ್ಯೆ ಹೊಂಚುದಾಳಿ ನಡೆದಿದೆ. ಜೂನ್ 6 ರಂದು ವಾರಗಟ್ಟಲೆ ನಾಪತ್ತೆಯಾಗಿದ್ದ 59 ವರ್ಷದ ಮೈಟೈ ರೈತ ಸೋಬಮ್ ಶರತ್‌ಕುಮಾರ್ ಸಿಂಗ್ ಅವರ ಮೃತದೇಹ ಪತ್ತೆಯಾದ ನಂತರ ಉದ್ವಿಗ್ನತೆ ಹೆಚ್ಚಾಯಿತು. ಇದು ಹಿಂಸಾಚಾರದ ಉಲ್ಬಣಕ್ಕೆ ಕಾರಣವಾಯಿತು ಮತ್ತು ವರ್ಧಿತ ಭದ್ರತಾ ಕ್ರಮಗಳ ಬೇಡಿಕೆಗಳಿಗೆ ಕಾರಣವಾಯಿತು.

ಇದನ್ನೂ ಓದಿ; ಮಣಿಪುರ ಹಿಂಸಾಚಾರ: ಮುಖ್ಯಮಂತ್ರಿ ಬಿರೇನ್ ಸಿಂಗ್ ಬೆಂಗಾವಲು ಪಡೆಯ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...