Homeಮುಖಪುಟಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ಪಕ್ಷದ 12 ಶಾಸಕರು ಮತ್ತು ಸಿಪಿಐ ಹಾಗೂ ಸಿಪಿಎಂ ಪಕ್ಷದ ನಾಲ್ವರು ಶಾಸಕರು ಬಿಹಾರದ ವಿಧಾನಸಭೆಯಲ್ಲಿ ಎನ್‌ಡಿಎ ಸರ್ಕಾರದ ವಿರುದ್ಧ ದನಿ ಎತ್ತಲು ಪ್ರಬಲವಾದ ಶಕ್ತಿಯಾಗಿ ಹೊರಹೊಮ್ಮುತ್ತೇವೆ ಎಂದು ಅದು ಭರವಸೆ ನೀಡಿದೆ.

- Advertisement -
- Advertisement -

ಸುಭದ್ರ ನೌಕರಿ, ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆಯನ್ನು ಸಮಸ್ತ ಜನತೆಗೂ ಒದಗಿಸುವುದು, ರೈತರ ಮತ್ತು ಕಾರ್ಮಿಕರ ಹಕ್ಕುಗಳ ರಕ್ಷಣೆ, ನ್ಯಾಯ ವ್ಯವಸ್ಥೆಯ ಸಮರ್ಪಕ ನಿರ್ವಹಣೆಯ ವಿಚಾರಗಳನ್ನೇ ಅಜೆಂಡವಾಗಿಸಿಕೊಂಡು ಸ್ಪರ್ಧಿಸಿದ ಎಡಪಕ್ಷಗಳು ಗೆದ್ದಿದ್ದು, ಈ ಕಾರ್ಯಸೂಚಿಯನ್ನು ಜಾರಿಗೊಳಿಸಲು ಹೋರಾಟವನ್ನು ಇನ್ನು ಮುಂದೆಯೂ ಮುನ್ನಡೆಸಲಿದೆ ಎಂದು ಬಿಹಾರ ಚುನಾವಣೆಯಲ್ಲಿ ಮಹಘಟಬಂಧನ್‌ನಲ್ಲಿದ್ದ ಮುಂಚೂಣಿ ಎಡಪಕ್ಷವಾದ ಸಿಪಿಐ(ಎಂಎಲ್) ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ತನಗೆ ಕೊಟ್ಟ 19 ಕ್ಷೇತ್ರದಲ್ಲಿ 12 ಸ್ಥಾನಗಳನ್ನು ಗೆದ್ದು ಅಭೂಪೂರ್ವ ಸಾಧನೆ ಮಾಡಿರುವ ಸಿಪಿಐ(ಎಂಎಲ್) ಬಿಹಾರ ಜನತೆಯ ನಿರೀಕ್ಷೆಗಳನ್ನು ಸಾಕಾರಗೊಳಿಸುವ ಆಶ್ವಾಸನೆ ನೀಡಿದೆ. ಆ ಮೂಲಕ ಎಡ ಪಕ್ಷಗಳ ಸಮಸ್ತ ಕಾರ್ಯಕರ್ತರಿಗೆ ಮತ್ತು ದೇಶಾದ್ಯಂತ ಸಕ್ರಿಯವಾಗಿರುವ ಪ್ರಜಾತಂತ್ರ ಪರ ಹೋರಾಟದ ಸಂಘಟನೆಗಳಿಗೆ, ಮೋದಿ ಸರ್ಕಾರದ ವಿನಾಶಕಾರಿ ಕಾರ್ಪೋರೇಟ್ ಪರ ನೀತಿಗಳ ವಿರುದ್ಧ ಹೋರಾಟಕ್ಕೆ ಸಜ್ಜಾಗಲು ಕರೆ ಕೊಟ್ಟಿದ್ದು, ಬಿಜೆಪಿಯ ವಿಭಜಕ ರಾಜಕಾರಣ, ದ್ವೇಷ ರಾಜಕೀಯ ಮತ್ತು ಕೋಮು ಧೃವೀಕರಣ ಹಾಗೂ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗುವಂತೆ ಹೇಳಿದೆ.

