Homeಮುಖಪುಟ'ಸ್ಪೀಕರ್ ಸ್ಥಾನವನ್ನು ಪಡೆಯಿರಿ..'; ಬಿಜೆಪಿ ಮಿತ್ರಪಕ್ಷಗಳಿಗೆ ಎಚ್ಚರಿಕೆ ನೀಡಿದ ಆದಿತ್ಯ ಠಾಕ್ರೆ

‘ಸ್ಪೀಕರ್ ಸ್ಥಾನವನ್ನು ಪಡೆಯಿರಿ..’; ಬಿಜೆಪಿ ಮಿತ್ರಪಕ್ಷಗಳಿಗೆ ಎಚ್ಚರಿಕೆ ನೀಡಿದ ಆದಿತ್ಯ ಠಾಕ್ರೆ

- Advertisement -
- Advertisement -

ಶಿವಸೇನಾ (ಯುಬಿಟಿ) ಪಕ್ಷವು ಎನ್‌ಡಿಎಗೆ ಮರಳಲಿದೆ ಎಂಬ ಊಹಾಪೋಗಳ ನಡುವೆಯೆ, ಯುವ ನಾಯಕ ಆದಿತ್ಯ ಠಾಕ್ರೆ ಅವರು ಕೇಂದ್ರದಲ್ಲಿ ಸರ್ಕಾರ ರಚಿಸುವ ನಿರೀಕ್ಷೆಯಲ್ಲಿರುವ ಬಿಜೆಪಿ ಮಿತ್ರಪಕ್ಷಗಳಿಗೆ ತಮ್ಮ ಸಲಹೆಯನ್ನು ನೀಡಿದ್ದು, ‘ಸ್ಪೀಕರ್ ಸ್ಥಾನ ಪಡೆಯಿರಿ’ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಬಿಜೆಪಿ ಹೊಸದಾಗಿ ನೆನಪಿಸಿಕೊಳ್ಳುತ್ತಿರುವ ಎನ್‌ಡಿಎ ಸಂಭಾವ್ಯ ಮಿತ್ರಪಕ್ಷಗಳಿಗೆ ಒಂದು ವಿನಮ್ರ ಸಲಹೆ, ಸ್ಪೀಕರ್ ಹುದ್ದೆಯನ್ನು ಪಡೆಯಿರಿ. ಬಿಜೆಪಿಯ ತಂತ್ರಗಳನ್ನು ಅನುಭವಿಸಿದ್ದೇವೆ, ಅವರು ನಿಮ್ಮೊಂದಿಗೆ ಸರ್ಕಾರವನ್ನು ರಚಿಸುವ ನಿಮಿಷದಲ್ಲಿ ಭರವಸೆಗಳನ್ನು ಮುರಿದು, ನಿಮ್ಮ ಪಕ್ಷಗಳನ್ನೂ ಒಡೆಯಲು ಪ್ರಯತ್ನಿಸುತ್ತಾರೆ” ಎಂದು ಅವರು ಟಿಡಿಪಿ ಮತ್ತು ಜೆಡಿಯು ಪಕ್ಷಗಳನ್ನು ಟ್ಯಾಗ್ ಮಾಡಿದ್ದಾರೆ.

ಇಂದು ಬೆಳಿಗ್ಗೆ, ಬಿಜೆಪಿ ನೇತೃತ್ವದ ಎನ್‌ಡಿಎ, ಭಾನುವಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ನರೇಂದ್ರ ಮೋದಿ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಹೊಸದಾಗಿ ಚುನಾಯಿತ ಸಂಸದರ ಸಭೆ ನಡೆಸಿತು.

ದೆಹಲಿಯಲ್ಲಿ ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ, ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ, ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಮತ್ತು ಎಚ್‌ಎಎಂ (ಎಸ್) ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಸೇರಿದಂತೆ ಬಿಜೆಪಿ ಮಿತ್ರಪಕ್ಷಗಳು ಮೋದಿಯನ್ನು ಎನ್‌ಡಿಎ ಬಣದ ನಾಯಕರಾಗಿ ಆಯ್ಕೆ ಮಾಡುವ ಬಿಜೆಪಿ ನಾಯಕ ರಾಜನಾಥ್ ಸಿಂಗ್ ಅವರ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ.

“ಪ್ರಾದೇಶಿಕ ಆಕಾಂಕ್ಷೆಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ಸಮತೋಲನಗೊಳಿಸುವುದು ಸಮಾನಾಂತರವಾಗಿ ಸಾಗಬೇಕು ಮತ್ತು ಸಮಾಜದ ಎಲ್ಲಾ ಸ್ತರಗಳ ಸಮಗ್ರ ಅಭಿವೃದ್ಧಿಯನ್ನು ಖಾತ್ರಿಪಡಿಸಿಕೊಳ್ಳಬೇಕು” ಎಂದು ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಹೇಳಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೋದಿಯವರ ನಾಯಕತ್ವದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ, “ಮೋದಿ ಭಾರತವನ್ನು ದೊಡ್ಡ ರೀತಿಯಲ್ಲಿ ಅಭಿವೃದ್ಧಿಪಡಿಸುತ್ತಾರೆ ಮತ್ತು ನಾವು ಪ್ರತಿದಿನ ಅವರನ್ನು ಪೂರ್ಣ ಹೃದಯದಿಂದ ಬೆಂಬಲಿಸುತ್ತೇವೆ ಎಂದು ನಮಗೆ ವಿಶ್ವಾಸವಿದೆ” ಎಂದು ಹೇಳಿದ್ದಾರೆ.

ಬಿಜೆಪಿಗೆ ಸರ್ಕಾರ ರಚಿಸಲು ಬೇಕಾದ ಬಹುಮತದ ಕೊರತೆಯಿಂದಾಗಿ, ಟಿಡಿಪಿ ಮತ್ತು ಜೆಡಿಯು ಬೆಂಬಲವು ನರೇಂದ್ರ ಮೋದಿಯವರ ಮೂರನೇ ಅವಧಿಗೆ ಪ್ರಧಾನಿಯಾಗಲು ನಿರ್ಣಾಯಕವಾಗಿದೆ. ಎನ್‌ಡಿಎ 293 ಸ್ಥಾನಗಳನ್ನು ಹೊಂದಿದೆ, ಬಿಜೆಪಿಯು 240 ಸ್ಥಾನಗಳನ್ನು ಪಡೆದುಕೊಂಡಿದೆ. ಜೆಡಿಯು 12 ಸಂಸದರನ್ನು ಹೊಂದಿದೆ, ಇದು 16 ಸಂಸದರನ್ನು ಹೊಂದಿರುವ ಟಿಡಿಪಿ ನಂತರ ಎರಡನೇ ಅತಿದೊಡ್ಡ ಬಿಜೆಪಿ ಮಿತ್ರ ಪಕ್ಷವಾಗಿದೆ.

ಇದನ್ನೂ ಓದಿ; ಹಳೆ ಸಂಸತ್ ಭನದಲ್ಲಿ ಎನ್‌ಡಿಎ ನಾಯಕರ ಸಭೆ; ಲೋಕಸಭೆ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...