Homeಮುಖಪುಟಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ಬಿಜೆಪಿಯ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗಿ: ಬಿಹಾರದ ಮುಂಚೂಣಿ ಎಡಪಕ್ಷ ಸಿಪಿಐ(ಎಂಎಲ್) ಕರೆ

ಪಕ್ಷದ 12 ಶಾಸಕರು ಮತ್ತು ಸಿಪಿಐ ಹಾಗೂ ಸಿಪಿಎಂ ಪಕ್ಷದ ನಾಲ್ವರು ಶಾಸಕರು ಬಿಹಾರದ ವಿಧಾನಸಭೆಯಲ್ಲಿ ಎನ್‌ಡಿಎ ಸರ್ಕಾರದ ವಿರುದ್ಧ ದನಿ ಎತ್ತಲು ಪ್ರಬಲವಾದ ಶಕ್ತಿಯಾಗಿ ಹೊರಹೊಮ್ಮುತ್ತೇವೆ ಎಂದು ಅದು ಭರವಸೆ ನೀಡಿದೆ.

- Advertisement -
- Advertisement -

ಸುಭದ್ರ ನೌಕರಿ, ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆಯನ್ನು ಸಮಸ್ತ ಜನತೆಗೂ ಒದಗಿಸುವುದು, ರೈತರ ಮತ್ತು ಕಾರ್ಮಿಕರ ಹಕ್ಕುಗಳ ರಕ್ಷಣೆ, ನ್ಯಾಯ ವ್ಯವಸ್ಥೆಯ ಸಮರ್ಪಕ ನಿರ್ವಹಣೆಯ ವಿಚಾರಗಳನ್ನೇ ಅಜೆಂಡವಾಗಿಸಿಕೊಂಡು ಸ್ಪರ್ಧಿಸಿದ ಎಡಪಕ್ಷಗಳು ಗೆದ್ದಿದ್ದು, ಈ ಕಾರ್ಯಸೂಚಿಯನ್ನು ಜಾರಿಗೊಳಿಸಲು ಹೋರಾಟವನ್ನು ಇನ್ನು ಮುಂದೆಯೂ ಮುನ್ನಡೆಸಲಿದೆ ಎಂದು ಬಿಹಾರ ಚುನಾವಣೆಯಲ್ಲಿ ಮಹಘಟಬಂಧನ್‌ನಲ್ಲಿದ್ದ ಮುಂಚೂಣಿ ಎಡಪಕ್ಷವಾದ ಸಿಪಿಐ(ಎಂಎಲ್) ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ತನಗೆ ಕೊಟ್ಟ 19 ಕ್ಷೇತ್ರದಲ್ಲಿ 12 ಸ್ಥಾನಗಳನ್ನು ಗೆದ್ದು ಅಭೂಪೂರ್ವ ಸಾಧನೆ ಮಾಡಿರುವ ಸಿಪಿಐ(ಎಂಎಲ್) ಬಿಹಾರ ಜನತೆಯ ನಿರೀಕ್ಷೆಗಳನ್ನು ಸಾಕಾರಗೊಳಿಸುವ ಆಶ್ವಾಸನೆ ನೀಡಿದೆ. ಆ ಮೂಲಕ ಎಡ ಪಕ್ಷಗಳ ಸಮಸ್ತ ಕಾರ್ಯಕರ್ತರಿಗೆ ಮತ್ತು ದೇಶಾದ್ಯಂತ ಸಕ್ರಿಯವಾಗಿರುವ ಪ್ರಜಾತಂತ್ರ ಪರ ಹೋರಾಟದ ಸಂಘಟನೆಗಳಿಗೆ, ಮೋದಿ ಸರ್ಕಾರದ ವಿನಾಶಕಾರಿ ಕಾರ್ಪೋರೇಟ್ ಪರ ನೀತಿಗಳ ವಿರುದ್ಧ ಹೋರಾಟಕ್ಕೆ ಸಜ್ಜಾಗಲು ಕರೆ ಕೊಟ್ಟಿದ್ದು, ಬಿಜೆಪಿಯ ವಿಭಜಕ ರಾಜಕಾರಣ, ದ್ವೇಷ ರಾಜಕೀಯ ಮತ್ತು ಕೋಮು ಧೃವೀಕರಣ ಹಾಗೂ ಫ್ಯಾಸಿಸ್ಟ್ ಆಕ್ರಮಣವನ್ನು ಹಿಮ್ಮೆಟ್ಟಿಸಲು ಹೋರಾಟಕ್ಕೆ ಸಿದ್ಧರಾಗುವಂತೆ ಹೇಳಿದೆ.