Bihar Election Results
PC: Reuters

ಇದನ್ನೂ ಓದಿ: ಬಿಹಾರದಲ್ಲಿ ಎಡಪಕ್ಷಗಳ ಗೆಲುವು: ಒಂದು ವಿಶ್ಲೇಷಣೆ

“ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ ಅಲ್ಪ ಬಹುಮತದ ಜನದೇಶ ಪಡೆದಿದೆ. ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ನಡೆದ ಮೊದಲ ಪೂರ್ಣ ಪ್ರಮಾಣದ ಚುನಾವಣೆಯಲ್ಲಿ ಬಿಹಾರದ ಜನತೆ ಬದಲಾವಣೆಯನ್ನು ಬಯಸಿರುವುದು ಸ್ಪಷ್ಟವಾಗಿದೆ. ಅಂತಿಮ ಫಲಿತಾಂಶದಲ್ಲಿ ಮತದಾರರು ಎನ್‌ಡಿಎ ಮೈತ್ರಿಕೂಟಕ್ಕೆ ಅಧಿಕಾರಕ್ಕೇರಲು ಆದೇಶ ನೀಡಿದ್ದರೂ, ಪ್ರಬಲ ವಿರೋಧ ಪಕ್ಷವನ್ನು ಆಯ್ಕೆ ಮಾಡುವ ಮೂಲಕ ಬಿಹಾರದ ಜನತೆ ಬಿಜೆಪಿಯ ವಿರೋಧ ಪಕ್ಷ ಮುಕ್ತ ಭಾರತದ ಘೋಷಣೆಗೆ ಧಕ್ಕೆ ಉಂಟುಮಾಡಿದ್ದಾರೆ” ಎಂದು ಪಕ್ಷದ ಕೇಂದ್ರ ಸಮಿತಿ ಹೇಳಿದೆ.

ಚುನಾವಣಾ ಅಧಿಕಾರಿಗಳ ವಿರುದ್ದ ಕೇಳಿಬಂದಿರುವ ಹಲವು ಅಕ್ರಮಗಳು ಮತ್ತು ಅವ್ಯವಹಾರಗಳ ಆರೋಪಗಳಲ್ಲೂ ಸಹ ಸತ್ಯಾಂಶವಿದೆ ಎಂದಿರುವ ಪಕ್ಷವು, ಆ ಆರೋಪಕ್ಕೆ ಅಗತ್ಯ ಸಾಕ್ಷಿ ಪುರಾವೆಗಳು ಹುಡುಕುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದೆ. ಸ್ಪರ್ಧಿಸಿದ 19 ಕ್ಷೇತ್ರಗಳ ಪೈಕಿ ಪಕ್ಷದ 12 ಅಭ್ಯರ್ಥಿಗಳು ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಮೈತ್ರಿಕೂಟದ ಇತರ ಪಕ್ಷಗಳಿಗೆ ಹೋಲಿಸಿದರೆ ಪಕ್ಷದ ಅಭ್ಯರ್ಥಿಗಳ ಸ್ಟ್ರೈಕ್ ರೇಟ್ ಹೆಚ್ಚಾಗಿದ್ದು, 4% ಮತಗಳನ್ನು ಪಡೆದಿದೆ ಎಂದು ಸಿಪಿಐ(ಎಂಎಲ್) ಹೇಳಿದೆ.

Photo Courtesy: The Week

ಸಿಪಿಐ(ಎಂಎಲ್) ಪಕ್ಷದ 12 ಶಾಸಕರು ಮತ್ತು ಸಿಪಿಐ ಹಾಗೂ ಸಿಪಿಎಂ ಪಕ್ಷದ ನಾಲ್ವರು ಶಾಸಕರು ಬಿಹಾರದ ವಿಧಾನಸಭೆಯಲ್ಲಿ ಎನ್‌ಡಿಎ ಸರ್ಕಾರದ ವಿರುದ್ಧ ದನಿ ಎತ್ತಲು ಒಂದು ಪ್ರಬಲವಾದ ಶಕ್ತಿಯಾಗಿ ಹೊರಹೊಮ್ಮುತ್ತಾರೆ ಎಂದು ಅದು ಭರವಸೆ ನೀಡಿದ್ದು, ಚುನಾವಣಾ ಪ್ರಚಾರಕ್ಕೆ ಪ್ರೋತ್ಸಾಹ ನೀಡಿದವರಿಗೆ ಪಕ್ಷದ ಕೇಂದ್ರ ಸಮಿತಿ ಧನ್ಯವಾದ ತಿಳಿಸಿದೆ.

ಇದನ್ನೂ ಓದಿ: ಎಡಪಕ್ಷಗಳ ವಿಲೀನದ ಪ್ರಸ್ತಾಪ: ಅಗತ್ಯವೇ, ಸಾಧ್ಯವೇ? ಮುಖಂಡರು ಏನಂತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...