Homeಮುಖಪುಟಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ಪಕ್ಷದ 12 ಶಾಸಕರು ಮತ್ತು ಸಿಪಿಐ ಹಾಗೂ ಸಿಪಿಎಂ ಪಕ್ಷದ ನಾಲ್ವರು ಶಾಸಕರು ಬಿಹಾರದ ವಿಧಾನಸಭೆಯಲ್ಲಿ ಎನ್‌ಡಿಎ ಸರ್ಕಾರದ ವಿರುದ್ಧ ದನಿ ಎತ್ತಲು ಪ್ರಬಲವಾದ ಶಕ್ತಿಯಾಗಿ ಹೊರಹೊಮ್ಮುತ್ತೇವೆ ಎಂದು ಅದು ಭರವಸೆ ನೀಡಿದೆ.

- Advertisement -
- Advertisement -

ಸುಭದ್ರ ನೌಕರಿ, ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆಯನ್ನು ಸಮಸ್ತ ಜನತೆಗೂ ಒದಗಿಸುವುದು, ರೈತರ ಮತ್ತು ಕಾರ್ಮಿಕರ ಹಕ್ಕುಗಳ ರಕ್ಷಣೆ, ನ್ಯಾಯ ವ್ಯವಸ್ಥೆಯ ಸಮರ್ಪಕ ನಿರ್ವಹಣೆಯ ವಿಚಾರಗಳನ್ನೇ ಅಜೆಂಡವಾಗಿಸಿಕೊಂಡು ಸ್ಪರ್ಧಿಸಿದ ಎಡಪಕ್ಷಗಳು ಗೆದ್ದಿದ್ದು, ಈ ಕಾರ್ಯಸೂಚಿಯನ್ನು ಜಾರಿಗೊಳಿಸಲು ಹೋರಾಟವನ್ನು ಇನ್ನು ಮುಂದೆಯೂ ಮುನ್ನಡೆಸಲಿದೆ ಎಂದು ಬಿಹಾರ ಚುನಾವಣೆಯಲ್ಲಿ ಮಹಘಟಬಂಧನ್‌ನಲ್ಲಿದ್ದ ಮುಂಚೂಣಿ ಎಡಪಕ್ಷವಾದ ಸಿಪಿಐ(ಎಂಎಲ್) ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ತನಗೆ ಕೊಟ್ಟ 19 ಕ್ಷೇತ್ರದಲ್ಲಿ 12 ಸ್ಥಾನಗಳನ್ನು ಗೆದ್ದು ಅಭೂಪೂರ್ವ ಸಾಧನೆ ಮಾಡಿರುವ ಸಿಪಿಐ(ಎಂಎಲ್) ಬಿಹಾರ ಜನತೆಯ ನಿರೀಕ್ಷೆಗಳನ್ನು ಸಾಕಾರಗೊಳಿಸುವ ಆಶ್ವಾಸನೆ ನೀಡಿದೆ. ಆ ಮೂಲಕ ಎಡ ಪಕ್ಷಗಳ ಸಮಸ್ತ ಕಾರ್ಯಕರ್ತರಿಗೆ ಮತ್ತು ದೇಶಾದ್ಯಂತ ಸಕ್ರಿಯವಾಗಿರುವ ಪ್ರಜಾತಂತ್ರ ಪರ ಹೋರಾಟದ ಸಂಘಟನೆಗಳಿಗೆ, ಮೋದಿ ಸರ್ಕಾರದ ವಿನಾಶಕಾರಿ ಕಾರ್ಪೋರೇಟ್ ಪರ ನೀತಿಗಳ ವಿರುದ್ಧ ಹೋರಾಟಕ್ಕೆ ಸಜ್ಜಾಗಲು ಕರೆ ಕೊಟ್ಟಿದ್ದು, ಬಿಜೆಪಿಯ ವಿಭಜಕ ರಾಜಕಾರಣ, ದ್ವೇಷ ರಾಜಕೀಯ ಮತ್ತು ಕೋಮು ಧೃವೀಕರಣ ಹಾಗೂ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗುವಂತೆ ಹೇಳಿದೆ.