Bihar Election Results
PC: Reuters

ಇದನ್ನೂ ಓದಿ: ಬಿಹಾರದಲ್ಲಿ ಎಡಪಕ್ಷಗಳ ಗೆಲುವು: ಒಂದು ವಿಶ್ಲೇಷಣೆ

“ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ ಅಲ್ಪ ಬಹುಮತದ ಜನದೇಶ ಪಡೆದಿದೆ. ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ನಡೆದ ಮೊದಲ ಪೂರ್ಣ ಪ್ರಮಾಣದ ಚುನಾವಣೆಯಲ್ಲಿ ಬಿಹಾರದ ಜನತೆ ಬದಲಾವಣೆಯನ್ನು ಬಯಸಿರುವುದು ಸ್ಪಷ್ಟವಾಗಿದೆ. ಅಂತಿಮ ಫಲಿತಾಂಶದಲ್ಲಿ ಮತದಾರರು ಎನ್‌ಡಿಎ ಮೈತ್ರಿಕೂಟಕ್ಕೆ ಅಧಿಕಾರಕ್ಕೇರಲು ಆದೇಶ ನೀಡಿದ್ದರೂ, ಪ್ರಬಲ ವಿರೋಧ ಪಕ್ಷವನ್ನು ಆಯ್ಕೆ ಮಾಡುವ ಮೂಲಕ ಬಿಹಾರದ ಜನತೆ ಬಿಜೆಪಿಯ ವಿರೋಧ ಪಕ್ಷ ಮುಕ್ತ ಭಾರತದ ಘೋಷಣೆಗೆ ಧಕ್ಕೆ ಉಂಟುಮಾಡಿದ್ದಾರೆ” ಎಂದು ಪಕ್ಷದ ಕೇಂದ್ರ ಸಮಿತಿ ಹೇಳಿದೆ.

ಚುನಾವಣಾ ಅಧಿಕಾರಿಗಳ ವಿರುದ್ದ ಕೇಳಿಬಂದಿರುವ ಹಲವು ಅಕ್ರಮಗಳು ಮತ್ತು ಅವ್ಯವಹಾರಗಳ ಆರೋಪಗಳಲ್ಲೂ ಸಹ ಸತ್ಯಾಂಶವಿದೆ ಎಂದಿರುವ ಪಕ್ಷವು, ಆ ಆರೋಪಕ್ಕೆ ಅಗತ್ಯ ಸಾಕ್ಷಿ ಪುರಾವೆಗಳು ಹುಡುಕುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದೆ. ಸ್ಪರ್ಧಿಸಿದ 19 ಕ್ಷೇತ್ರಗಳ ಪೈಕಿ ಪಕ್ಷದ 12 ಅಭ್ಯರ್ಥಿಗಳು ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಮೈತ್ರಿಕೂಟದ ಇತರ ಪಕ್ಷಗಳಿಗೆ ಹೋಲಿಸಿದರೆ ಪಕ್ಷದ ಅಭ್ಯರ್ಥಿಗಳ ಸ್ಟ್ರೈಕ್ ರೇಟ್ ಹೆಚ್ಚಾಗಿದ್ದು, 4% ಮತಗಳನ್ನು ಪಡೆದಿದೆ ಎಂದು ಸಿಪಿಐ(ಎಂಎಲ್) ಹೇಳಿದೆ.

Photo Courtesy: The Week

ಸಿಪಿಐ(ಎಂಎಲ್) ಪಕ್ಷದ 12 ಶಾಸಕರು ಮತ್ತು ಸಿಪಿಐ ಹಾಗೂ ಸಿಪಿಎಂ ಪಕ್ಷದ ನಾಲ್ವರು ಶಾಸಕರು ಬಿಹಾರದ ವಿಧಾನಸಭೆಯಲ್ಲಿ ಎನ್‌ಡಿಎ ಸರ್ಕಾರದ ವಿರುದ್ಧ ದನಿ ಎತ್ತಲು ಒಂದು ಪ್ರಬಲವಾದ ಶಕ್ತಿಯಾಗಿ ಹೊರಹೊಮ್ಮುತ್ತಾರೆ ಎಂದು ಅದು ಭರವಸೆ ನೀಡಿದ್ದು, ಚುನಾವಣಾ ಪ್ರಚಾರಕ್ಕೆ ಪ್ರೋತ್ಸಾಹ ನೀಡಿದವರಿಗೆ ಪಕ್ಷದ ಕೇಂದ್ರ ಸಮಿತಿ ಧನ್ಯವಾದ ತಿಳಿಸಿದೆ.

ಇದನ್ನೂ ಓದಿ: ಎಡಪಕ್ಷಗಳ ವಿಲೀನದ ಪ್ರಸ್ತಾಪ: ಅಗತ್ಯವೇ, ಸಾಧ್ಯವೇ? ಮುಖಂಡರು ಏನಂತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...