Homeಮುಖಪುಟಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ಪಕ್ಷದ 12 ಶಾಸಕರು ಮತ್ತು ಸಿಪಿಐ ಹಾಗೂ ಸಿಪಿಎಂ ಪಕ್ಷದ ನಾಲ್ವರು ಶಾಸಕರು ಬಿಹಾರದ ವಿಧಾನಸಭೆಯಲ್ಲಿ ಎನ್‌ಡಿಎ ಸರ್ಕಾರದ ವಿರುದ್ಧ ದನಿ ಎತ್ತಲು ಪ್ರಬಲವಾದ ಶಕ್ತಿಯಾಗಿ ಹೊರಹೊಮ್ಮುತ್ತೇವೆ ಎಂದು ಅದು ಭರವಸೆ ನೀಡಿದೆ.

- Advertisement -
- Advertisement -

ಸುಭದ್ರ ನೌಕರಿ, ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆಯನ್ನು ಸಮಸ್ತ ಜನತೆಗೂ ಒದಗಿಸುವುದು, ರೈತರ ಮತ್ತು ಕಾರ್ಮಿಕರ ಹಕ್ಕುಗಳ ರಕ್ಷಣೆ, ನ್ಯಾಯ ವ್ಯವಸ್ಥೆಯ ಸಮರ್ಪಕ ನಿರ್ವಹಣೆಯ ವಿಚಾರಗಳನ್ನೇ ಅಜೆಂಡವಾಗಿಸಿಕೊಂಡು ಸ್ಪರ್ಧಿಸಿದ ಎಡಪಕ್ಷಗಳು ಗೆದ್ದಿದ್ದು, ಈ ಕಾರ್ಯಸೂಚಿಯನ್ನು ಜಾರಿಗೊಳಿಸಲು ಹೋರಾಟವನ್ನು ಇನ್ನು ಮುಂದೆಯೂ ಮುನ್ನಡೆಸಲಿದೆ ಎಂದು ಬಿಹಾರ ಚುನಾವಣೆಯಲ್ಲಿ ಮಹಘಟಬಂಧನ್‌ನಲ್ಲಿದ್ದ ಮುಂಚೂಣಿ ಎಡಪಕ್ಷವಾದ ಸಿಪಿಐ(ಎಂಎಲ್) ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ತನಗೆ ಕೊಟ್ಟ 19 ಕ್ಷೇತ್ರದಲ್ಲಿ 12 ಸ್ಥಾನಗಳನ್ನು ಗೆದ್ದು ಅಭೂಪೂರ್ವ ಸಾಧನೆ ಮಾಡಿರುವ ಸಿಪಿಐ(ಎಂಎಲ್) ಬಿಹಾರ ಜನತೆಯ ನಿರೀಕ್ಷೆಗಳನ್ನು ಸಾಕಾರಗೊಳಿಸುವ ಆಶ್ವಾಸನೆ ನೀಡಿದೆ. ಆ ಮೂಲಕ ಎಡ ಪಕ್ಷಗಳ ಸಮಸ್ತ ಕಾರ್ಯಕರ್ತರಿಗೆ ಮತ್ತು ದೇಶಾದ್ಯಂತ ಸಕ್ರಿಯವಾಗಿರುವ ಪ್ರಜಾತಂತ್ರ ಪರ ಹೋರಾಟದ ಸಂಘಟನೆಗಳಿಗೆ, ಮೋದಿ ಸರ್ಕಾರದ ವಿನಾಶಕಾರಿ ಕಾರ್ಪೋರೇಟ್ ಪರ ನೀತಿಗಳ ವಿರುದ್ಧ ಹೋರಾಟಕ್ಕೆ ಸಜ್ಜಾಗಲು ಕರೆ ಕೊಟ್ಟಿದ್ದು, ಬಿಜೆಪಿಯ ವಿಭಜಕ ರಾಜಕಾರಣ, ದ್ವೇಷ ರಾಜಕೀಯ ಮತ್ತು ಕೋಮು ಧೃವೀಕರಣ ಹಾಗೂ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗುವಂತೆ ಹೇಳಿದೆ.