Bihar Election Results
PC: Reuters

ಇದನ್ನೂ ಓದಿ: ಬಿಹಾರದಲ್ಲಿ ಎಡಪಕ್ಷಗಳ ಗೆಲುವು: ಒಂದು ವಿಶ್ಲೇಷಣೆ

“ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ ಅಲ್ಪ ಬಹುಮತದ ಜನದೇಶ ಪಡೆದಿದೆ. ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ನಡೆದ ಮೊದಲ ಪೂರ್ಣ ಪ್ರಮಾಣದ ಚುನಾವಣೆಯಲ್ಲಿ ಬಿಹಾರದ ಜನತೆ ಬದಲಾವಣೆಯನ್ನು ಬಯಸಿರುವುದು ಸ್ಪಷ್ಟವಾಗಿದೆ. ಅಂತಿಮ ಫಲಿತಾಂಶದಲ್ಲಿ ಮತದಾರರು ಎನ್‌ಡಿಎ ಮೈತ್ರಿಕೂಟಕ್ಕೆ ಅಧಿಕಾರಕ್ಕೇರಲು ಆದೇಶ ನೀಡಿದ್ದರೂ, ಪ್ರಬಲ ವಿರೋಧ ಪಕ್ಷವನ್ನು ಆಯ್ಕೆ ಮಾಡುವ ಮೂಲಕ ಬಿಹಾರದ ಜನತೆ ಬಿಜೆಪಿಯ ವಿರೋಧ ಪಕ್ಷ ಮುಕ್ತ ಭಾರತದ ಘೋಷಣೆಗೆ ಧಕ್ಕೆ ಉಂಟುಮಾಡಿದ್ದಾರೆ” ಎಂದು ಪಕ್ಷದ ಕೇಂದ್ರ ಸಮಿತಿ ಹೇಳಿದೆ.

ಚುನಾವಣಾ ಅಧಿಕಾರಿಗಳ ವಿರುದ್ದ ಕೇಳಿಬಂದಿರುವ ಹಲವು ಅಕ್ರಮಗಳು ಮತ್ತು ಅವ್ಯವಹಾರಗಳ ಆರೋಪಗಳಲ್ಲೂ ಸಹ ಸತ್ಯಾಂಶವಿದೆ ಎಂದಿರುವ ಪಕ್ಷವು, ಆ ಆರೋಪಕ್ಕೆ ಅಗತ್ಯ ಸಾಕ್ಷಿ ಪುರಾವೆಗಳು ಹುಡುಕುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದೆ. ಸ್ಪರ್ಧಿಸಿದ 19 ಕ್ಷೇತ್ರಗಳ ಪೈಕಿ ಪಕ್ಷದ 12 ಅಭ್ಯರ್ಥಿಗಳು ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಮೈತ್ರಿಕೂಟದ ಇತರ ಪಕ್ಷಗಳಿಗೆ ಹೋಲಿಸಿದರೆ ಪಕ್ಷದ ಅಭ್ಯರ್ಥಿಗಳ ಸ್ಟ್ರೈಕ್ ರೇಟ್ ಹೆಚ್ಚಾಗಿದ್ದು, 4% ಮತಗಳನ್ನು ಪಡೆದಿದೆ ಎಂದು ಸಿಪಿಐ(ಎಂಎಲ್) ಹೇಳಿದೆ.

Photo Courtesy: The Week

ಸಿಪಿಐ(ಎಂಎಲ್) ಪಕ್ಷದ 12 ಶಾಸಕರು ಮತ್ತು ಸಿಪಿಐ ಹಾಗೂ ಸಿಪಿಎಂ ಪಕ್ಷದ ನಾಲ್ವರು ಶಾಸಕರು ಬಿಹಾರದ ವಿಧಾನಸಭೆಯಲ್ಲಿ ಎನ್‌ಡಿಎ ಸರ್ಕಾರದ ವಿರುದ್ಧ ದನಿ ಎತ್ತಲು ಒಂದು ಪ್ರಬಲವಾದ ಶಕ್ತಿಯಾಗಿ ಹೊರಹೊಮ್ಮುತ್ತಾರೆ ಎಂದು ಅದು ಭರವಸೆ ನೀಡಿದ್ದು, ಚುನಾವಣಾ ಪ್ರಚಾರಕ್ಕೆ ಪ್ರೋತ್ಸಾಹ ನೀಡಿದವರಿಗೆ ಪಕ್ಷದ ಕೇಂದ್ರ ಸಮಿತಿ ಧನ್ಯವಾದ ತಿಳಿಸಿದೆ.

ಇದನ್ನೂ ಓದಿ: ಎಡಪಕ್ಷಗಳ ವಿಲೀನದ ಪ್ರಸ್ತಾಪ: ಅಗತ್ಯವೇ, ಸಾಧ್ಯವೇ? ಮುಖಂಡರು ಏನಂತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...