Bihar Election Results
PC: Reuters

ಇದನ್ನೂ ಓದಿ: ಬಿಹಾರದಲ್ಲಿ ಎಡಪಕ್ಷಗಳ ಗೆಲುವು: ಒಂದು ವಿಶ್ಲೇಷಣೆ

“ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ ಅಲ್ಪ ಬಹುಮತದ ಜನದೇಶ ಪಡೆದಿದೆ. ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ನಡೆದ ಮೊದಲ ಪೂರ್ಣ ಪ್ರಮಾಣದ ಚುನಾವಣೆಯಲ್ಲಿ ಬಿಹಾರದ ಜನತೆ ಬದಲಾವಣೆಯನ್ನು ಬಯಸಿರುವುದು ಸ್ಪಷ್ಟವಾಗಿದೆ. ಅಂತಿಮ ಫಲಿತಾಂಶದಲ್ಲಿ ಮತದಾರರು ಎನ್‌ಡಿಎ ಮೈತ್ರಿಕೂಟಕ್ಕೆ ಅಧಿಕಾರಕ್ಕೇರಲು ಆದೇಶ ನೀಡಿದ್ದರೂ, ಪ್ರಬಲ ವಿರೋಧ ಪಕ್ಷವನ್ನು ಆಯ್ಕೆ ಮಾಡುವ ಮೂಲಕ ಬಿಹಾರದ ಜನತೆ ಬಿಜೆಪಿಯ ವಿರೋಧ ಪಕ್ಷ ಮುಕ್ತ ಭಾರತದ ಘೋಷಣೆಗೆ ಧಕ್ಕೆ ಉಂಟುಮಾಡಿದ್ದಾರೆ” ಎಂದು ಪಕ್ಷದ ಕೇಂದ್ರ ಸಮಿತಿ ಹೇಳಿದೆ.

ಚುನಾವಣಾ ಅಧಿಕಾರಿಗಳ ವಿರುದ್ದ ಕೇಳಿಬಂದಿರುವ ಹಲವು ಅಕ್ರಮಗಳು ಮತ್ತು ಅವ್ಯವಹಾರಗಳ ಆರೋಪಗಳಲ್ಲೂ ಸಹ ಸತ್ಯಾಂಶವಿದೆ ಎಂದಿರುವ ಪಕ್ಷವು, ಆ ಆರೋಪಕ್ಕೆ ಅಗತ್ಯ ಸಾಕ್ಷಿ ಪುರಾವೆಗಳು ಹುಡುಕುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದೆ. ಸ್ಪರ್ಧಿಸಿದ 19 ಕ್ಷೇತ್ರಗಳ ಪೈಕಿ ಪಕ್ಷದ 12 ಅಭ್ಯರ್ಥಿಗಳು ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಮೈತ್ರಿಕೂಟದ ಇತರ ಪಕ್ಷಗಳಿಗೆ ಹೋಲಿಸಿದರೆ ಪಕ್ಷದ ಅಭ್ಯರ್ಥಿಗಳ ಸ್ಟ್ರೈಕ್ ರೇಟ್ ಹೆಚ್ಚಾಗಿದ್ದು, 4% ಮತಗಳನ್ನು ಪಡೆದಿದೆ ಎಂದು ಸಿಪಿಐ(ಎಂಎಲ್) ಹೇಳಿದೆ.

Photo Courtesy: The Week

ಸಿಪಿಐ(ಎಂಎಲ್) ಪಕ್ಷದ 12 ಶಾಸಕರು ಮತ್ತು ಸಿಪಿಐ ಹಾಗೂ ಸಿಪಿಎಂ ಪಕ್ಷದ ನಾಲ್ವರು ಶಾಸಕರು ಬಿಹಾರದ ವಿಧಾನಸಭೆಯಲ್ಲಿ ಎನ್‌ಡಿಎ ಸರ್ಕಾರದ ವಿರುದ್ಧ ದನಿ ಎತ್ತಲು ಒಂದು ಪ್ರಬಲವಾದ ಶಕ್ತಿಯಾಗಿ ಹೊರಹೊಮ್ಮುತ್ತಾರೆ ಎಂದು ಅದು ಭರವಸೆ ನೀಡಿದ್ದು, ಚುನಾವಣಾ ಪ್ರಚಾರಕ್ಕೆ ಪ್ರೋತ್ಸಾಹ ನೀಡಿದವರಿಗೆ ಪಕ್ಷದ ಕೇಂದ್ರ ಸಮಿತಿ ಧನ್ಯವಾದ ತಿಳಿಸಿದೆ.

ಇದನ್ನೂ ಓದಿ: ಎಡಪಕ್ಷಗಳ ವಿಲೀನದ ಪ್ರಸ್ತಾಪ: ಅಗತ್ಯವೇ, ಸಾಧ್ಯವೇ? ಮುಖಂಡರು ಏನಂತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...